Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:4 - ಕನ್ನಡ ಸತ್ಯವೇದವು C.L. Bible (BSI)

4 ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಅನ್ನಕೊಡುವವರು ಯಾರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮೊಲೆಕೂಸಿನ ನಾಲಿಗೆಯು ದಾಹದಿಂದ ಸೇದಿಹೋಗಿದೆ. ಅನ್ನ ಬೇಕೆನ್ನುವ ಎಳೆಯ ಮಕ್ಕಳಿಗೆ ಯಾರೂ ಅನ್ನವಿಕ್ಕರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಎಳೆಕೂಸಿನ ನಾಲಿಗೆಯು ಬಾಯಾರಿಕೆಯಿಂದ ಅಂಗಳಿಗೆ ಅಂಟಿಕೊಳ್ಳುತ್ತದೆ. ಎಳೆಯ ಮಕ್ಕಳು ರೊಟ್ಟಿಯನ್ನು ಕೇಳಿದರೆ ಅವರಿಗೆ ಯಾರೂ ಏನೂ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಹಸುಳೆಗಳ ನಾಲಿಗೆಯು ದಾಹದಿಂದ ಅಂಗಳಕ್ಕೆ ಹತ್ತುತ್ತದೆ. ಎಳೆಯ ಕೂಸುಗಳು ಅನ್ನ ಕೇಳುತ್ತವೆ. ಆದರೆ ಅವರಿಗೆ ಯಾರೂ ಅದನ್ನು ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:4
12 ತಿಳಿವುಗಳ ಹೋಲಿಕೆ  

ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II


ಅಡ್ಡಾಡುತ್ತಿರುವರು ಆಕೆಯ ಜನರು ಅನ್ನಕ್ಕಾಗಿ ಮಾರುತಿರುವರು ಅಮೂಲ್ಯವಾದುದನ್ನೆ ಆಹಾರಕ್ಕಾಗಿ. “ಸರ್ವೇಶ್ವರಾ, ನೋಡು, ಕಟಾಕ್ಷಿಸು, ನನ್ನ ತುಚ್ಛತೆಯನ್ನು” ಎಂದು ಹೇಳಿ ಆಕೆ ಪ್ರಲಾಪಿಸುತ್ತಿರುವಳು.


ಜೆರುಸಲೇಮನು ನಾ ಸ್ಮರಣೆಮಾಡದಿದ್ದಲ್ಲಿ I ಆ ಸ್ಮರಣೆ ಸರ್ವೋತ್ತಮ ನಲಿವು ನನಗಾಗದಿದ್ದಲ್ಲಿ I ಸೇದಿಹೋಗಲಿ ನಾಲಿಗೆ ನನ್ನ ಬಾಯಲಿ II


ಕ್ಷಯಿಸಿಹೋಗುವರವರು ಕ್ಷಾಮಡಾಮರದಿಂದ ಸಾಯುವರು ಶಾಪದಿಂದ, ಅಂಟುರೋಗಗಳಿಂದ, ನಾ ಕಳುಹಿಸುವ ಕಾಡುಮೃಗ, ವಿಷಸರ್ಪಗಳಿಂದ.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ಅವರಲ್ಲಿನ ಶ್ರೀಮಂತರು ತಮ್ಮ ಊಳಿಗದವರನ್ನು ನೀರಿಗೆ ಕಳಿಸುತ್ತಾರೆ. ಅವರೋ ಕೊಳಗಳಲ್ಲಿ ನೀರು ಕಾಣದೆ ಬರೀ ಬಿಂದಿಗೆಗಳೊಂದಿಗೆ ಹಿಂದಿರುಗುತ್ತಾರೆ. ನಿರಾಶೆಗೊಂಡು, ನಾಚಿಕೆಪಟ್ಟು ಮೋರೆ ಮುಚ್ಚಿಕೊಳ್ಳುತ್ತಾರೆ.


ಅದಕ್ಕೆ ರಬ್ಷಾಕೆಯು, “ನನ್ನ ಯಜಮಾನರು, ನಿಮ್ಮ ಸಂಗಡವಾಗಲಿ ಮತ್ತು ನಿಮ್ಮ ಒಡೆಯರ ಸಂಗಡವಾಗಲಿ ಮಾತನಾಡಬೇಕೆಂದು ನನ್ನನ್ನು ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತಿರುವ ಜನರ ಸಂಗಡ ಮಾತನಾಡುವುದಕ್ಕಾಗಿಯೇ ಕಳುಹಿಸಿದ್ದಾರೆ. ಈ ಜನರು ನಿಮ್ಮೊಡನೆ ಇದ್ದರೆ ನಿಮ್ಮ ಹಾಗೆ ಇವರು ಕೂಡ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಉತ್ತರಕೊಟ್ಟನು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಈ ಕಾರಣ, ನನ್ನ ಜನರು ಬುದ್ಧಿಹೀನರಂತೆ ಸೆರೆಹೋಗುವುದು ನಿಶ್ಚಯ. ಅವರ ಮುಖಂಡರು ಹಸಿವಿನಿಂದ ಸಾಯುವರು. ಅವರಲ್ಲಿ ಜನಸಾಮಾನ್ಯರು ಬಾಯಾರಿ ಸೊರಗಿಹೋಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು