Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:14 - ಕನ್ನಡ ಸತ್ಯವೇದವು C.L. Bible (BSI)

14 “ಜ್ಞಾನಿಗೆ ಹಣೆಯಲ್ಲಿ ಕಣ್ಣು, ಮೂಢನೋ ಕತ್ತಲೆಯಲ್ಲಿ ನಡೆಯುತ್ತಾನೆ". ಆದರೆ ಇವರಿಬ್ಬರ ಗತಿ ಒಂದೇ ಎಂದು ಕಂಡುಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವುದು ಮೂಢನು ಕತ್ತಲಲ್ಲಿ ನಡೆಯುವನು. ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡು ಬಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುವದು, ಮೂಢನು ಕತ್ತಲಲ್ಲಿ ನಡೆಯುವನು; ಇವರಿಬ್ಬರಿಗೂ ಒಂದೇ ಗತಿಯೆಂದು ನನಗೆ ಕಂಡುಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಅದು ಈ ರೀತಿಯಿದೆ: ಜ್ಞಾನಿಯು ತನ್ನ ಮಾರ್ಗವನ್ನು ತಿಳಿದುಕೊಳ್ಳಲು ತನ್ನ ಮನಸ್ಸನ್ನು ಕಣ್ಣುಗಳಂತೆ ಉಪಯೋಗಿಸುವನು. ಮೂಢನಾದರೋ ಕತ್ತಲೆಯಲ್ಲಿ ನಡೆದುಹೋಗುವನು. ಆದರೆ ಜ್ಞಾನಿಗೂ ಮೂಢನಿಗೂ ಒಂದೇ ಗತಿಯೆಂದು ಕಂಡುಕೊಂಡೆನು; ಅವರಿಬ್ಬರೂ ಸಾಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಜ್ಞಾನಿಯ ಕಣ್ಣು ಅವನ ತಲೆಯಲ್ಲಿರುತ್ತದೆ. ಆದರೆ ಮೂಢನು ಕತ್ತಲೆಯಲ್ಲಿ ನಡೆಯುತ್ತಾನೆ. ಇವರಿಬ್ಬರಿಗೂ ಒಂದೇ ಗತಿಯು ಸಂಭವಿಸುವುದೆಂದೂ ನಾನು ಗ್ರಹಿಸಿಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:14
16 ತಿಳಿವುಗಳ ಹೋಲಿಕೆ  

ಬುದ್ಧಿಜೀವಿಗಳೂ ಸಾಯುವುದು ಖಂಡಿತ I ಮೂರ್ಖ, ಮಂದಗತಿಗಳ ಅಳಿವೂ ನಿಶ್ಚಿತ I ಅವರ ಸೊತ್ತು ಪರರ ಪಾಲು, ಇದೂ ಖಚಿತ II


ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ತನ್ನ ಸಹೋದರನನ್ನು ದ್ವೇಷಿಸುವವನು ಕತ್ತಲಲ್ಲಿ ಇದ್ದಾನೆ; ಕತ್ತಲಲ್ಲೇ ನಡೆಯುತ್ತಾನೆ. ಕತ್ತಲು ಅವನನ್ನು ಕುರುಡಾಗಿಸಿರುವುದರಿಂದ ಎತ್ತ ಹೋಗುತ್ತಿದ್ದಾನೆಂದು ಅವನಿಗೇ ತಿಳಿಯದು.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.


ಇದನ್ನು ನೋಡಿದ ನಾನು, ಶಕ್ತಿಗಿಂತ ಜ್ಞಾನವೇ ಶ್ರೇಷ್ಠ; ಆದರೆ ಜನರು ಆ ಬಡವನ ಜ್ಞಾನವನ್ನು ತಾತ್ಸಾರ ಮಾಡುತ್ತಾರೆ, ಅವನ ಮಾತುಗಳನ್ನು ಗಮನಿಸುವುದಿಲ್ಲ, ಎಂದುಕೊಂಡೆ.


ಜ್ಞಾನಿಗೆ ಸಮಾನರು ಯಾರು? ಅವನಲ್ಲದೆ ಬಗೆಹರಿಸಬಲ್ಲವರು ಯಾರು? ಜ್ಞಾನವು ಮನುಷ್ಯನ ಮುಖವನ್ನು ವಿಕಾಸಗೊಳಿಸುತ್ತದೆ; ಗಂಟುಮೋರೆಯನ್ನು ಮಾರ್ಪಡಿಸುತ್ತದೆ.


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?


ವಿವೇಕಿಯ ಜ್ಞಾನ ಸನ್ಮಾರ್ಗದಲ್ಲಿ ನಡೆಸುತ್ತದೆ; ಮೂಢರ ಮೂರ್ಖತನ ಮೋಸಗೊಳಿಸುತ್ತದೆ.


ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II


ಏಕೆಂದರೆ ಮೂಢನನ್ನು ಹೇಗೋ ಹಾಗೆಯೇ ಜ್ಞಾನಿಯನ್ನೂ ಜನರು ನಿರಂತರವಾಗಿ ಮರೆತುಹೋಗುವರು. ಮುಂದಿನ ಕಾಲದವರು ಈಗಿನವರನ್ನೆಲ್ಲ ಮರೆತುಬಿಡುವರು ಎಂಬುದು ನಿಶ್ಚಯ. ನಿಸ್ಸಂದೇಹವಾಗಿ ಮೂಢನಂತೆ ಜ್ಞಾನಿಯು ಮೃತನಾಗುವನು.


ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II


ಜ್ಞಾನಿಯಾಗಲಿ, ಜನರ ಮುಂದೆ ಸಜ್ಜನನಾಗಿ ನಡೆಯಬಲ್ಲ ಬಡವನಾಗಲಿ, ಮೂಢನಿಗಿಂತ ಹೇಗೆ ಶ್ರೇಷ್ಠ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು