Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:14 - ಕನ್ನಡ ಸತ್ಯವೇದವು C.L. Bible (BSI)

14 ಅಜ್ಞಾನಿ ಮಾತಿನ ಮಲ್ಲ. ಭವಿಷ್ಯತ್ತನ್ನು ಮಾನವ ತಿಳಿಯನು; ತಾನು ಕಾಲವಾದ ಮೇಲೆ ಏನಾಗುವುದೆಂದು ಅವನು ಯಾರಿಂದ ತಿಳಿಯಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಮನುಷ್ಯನು ಮುಂದೆ ಆಗುವುದನ್ನು ತಿಳಿಯನು. ತಾನು ಕಾಲವಾದ ಮೇಲೆ ಹೀಗೆಯೇ ಆಗುವುದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಮನುಷ್ಯನು ಮುಂದಿನದನ್ನು ತಿಳಿಯನು; ತಾನು ಕಾಲವಾದ ಮೇಲೆ ಹೀಗೆಯೇ ಆಗುವದೆಂದು ಅವನು ಯಾರಿಂದ ತಿಳಿದುಕೊಂಡಾನು? ಅಜ್ಞಾನಿಯ ಮಾತುಗಳೋ ಬಹಳ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಮೂಢನು ತಾನು ಮಾಡುವಂಥದ್ದರ ಬಗ್ಗೆ ಯಾವಾಗಲೂ ಮಾತಾಡುವನು. ಆದರೆ ಮುಂದೆ ಏನಾಗುವುದೋ ಯಾರಿಗೂ ತಿಳಿಯದು. ಮುಂದೆ ಸಂಭವಿಸುವುದನ್ನು ಯಾರೂ ಹೇಳಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಮೂಢನು ಮಾತುಗಳನ್ನು ಹೆಚ್ಚಿಸುತ್ತಾನೆ. ಆದರೂ ಅವನು ಭವಿಷ್ಯ ಏನೆಂದು ತಿಳಿಯನು. ಅವನ ತರುವಾಯ ಆಗುವುದನ್ನೂ ಅವನಿಗೆ ತಿಳಿಸುವವರು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:14
13 ತಿಳಿವುಗಳ ಹೋಲಿಕೆ  

ಜ್ಞಾನಿಗಳ ನಾಲಿಗೆ ತಿಳುವಳಿಕೆಯನ್ನು ಸಾರ್ಥಕಪಡಿಸುತ್ತದೆ; ಜ್ಞಾನಹೀನರ ಬಾಯಿ ಮೂರ್ಖತನವನ್ನು ಕಕ್ಕುತ್ತದೆ.


ಮುಂದೆ ಆಗುವುದೇನು ಎಂಬುದು ಅವನಿಗೆ ಗೊತ್ತಿಲ್ಲ; ಅದು ಹೇಗೆ ಸಂಭವಿಸುವುದು ಎಂದು ಅವನಿಗೆ ತಿಳಿಸಬಲ್ಲವರು ಯಾರೂ ಇಲ್ಲ.


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಚಿಂತೆ ಹೆಚ್ಚಾದರೆ ಕನಸು ಕಾಣಿಸಿಕೊಳ್ಳುತ್ತದೆ. ಮಾತು ಹೆಚ್ಚಾದರೆ ಹುಚ್ಚುತನ ಹೊರಬರುತ್ತದೆ.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ವಾಚಾಳಿಗೆ ಪಾಪ ತಪ್ಪದು; ಮೌನಿಗೆ ಜ್ಞಾನ ಕೆಡದು.


ಎಂದು ಹೇಳುತ್ತಾ ಯೋಬನು ಬಾಯಿತೆರೆಯುತ್ತಾನೆ ವ್ಯರ್ಥವಾಗಿ ತಿಳುವಳಿಕೆಯಿಲ್ಲದೆ ಮಾತಾಡುತ್ತಾನೆ ಬಹಳವಾಗಿ.”


ಅವನು ಅಪರಾಧಿ ಮಾತ್ರವಲ್ಲ, ದೇವದ್ರೋಹವೆಸಗಿದ್ದಾನೆ ನಮ್ಮ ಮಧ್ಯೆ ಸಂದೇಹವನು ಎಬ್ಬಿಸಿದ್ದಾನೆ ದೇವರಿಗೆ ವಿರುದ್ಧವಾಗಿ ಅಧಿಕ ಪ್ರಸಂಗಮಾಡುತ್ತಾನೆ’.”


ಸುಖದಿನದಲ್ಲಿ ಸಂತೋಷದಿಂದಿರು, ದುಃಖದಿನದಲ್ಲಿ ಆಲೋಚಿಸಿನೋಡು; ಮನುಷ್ಯನು ತನ್ನ ಆಯುಸ್ಸು ಕಳೆದ ಮೇಲೆ ಸಂಭವಿಸುವುದೇನೆಂದು ಗ್ರಹಿಸಲಾಗದಂತೆ ದೇವರು ಇವುಗಳನ್ನು ಒಂದರ ಮೇಲೊಂದನ್ನು ಬರಮಾಡುತ್ತಾರೆ.


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


ಪಟ್ಟಣಕ್ಕೆ ದಾರಿತಿಳಿಯದವನಿಗೆ ಮೂಢರು ತಿಳಿಸಲು ಪಡುವ ಪ್ರಯಾಸ ಕೇವಲ ಆಯಾಸ.


ನಿನ್ನವರು ದೊಡ್ಡ ಬಾಯಿಮಾಡಿ ನನ್ನ ಮೇಲೆ ಆಡಿದ ಅತಿಯಾದ ಹರಟೆಗಳನ್ನು ಕೇಳಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು