Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 12:5 - ಕನ್ನಡ ಸತ್ಯವೇದವು C.L. Bible (BSI)

5 ದಾರಿಯಲ್ಲಿ ನಡೆವುದು ಅಪಾಯಕರವಾಗಿರುವುದು; ಹೂಬಿಟ್ಟ ಬಾದಾಮಿ ಮರದಂತೆ ತಲೆಗೂದಲು ನರೆತುಬಿಡುವುದು, ಮಿಡತೆಯು ಕೂಡ ಭಾರವಾಗುವುದು; ಆಸೆ ಕುಂದಿಹೋಗುವುದು. ನಿನ್ನ ನಿತ್ಯಗೃಹಕ್ಕೆ ತೆರಳಿರುವೆ, ಗೋಳಾಟದವರು ಬೀದಿಯಲ್ಲಿ ಕಾಣಿಸಿಕೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇದಲ್ಲದೆ ಆ ದಿನಗಳಲ್ಲಿ ಮನುಷ್ಯನಿಗೆ ದಿನ್ನೆಯನ್ನು ಕಂಡರೆ ಭಯ, ಮತ್ತು ದಾರಿಯಲ್ಲಿ ಅಪಾಯ, ಬಾದಾಮಿಯ ಮರವು ಹೂ ಬಿಡುವುದು, ಮಿಡತೆಯು ಕೂಡಾ ಭಾರವಾಗಿರುವುದು, ಆಶೆಯು ಕುಂದುವುದು. ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವನು, ಗೋಳಾಟದವರು ಬೀದಿಯಲ್ಲಿ ತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇದಲ್ಲದೆ ಆ ದಿನಗಳಲ್ಲಿ ದಿನ್ನೆ ಕಂಡರೆ ಭಯ, ದಾರಿಯಲ್ಲಿ ಅಪಾಯ; ಬಾದಾವಿುಯ ಮರವು ಹೂಬಿಡುವದು; ವಿುಡತೆಯು ಕೂಡ ಭಾರವಾಗುವದು; ಆಶೆಯು ಕುಂದುವದು, ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಡುವದಕ್ಕಿದ್ದಾನಲ್ಲಾ; ಗೋಳಾಟದವರು ಬೀದಿಯಲ್ಲಿ ತಿರುಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನೀನು ಎತ್ತರವಾದ ಸ್ಥಳಗಳ ಬಗ್ಗೆ ಭಯದಿಂದಿರುವೆ; ನಿನ್ನ ಹಾದಿಯಲ್ಲಿರುವ ಪ್ರತಿಯೊಂದು ಚಿಕ್ಕ ವಸ್ತುವಿಗೂ ಹೆದರಿಕೊಂಡು ನಡೆದಾಡುವೆ. ನಿನ್ನ ಕೂದಲು ಬಾದಾಮಿ ಮರದ ಹೂವುಗಳಂತೆ ಬಿಳುಪಾಗುವುದು. ನೀನು ನಡೆಯುವಾಗ ಮಿಡತೆಯಂತೆ ನಿನ್ನನ್ನು ಎಳೆದಾಡಿಕೊಂಡು ನಡೆಯುವೆ; ಮಗುವನ್ನು ಪಡೆಯಲಾರದಷ್ಟು ವಯಸ್ಸಾಗುವುದು. ಆಮೇಲೆ ನೀನು ನಿನ್ನ ಹೊಸ ಮನೆಗೆ (ಸಮಾಧಿಗೆ) ಹೋಗುವೆ. ನಿನ್ನ ಶವಸಂಸ್ಕಾರಕ್ಕೆ ಹೋಗಲು ಜನರು ಬೀದಿಗಳಲ್ಲಿ ತುಂಬಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಎತ್ತರವನ್ನು ಕಂಡು ಹೆದರಿಕೆಯಾಗುವುದು. ದಾರಿಯ ಅಪಾಯಗಳ ಬಗ್ಗೆ ಅಂಜಿಕೆಯಾಗುವುದು. ಬಾದಾಮಿಯ ಮರದಂತೆ ಹೂವು ಬಿಡುವುದು. ಮಿಡತೆಯು ಸಹ ಭಾರಾವಾಗಿರುವುದು. ಆಸೆ ಕುಂದಿಹೋಗುವುದು. ಈ ರೀತಿಯಾಗಿ ಮನುಷ್ಯನು ತನ್ನ ನಿತ್ಯ ಗೃಹಕ್ಕೆ ಹೊರಟು ಹೋಗುವರು. ಗೋಳಾಡುವವರು ಬೀದಿಯಲ್ಲಿ ತಿರುಗಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 12:5
19 ತಿಳಿವುಗಳ ಹೋಲಿಕೆ  

ಪಾತಾಳವನ್ನೇ ನನ್ನ ಮನೆಯೆಂದು ನಾನು ಭಾವಿಸಿದೆನಾದರೆ ಕತ್ತಲಲ್ಲೇ ನನ್ನ ಹಾಸಿಗೆಯನ್ನು ಹಾಕಿಕೊಂಡೆನಾದರೆ,


ನನ್ನನು ಮರಣಕ್ಕೆ ಗುರಿಮಾಡುವೆಯೆಂದು ತಿಳಿದಿದೆ ಸಮಸ್ತಜೀವಿಗಳು ತೆರಳುವ ಮಂದಿರಕ್ಕೆ ಸೇರಿಸುವೆಯೆಂದು ಗೊತ್ತೇ ಇದೆ.


ನರೆಗೂದಲು ಸುಂದರ ಕಿರೀಟ, ಸನ್ನಡತೆಗೆ ಸಿಗುವ ಪ್ರತಿಫಲ.


ದೇವಾ, ನರೆಯ ಮುದುಕನಾಗಿರುವಾಗ ನನ್ನ ಕೈ ಬಿಡಬೇಡಯ್ಯಾ I ನಿನ್ನ ಪರಾಕ್ರಮವನು ಮುಂದಿನ ಪೀಳಿಗೆಗೆ ಸಾರುವ ತನಕ ಬೇಡವಯ್ಯಾ I ನಿನ್ನ ಪ್ರತಾಪವನು ತಲತಲಾಂತರದವರೆಗೆ ಪ್ರಕಟಿಸುವೆನಯ್ಯಾ II


ನಮ್ಮಲ್ಲಿದ್ದಾರೆ ತಲೆ ನರೆತವರು, ವಯೋವೃದ್ಧರು ನಿಮ್ಮಪ್ಪನಿಗಿಂತಲೂ ಹೆಚ್ಚು ಮುದುಕರಾದವರು.


“ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಇದಲ್ಲದೆ ಸರ್ವೇಶ್ವರ ಸ್ವಾಮಿ, “ಎಲೈ ಯೆರೆಮೀಯನೇ, ಏನು ನೋಡುತ್ತಿರುವೆ?” ಎಂದು ಕೇಳಿದರು. ಅದಕ್ಕೆ ನಾನು, ಚಚ್ಚರ ಮರದ ರೆಂಬೆಯನ್ನು ನೋಡುತ್ತಿದ್ದೇನೆ,” ಎಂದೆ.


ನಾನೇ ನಿಮಗೆ ಆಧಾರ ಮುಪ್ಪಿನ ತನಕ ಹೊತ್ತು ಸಲಹುವೆನು ನಿಮ್ಮನು ನರೆಬಂದಾಗ. ಉಂಟುಮಾಡಿದವನು ನಾನೇ, ಹೊರುವವನು ನಾನೇ ಹೌದು, ನಿಮ್ಮನು ಹೊತ್ತು ಸಲಹುವವನು ನಾನೇ.


ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲ ಪೂರ್ಣಶಕ್ತಿಯಿಂದ ಮಾಡು. ಏಕೆಂದರೆ ನೀನು ಹೋಗಲಿಕ್ಕಿರುವ ಪಾತಾಳದಲ್ಲಿ ಯಾವ ಕೆಲಸವೂ ಯೋಜನೆಯೂ ತಿಳುವಳಿಕೆಯೂ ಜ್ಞಾನವೂ ಇರುವುದಿಲ್ಲ.


ಯುವಕರಿಗೆ ಬಲವೆ ಭೂಷಣ; ಮುದುಕರಿಗೆ ನರೆಯೆ ಕಿರೀಟ.


ಆಗ ತಮ್ಮ ಸೇವಕರಾದ ನಾವು, ತಮ್ಮ ಸೇವಕ ಹಾಗು ನರೆಕೂದಲಿನ ಮುದುಕ ಆದ ನಮ್ಮ ತಂದೆ ಸಂಕಟದಿಂದಲೆ ಸಮಾಧಿ ಸೇರಲು ಕಾರಣರಾಗುತ್ತೇವೆ.


ಈಗ ಇವನನ್ನೂ ನನ್ನ ಬಳಿಯಿಂದ ತೆಗೆದುಕೊಂಡು ಹೋಗಬೇಕೆಂದಿದ್ದೀರಿ. ಇವನಿಗೂ ಏನಾದರು ಆಪತ್ತು ಒದಗಿದರೆ, ಈ ನರೆಕೂದಲಿನ ಮುದುಕ ಸಂಕಟದಿಂದ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ’ ಎಂದರು.


ಯಕೋಬನು ಅವರಿಗೆ, “ನನ್ನ ಮಗ ನಿಮ್ಮ ಸಂಗಡ ಹೋಗಬಾರದು. ಇವನ ಒಡಹುಟ್ಟಿದ ಅವನು ಸತ್ತುಹೋದ, ಇವನೊಬ್ಬನೇ ಉಳಿದು ಇದ್ದಾನೆ, ದಾರಿಯಲ್ಲಿ ಇವನಿಗೇನಾದರೂ ಆಪತ್ತು ಸಂಭವಿಸಬಹುದು. ಆಗ, ನರೆಕೂದಲಿನ ಈ ಮುದುಕ ದುಃಖದಿಂದಲೆ ಸಮಾಧಿ ಸೇರಲು ನೀವೇ ಕಾರಣರಾಗುತ್ತೀರಿ,” ಎಂದು ಹೇಳಿದ.


ಇವರಿಗಾಗಲಿ ಇವರ ಪೂರ್ವಜರಿಗಾಗಲಿ ಪರಿಚಯವಿಲ್ಲದ ಜನಾಂಗಗಳ ನಡುವೆ ಇವರನ್ನು ಚದರಿಸಿಬಿಡುವೆನು. ಇವರು ಅಳಿದು ಹಾಳಾಗುವ ತನಕ ಇವರ ಹಿಂದೆ ಖಡ್ಗವನ್ನು ಕಳಿಸುವೆನು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು