Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:1 - ಕನ್ನಡ ಸತ್ಯವೇದವು C.L. Bible (BSI)

1 ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ” ಎಂದು, ನೀನು ಹೇಳುವ ವರ್ಷಗಳು ಸಮೀಪಿಸುವುದರೊಳಗಾಗಿ, ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಕಷ್ಟದ ದಿನಗಳೂ ಸಂತೋಷವಿಲ್ಲವೆಂದು ನೀನು ಹೇಳುವ ವರುಷಗಳೂ ಸಮೀಪಿಸುವದರೊಳಗಾಗಿ ಯೌವನದಲ್ಲಿಯೇ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸು .

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಕಷ್ಟಕಾಲಗಳು ಬರುವುದಕ್ಕಿಂತ ಮೊದಲೇ, ವರ್ಷಗಳು ಮುಗಿದು, “ನನಗೆ ಅವುಗಳಲ್ಲಿ ಸುಖವಿಲ್ಲ” ಎಂದು ಹೇಳುವ ಕಾಲಬರುವುದಕ್ಕಿಂತ ಮೊದಲೇ ಯೌವನಪ್ರಾಯದಲ್ಲಿ ನಿನ್ನ ಸೃಷ್ಟಿಕರ್ತನನ್ನು ಜ್ಞಾಪಿಸಿಕೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕಷ್ಟದ ದಿನಗಳು ಬರುವುದಕ್ಕೆ ಮೊದಲು, “ಇವುಗಳಲ್ಲಿ ನನಗೆ ಸಂತೋಷವಿಲ್ಲ,” ಎಂದು ನೀನು ಹೇಳುವ ವರ್ಷಗಳು ಸಮೀಪಿಸುವುದಕ್ಕೆ ಮೊದಲು, ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ದೇವರನ್ನು ಸ್ಮರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:1
40 ತಿಳಿವುಗಳ ಹೋಲಿಕೆ  

ಯೌವನದಿಂದಲೆ ನೊಗ ಹೊತ್ತರೆ ಮಾನವನಿಗೆ ಅದು ಹಿತಕರ.


ಯುವಕನೇ, ಯೌವನದಲ್ಲಿ ಆನಂದಿಸು. ಯೌವನ ದಿನಗಳಲ್ಲಿ ಹೃತ್ಪೂರ್ವಕವಾಗಿ ಸಂತೋಷಿಸು. ಮನಸ್ಸಿಗೆ ತಕ್ಕಂತೆಯೂ ಕಣ್ಣಿಗೆ ಸರಿಬೀಳುವ ಹಾಗೆಯೂ ನಡೆದುಕೊ. ಆದರೆ ಈ ಎಲ್ಲ ವಿಷಯಗಳಲ್ಲಿ ದೇವರು ನಿನ್ನನ್ನು ನ್ಯಾಯವಿಚಾರಣೆಗೆ ಗುರಿಮಾಡುವರೆಂಬುದನ್ನು ಮನದಲ್ಲಿಡು.


ಬಾಲ್ಯದಲ್ಲೇ ಮಕ್ಕಳನ್ನು ಸರಿದಾರಿಯಲ್ಲಿ ಪಳಗಿಸು; ಮುಪ್ಪಿನಲ್ಲೂ ಅವರು ಆ ಪದ್ಧತಿ ಮೀರಿ ನಡೆಯದಿರಲಿ.


ಆಗ ಯೇಸು ಆ ಹಸುಳೆಗಳನ್ನು ತಮ್ಮ ಬಳಿಗೆ ಕರೆತರಿಸಿ, “ಚಿಕ್ಕಮಕ್ಕಳನ್ನು ನನ್ನ ಬಳಿಗೆ ಬರಲು ಬಿಡಿ; ಅವುಗಳನ್ನು ತಡೆಯಬೇಡಿ; ದೇವರ ಸಾಮ್ರಾಜ್ಯ ಇಂಥವರದೇ!


ಬನ್ನಿ ಮಿತ್ರರೇ, ಆಲಿಸಿರೀ ಮಾತನು I ಕಲಿಸುವೆನು ನಾ ನಿಮಗೆ ದೇವ ಭಯವನು II


ನಿನ್ನ ಬೋಧಕರು ಯಾರೆಂಬುದು ನಿನಗೆ ಗೊತ್ತಿದೆ. ಚಿಕ್ಕಂದಿನಿಂದಲೇ ನೀನು ಪವಿತ್ರಗ್ರಂಥವನ್ನು ಪರಿಚಯಮಾಡಿಕೊಂಡಿರುವೆ. ಯೇಸುಕ್ರಿಸ್ತರನ್ನು ವಿಶ್ವಾಸಿಸುವುದರ ಮೂಲಕ ಜೀವೋದ್ಧಾರವನ್ನು ಪಡೆಯಬಹುದೆಂಬ ಜ್ಞಾನವು ಲಭಿಸುವುದು ಆ ಪವಿತ್ರಗ್ರಂಥದಿಂದಲೇ.


ನಮ್ಮ ಆಯುಷ್ಕಾಲ ಎಪ್ಪತ್ತು ವರುಷ I ಹೆಚ್ಚಾಗಿದ್ದರೆ ಬಲ, ಎಂಬತ್ತು ವರುಷ II


ನಿನ್ನ ಹೃದಯದಿಂದ ವ್ಯಥೆಯನ್ನೂ ನಿನ್ನ ದೇಹದಿಂದ ಯಾತನೆಯನ್ನೂ ದೂರಮಾಡು. ಯೌವನವೂ ಪ್ರಾಯವೂ ಬೇಗ ಮಾಯವಾಗುವುವು.


ನನ್ನನ್ನು ಪ್ರೀತಿಸುವವರನ್ನು ನಾನು ಪ್ರೀತಿಸುತ್ತೇನೆ ಹಂಬಲಿಸಿ ಹುಡುಕುವವರು ನನ್ನನ್ನು ಕಂಡುಕೊಳ್ಳುತ್ತಾರೆ.


ಈಗ ನಾನು ಎಂಬತ್ತು ವರ್ಷದವನು. ಒಳ್ಳೆಯದು ಕೆಟ್ಟದು ಇವುಗಳ ಭೇದ ನನಗಿನ್ನು ತಿಳಿಯುವುದೇ? ನಿಮ್ಮ ಸೇವಕನಾದ ನನಗೆ ಇನ್ನು ಅನ್ನಪಾನಗಳ ರುಚಿ ಗೊತ್ತಾಗುವುದೇ? ಗಾಯನ ಮಾಡುವ ಸ್ತ್ರೀಪುರುಷರ ಸ್ವರಗಳು ನನಗೆ ಕೇಳಿಸುತ್ತವೆಯೇ? ನಾನು ನನ್ನ ಒಡೆಯರಾದ ಅರಸರಿಗೆ ಸುಮ್ಮನೆ ಏಕೆ ಹೊರೆಯಾಗಿರಬೇಕು?


ಬಾಲಕ ಸಮುವೇಲ ಈ ಮಧ್ಯೆ ಬೆಳೆಯುತ್ತಾ ಸರ್ವೇಶ್ವರನ ಹಾಗು ಮಾನವರ ಪ್ರೀತಿಗೆ ಪಾತ್ರನಾಗುತ್ತಿದ್ದನು.


ಸರ್ವೇಶ್ವರ ಸ್ವಾಮಿ ಜೋಸೆಫನ ಸಂಗಡ ಇದ್ದ ಕಾರಣ, ಅವನು ಏಳಿಗೆಯಾಗಿ ತನ್ನ ಈಜಿಪ್ಟಿನ ದಣಿಯ ಮನೆಯಲ್ಲಿ ಒಬ್ಬ ಸೇವಕನಾದ.


ಸರ್ವೇಶ್ವರನ ದೃಷ್ಟಿಯಲ್ಲಿ ಅವನು ಮಹಾತ್ಮನಾಗುವನು. ದ್ರಾಕ್ಷಾರಸವನ್ನಾಗಲಿ, ಮದ್ಯವನ್ನಾಗಲಿ ಅವನು ಸೇವಿಸನು; ತಾಯಿಯ ಉದರದಿಂದಲೇ ಪವಿತ್ರಾತ್ಮಭರಿತನಾಗುವನು.


ಆದರೆ ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನೀನು ಅವನ ಚೆಲುವಿಕೆಯನ್ನಾಗಲಿ ಎತ್ತರವನ್ನಾಗಲಿ ನೋಡಬೇಡ; ನಾನು ಅವನನ್ನು ತಳ್ಳಿಬಿಟ್ಟಿದ್ದೇನೆ. ಸರ್ವೇಶ್ವರ ಮನುಷ್ಯರಂತೆ ಬಹಿರಂಗದ ತೋರಿಕೆಯನ್ನು ನೋಡುವುದಿಲ್ಲ; ಅಂತರಂಗವನ್ನೇ ವೀಕ್ಷಿಸುತ್ತಾನೆ,” ಎಂದರು.


ಸರ್ವೇಶ್ವರ ಜೋಸೆಫನೊಂದಿಗೆ ಇದ್ದರು. ಅವನು ಕೈಗೊಂಡ ಕೆಲಸವೆಲ್ಲ ಜಯವಾಗುವಂತೆ ಮಾಡುತ್ತಿದ್ದರು. ಈ ಕಾರಣ ಸೆರೆಮನೆಯ ಯಜಮಾನ ಅಲ್ಲಿಯ ಎಲ್ಲ ವಿಷಯದಲ್ಲೂ ನಿಶ್ಚಿಂತನಾಗಿದ್ದನು.


ತಂದೆತಾಯಿಗಳೇ, ನಿಮ್ಮ ಮಕ್ಕಳನ್ನು ಕೆಣಕಿ ಕೆರಳಿಸಬೇಡಿ. ಪ್ರತಿಯಾಗಿ ಪ್ರಭುವಿಗೆ ಮೆಚ್ಚುಗೆಯಾಗುವ ರೀತಿಯಲ್ಲಿ ಅವರಿಗೆ ಶಿಕ್ಷಣವನ್ನು ಕೊಟ್ಟು ಶಿಸ್ತಿನಿಂದ ಸಾಕಿಸಲಹಿರಿ.


ಹೀಗಿರಲು ದೇವರು ಆ ನಾಲ್ಕುಮಂದಿ ಯುವಕರಿಗೆ ಸಕಲ ಶಾಸ್ತ್ರಗಳಲ್ಲೂ ವಿದ್ಯೆಗಳಲ್ಲೂ ಜ್ಞಾನ ವಿವೇಕಗಳನ್ನು ದಯಪಾಲಿಸಿದರು. ದಾನಿಯೇಲನು ಸಮಸ್ತ ಸ್ವಪ್ನಗಳನ್ನೂ ದಿವ್ಯದರ್ಶನಗಳನ್ನೂ ಅರ್ಥೈಸುವುದರಲ್ಲಿ ಪ್ರವೀಣನಾದನು.


ನಡೆವೆವು ನಾವು, ಸರ್ವೇಶ್ವರಾ, ನಿನ್ನ ನೀತಿಮಾರ್ಗದೊಳು ಕಾದಿರುವೆವು ನಿನಗಾಗಿ ಭರವಸೆಯಿಟ್ಟು ನಿನ್ನೊಳು ನಿನ್ನ ನಾಮಸ್ಮರಣೆಯ ಬಯಕೆ ನಮ್ಮ ಅಂತರಾತ್ಮದೊಳು.


ಬಾಲಕನಾದ ಸಮುವೇಲನು ‘ಏಫೋದ’ ಎಂಬ ಪ್ರತ್ಯೇಕ ಮಡಿಯಂಗಿಯನ್ನು ತೊಟ್ಟುಕೊಂಡು ಸರ್ವೇಶ್ವರನ ಸಾನ್ನಿಧ್ಯಸೇವೆಯನ್ನು ಮಾಡುತ್ತಿದ್ದನು.


ನಾನು ತಮ್ಮನ್ನು ಬಿಟ್ಟು ಹೊರಟ ಕೂಡಲೆ, ಸರ್ವೇಶ್ವರನ ಆತ್ಮ ತಮ್ಮನ್ನು ನನಗೆ ಗೊತ್ತಿಲ್ಲದ ಬೇರೊಂದು ಸ್ಥಳಕ್ಕೆ ಒಯ್ಯುವುದು. ನಾನು ಹೋಗಿ ಅಹಾಬನಿಗೆ ಹೇಳುವಷ್ಟರಲ್ಲಿ ತಾವು ಅವನಿಗೆ ಸಿಕ್ಕದೆಹೋದರೆ ಅವನು ನನ್ನನ್ನು ಕೊಂದುಹಾಕುವನು. ನಾನು ಚಿಕ್ಕಂದಿನಿಂದ ಸರ್ವೇಶ್ವರನಲ್ಲಿ ಭಯಭಕ್ತಿಯುಳ್ಳವನಲ್ಲವೇ?


ಇವನನ್ನು ಸರ್ವೇಶ್ವರನಿಗೆ ಸಮರ್ಪಿಸಿಬಿಟ್ಟಿದ್ದೇನೆ. ಬದುಕಿರುವ ತನಕ ಇವನು ಅವರಿಗೇ ಪ್ರತಿಷ್ಠಿತನು,” ಎಂದು ಹೇಳಿದಳು. ಬಳಿಕ ಅವರು ಸರ್ವೇಶ್ವರಸ್ವಾಮಿಯನ್ನು ಆರಾಧಿಸಿದರು.


ಅನ್ಯಜನರು ಅದರ ಶಕ್ತಿಯನ್ನು ಹೀರಿಕೊಂಡರೂ ಅದಕ್ಕೆ ಅರಿವಿಲ್ಲ. ಅದರ ತಲೆಗೂದಲು ನೆರೆತುಹೋದರೂ ಅದಕ್ಕೆ ಪ್ರಜ್ಞೆ ಇಲ್ಲ.


ಅವರ ಭುಜಬಲದಿಂದ ನನಗೇನಾಗುತ್ತಿತ್ತು? ಆಗ ಅವರ ಪುಷ್ಟಿಯು ಕುಗ್ಗಿಹೋಗಿತ್ತು!


ಇಸ್ರಯೇಲರೆಲ್ಲರೂ ಅವನಿಗಾಗಿ ಗೋಳಾಡಿ ಅವನ ಶವವನ್ನು ಸಮಾಧಿಮಾಡುವರು. ಯಾರೊಬ್ಬಾಮನ ಮನೆಯವರೊಳಗೆ ಇಸ್ರಯೇಲ್ ದೇವರಾದ ಸರ್ವೇಶ್ವರನ ದೃಷ್ಟಿಯಲ್ಲಿ ಒಳ್ಳೆಯವನಾಗಿರುವುದರಿಂದ ಇವನೊಬ್ಬನೇ ಸಮಾಧಿಹೊಂದುವನು.


ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಅವರನ್ನು ಸಂದರ್ಶಿಸಿ, ಅವರ ಮುಂದೆ ನಿಂತು, ಶ್ರೀಮಂತರನ್ನೂ ಅಧಿಕಾರಿಗಳನ್ನೂ ಉಳಿದ ಜನರನ್ನೂ ಸಂಬೋಧಿಸಿ, “ನಿಮ್ಮ ಹಗೆಗಳಿಗೆ ಹೆದರಬೇಡಿ; ಮಹೋನ್ನತರೂ ಭಯಭಕ್ತಿಗೆ ಪಾತ್ರರೂ ಆದ ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿಕೊಂಡು, ನಿಮ್ಮ ಸಹೋದರರಿಗಾಗಿ, ಮಡದಿಮಕ್ಕಳಿಗಾಗಿ ಹಾಗು ನಿಮ್ಮ ಮನೆಮಠಗಳಿಗಾಗಿ ಕಾದಾಡಿರಿ,” ಎಂದು ಹುರಿದುಂಬಿಸಿದೆ.


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ರಾತ್ರಿಯೊಳೂ ಮಾಡಿದೆ ನಿನ್ನ ನಾಮಸ್ಮರಣೆಯನು I ಕೈಗೊಂಡೆನು ಹೇ ಪ್ರಭೂ, ನಿನ್ನ ಧರ್ಮಶಾಸ್ತ್ರವನು II


ನಿನ್ನ ಹಣವನ್ನು ವಿಭಾಗಿಸಿ ಏಳೆಂಟು ಸ್ಥಳಗಳಲ್ಲಿ ಇಡು. ಏಕೆಂದರೆ ಎಲ್ಲಿ, ಎಂಥ ಕೇಡು ಸಂಭವಿಸಬಹುದೆಂದು ನಿನಗೆ ತಿಳಿಯದು.


ನದಿ ದಾಟಿ ಸ್ವಲ್ಪ ದೂರಕ್ಕೆ ನಿಮ್ಮ ಸಂಗಡ ಬರುತ್ತೇನೆ. ಅರಸರಾದ ನೀವು ನನಗೇಕೆ ಇಂಥ ಉಪಕಾರ ಮಾಡಬೇಕು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು