Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:17 - ಕನ್ನಡ ಸತ್ಯವೇದವು C.L. Bible (BSI)

17 ಈ ಕಾರಣ, ನಮ್ಮ ಹೃದಯ ಕುಂದಿದೆ ಇದೇ ಕಾರಣ, ನಮ್ಮ ಕಣ್ಣು ಮೊಬ್ಬಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನಮ್ಮ ಹೃದಯವು ಕುಂದಿದೆ ಮತ್ತು ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಚೀಯೋನ್ ಪರ್ವತವು ಹಾಳಾಯಿತಲ್ಲಾ! ನರಿಗಳು ಅಲ್ಲಿ ಸಂಚರಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಇವುಗಳ ದೆಸೆಯಿಂದಾಗಿ ನಮ್ಮ ಹೃದಯಗಳು ಎಡಬಿಡದೆ ನೋಯುತ್ತಿವೆ. ನಮ್ಮ ಕಣ್ಣುಗಳು ಸರಿಯಾಗಿ ಕಾಣದಂತಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಇದಕ್ಕಾಗಿ ನಮ್ಮ ಹೃದಯವು ದುರ್ಬಲವಾಗಿದೆ. ಏಕೆಂದರೆ ಇವುಗಳಿಂದ ನಮ್ಮ ಕಣ್ಣುಗಳು ಮೊಬ್ಬಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:17
17 ತಿಳಿವುಗಳ ಹೋಲಿಕೆ  

ಏಕೆ ಹೆಚ್ಚು ಹೆಚ್ಚಾಗಿ ದ್ರೋಹಗೈದು ದಂಡನೆಗೆ ಗುರಿ ಆಗುತ್ತೀರಿ? ನಿಮ್ಮ ತಲೆತುಂಬ ಗಾಯ, ನಿಮ್ಮ ಹೃದಯವೆಲ್ಲ ದುರ್ಬಲ.


ಕಂಬನಿಗರೆದು ಇಂಗಿಹೋಗಿದೆ ಕಣ್ಣು ಕುದಿಯುತ್ತಿದೆ ನನ್ನೊಳಗೆ ಕರುಳು ! ನನ್ನ ಜನತೆಯೆಂಬ ಯುವತಿ ಹಾಳಾಗಿ ಮಕ್ಕಳು ಹಾದಿಬೀದಿಗಳಲ್ಲಿ ಮೂರ್ಛೆಹೋಗಿ ನನ್ನ ಕರುಳು ಕರಗಿಹೋಗಿದೆ ನೀರಾಗಿ.


ಮಂಕಾದವು ಕಣ್ಣುಗಳು ರೋದನದಿಂದ I ಮಬ್ಬಾದವವು ವೈರಿಗಳ ಬಾಧೆಯಿಂದ II


ನನ್ನ ಕಣ್ಣು ದುಃಖದಿಂದ ಮೊಬ್ಬಾಗಿವೆ ಅಂಗಗಳೆಲ್ಲ ನೆರಳಂತೆ ನಿಸ್ಸಾರವಾಗಿವೆ.


ಕಿಚುಗುಟ್ಟಿದೆ ನಾ ಬಾನಕ್ಕಿ-ಬಕಗಳಂತೆ ಗುಬ್ಬಳಿಸಿದೆ ನಾ ಪಾರಿವಾಳದಂತೆ ಕಂಗೆಟ್ಟೆ, ನಾ ಮೇಲೆ ಮೇಲಕ್ಕೆ ನೋಡುತಾ ಸರ್ವೇಶ್ವರಾ, ನಾನಿರುವೆ ಬಾಧೆಪಡುತಾ ನೀ ಎನಗೆ ನೆರವಾಗಲು ಬಾ ಎನ್ನುತಾ.


ಆದಕಾರಣ ನಿಮ್ಮನ್ನು ಕಠಿಣವಾಗಿ ದಂಡಿಸುವೆನು. ನಿಮ್ಮ ಪಾಪದ ನಿಮಿತ್ತ ನಾಶವಾಗುವಿರಿ.


ನೀರಾಗುವುದು ಜನರ ಹೃದಯ, ಎಡವಿ ಬೀಳುವರು ಬಹುಜನ. ಪುರದ್ವಾರಗಳಿಗೇ ತಂದಿರುವೆನು ಹತಿಸುವಾ ಖಡ್ಗವ. ಮಿನುಗುತಿಹುದದು ಮಿಂಚಿನಂತೆ ಹರಿತವಿದೆ ವಧೆಗಾಗುವ ಕತ್ತಿಯಂತೆ.


‘ಏಕೆ ನರಳಾಡುತ್ತೀ?’ ಎಂದು ಅವರು ನಿನ್ನನ್ನು ಕೇಳುವರು. ಆಗ ನೀನು ಅವರಿಗೆ - ‘ದುರ್ವಾರ್ತೆಯ ನಿಮಿತ್ತ ನರಳುತ್ತಿದ್ದೇನೆ; ಇಗೋ, ವಿಪತ್ತು ಬಂದಿತು; ಎಲ್ಲರ ಹೃದಯವು ಕರಗಿ ನೀರಾಗುವುದು, ಎಲ್ಲರ ಕೈ ಜೋಲುಬೀಳುವುದು, ಎಲ್ಲರ ಮನಸ್ಸು ಕುಂದುವುದು, ಎಲ್ಲರ ಮೊಣಕಾಲು ನೀರಿನಂತೆ ಅದರುವುದು; ಇಗೋ, ಬಂದಿತು, ಬಂದಾಯಿತು! ಇದು ಸರ್ವೇಶ್ವರನಾದ ದೇವರ ನುಡಿ,’ ಎಂದು ಉತ್ತರಕೊಡು.”


“ಅವರು ಗೈದ ಕೆಡುಕೆಲ್ಲಾ ಬಟ್ಟಬಯಲಾಗಲಿ ನಿನ್ನ ದೃಷ್ಟಿಗೆ. ನನ್ನ ದ್ರೋಹಕ್ಕೆ ಪ್ರತಿಯಾಗಿ ನನಗೆ ಮಾಡಿರುವಂತೆ ನೀ ಮಾಡು ಅವರಿಗೆ. ನನ್ನ ನರಳಾಟ ಹೆಚ್ಚಿದೆ; ನನ್ನ ಎದೆ ಕುಂದಿಹೋಗಿದೆ.”


“ಆಕಾಶದಿಂದ ಆತ ಸುರಿಸಿದ್ದಾನೆ ಅಗ್ನಿಯನ್ನೆ ಅದು ದಹಿಸುತ್ತಿದೆ ನನ್ನೊಳಗಿನ ಎಲುಬುಗಳನ್ನೆ ನನ್ನ ಕಾಲುಗಳಿಗೆ ಬಲೆಯೊಡ್ಡಿದ್ದಾನೆ ಅದು ನನ್ನನ್ನೆಳೆಯುತ್ತಿದೆ ನೆಲಕ್ಕೆ ಹಾಳುಬಿದ್ದ ನಾನು ಸದಾ ಬಳಲುತ್ತಿದ್ದೇನೆ.”


“ಆದರೆ, ನನ್ನ ಕಣ್ಣಿಗೆ ಕಾಣುತ್ತಿರುವುದೇನು? ಅವರು ಓಡುತ್ತಿರುವರು ನೋಡು, ಧೈರ್ಯಗೆಟ್ಟು, ಬೆನ್ನುಗೊಟ್ಟು. ಅವರ ಶೂರರು ಹಿಂದಿರುಗದೆ ಓಡುತ್ತಿರುವರು ಪೆಟ್ಟುತಿಂದು, ದಿಗಿಲು ಕವಿದಿದೆ ಸುತ್ತ ಮುತ್ತಲು,” ಸರ್ವೇಶ್ವರನ ವಾಣಿ ಇದು.


ಅಯ್ಯೋ, ನಾನು ಮುಕ್ತನಾಗಿಲ್ಲ ದುಃಖದಿಂದ ನನ್ನ ಹೃದಯ ಕುಂದಿಹೋಗಿದೆ ಶೋಕದಿಂದ.


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಸಂಕಟದಲಿ ನಾ ಸಿಲುಕಿಕೊಂಡಿರುವೆ I ಕಣ್ಣುಗುಡ್ಡೆಗಳಿದೋ ಸೇದಿಹೋಗಿವೆ I ದೇಹಾತ್ಮಗಳೆರಡು ಕುಗ್ಗಿಹೋಗಿವೆ II


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


“ನಿಮ್ಮಲ್ಲಿ ಯಾರ್ಯಾರು ಶತ್ರುದೇಶಗಳಲ್ಲಿ ಅಳಿದುಳಿದಿರುವಿರೋ ಅವರ ಅಂತರಾಳದಲ್ಲಿ ಭಯಭೀತಿಯನ್ನು ಹುಟ್ಟಿಸುವೆನು. ಗಾಳಿಗೆ ತೂರಾಡುವ ತರಗೆಲೆಯ ಸಪ್ಪಳವೂ ಅವರಲ್ಲಿ ದಿಗಿಲು ಹುಟ್ಟಿಸುವುದು.ಆ ಸಪ್ಪಳ ಕೇಳಿ, ಖಡ್ಗಕ್ಕೆ ಹೆದರಿ ಓಡಿಹೋಗುವವರಂತೆ ಫೇರಿಕೀಳುವರು. ಯಾರೂ ಬೆನ್ನಟ್ಟಿಬಾರದಿದ್ದರೂ ಅವರು ಎದ್ದುಬಿದ್ದು ಓಡುವರು.


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು