Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:1 - ಕನ್ನಡ ಸತ್ಯವೇದವು C.L. Bible (BSI)

1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಹಾಕು. ಬಹುದಿನದ ಮೇಲೆ ಅದು ಬಡ್ಡಿ ಸಮೇತ ನಿನಗೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹಳ ದಿನಗಳ ನಂತರ ಅದು ನಿನಗೆ ಸಿಕ್ಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನಿನ್ನ ಆಹಾರವನ್ನು ನೀರಿನ ಮೇಲೆ ಚೆಲ್ಲು, ಬಹು ದಿನದ ಮೇಲೆ ಅದು ನಿನಗೆ ಸಿಕ್ಕುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನೀನು ಹೋದಲ್ಲೆಲ್ಲಾ ಒಳ್ಳೆಯದನ್ನೇ ಮಾಡು. ಸ್ವಲ್ಪಕಾಲದ ಮೇಲೆ, ನಿನ್ನ ಸತ್ಕ್ರಿಯೆಗಳ ಫಲವನ್ನು ಹೊಂದಿಕೊಳ್ಳುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನಿನ್ನ ಆಹಾರ ಧಾನ್ಯವನ್ನು ಹೊರನಾಡಿನ ವ್ಯಾಪಾರಕ್ಕೆ ಕಳುಹಿಸು. ಬಹಳ ದಿನಗಳ ಮೇಲೆ ಅದರಿಂದ ನಿನಗೆ ಲಾಭ ಸಿಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:1
21 ತಿಳಿವುಗಳ ಹೋಲಿಕೆ  

ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.


ಬಡವರಿಗೆ ತೋರುವ ದಯೆ ಸರ್ವೇಶ್ವರನಿಗೆ ಕೊಟ್ಟ ಸಾಲ; ಆ ಉಪಕಾರಕ್ಕೆ ಸರ್ವೇಶ್ವರನಿಂದಲೆ ಪ್ರತ್ಯುಪಕಾರ.


ನೀವು ದೇವಜನರಿಗೆ ಉಪಚಾರಮಾಡಿದ್ದೀರಿ, ಮಾಡುತ್ತಲೂ ಇದ್ದೀರಿ. ದೇವರ ಹೆಸರಿನಲ್ಲಿ ನೀವು ಮಾಡಿದ ಪ್ರೀತಿಪೂರ್ವಕವಾದ ಸೇವೆಯನ್ನು ದೇವರು ಮರೆಯುವಂತಿಲ್ಲ, ಅವರು ಅನ್ಯಾಯ ಮಾಡುವವರೇನೂ ಅಲ್ಲ.


ಯಾರಾದರೂ ಈ ಚಿಕ್ಕವರಲ್ಲಿ ಒಬ್ಬನಿಗೆ ಅವನು ನನ್ನ ಶಿಷ್ಯನೆಂದು ಕುಡಿಯಲು ಒಂದು ಲೋಟ ತಣ್ಣೀರನ್ನು ಕೊಟ್ಟರೂ ಅದಕ್ಕೆ ತಕ್ಕ ಪ್ರತಿಫಲವನ್ನು ಪಡೆಯದೆಹೋಗನೆಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ.”


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ


ನೀರಿರುವ ಕಡೆಗಳಲ್ಲೆಲ್ಲಾ ಬಿತ್ತನೆಮಾಡುವಿರಿ. ದನಕತ್ತೆಗಳನ್ನು ಇಷ್ಟಬಂದ ಹಾಗೆ ಮೇಯಲು ಬಿಡುವಿರಿ.


ಆಗ ನೀನು ಧನ್ಯನಾಗುವೆ. ಏಕೆಂದರೆ, ಅವರು ನಿನಗೆ ಪ್ರತಿಯಾಗಿ ಏನು ಮಾಡಲೂ ಇಲ್ಲದವರು. ಸತ್ಪುರುಷರು ಪುನರುತ್ಥಾನ ಹೊಂದುವಾಗ ದೇವರೇ ನಿನಗೆ ಸಲ್ಲಬೇಕಾದುದನ್ನು ಸಲ್ಲಿಸುವರು,” ಎಂದರು.


ಆದರೆ ಧರ್ಮವಂತನು ಮಹತ್ಕಾರ್ಯಗಳಲ್ಲಿಯೇ ನಿರತನಾಗಿರುತ್ತಾನೆ.


ಆಗ ಅರಸನು ಪ್ರತ್ಯುತ್ತರವಾಗಿ, ‘ಈ ನನ್ನ ಸೋದರರಲ್ಲಿ ಒಬ್ಬನಿಗೆ, ಅವನೆಷ್ಟೇ ಕನಿಷ್ಟನಾಗಿರಲಿ, ನೀವು ಹೀಗೆ ಮಾಡಿದಾಗಲೆಲ್ಲಾ ಅದನ್ನು ನನಗೇ ಮಾಡಿದಿರಿ, ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,’ ಎನ್ನುವನು.


ಉದಾರ ದೃಷ್ಟಿಯುಳ್ಳವನು ಆಶೀರ್ವದಿತನು; ಆಹಾರವನ್ನು ಬಡವರೊಂದಿಗೆ ಆತ ಹಂಚಿಕೊಳ್ಳುವನು.


ದುರುಳನು ಪಡೆವ ಸಂಬಳ ಜೊಳ್ಳು ಸಂಬಳ; ನೀತಿಯನ್ನು ಬಿತ್ತುವವನು ಪಡೆವನು ಸತ್ಫಲ.


ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.


ಅವರೆ, ಅಲಸಂದೆ, ಬೇಳೆ, ಜೇನುತುಪ್ಪ, ಬೆಣ್ಣೆ, ಕುರಿಗಿಣ್ಣು, ಹಸುವಿನ ಗಿಣ್ಣು, ಇವುಗಳನ್ನೂ ತಂದುಕೊಟ್ಟರು. ‘ಜನರು ಮರಳುಗಾಡಿನ ಪ್ರಯಾಣದಿಂದ ಹಸಿದಿದ್ದಾರೆ, ದಣಿದಿದ್ದಾರೆ ಹಾಗು ಬಾಯಾರಿದ್ದಾರೆ’ ಎಂಬ ಭಾವನೆಯಿಂದ ಇವುಗಳನ್ನು ತಂದುಕೊಟ್ಟರು.


ಐದನೆಯ ವರ್ಷದಲ್ಲಿ ಅಂದು ಮೊದಲ್ಗೊಂಡು ಅದರ ಫಲಗಳನ್ನು ನೀವು ತಿನ್ನಬಹುದು. ನಿಮಗೆ ಹೆಚ್ಚು ಫಲ ದೊರಕುವುದು. ನಿಮ್ಮ ದೇವರಾದ ಸರ್ವೇಶ್ವರ ನಾನೇ.


ಗಳಿಸುವ ಸಮಯ, ಕಳೆದುಕೊಳ್ಳುವ ಸಮಯ ಕಾಪಾಡುವ ಸಮಯ, ಬಿಸಾಡುವ ಸಮಯ.


ಎರಡು ಪಡೆದವನೂ ಹಾಗೆಯೇ ಮಾಡಿ ಇನ್ನೂ ಎರಡನ್ನು ಸಂಪಾದಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು