Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 1:16 - ಕನ್ನಡ ಸತ್ಯವೇದವು C.L. Bible (BSI)

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆ: “ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ಅರಸರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ಜ್ಞಾನ ಹಾಗೂ ತಿಳುವಳಿಕೆಯ ವಿಶೇಷ ಅನುಭವ ನನಗಿದೆ".

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ, “ನೋಡು, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ. ನನ್ನ ಹೃದಯವು ಜ್ಞಾನವನ್ನೂ, ತಿಳಿವಳಿಕೆಯನ್ನೂ ವಿಶೇಷವಾಗಿ ಹೊಂದಿದೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾನು ಮನಸ್ಸಿನಲ್ಲಿ ಯೋಚಿಸುತ್ತಾ - ಆಹಾ, ನನಗಿಂತ ಮೊದಲು ಯೆರೂಸಲೇಮನ್ನು ಆಳಿದವರೆಲ್ಲರಿಗಿಂತಲೂ ಹೆಚ್ಚು ಜ್ಞಾನವನ್ನು ಸಂಪಾದಿಸಿಕೊಂಡಿದ್ದೇನೆ; ನನ್ನ ಹೃದಯವು ಜ್ಞಾನವನ್ನೂ ತಿಳುವಳಿಕೆಯನ್ನೂ ವಿಶೇಷವಾಗಿ ಹೊಂದಿದೆ ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಮನಸ್ಸಿನಲ್ಲಿ, “ನಾನು ಬಹು ಜ್ಞಾನಿ. ನನಗಿಂತ ಮೊದಲು ಜೆರುಸಲೇಮನ್ನು ಆಳಿದ ಎಲ್ಲಾ ರಾಜರುಗಳಿಗಿಂತ ನಾನು ಜ್ಞಾನಿ. ನಾನು ಜ್ಞಾನವನ್ನೂ ವಿವೇಕವನ್ನೂ ಚೆನ್ನಾಗಿ ತಿಳಿದುಕೊಂಡಿರುವೆ” ಎಂದುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನನ್ನಷ್ಟಕ್ಕೆ ನಾನೇ ಹೀಗೆಂದುಕೊಂಡೆನು, “ನೋಡು, ಯೆರೂಸಲೇಮಿನಲ್ಲಿ ನನಗಿಂತ ಮೊದಲು ಆಳಿದವರಿಗಿಂತ ನಾನು ಹೆಚ್ಚು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ಹಾಗೂ ತಿಳುವಳಿಕೆಯ ಅನುಭವ ನನಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 1:16
20 ತಿಳಿವುಗಳ ಹೋಲಿಕೆ  

ಹೀಗೆ ಜೆರುಸಲೇಮಿನಲ್ಲಿ ಹಿಂದೆ ಇದ್ದ ಎಲ್ಲರಿಗಿಂತಲೂ ಅಭಿವೃದ್ಧಿಹೊಂದಿ ಶ್ರೀಮಂತನಾದೆ.


ಅವನ ಜ್ಞಾನ ಮೂಡಣದೇಶದವರೆಲ್ಲರ ಜ್ಞಾನಕ್ಕಿಂತಲು, ಈಜಿಪ್ಟರ ಸರ್ವಜ್ಞಾನಕ್ಕಿಂತಲು ಮಿಗಿಲಾಗಿತ್ತು.


ನಾನಾಗಿ ಇಲ್ಲಿಗೆ ಬಂದು ಕಣ್ಣಾರೆ ನೋಡುವುದಕ್ಕೆ ಮೊದಲು ಜನರು ಹೇಳಿದ ಸುದ್ದಿಯನ್ನು ನಂಬಲಿಲ್ಲ; ಈಗ ನೋಡಿದರೆ ನಿಮ್ಮ ಜ್ಞಾನವೈಭವಗಳು, ನಾನು ಕೇಳಿದ್ದಕ್ಕಿಂತ ಮಿಗಿಲಾಗಿವೆ. ಜನರು ನನಗೆ ಇದರಲ್ಲಿ ಅರ್ಧವನ್ನಾದರೂ ವರದಿ ಮಾಡಿರಲಿಲ್ಲ.


ಗಟ್ಟಿಯಾದ ಆಹಾರ ಬೆಳೆದವರಿಗೆ; ಸ್ವಂತ ಅನುಭವದಿಂದ ಒಳ್ಳೆಯದಾವುದು ಕೆಟ್ಟದ್ದಾವುದು ಎಂದು ಅರಿತುಕೊಳ್ಳಬಲ್ಲವರಿಗೆ.


ಕೋಪಗೊಂಡರೂ ದೂರವಿರು ಪಾಪದಿಂದ I ಶಯನದಲ್ಲಿದ್ದರೂ ಧ್ಯಾನಿಸು ಹೃದಯದಿಂದ II


ಭೂಮ್ಯಾಕಾಶಗಳನ್ನು ಉಂಟುಮಾಡಿದ ಇಸ್ರಯೇಲ್ ದೇವರಾದ ಸರ್ವೇಶ್ವರ ತಮಗಾಗಿ ಒಂದು ದೇವಾಲಯವನ್ನೂ ರಾಜನಿಗೋಸ್ಕರ ಒಂದು ಅರಮನೆಯನ್ನೂ ಕಟ್ಟಿಸತಕ್ಕ ಬುದ್ಧಿ, ಜ್ಞಾನ ಹಾಗೂ ವಿವೇಕಗಳುಳ್ಳ ಒಬ್ಬ ಮಗನನ್ನು ಅರಸನಾದ ದಾವೀದನಿಗೆ ಕೊಟ್ಟಿದ್ದಾರೆ; ಅವರಿಗೆ ಸ್ತೋತ್ರವಾಗಲಿ!


ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


‘ಸವಿಸ್ತಾರವಾದ ಅರಮನೆ ನಿರ್ಮಿಸಿಕೊಳ್ಳುವೆನು ವಿಶಾಲವಾದ ಮಹಡಿ ಕಟ್ಟಿಸಿಕೊಳ್ಳುವೆನು’ ಎನ್ನುವನಿಗೆ ಧಿಕ್ಕಾರ ! ಅವನು ಅಗಲಗಲವಾದ ಕಿಟಕಿಗಳನ್ನಿಡಿಸಿಕೊಳ್ಳುತ್ತಾನೆ ಅವುಗಳಿಗೆ ಕೆಂಪು ಬಣ್ಣವನ್ನೂ ಬಳಿಸಿಕೊಳ್ಳುತ್ತಾನೆ.


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ನಾಮಾನನು ಸ್ವಲ್ಪದೂರಕ್ಕೆ ಹೋದನಂತರ ದೈವಪುರುಷನಾದ ಎಲೀಷನ ಸೇವಕ ಗೇಹಜಿಯು ಮನಸ್ಸಿನಲ್ಲೇ, “ನನ್ನ ಯಜಮಾನ ಆ ಸಿರಿಯಾದ ನಾಮಾನನಿಂದ ಏನೂ ತೆಗೆದುಕೊಳ್ಳದೆ ಅವನನ್ನು ಹಾಗೆಯೇ ಕಳುಹಿಸಿಬಿಟ್ಟರಲ್ಲಾ! ಸರ್ವೇಶ್ವರನಾಣೆ, ನಾನು ಅವನ ಹಿಂದೆ ಓಡುತ್ತಾ ಹೋಗಿ, ಅವನಿಂದ ಸ್ವಲ್ಪವನ್ನಾದರೂ ಬಾಚಿಕೊಂಡು ಬರುವೆನು,” ಎಂದುಕೊಂಡು ಹೊರಟನು.


ನನ್ನ ಸೇವಕರು ಅವುಗಳನ್ನು ಲೆಬನೋನಿನಿಂದ ಸಮುದ್ರಕ್ಕೆ ತೆಗೆದುಕೊಂಡು ಹೋಗುವರು. ನಾನು ಅವುಗಳನ್ನು ತೆಪ್ಪವನ್ನಾಗಿ ಕಟ್ಟಿಸಿ ಸಮುದ್ರಮಾರ್ಗವಾಗಿ ನೀನು ನೇಮಿಸುವ ಸ್ಥಳಕ್ಕೆ ಕಳುಹಿಸಿ ಅಲ್ಲೆ ಬಿಚ್ಚಿಸುವೆನು; ನೀನು ಅವುಗಳನ್ನು ತೆಗೆದುಕೊಂಡು, ಅವುಗಳಿಗೆ ಬದಲಾಗಿ ನನ್ನ ಮನೆಯವರಿಗೆ ಆಹಾರಪದಾರ್ಥಗಳನ್ನು ಕೊಡಬೇಕೆಂಬುದೇ ನನ್ನ ಅಪೇಕ್ಷೆ,” ಎಂದು ಹೇಳಿಕಳುಹಿಸಿದನು.


“ಬಾ ಮನವೇ, ಸಂತೋಷದ ಮೂಲಕ ನಿನ್ನನ್ನು ಪರೀಕ್ಷಿಸುವೆ; ಸುಖಭೋಗವನ್ನು ಅನುಭವಿಸು” ಎಂದು ಮನಸ್ಸಿನಲ್ಲೇ ಹೇಳಿಕೊಂಡೆ. ಆದರೆ ಇದೂ ವ್ಯರ್ಥವೇ ಸರಿ.


“ಮೂಢನಿಗೆ ಸಂಭವಿಸುವ ಗತಿ ನನಗೂ ಸಂಭವಿಸುವುದಾದರೆ ನನ್ನ ಹೆಚ್ಚಿನ ಜ್ಞಾನದಿಂದ ಪ್ರಯೋಜನವೇನು? ಇದೂ ವ್ಯರ್ಥವೇ!” ಎಂದುಕೊಂಡೆ.


ಆಗ ನಾನು ಮನಸ್ಸಿನಲ್ಲೇ, “ದೇವರು ಸಜ್ಜನರಿಗೂ ದುರ್ಜನರಿಗೂ ನ್ಯಾಯತೀರಿಸುವರು. ಅವರ ನ್ಯಾಯಕ್ರಮದಲ್ಲಿ ಎಲ್ಲ ಕೆಲಸಕಾರ್ಯಗಳಿಗೂ ತಕ್ಕ ಸಮಯ ಉಂಟಲ್ಲವೆ?” ಎಂದುಕೊಂಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು