Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:8 - ಕನ್ನಡ ಸತ್ಯವೇದವು C.L. Bible (BSI)

8 ಈಗ ಅವರ ಮುಖ ಕಾರ್ಮೋಡಕ್ಕಿಂತ ಕಪ್ಪು ಬೀದಿಗಳಲ್ಲಿ ನೋಡುತ್ತಿದ್ದವರಿಗೆ ಅವರ ಗುರುತೂ ಸಿಗದು. ಅವರ ಚರ್ಮ ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ; ಒಣಗಿ ಕಟ್ಟಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಈಗ ಅವರ ಮುಖವು ಕಾರ್ಮೋಡದಂತೆ ಕಡುಕಪ್ಪಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳಿಗೆ ಅಂಟಿಕೊಂಡಿದೆ ಅದಕ್ಕೆ ಸುಕ್ಕು ಹಿಡಿದಿದೆ, ಒಣಗಿದ ಕಟ್ಟಿಗೆಯಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 [ಈಗ] ಅವರ ಮುಖವು ಕಟ್ಟಕರಿದಾಗಿದೆ, ಬೀದಿಗಳಲ್ಲಿ ಅವರ ಗುರುತು ಯಾರಿಗೂ ಸಿಕ್ಕದು. ಅವರ ಚರ್ಮವು ಎಲುಬುಗಳ ಮೇಲೆ ಸುಕ್ಕಿಕೊಂಡಿದೆ, ಒಣಗಿ ಕಟ್ಟಿಗೆಯಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆದರೆ ಈಗ ಅವರ ಮುಖಗಳು ಕಪ್ಪು ಹೊಗೆಗಿಂತಲೂ ಕಪ್ಪಾಗಿವೆ. ಅವರನ್ನು ಬೀದಿಗಳಲ್ಲಿ ಯಾರೂ ಸಹ ಗುರುತಿಸುವುದಿಲ್ಲ. ಅವರ ಚರ್ಮವು ಅವರ ಮೂಳೆಗಳ ಮೇಲೆ ಸುಕ್ಕುಗೊಂಡಿದೆ. ಅವರ ಚರ್ಮವು ಮರದಂತಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಆದರೆ ಈಗ ಅವರ ರೂಪವು ಕಲ್ಲಿದ್ದಲಿನಂತೆ ಕಪ್ಪಾಗಿದೆ. ಬೀದಿಗಳಲ್ಲಿ ಅವರು ಯಾರೆಂಬುದು ತಿಳಿಯಲಿಲ್ಲ. ಅವರ ಚರ್ಮವು ಅವರ ಎಲುಬುಗಳಿಗೆ ಹತ್ತಿಕೊಂಡಿದೆ. ಅದು ಒಣಗಿ ಕಡ್ಡಿಯ ಹಾಗೆ ಆಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:8
17 ತಿಳಿವುಗಳ ಹೋಲಿಕೆ  

ಒಲೆಯಂತೆ ಸುಡುತ್ತಿದೆ ನಮ್ಮ ಚರ್ಮ ಕ್ಷಾಮಕಾಲದ ಭೀಕರ ಜ್ವರದ ನಿಮಿತ್ತ.


ನನ್ನ ಚರ್ಮ ಉದುರುತ್ತಿದೆ ಕರ್ರಗಾಗಿ ನನ್ನೆಲುಬು ಉರಿಯುತ್ತಿದೆ ತಾಪಕ್ಕೊಳಗಾಗಿ.


ಬೆಂಕಿಗೆ ಬಿಸಾಡಿದ ಒಣ ಬುದ್ಧಲಿಯಂತಾದೆ I ಆದರೂ ನಿನ್ನ ನಿಬಂಧನೆಗಳನ್ನು ಮರೆಯದಿದ್ದೆ II


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ನಿನೆವೆ ಬರಿದಾಗಿದೆ; ಬಟ್ಟಬರಿದಾಗಿ ಪಾಳುಬಿದ್ದಿದೆ; ಎದೆಕರಗಿದೆ, ಮೊಣಕಾಲುಗಳು ಅದರುತ್ತಿವೆ. ಎಲ್ಲರ ಸೊಂಟಗಳು ಮುರಿದಂತಾಗಿವೆ, ಅವರ ಮುಖಗಳು ಬಾಡಿಹೋಗಿವೆ.


ಅವುಗಳ ನೋಟ, ರಾಷ್ಟ್ರಗಳಿಗೆ ಪ್ರಾಣಸಂಕಟ; ಎಲ್ಲರ ಮುಖಗಳಿಗೆ ಮಂಕಾಟ.


ಆತನ ಮುಖ ನರಮಾನವರ ಮುಖಕ್ಕಿಂತ ಆತನ ರೂಪ ನರಪುತ್ರರ ರೂಪಕ್ಕಿಂತ ವಿಕಾರಗೊಂಡಿದೆ ನಿಜ; ಆದರೆ ಹಲವರು ನೋಡಿ ಆದರು ಚಕಿತ.


ನನ್ನ ಬಾಳು ಬೈಗಿನ ನೆರಳಂತೆ I ನಾನಿರುವೆ ಬಾಡಿದ ಹುಲ್ಲಿನಂತೆ II


ನನ್ನ ದೇಹದಲ್ಲಿಲ್ಲ ಸೌಖ್ಯ ನಿನ್ನ ಕೋಪದ ನಿಮಿತ್ತ I ನನ್ನೆಲುಬಿನಲ್ಲಿಲ್ಲ ಕ್ಷೇಮ ನನ್ನ ಪಾಪದ ಪ್ರಯುಕ್ತ II


ಪ್ರಭುವಿನ ಶಿಕ್ಷಾಹಸ್ತ ನನ್ನ ಮೇಲೆ ಭಾರವಾಗಿತ್ತು ಹಗಲಿರುಳು I ಬೇಸಿಗೆಯ ನೀರಿನಂತೆ ಬತ್ತಿಹೋಗಿತ್ತು ನನ್ನ ಶರೀರದ ತಿರುಳು II


ಅವನ ಮಾಂಸಖಂಡ ಕರಗಿಹೋಗುವುದು ಅವನ ಅಸ್ಥಿಪಂಜರ ಎದ್ದು ಕಾಣುವುದು.


ದೂರದಿಂದ ನೋಡಿದಾಗ ಆತನ ಗುರುತುಹಚ್ಚಲು ಕೂಡ ಅವರಿಂದಾ ಆಗಲಿಲ್ಲ. ಎಂದೇ ಅವರು ಗಟ್ಟಿಯಾಗಿ ಅತ್ತರು. ದುಃಖ ತಾಳಲಾರದೆ ತಂತಮ್ಮ ಮೇಲಂಗಿಯನ್ನು ಸೀಳಿಕೊಂಡರು.


‘ನಮ್ಮ ಪಾದಗಳಿಗೆ ಅಂಟಿರುವ ನಿಮ್ಮ ಊರಿನ ಧೂಳನ್ನು ಕೂಡ ನಿಮಗೆ ವಿರುದ್ಧವಾಗಿ ಒದರಿಬಿಡುತ್ತೇವೆ. ಆದರೂ ದೇವರ ಸಾಮ್ರಾಜ್ಯ ಸಮೀಪಿಸಿದೆ ಎಂಬುದನ್ನು ಮಾತ್ರ ನೀವು ಗಮನದಲ್ಲಿಡಿ,’ ಎಂದು ತಿಳಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು