Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:7 - ಕನ್ನಡ ಸತ್ಯವೇದವು C.L. Bible (BSI)

7 ನನ್ನ ಜನತೆಯ ಮಹನೀಯರು ಹಿಮಕ್ಕಿಂತ ಶುಭ್ರ, ಹಾಲಿಗಿಂತ ಬಿಳುಪು. ಅವರ ದೇಹದ ಬಣ್ಣ ಹವಳವನ್ನು ಮೀರಿತ್ತು ಅವರ ರೂಪ ಇಂದ್ರನೀಲ ಮಣಿಯಂತೆ ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ, ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆ ಪ್ರಜೆಯಲ್ಲಿನ ಮಹನೀಯರು ಹಿಮಕ್ಕಿಂತ ಶುಭ್ರವಾಗಿಯೂ ಹಾಲಿಗಿಂತ ಬಿಳುಪಾಗಿಯೂ ಇದ್ದರು. ಅವರ ದೇಹದ ಬಣ್ಣವು ಹವಳವನ್ನು ಮೀರಿತ್ತು, ಅವರ ರೂಪವು ಇಂದ್ರನೀಲಮಣಿಯಷ್ಟು ಅಂದವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಯೆಹೂದದ ಕೆಲವು ಜನರು ದೇವರಿಗೆ ವಿಶೇಷವಾದ ರೀತಿಯಲ್ಲಿ ಸಮರ್ಪಿತರಾಗಿದ್ದರು. ಅವರು ಬಹಳ ಶುದ್ಧರಾಗಿದ್ದರು. ಅವರು ಹಿಮಕ್ಕಿಂತಲೂ ಹಾಲಿಗಿಂತಲೂ ಬಿಳುಪಾಗಿದ್ದರು. ಅವರ ದೇಹಗಳು ಹವಳದಂತೆ ಕೆಂಪಾಗಿದ್ದವು. ಅವರ ಗಡ್ಡಗಳು ಇಂದ್ರನೀಲಮಣಿಯಂತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅವಳ ರಾಜಕುಮಾರರು ಹಿಮಕ್ಕಿಂತಲೂ ಪ್ರಕಾಶಮಾನವಾಗಿದ್ದರು. ಹಾಲಿಗಿಂತಲೂ ಬೆಳ್ಳಗಿದ್ದರು. ಅವರು ಮೈಕಟ್ಟಿನಲ್ಲಿ ಹವಳಕ್ಕಿಂತಲೂ ಕೆಂಪಾಗಿದ್ದರು. ಅವರ ಹೊಳಪು ಇಂದ್ರನೀಲ ಮಣಿಯ ಹಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:7
15 ತಿಳಿವುಗಳ ಹೋಲಿಕೆ  

ಹಿಸ್ಸೋಪಿನಿಂದ ನೀ ಚಿಮುಕಿಸೆ, ನಾ ಶುದ್ಧನಾಗುವೆ I ನೀ ತೊಳೆದೆಯಾದರೆ, ಹಿಮಕ್ಕಿಂತ ನಾ ಬೆಳ್ಳಗಾಗುವೆ II


ನನ್ನ ನಲ್ಲ, ತೇಜೋಮಯ, ರಕ್ತವರ್ಣ ಹತ್ತುಸಾವಿರ ಜನರಲ್ಲಿ ಶ್ರೇಷ್ಠ.


ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II


ಅವನು ಕೆಂಬಣ್ಣದವನು, ಸುಂದರ ನೇತ್ರನು, ಹಾಗು ನೋಟಕ್ಕೆ ರಮಣೀಯನು. ಸರ್ವೇಶ್ವರ ಸಮುವೇಲನಿಗೆ, “ಎದ್ದು ಇವನನ್ನು ಅಭಿಷೇಕಿಸು; ನಾನು ಆರಿಸಿಕೊಂಡವನು ಇವನೇ,” ಎಂದು ಆಜ್ಞಾಪಿಸಿದರು.


ಹತ್ತು ದಿನಗಳಾದ ಮೇಲೆ ರಾಜಭೋಜನ ಉಣ್ಣುತ್ತಿದ್ದ ಎಲ್ಲ ಯುವಕರಿಗಿಂತ ಇವರು ಸುಂದರವಾಗಿಯೂ ಪುಷ್ಟರಾಗಿಯೂ ಕಾಣಿಸಿದರು.


ಕೊನೆಗೆ ಅವನು, “ಕ್ಷೌರಕತ್ತಿ ನನ್ನ ತಲೆಯ ಮೇಲೆ ಬಂದದ್ದಿಲ್ಲ; ನಾನು ಮಾತೃಗರ್ಭ ಬಿಟ್ಟಂದಿನಿಂದಲೇ ದೇವರಿಗೆ ಪ್ರತಿಷ್ಠಿತನಾದವನು. ನನ್ನ ತಲೆಯನ್ನು ಕ್ಷೌರಮಾಡಿದರೆ ನನ್ನ ಶಕ್ತಿ ಹೋಗುವುದು; ಮತ್ತು ನಾನು ಬಲಹೀನನಾಗಿ ಬೇರೆ ಮನುಷ್ಯನಂತಾಗುವೆನು,” ಎಂದು ತನ್ನ ಗುಟ್ಟನ್ನೆಲ್ಲಾ ಆಕೆಯ ಮುಂದೆ ಬಿಚ್ಚಿ ಹೇಳಿದನು.


ಆದರೆ ಆತ ನನಗೆ, ‘ನೀನು ಗರ್ಭವತಿಯಾಗಿ ಒಬ್ಬ ಮಗನನ್ನು ಹೆರುವೆ; ಆದ್ದರಿಂದ ನೀನು ದ್ರಾಕ್ಷಾರಸವನ್ನಾಗಲಿ, ಬೇರೆ ಯಾವ ಮದ್ಯವನ್ನಾಗಲಿ ಕುಡಿಯದಿರು. ಯಾವ ನಿಷಿದ್ಧಾಹಾರವನ್ನೂ ಮುಟ್ಟಬೇಡ; ಆ ಮಗು ಹುಟ್ಟಿದಂದಿನಿಂದ ಸಾಯುವವರೆಗೆ ಪ್ರತಿಷ್ಠಿತನಾಗಿರುವನು,’ ಎಂದು ಹೇಳಿದನು,” ಎಂದಳು.


ನೀನು ಗರ್ಭವತಿಯಾಗಿ ಹೆರುವ ಮಗನ ತಲೆಯ ಮೇಲೆ ಕ್ಷೌರದ ಕತ್ತಿಯನ್ನು ಉಪಯೋಗಿಸಲೇ ಬಾರದು. ಅವನು ಹುಟ್ಟಿನಿಂದ ದೇವರಿಗೆ ಪ್ರತಿಷ್ಠಿತನಾಗುವನು. ಅವನು ಇಸ್ರಯೇಲರನ್ನು ಫಿಲಿಷ್ಟಿಯರ ಕೈಯಿಂದ ಬಿಡಿಸುವುದಕ್ಕೆ ಪ್ರಾರಂಭಿಸುವನು,” ಎಂದನು.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಅವರಿಗೆ ಇಸ್ರಯೇಲರ ದೇವರ ದರ್ಶನವಾಯಿತು. ಆಕಾಶ ಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಅವರ ಪಾದಪೀಠವಾಗಿತ್ತು.


ಓಫೀರ್ ದೇಶದ ಅಪರಂಜಿಯಿಂದಲೂ ಅಮೂಲ್ಯ ಗೋಮೇಧಿಕ-ಇಂದ್ರನೀಲದಿಂದಲೂ ಸುಜ್ಞಾನದ ಮೌಲ್ಯವನ್ನು ಗೊತ್ತುಮಾಡಲಾಗದು.


ಸುಜ್ಞಾನವಿರುವಲ್ಲಿ ಹವಳ-ಸ್ಫಟಿಕಗಳು ನೆನಪಿಗೆ ಬಾರವು ಮಾಣಿಕ್ಯಗಳ ಸಂಪಾದನೆಗಿಂತ ಅದರ ಸಂಪಾದನೆ ಶ್ರೇಷ್ಠವು.


ಅವನ ಕಾಲುಗಳು ಅಪರಂಜಿಯ ಸುಣ್ಣಪಾದಗಳ ಮೇಲೆ ನಿಂತಿರುವ ಚಂದ್ರಕಾಂತ ಸ್ತಂಭಗಳು. ಅವನ ಗಾಂಭೀರ್ಯ ಲೆಬನೋನಿಗೆ ಸಮಾನ ದೇವದಾರು ಮರಗಳಂತೆ ರಮಣೀಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು