Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 4:9 - ಕನ್ನಡ ಸತ್ಯವೇದವು C.L. Bible (BSI)

9 ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು. ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಹಸಿವೆಯಿಂದ ಹತರಾದವರ ಗತಿಗಿಂತಲೂ ಖಡ್ಗದಿಂದ ಹತರಾದವರ ಗತಿಯೇ ಲೇಸು; ಭೂಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದವರು ಕ್ಷಯಿಸುತ್ತಾ ಬರುತ್ತಾರಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಬರಗಾಲದ ನಿಮಿತ್ತ ಸತ್ತವರಿಗಿಂತಲೂ ಖಡ್ಗಗಳಿಂದ ಹತರಾದವರ ಸಾವೇ ಮೇಲಾಗಿತ್ತು. ಹಸಿವೆಯಿಂದಿದ್ದ ಜನರು ನೋವಿನಿಂದ ನರಳಾಡಿದರು. ಭೂಮಿಯಿಂದ ಆಹಾರವನ್ನು ಪಡೆಯಲಾಗದೆ ಅವರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಖಡ್ಗದಿಂದ ಹತರಾದವರು ಹಸಿವೆಯಿಂದ ಹತರಾದವರಿಗಿಂತಲೂ ಲೇಸು. ಏಕೆಂದರೆ, ಇವರು ಭೂಮಿಯ ಫಲಗಳಿಲ್ಲದೆ ಕ್ಷಾಮದ ಪೆಟ್ಟನ್ನು ತಿಂದು, ಕ್ಷಯಿಸಿ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 4:9
10 ತಿಳಿವುಗಳ ಹೋಲಿಕೆ  

ಗಾರಿಗೆಯನ್ನು ತಿನ್ನದೆ, ರುಮಾಲನ್ನು ಸುತ್ತಿಕೊಂಡು, ಕೆರಗಳನ್ನು ಮೆಟ್ಟಿಕೊಂಡು ಇರುವಿರಿ; ನೀವು ಗೋಳಾಡುವುದಿಲ್ಲ, ಅಳುವುದಿಲ್ಲ. ಆದರೆ ನಿಮ್ಮ ಅಧರ್ಮದಿಂದ ಕ್ಷೀಣವಾಗಿ ನರಳುವಿರಿ. ಒಬ್ಬರೆದುರಿಗೆ ಒಬ್ಬರು ನರಳುವಿರಿ.


ನಿಮ್ಮಲ್ಲಿ ಅಳಿದುಳಿದವರು ತಮ್ಮ ಪಾಪದ ಪ್ರಯುಕ್ತ ಹಾಗು ತಮ್ಮ ಪಿತೃಗಳ ಪಾಪದ ಪ್ರಯುಕ್ತ ಅವರಂತೆಯೇ ಶತ್ರುಗಳ ನಾಡುಗಳಲ್ಲಿ ಕ್ಷೀಣವಾಗಿ ಹೋಗುವರು.


“ನರಪುತ್ರನೇ, ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಅಯ್ಯೋ, ನಮ್ಮ ದ್ರೋಹಗಳ ಮತ್ತು ಪಾಪಗಳ ಭಾರ ನಮ್ಮ ಮೇಲೆ ಬಿದ್ದಿವೆ; ಅವುಗಳಿಂದ ಕ್ಷೀಣವಾಗಿಹೋಗುತ್ತಿದ್ದೇವೆ; ನಾವು ಹೇಗೆ ಉಳಿದೇವು ಅಂದುಕೊಳ್ಳುತ್ತೀರಲ್ಲವೇ?


ಅವರು ಘೋರ ಮರಣಕ್ಕೆ ಗುರಿಯಾಗುವರು. ಅವರಿಗಾಗಿ ಯಾರೂ ದುಃಖಿಸುವುದಿಲ್ಲ. ಅವರನ್ನು ಯಾರೂ ಹೂಣುವುದಿಲ್ಲ. ಅವರು ಗೊಬ್ಬರವಾಗಿ ಭೂಮಿಯ ಮೇಲೆ ಬಿದ್ದಿರುವರು. ಖಡ್ಗದಿಂದ ಹಾಗು ಕ್ಷಾಮದಿಂದ ಅವರು ನಾಶವಾಗುವರು. ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಜಂತುಗಳಿಗೂ ಆಹಾರವಾಗುವುವು.”


“ಈ ಸಮಾಜವನ್ನೆಲ್ಲ ಹಸಿವೆಯಿಂದ ಸಾಯಿಸಬೇಕೆಂದು ಈ ಮರುಭೂಮಿಗೆ ನಮ್ಮನ್ನು ಕರೆದು ತಂದಿದ್ದೀರಿ; ನಾವು ಈಜಿಪ್ಟಿನಲ್ಲಿದ್ದಾಗ ಸರ್ವೇಶ್ವರನ ಕೈಯಿಂದಲೆ ಸತ್ತಿದ್ದರೆ ಎಷ್ಟೊ ಲೇಸಾಗಿತ್ತು. ಆಗ ಮಾಂಸ ಪಾತ್ರೆಗಳ ಪಕ್ಕದಲ್ಲೇ ಕುಳಿತು ಹೊಟ್ಟೇ ತುಂಬ ಊಟಮಾಡುತ್ತಿದ್ದೆವು,” ಎಂದು ಗುಣಗಿದರು.


ಘೋರಕ್ಷಾಮದ ಕಾರಣ ನಗರದವರಿಗೆ ಆಹಾರ ಸಿಕ್ಕದೆ ಹೋಯಿತು. ನಗರಕ್ಕೆ ಮುತ್ತಿಗೆಹಾಕಿದ್ದ ಬಾಬಿಲೋನಿಯರು ಹನ್ನೊಂದನೆಯ ತಿಂಗಳಿನ ಒಂಬತ್ತನೆಯ ದಿವಸ ಪೌಳಿಗೋಡೆಯಲ್ಲಿ ಒಂದು ದ್ವಾರವನ್ನು ಮಾಡಿದರು.


ಅವರು ನಿಮ್ಮ ದನಗಳನ್ನೂ ಬೆಳೆಗಳನ್ನೂ ತಿಂದುಬಿಡುವರು. ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನಕುರಿಗಳ ಸಂತಾನವನ್ನಾಗಲಿ, ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.


ಊರಿಗೆ ಊರೇ ಆರ್ಭಟಿಸುತ್ತಿರುವಂತಿದೆ ! ಯುದ್ಧದಲ್ಲಿ ಸತ್ತ ನಿಮ್ಮ ಯೋಧರೆಲ್ಲ ಕಾದಾಟದಿಂದ ಮಡಿದವರಲ್ಲ.


ಇದಲ್ಲದೆ ಅವರು ನನಗೆ ಹೀಗೆ ಹೇಳಿದರು: “ನರಪುತ್ರನೇ, ನಾನು ಜೆರುಸಲೇಮಿನಲ್ಲಿ ಆಹಾರ ಸರಬರಾಜನ್ನು ನಿಲ್ಲಿಸಿಬಿಡುವೆನು. ನಿವಾಸಿಗಳು ಅನ್ನವನ್ನು ತೂಕಮಾಡಿ ಅಂಜಿಕೆಯಿಂದ ತಿನ್ನುವರು, ನೀರನ್ನು ಅಳತೆಮಾಡಿ ಕಳವಳದಿಂದ ಕುಡಿಯುವರು;


“ಊರ ಹೊರಗೆ ಖಡ್ಗಕ್ಕೆ, ಊರೊಳಗೆ ವ್ಯಾಧಿ ಕ್ಷಾಮಗಳಿಗೆ ತುತ್ತಾಗುವರು; ಹೊರಗಿರುವವರು ಖಡ್ಗದಿಂದ ಸಾಯುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು