Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 11:6 - ಕನ್ನಡ ಸತ್ಯವೇದವು C.L. Bible (BSI)

6 ಮುಂಜಾನೆಯಲ್ಲೇ ಬೀಜಬಿತ್ತು; ಸಂಜೆಯಲ್ಲೂ ನಿನ್ನ ಕೈಗೆ ಬಿಡುವುಕೊಡಬೇಡ; ಇದು ಸಫಲವೋ ಅದು ಸಫಲವೋ ನಿನ್ನಿಂದ ಹೇಳಲಾಗದು. ಒಂದು ವೇಳೆ ಎರಡೂ ಒಳ್ಳೆಯ ಬೆಳೆಯನ್ನು ಕೊಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮುಂಜಾನೆ ಬೀಜ ಬಿತ್ತು; ಸಂಜೆಯ ತನಕ ಕೈಯನ್ನು ಹಿಂದಕ್ಕೆ ತೆಗೆಯಬೇಡ, ಇದು ಸಫಲವಾಗುವುದೋ ಅಥವಾ ಅದು ಸಫಲವಾಗುವುದೋ, ಇಲ್ಲವೇ ಒಂದು ವೇಳೆ ಎರಡೂ ಒಳ್ಳೆಯದಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮುಂಜಾನೆ ಬೀಜ ಬಿತ್ತು, ಸಂಜೆಯತನಕ ಕೈದೆಗೆಯಬೇಡ; ಇದು ಸಫಲವೋ, ಅದು ಸಫಲವೋ, ಒಂದು ವೇಳೆ ಎರಡೂ ಚೆನ್ನಾಗುವವೋ ನಿನಗೆ ತಿಳಿಯದು. ಬೆಳಕು ಇಂಪು; ಸೂರ್ಯನನ್ನು ಕಾಣುವದು ಕಣ್ಣಿಗೆ ಹಿತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ಮುಂಜಾನೆಯಲ್ಲಿ ಬೀಜಬಿತ್ತಲು ಆರಂಭಿಸು; ಸಾಯಂಕಾಲದ ತನಕ ಕೆಲಸಮಾಡುವುದನ್ನು ನಿಲ್ಲಿಸಬೇಡ, ಯಾಕೆಂದರೆ ಇದು ಸಫಲವಾಗುವುದೋ ಅದು ಸಫಲವಾಗುವುದೋ ಒಂದುವೇಳೆ ಎರಡೂ ಸಫಲವಾಗುವುದೋ ನಿನಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು. ಸಾಯಂಕಾಲದವರೆಗೂ ನಿನ್ನ ಕೈಗೆ ಬಿಡುವು ಕೊಡಬೇಡ. ಏಕೆಂದರೆ ಇದು ಸಫಲವೋ ಅದು ಸಫಲವೋ ನಿನಗೆ ತಿಳಿಯದು. ಎರಡೂ ಒಳ್ಳೆಯ ಬೆಳೆಯನ್ನು ಕೊಡಲು ಸಾಧ್ಯವಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 11:6
15 ತಿಳಿವುಗಳ ಹೋಲಿಕೆ  

ಮಳೆಯೂ ಹಿಮವೂ ಆಕಾಶಮಂಡಲದಿಂದಿಳಿದು ಬಂದು ತೋಯಿಸಿ, ಹಸಿರುಗೊಳಿಸಿ, ಹುಲುಸು ಮಾಡುತ್ತವೆ ಭೂಮಿಯನು. ಬಿತ್ತುವವನಿಗೆ ಬೀಜ, ಉಣ್ಣುವವನಿಗೆ ಆಹಾರ ಒದಗಿಸದೆ, ಹಿಂದಿರುಗಿ ಬರುವುದಿಲ್ಲ ಅವು ಸುಮ್ಮನೆ ಬಂದಲ್ಲಿಗೆ.


ನಾನು ಇಂತೆಂದೆ: “ಪಾಳುಬಿದ್ದ ನೆಲವನ್ನು ಉತ್ತು ಹದಮಾಡಿರಿ; ನೀತಿಯ ಬೀಜವನ್ನು ಬಿತ್ತಿರಿ; ಪ್ರೀತಿಯ ಫಲವನ್ನು ಕೊಯ್ಯಿರಿ. ಸಮಯವು ಸನ್ನಿಹಿತವಾಗಿದೆ. ಸರ್ವೇಶ್ವರ ಆಗಮಿಸಿ ನಿಮ್ಮ ಮೇಲೆ ನೀತಿಯನ್ನು ಮಳೆಗರೆಯುವಂತೆ ಅವರಿಗೆ ಶರಣುಹೋಗಬೇಕು.


ವಿರಳವಾಗಿ ಬಿತ್ತುವವನು ವಿರಳವಾಗಿ ಕೊಯ್ಯುತ್ತಾನೆ ಹೇರಳವಾಗಿ ಬಿತ್ತುವವನು ಹೇರಳವಾಗಿ ಕೊಯ್ಯುತ್ತಾನೆ. ಇದು ನಿಮಗೆ ತಿಳಿದಿರಲಿ


ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ನಾನು ಇವೆಲ್ಲವನ್ನು ಪರ್ಯಾಲೋಚಿಸಿ ಇದನ್ನು ಮನಗಂಡೆ: ಸತ್ಪುರುಷರ ಹಾಗೂ ಸುಜ್ಞಾನಿಗಳ ಕಾರ್ಯಗಳೆಲ್ಲವೂ ದೇವರ ಕೈಯಲ್ಲಿವೆ. ತಾವು ಪ್ರೀತಿಗೆ ಪಾತ್ರರೋ ದ್ವೇಷಕ್ಕೆ ಅರ್ಹರೋ ಮಾನವರಿಗೆ ತಿಳಿಯದು. ಮುಂದೆ ಏನು ಕಾದಿದೆ ಎಂಬುದು ಯಾರಿಗೂ ಗೊತ್ತಿಲ್ಲ.


ಬೆಳಕು ಬಹಳ ಇಂಪು; ಸೂರ್ಯನ ಕಾಂತಿ ಕಣ್ಣುಗಳಿಗೆ ಸೊಂಪು. ಮಾನವನು ಎಷ್ಟೇ ಧೀರ್ಘಕಾಲ ಬದುಕಿರಲಿ ತನ್ನ ಬಾಳಿನ ದಿನಗಳಲ್ಲೆಲ್ಲಾ ಆನಂದಿಸಲಿ; ಆದರೆ ಅಂಧಕಾರದ ದಿನಗಳು ಸಹ ಬಹಳ ಇವೆ ಎಂಬುದನ್ನು ನೆನಪಿಗೆ ತಂದುಕೊಳ್ಳಲಿ. ಆ ಬಳಿಕ ಬರುವುದೆಲ್ಲಾ ನಿರರ್ಥಕ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು