Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:10 - ಕನ್ನಡ ಸತ್ಯವೇದವು C.L. Bible (BSI)

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ ಹೆಚ್ಚು ಬಲಪ್ರಯೋಗ ಮಾಡಬೇಕಾಗುವುದು. ಕಾರ್ಯಸಿಧ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಮೊಂಡು ಕೊಡಲಿಯ ಬಾಯಿಯನ್ನು ಮಸೆಯದಿದ್ದರೆ ಅವನು ಹೆಚ್ಚು ಬಲವನ್ನು ಪ್ರಯೋಗಿಸಬೇಕು. ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೊಂಡುಕೊಡಲಿಯ ಬಾಯಿ ಮೊನೆಮಾಡದಿದ್ದರೆ ಹೆಚ್ಚು ಬಲವನ್ನು ಪ್ರಯೋಗಿಸಬೇಕಲ್ಲವೆ; ಕಾರ್ಯಸಿದ್ಧಿಗೆ ಜ್ಞಾನವೇ ಸಾಧನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಮೊಂಡಕತ್ತಿಯನ್ನು ಹರಿತಗೊಳಿಸಿದರೆ ಕೆಲಸ ಸುಲಭವಾಗುವಂತೆಯೇ ಜ್ಞಾನವು ಯಾವ ಕೆಲಸವನ್ನಾದರೂ ಸುಲಭಗೊಳಿಸಬಲ್ಲದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಮೊಂಡುಕೊಡಲಿಯ ಬಾಯನ್ನು ಮೊನೆಮಾಡದಿದ್ದರೆ, ಹೆಚ್ಚು ಬಲವನ್ನು ಪ್ರಯೋಗಿಸಬೇಕಾಗುವುದು, ಆದರೆ ಜ್ಞಾನವೇ ಯಶಸ್ಸನ್ನು ತರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:10
20 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ನೆರೆಯವರ ವಿಷಯದಲ್ಲಿ ಜಾಣತನದಿಂದ ವರ್ತಿಸಿರಿ. ನಿಮಗಿರುವ ಸಮಯ ಸಂದರ್ಭವನ್ನು ಸದುಪಯೋಗಪಡಿಸಿಕೊಳ್ಳಿರಿ.


ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಆದುದರಿಂದ ಅದನ್ನು ಆಳುವುದಕ್ಕೂ ನ್ಯಾಯಾನ್ಯಾಯಗಳನ್ನು ಕಂಡುಹಿಡಿಯುವುದಕ್ಕೂ ನನಗೆ ವಿವೇಕವನ್ನು ದಯಪಾಲಿಸಿರಿ. ಈ ಮಹಾಜನಾಂಗವನ್ನು ಆಳಲು ಯಾರೂ ಸಮರ್ಥರಲ್ಲ,” ಎಂದು ಬೇಡಿಕೊಂಡನು.


ನೀವು ಶುಭಸಂದೇಶಕ್ಕೆ ವಿಧೇಯರಾಗಿ ನಡೆಯುವವರೆಂಬ ಸಮಾಚಾರ ಎಲ್ಲೆಲ್ಲೂ ಹರಡಿದೆ. ಇದರಿಂದಾಗಿ ನಾನು ನಿಮ್ಮ ವಿಷಯದಲ್ಲಿ ಸಂತೋಷಪಡುತ್ತೇನೆ. ನೀವು ಒಳ್ಳೆಯ ವಿಷಯದಲ್ಲಿ ಜಾಣರೂ ಕೆಟ್ಟ ವಿಷಯದಲ್ಲಿ ಕಳಂಕರಹಿತರೂ ಆಗಿರಬೇಕು.


“ಗಮನಿಸಿರಿ, ತೋಳಗಳ ನಡುವೆ ಕುರಿಗಳನ್ನು ಬಿಟ್ಟಂತೆ ನಾನು ನಿಮ್ಮನ್ನು ಕಳುಹಿಸುತ್ತಿದ್ದೇನೆ. ಆದುದರಿಂದ ಸರ್ಪಗಳಂತೆ ಸೂಕ್ಷ್ಮಬುದ್ಧಿಯುಳ್ಳವರೂ ಪಾರಿವಾಳಗಳಂತೆ ಸರಳಜೀವಿಗಳೂ ಆಗಿರಿ.


ಇಸ್ಸಾಕಾರ ಗೋತ್ರದಿಂದ: 200 ಜನ ನಾಯಕರು ಹಾಗೂ ಅವರೊಂದಿಗಿದ್ದ ಸೈನಿಕರು; (ಇಸ್ರಯೇಲರು ಏನು ಮಾಡಬೇಕು, ಅದನ್ನು ಮಾಡಲು ಯಾವುದು ಉತ್ತಮ ಸಮಯ ಎಂಬುದನ್ನು ಈ ನಾಯಕರು ತಿಳಿದಿದ್ದರು);


ಥಳಥಳಿಸುವ ಕತ್ತಿಯನು ಹದಮಾಡಿ ನ್ಯಾಯಸ್ಥಾಪಿಸುವೆನು ಮುನ್ನುಗ್ಗಿ. ಮುಯ್ಯಿ ತೀರಿಸುವೆನು ನನ್ನ ಶತ್ರುಗಳಿಗೆ ಪ್ರತಿದಂಡಿಸುವೆನು ನನ್ನ ದ್ವೇಷಿಸಿದವಗೆ.


ಆಗ “ಬೆಳಕು ಕತ್ತಲೆಗಿಂತ ಶ್ರೇಷ್ಠವಾಗಿರುವಂತೆ ಜ್ಞಾನ ಮೂಢತನಕ್ಕಿಂತ ಶ್ರೇಷ್ಠ” ಎಂದು ಗೋಚರವಾಯಿತು.


ಬಂಡೆ ಸೀಳುವವನು ಬಂಡೆಯಿಂದಲೇ ಗಾಯಗೊಳ್ಳುವನು; ಮರಕಡಿಯುವವನು ಅದರಿಂದಲೇ ಅಪಾಯಕ್ಕೆ ಗುರಿಯಾಗುವನು.


ಹಾವಾಡಿಗ ಹಾವಾಡಿಸುವುದಕ್ಕೆ ಮುಂಚೆಯೇ ಹಾವಿನಿಂದ ಕಡಿಸಿಕೊಂಡರೆ ಏನು ಪ್ರಯೋಜನ?


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು