Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಲಾಪಗಳು 5:19 - ಕನ್ನಡ ಸತ್ಯವೇದವು C.L. Bible (BSI)

19 ಹೇ ಸರ್ವೇಶ್ವರಾ, ನಿನ್ನ ರಾಜ್ಯ ಚಿರಕಾಲ ನಿನ್ನ ಸಿಂಹಾಸನ ತಲತಲಾಂತರಕ್ಕೂ ಸುಸ್ಥಿರ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯೆಹೋವನೇ, ನೀನು ಶಾಶ್ವತವಾಗಿ ನೆಲೆಗೊಂಡಿದ್ದೀ, ತಲತಲಾಂತರಕ್ಕೂ ನಿನ್ನ ಸಿಂಹಾಸನವು ಸ್ಥಿರವಾಗಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಯೆಹೋವನೇ, ನೀನಾದರೋ ಶಾಶ್ವತವಾಗಿ ಆಳುವೆ. ನಿನ್ನ ರಾಜಸಿಂಹಾಸನವು ಸದಾಕಾಲವಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೆಹೋವ ದೇವರೇ, ನೀವು ಎಂದೆಂದಿಗೂ ಇರುತ್ತೀರಿ. ನಿಮ್ಮ ಸಿಂಹಾಸನವು ತಲತಲಾಂತರಗಳವರೆಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಲಾಪಗಳು 5:19
23 ತಿಳಿವುಗಳ ಹೋಲಿಕೆ  

ನೀನಾದರೋ ಪ್ರಭು, ಸದಾ ಸಿಂಹಾಸನಾರೂಢ I ಮಾಳ್ಪರು ತಲತಲಾಂತರಕು ನಿನ್ನ ನಾಮಸ್ಮರಣ II


ಅಮರವಾದುದು ಹೇ ದೇವಾ, ನಿನ್ನ ಸಿಂಹಾಸನ I ನ್ಯಾಯಸ್ಥಾಪಕವಾದುದು ನಿನ್ನ ರಾಜದಂಡ II


ಶಾಶ್ವತವಾದುದು ನಿನ್ನ ರಾಜ್ಯವು I ಇರುವುದೆಂದಿಗು ನಿನ್ನ ಆಳ್ವಿಕೆಯು II


ಪ್ರಭುವಿನ ರಾಜ್ಯಾಡಳಿತ ಶಾಶ್ವತ I ಆತನ ನ್ಯಾಯಪೀಠ ಸುಸ್ಥಾಪಿತ II


“ ‘ಅ'ಕಾರವೂ ‘ಳ'ಕಾರವೂ ನಾನೇ. ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,” ಭವಿಷ್ಯತ್ಕಾಲದಲ್ಲಿ ‘ಬರುವಾತನೂ’ ಸರ್ವಶಕ್ತನೂ ನಾನೇ” ಎಂದು ಪ್ರಭು ದೇವರು ನುಡಿಯುತ್ತಾರೆ.


ಸರ್ವಯುಗಗಳ ಅರಸರೂ ಅಮರರೂ ಅಗೋಚರರೂ ಆಗಿರುವ ಏಕೈಕ ದೇವರಿಗೆ ಯುಗಯುಗಾಂತರಕ್ಕೆ ಗೌರವವೂ ಮಹಿಮೆಯೂ ಸಲ್ಲಲಿ! ಆಮೆನ್.


ಯೇಸುಕ್ರಿಸ್ತರು, ನಿನ್ನೆ ಇದ್ದಹಾಗೆಯೇ ಇಂದೂ ಎಂದೆಂದೂ ಇದ್ದಾರೆ.


ಸರ್ವೇಶ್ವರಾ, ನನ್ನ ದೇವರೇ, ಪರಮಪಾವನ ಸ್ವಾಮಿಯೇ, ಅನಾದಿಯಿಂದ ಇರುವಂಥವರು ನೀವು. ನಾವು ಖಂಡಿತ ಸಾಯುವುದಿಲ್ಲ. ನಮ್ಮನ್ನು ದಂಡಿಸುವಂತೆ ಆ ಬಾಬಿಲೋನಿನವರನ್ನು ನೇಮಿಸಿದವರು ನೀವು; ಅವರನ್ನು ಪ್ರಬಲಗೊಳಿಸಿದವರು ನೀವು. ನಮಗೆ ಪೊರೆಬಂಡೆ ನೀವೇ.


ಪ್ರಭುವೇ ಅರಸನು ಸದಾಕಾಲಕು I ಸಿಯೋನ್, ನಿನ್ನ ದೇವನಾಳ್ವನು ತಲತಲಾಂತರಕು I ಅಲ್ಲೆಲೂಯ! II


ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ರಾಜ್ಯಭಾರವೂ ದೊರೆತನವೂ ಸಮಸ್ತ ಲೋಕದಲ್ಲಿನ ರಾಜ್ಯಗಳ ಮಹಿಮೆಯೂ ಮಹೋನ್ನತರ ಭಕ್ತಜನರಿಗೆ ಕೊಡಲಾಗುವುದು. ಅವರ ರಾಜ್ಯ ಶಾಶ್ವತರಾಜ್ಯ. ಎಲ್ಲ ದೇಶಾಧಿಪತಿಗಳೂ ಅವರಿಗೆ ಅಧೀನರಾಗಿ ಸೇವೆಮಾಡುವರು,” ಎಂದು ಹೇಳಿದನು.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಆ ರಾಜರ ಕಾಲದಲ್ಲಿ ಪರಲೋಕ ದೇವರು ಒಂದು ಸಾಮ್ರಾಜ್ಯವನ್ನು ಸ್ಥಾಪಿಸುವರು. ಅದು ಎಂದಿಗೂ ಅಳಿಯದು. ಅದರ ಪ್ರಾಬಲ್ಯವು ಬೇರೆ ರಾಷ್ಟ್ರಕ್ಕೆ ಜಾರಿಹೋಗದು. ರಾಷ್ಟ್ರಗಳನ್ನೆಲ್ಲಾ ಭಂಗಪಡಿಸಿ, ನಿರ್ನಾಮಮಾಡಿ ಆ ಸಾಮ್ರಾಜ್ಯ ಶಾಶ್ವತವಾಗಿ ನಿಲ್ಲುವುದು.


ಜಲಪ್ರಳಯದೊಳು ಪ್ರಭು ಆಸೀನನಾಗಿಹನು I ಯುಗಯುಗಾಂತರಕು ಅರಸನಾಗಿ ಆಳುವನು II


ಪ್ರಭುವಿನ ಶ್ರೀಸಾಮ್ರಾಜ್ಯವು ಅನವರತ I ಆತನ ನಾಡಲಿ ಮುಗಿಯಿತು ಅನ್ಯಜನರ ಉಳಿತ II


ಆದಿಯಿಂದ ದೇವರೇ ನಿಮಗೆ ಶ್ರೀನಿವಾಸ ಆತನ ಹಸ್ತವೇ ನಿಮಗೆ ನಿತ್ಯಾಧಾರ! ಶತ್ರುಗಳನು ಹೊರಡಿಸುವನು ನಿಮ್ಮ ಬಳಿಯಿಂದ ಅವರನು ಸಂಹರಿಸಲು ಆಜ್ಞಾಪಿಸಿಹನು ಆತ.


ಏಷ್ಯಾಸೀಮೆಯಲ್ಲಿರುವ ಏಳು ಸಭೆಗಳಿಗೆ ಯೊವಾನ್ನನೆಂಬ ನಾನು ಬರೆಯುವುದೇನೆಂದರೆ: ವರ್ತಮಾನಕಾಲದಲ್ಲಿ ‘ಇರುವಾತನೂ,’ ಭೂತಕಾಲದಲ್ಲಿ ‘ಇದ್ದಾತನೂ,’ ಭವಿಷ್ಯತ್‍ಕಾಲದಲ್ಲಿ ‘ಬರುವಾತನೂ’ ಆದ ದೇವರಿಂದ ನಿಮಗೆ ಕೃಪಾಶೀರ್ವಾದವೂ ಶಾಂತಿಸಮಾಧಾನವೂ ಲಭಿಸಲಿ! ಇದಲ್ಲದೆ, ದೇವರ ಸಿಂಹಾಸನದ ಸಾನ್ನಿಧ್ಯದಲ್ಲಿ ಇರುವ ಸಪ್ತ ಆತ್ಮಗಳಿಂದಲು ಮತ್ತು


ಯೇಸು ಸ್ವಾಮಿ, ತಮ್ಮನ್ನು ಹಿಂಬಾಲಿಸಿ ಬರುತ್ತಿರುವುದನ್ನು ನೋಡಿ, “ನಿಮಗೆ ಏನು ಬೇಕು?” ಎಂದು ಕೇಳಿದರು. ಅವರು, “ರಬ್ಬೀ, ತಾವು ವಾಸಮಾಡುವುದೆಲ್ಲಿ?” ಎಂದು ವಿಚಾರಿಸಿದರು. (’ರಬ್ಬಿ’ ಎಂದರೆ ಗುರುದೇವ ಎಂದು ಅರ್ಥ.)


ನಿನ್ನ ಸಿಂಹಾಸನ ಸ್ಥಿರ ಆದಿಯಿಂದ I ನೀನಿರುವೆ ಪ್ರಭು ಅನಾದಿಯಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು