Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 10:19 - ಕನ್ನಡ ಸತ್ಯವೇದವು C.L. Bible (BSI)

19 ವಿನೋದಕ್ಕಾಗಿ ಔತಣ, ಆನಂದಕ್ಕಾಗಿ ಮದ್ಯಪಾನ; ಎಲ್ಲವನ್ನು ಒದಗಿಸಿಕೊಡುವುದಕ್ಕಾಗಿ ಹಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು, ಧನವು ಎಲ್ಲವನ್ನೂ ಒದಗಿಸಿಕೊಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಗುವಿಗಾಗಿ ಔತಣವು, ದ್ರಾಕ್ಷಾರಸದಿಂದ ಜೀವನಕ್ಕೆ ಆನಂದವು; ಧನವು ಎಲ್ಲವನ್ನೂ ಒದಗಿಸಿಕೊಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಊಟವು ಸಂತೋಷಗೊಳಿಸುವುದು; ದ್ರಾಕ್ಷಾರಸವು ಉಲ್ಲಾಸಗೊಳಿಸುವುದು; ಹಣವು ಅನೇಕ ಸಮಸ್ಯೆಗಳನ್ನು ಬಗೆಹರಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ವಿನೋದಕ್ಕಾಗಿ ಔತಣ ಮಾಡುತ್ತಾರೆ, ಆನಂದಕ್ಕಾಗಿ ದ್ರಾಕ್ಷಾರಸ ಕುಡಿಯುತ್ತಾರೆ; ಎಲ್ಲವನ್ನೂ ಒದಗಿಸಿಕೊಡುವುದಕ್ಕಾಗಿ ಹಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 10:19
33 ತಿಳಿವುಗಳ ಹೋಲಿಕೆ  

ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಕ್ರೈಸ್ತರಲ್ಲದವರು ಮಾಡಲು ಇಚ್ಛಿಸುವುದನ್ನೆಲ್ಲಾ ನೀವು ಗತಕಾಲದಲ್ಲಿ ಮಾಡಿದ್ದು ಸಾಕು. ಆಗ ನೀವು ಅಶ್ಲೀಲತೆ, ಕಾಮ, ಕುಡುಕುತನ, ಅಮಲೇರುವಿಕೆ, ದುಂದೌತಣ ಮತ್ತು ಯೋಗ್ಯವಲ್ಲದ ವಿಗ್ರಹಾರಾಧನೆ - ಈ ಮುಂತಾದವುಗಳಿಗೆ ಒಳಗಾಗಿದ್ದಿರಿ.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


ಮದ್ಯಪಾನವಿಲ್ಲವೆಂದು ಬೀದಿಗಳಲಿ ಬೊಬ್ಬೆ ಇಡುತಿಹರೆಲ್ಲ, ಅಸ್ತಮಿಸಿಹೋಯಿತು ಜಗದ ಉಲ್ಲಾಸವೆಲ್ಲ, ಸೆರೆಯಾಗಿ ತೊಲಗಿತು ಅದರ ಸಡಗರವೆಲ್ಲ.


ಉದಾರತೆಯಿಂದ ಕೊಡುವನು ಬಡವರಿಗೆ I ಫಲಿಸುವುದು ಅವನಾ ನೀತಿ ಸದಾಕಾಲಕೆ I ಮಹಿಮೆತರುವ ಕೋಡುಮೂಡುವುದು ಅವನಿಗೆ II


ಆಗ ಭಕ್ತರಲ್ಲಿ ಪ್ರತಿಯೊಬ್ಬರು ತಮ್ಮ ಶಕ್ತಿಗನುಸಾರ ಜುದೇಯದಲ್ಲಿ ವಾಸಿಸುತ್ತಿದ್ದ ಭಕ್ತಾದಿಗಳಿಗೆ ನೆರವು ನೀಡಲು ನಿರ್ಧರಿಸಿದರು.


ತಮ್ಮ ತಮ್ಮ ಆಸ್ತಿಪಾಸ್ತಿಯನ್ನು ಮಾರಿ ಬಂದ ಹಣವನ್ನು ಅವರವರ ಅವಶ್ಯಕತೆಗೆ ತಕ್ಕಂತೆ ಎಲ್ಲರಿಗೂ ಹಂಚುತ್ತಿದ್ದರು.


ನಾನು ಹೇಳುವುದನ್ನು ಗಮನಿಸಿರಿ; ಲೌಕಿಕ ಆಸ್ತಿಪಾಸ್ತಿಯಿಂದ ಗೆಳೆಯರನ್ನು ಗಳಿಸಿಕೊಳ್ಳಿರಿ. ಅದು ವ್ಯಯವಾಗಿ ಹೋದಾಗ ನಿಮ್ಮನ್ನು ಅಮರ ನಿವಾಸಕ್ಕೆ ಸ್ವಾಗತಿಸಲಾಗುವುದು.


ಹೆರೋದನ ಅರಮನೆಯ ಮೇಲ್ವಿಚಾರಕನಾಗಿದ್ದ ಕೂಜನ ಪತ್ನಿ ಯೊವಾನ್ನಳು, ಅಲ್ಲದೆ ಸುಸಾನ್ನಳು, ಮತ್ತಿತರ ಅನೇಕರು. ಇವರು ತಮ್ಮ ಆಸ್ತಿಪಾಸ್ತಿಯನ್ನು ವೆಚ್ಚಮಾಡಿ ಯೇಸುವಿಗೂ ಅವರ ಶಿಷ್ಯರಿಗೂ ಉಪಚಾರ ಮಾಡುತ್ತಿದ್ದರು.


ಆಗ ಯೇಸು, “ನೀನು ಸಂಪೂರ್ಣನಾಗಬೇಕು ಎಂದಿದ್ದರೆ ಹೋಗು, ನಿನ್ನ ಆಸ್ತಿಯನ್ನೆಲ್ಲಾ ಮಾರಿ, ಬಡಬಗ್ಗರಿಗೆ ದಾನಮಾಡು; ಸ್ವರ್ಗದಲ್ಲಿ ನಿನಗೆ ಸಂಪತ್ತು ಇರುತ್ತದೆ. ನೀನು ಬಂದು ನನ್ನನ್ನು ಹಿಂಬಾಲಿಸು,” ಎಂದರು.


ಆದರೂ, ನಾವು ಇವರಿಗೆ ಅಡ್ಡಿಯಾಗಬಾರದು. ಎಂದೇ ನೀನು ಸರೋವರಕ್ಕೆ ಹೋಗಿ ಗಾಳಹಾಕು. ಮೊದಲು ಸಿಕ್ಕುವ ಮೀನನ್ನು ಎತ್ತಿಕೊಂಡು ಅದರ ಬಾಯಿ ತೆರೆದು ನೋಡು. ಅದರಲ್ಲಿ ಒಂದು ಬೆಳ್ಳಿ ನಾಣ್ಯ ದೊರಕುವುದು. ಅದನ್ನು ತಂದು ನನ್ನ ಮತ್ತು ನಿನ್ನ ಪರವಾಗಿ ಅವರಿಗೆ ಕೊಡು,” ಎಂದರು.


ಅವಳ ವ್ಯಾಪಾರದಿಂದ ಬಂದ ಆದಾಯ ಅವಳಿಗೆ ನಿಧಿನಿಕ್ಷೇಪವಾಗದೆ ಸರ್ವೇಶ್ವರ ಸ್ವಾಮಿಗೆ ಮೀಸಲಾಗುವುದು. ಅದು ಸರ್ವೇಶ್ವರ ಸ್ವಾಮಿಯ ಸನ್ನಿಧಾನದಲ್ಲಿ ವಾಸಮಾಡುವವರಿಗೆ ಬೇಕಾದಷ್ಟು ಆಹಾರವನ್ನೂ ಅತ್ಯುತ್ತಮವಾದ ಉಡುಪನ್ನೂ ಒದಗಿಸುವುದು.


“ನಾವು ನಮ್ಮಿಂದ ಆಗುವಷ್ಟು ನಮ್ಮ ಸಹೋದರರಾದ ಯೆಹೂದ್ಯರಲ್ಲಿ ಅನ್ಯಜನರಿಗೆ ಮಾರಲಾದವರನ್ನು, ಹಣಕೊಟ್ಟು ಬಿಡಿಸುತ್ತಿದ್ದೆವು. ಈಗ ನೀವು ನಿಮ್ಮ ಸಹೋದರರನ್ನೇ ಮಾರಿಬಿಡುತ್ತಿದ್ದೀರಿ; ಆಮೇಲೆ ಅವರನ್ನು ನಾವು ಕೊಂಡುಕೊಳ್ಳಬೇಕೇನು?” ಎನ್ನಲು ಅವರು ಉತ್ತರಕೊಡದೆ ಸುಮ್ಮನೆ ಇದ್ದರು.


ಅವರ ನೆರೆಯವರೆಲ್ಲರು ಕೊಡುಗೆಗಳನ್ನು ಕೊಟ್ಟರು; ಬೆಳ್ಳಿ ಸಾಮಾನುಗಳು, ಬಂಗಾರದ ಆಭರಣಗಳು, ಪಶುಪ್ರಾಣಿಗಳು, ಶ್ರೇಷ್ಠವಸ್ತುಗಳು, ಇತ್ಯಾದಿಗಳನ್ನು ನೀಡಿ ಸಹಕರಿಸಿದರು.


ಅರಸ ದಾವೀದನು ಒರ್ನಾನನಿಗೆ, “ಹಾಗಲ್ಲ, ನಾನು ನಿನ್ನಿಂದ ಪೂರ್ಣಕ್ರಯಕ್ಕೆ ತೆಗೆದುಕೊಳ್ಳುತ್ತೇನೆ. ನಿನ್ನದನ್ನು ಕ್ರಯವಿಲ್ಲದೆ ತೆಗೆದುಕೊಂಡು ಸರ್ವೇಶ್ವರನಿಗೆ ಬಲಿಯಾಗಿ ಅರ್ಪಿಸಲು ನನಗೆ ಇಷ್ಟವಿಲ್ಲ,” ಎಂದು ಹೇಳಿದನು.


ಇದಕ್ಕೆ ಮೊದಲೇ ಅಬ್ಷಾಲೋಮನು ತನ್ನ ಆಳುಗಳಿಗೆ, “ಕೇಳಿ, ಅಮ್ನೋನನು ದ್ರಾಕ್ಷಾರಸ ಕುಡಿದು ಮತ್ತನಾಗಿರುವಾಗ ನಾನು ಹೊಡೆಯಬೇಕೆಂದು ಹೇಳಿದಕೂಡಲೆ ಅವನನ್ನು ಹೊಡೆದು ಕೊಂದುಹಾಕಿ; ಹೆದರಬೇಡಿ, ನಿಮಗೆ ಆಜ್ಞಾಪಿಸಿದವನು ನಾನಲ್ಲವೆ? ಧೈರ್ಯದಿಂದಿರಿ, ಶೂರರಾಗಿರಿ,” ಎಂದು ಹೇಳಿದ್ದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಳು. ಅವನು ತನ್ನ ಮನೆಯಲ್ಲಿ ರಾಜರಂತೆ ಒಂದು ದೊಡ್ಡ ಔತಣವನ್ನು ಮಾಡಿಸಿ, ಬಹಳವಾಗಿ ಕುಡಿದು, ಬಹು ಸಂಭ್ರಮದಿಂದಿದ್ದ ಕಾರಣ ಈಕೆ ಮರುದಿವಸದವರೆಗೆ ಇದರ ವಿಷಯವಾಗಿ ಏನೂ ಹೇಳಲಿಲ್ಲ.


ಅದಕ್ಕೆ ಆ ಬಳ್ಳಿ, ‘ನಾನು ನನ್ನ ರಸದಿಂದ ದೇವತೆಗಳಿಗೂ ಮಾನವರಿಗೂ ಆನಂದ ತರುವುದನ್ನು ಬಿಟ್ಟು ಮರಗಳ ಮೇಲೆ ಓಲಾಡುವುದಕ್ಕೆ ಬರಬೇಕೊ?’ ಎಂದಿತು.


ಜೋಸೆಫನು ತನ್ನ ಮುಂದೆ ಬಡಿಸಿದ್ದ ಪದಾರ್ಥಗಳಲ್ಲಿ ಅವರಿಗೆ ಭಾಗಗಳನ್ನು ಕಳಿಸಿದನು. ಬೆನ್ಯಾಮೀನನಿಗೆ ಬಂದ ಭಾಗವಾದರೋ ಮಿಕ್ಕವರ ಭಾಗಗಳಿಗಿಂತ ಐದರಷ್ಟು ಹೆಚ್ಚಾಗಿತ್ತು. ಅವರು ಯಥೇಚ್ಛವಾಗಿ ಪಾನಮಾಡಿ ಜೋಸೆಫನ ಸಂಗಡ ಸಂಭ್ರಮದಿಂದಿದ್ದರು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಸಂಸೋನನ ತಂದೆ ಹೆಣ್ಣಿನ ಮನೆಗೆ ಬಂದ ಮೇಲೆ ಸಂಸೋನನು ಯೌವನಸ್ಥರ ಪದ್ಧತಿಯ ಪ್ರಕಾರ ಅಲ್ಲಿ ಔತಣವನ್ನು ಸಿದ್ಧಮಾಡಿಸಿದನು.


ಏಳನೆಯ ದಿನ ಅರಸ ಅಹಷ್ವೇರೋಷನು ಮಧುಪಾನ ಮಾಡಿ ಆನಂದ ಲಹರಿಯಲ್ಲಿದ್ದಾಗ ಬಹುಸುಂದರಿಯಾದ ತನ್ನ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು