Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:24 - ಕನ್ನಡ ಸತ್ಯವೇದವು C.L. Bible (BSI)

24 ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅನ್ನ ಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವುದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬುದನ್ನು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಮನುಷ್ಯನಿಗೆ ಮೇಲಿಲ್ಲ. ಇದು ದೇವರಿಂದಾಯಿತೆಂಬದನ್ನೂ ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24-25 ಜೀವನದಲ್ಲಿ ಸುಖಪಡಲು ನನಗಿಂತಲೂ ಹೆಚ್ಚಾಗಿ ಯಾರಾದರೂ ಪ್ರಯತ್ನಿಸಿರುವರೇ? ಇಲ್ಲ! ಅನುಭವದಿಂದ ಹೇಳುವುದೇನೆಂದರೆ, ಅನ್ನಪಾನಗಳನ್ನು ತೆಗೆದುಕೊಂಡು ಪ್ರಯಾಸದಲ್ಲಿಯೂ ಸುಖಪಡುವುದಕ್ಕಿಂತ ಬೇರೆ ಯಾವ ಮೇಲೂ ಮನುಷ್ಯನಿಗಿಲ್ಲ. ಇದು ಸಹ ದೇವರಿಂದ ಬಂದ ಭಾಗ್ಯವೆಂದು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಒಬ್ಬ ವ್ಯಕ್ತಿ ತನ್ನ ಪ್ರಯಾಸದಲ್ಲಿ ತೃಪ್ತಿಹೊಂದುವಂತೆ ತಿಂದು ಕುಡಿಯುವುದಕ್ಕಿಂತ ಶ್ರೇಷ್ಠವಾದದ್ದು ಮನುಷ್ಯನಿಗೆ ಯಾವುದೂ ಇಲ್ಲ. ಇದೂ ಕೂಡ ದೇವರ ಕೈಯಿಂದಲೇ ಆಗುತ್ತದೆ ಎಂದು ನಾನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:24
22 ತಿಳಿವುಗಳ ಹೋಲಿಕೆ  

ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ಲೋಕ ಪ್ರಶಂಸೆಗಾಗಿ ನಾನು ಈ ಎಫೆಸದ ‘ಕಾಡುಮೃಗ’ಗಳೊಡನೆ ಹೋರಾಡಿದೆನಾದರೆ, ಅದರಿಂದ ಬರುವ ಲಾಭವಾದರೂ ಏನು? ಸತ್ತವರಿಗೆ ಪುನರುತ್ಥಾನವಿಲ್ಲವಾದರೆ, “ಬನ್ನಿರಿ, ತಿನ್ನೋಣ, ಕುಡಿಯೋಣ, ಕಾದಿದೆಯಲ್ಲ ನಾಳೆ ಮರಣ,” ಎಂಬ ನಾಣ್ನುಡಿಯಂತೆ ನಡೆಯಬಹುದಲ್ಲಾ.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಆದರೆ ತಮ್ಮ ಅಸ್ತಿತ್ವವನ್ನು ಅರಿತುಕೊಳ್ಳುವಂತೆ ಸುಕೃತ್ಯಗಳ ಸಾಕ್ಷ್ಯ ನೀಡುತ್ತಲೇ ಬಂದಿದ್ದಾರೆ; ನಿಮಗೆ ಆಕಾಶದಿಂದ ಮಳೆಯನ್ನೂ ಸಕಾಲಕ್ಕೆ ಬೆಳೆಯನ್ನೂ ಕೊಡುತ್ತಾ ಆಹಾರವನ್ನು ಒದಗಿಸಿ, ನಿಮ್ಮ ಹೃದಯವನ್ನು ಪರಮಾನಂದಗೊಳಿಸುತ್ತಾ ಬಂದಿದ್ದಾರೆ.”


ನನ್ನ ನಾಮಕ್ಕೆ ಮಹಿಮೆ ಸಲ್ಲಿಸಬೇಕು. ಇದನ್ನು ನೀವು ಮನದಟ್ಟು ಮಾಡಿಕೊಳ್ಳಬೇಕು. ನನ್ನ ಈ ಮಾತಿಗೆ ಕಿವಿಗೊಡದಿದ್ದರೆ ನಿಮಗೆ ಶಾಪವನ್ನು ತರುವೆನು. ನಿಮ್ಮ ವರಮಾನಗಳನ್ನೆಲ್ಲ ಶಾಪವಾಗಿ ಮಾರ್ಪಡಿಸುವೆನು; ಈಗಾಗಲೇ ಮಾರ್ಪಡಿಸಿರುವೆನು. ನನ್ನ ಆಜ್ಞೆಯನ್ನು ನಿಮ್ಮಲ್ಲಿ ಯಾರೂ ಮನದಟ್ಟು ಮಾಡಿಕೊಂಡಿಲ್ಲ.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ನೀವು, ನಿಮ್ಮ ಗಂಡು ಹೆಣ್ಣು ಮಕ್ಕಳು, ದಾಸದಾಸಿಯರು ಹಾಗು ನಿಮ್ಮೊಡನೆ ಸೊತ್ತನ್ನು ಹೊಂದದೆ ಇರುವ ನಿಮ್ಮ ಊರಿನ ಲೇವಿಯರು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷವಾಗಿರಬೇಕು.


ಇದಲ್ಲದೆ, ಎಜ್ರನು ಅವರಿಗೆ, “ಹೋಗಿ ಮೃಷ್ಟಾನ್ನವನ್ನೂ ಮಧುರಪಾನವನ್ನೂ ತೆಗೆದುಕೊಳ್ಳಿ; ತಮಗಾಗಿ ಏನೂ ಸಿದ್ಧಮಾಡದವರಿಗೆ ಒಂದು ಪಾಲನ್ನು ಕಳುಹಿಸಿರಿ. ಈ ದಿನ ನಮ್ಮ ಸರ್ವೇಶ್ವರನಿಗೆ ಪ್ರತಿಷ್ಠಿತ ದಿನ! ವ್ಯಸನಪಡಬೇಡಿ; ಸರ್ವೇಶ್ವರನ ಆನಂದವೇ ನಿಮ್ಮ ಆಶ್ರಯವಾಗಿದೆ,” ಎಂದನು.


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ದೇವರಿಲ್ಲದೆ ಯಾರಿಗೆ ಊಟ ದೊರಕೀತು? ಅವರಿಲ್ಲದೆ ಸುಖಾನುಭವ ಯಾರಿಗೆ ದೊರಕೀತು?


ನೆರಳಿನಂತೆ ವ್ಯರ್ಥವಾಗಿ ಕಳೆದುಹೋಗುವ ಮಾನವನ ಜೀವಮಾನ ದಿನಗಳಲ್ಲೆಲ್ಲಾ ಅವನಿಗೆ ಯಾವುದು ಹಿತವೆಂದು ಯಾರಿಗೆ ಗೊತ್ತು? ತಾನು ಕಾಲವಾದ ಮೇಲೆ ಇಹಲೋಕದಲ್ಲಿ ಏನಾಗುವುದೆಂದು ಅವನು ಯಾರಿಂದ ತಿಳಿದುಕೊಳ್ಳಲು ಸಾಧ್ಯ?


ಅಲ್ಲದೆ, ‘ಬನ್ನಿ, ಮಧುಪಾನವನ್ನು ತರಿಸುತ್ತೇನೆ. ಅಮಲೇರಿಸುವ ಮದ್ಯವನ್ನು ಬೇಕಾದಷ್ಟು ಕುಡಿಯೋಣ; ಆಗ ಇನ್ನೂ ಸಂಭ್ರಮವಾಗಿರುವುದು!’ ಎಂದು ಹರಟಿಕೊಳ್ಳುವರು.”


ಇಸ್ರಯೇಲ್ ಹಾಗು ಯೆಹೂದ್ಯರು ಸಮುದ್ರ ತೀರದ ಮರಳಿನಷ್ಟು ಅಸಂಖ್ಯಾತರಾದರು; ಅನ್ನ ಪಾನಗಳಲ್ಲಿ ಸಂತೃಪ್ತರಾಗಿ ಸಂತೋಷದಿಂದ ಬಾಳುತ್ತಿದ್ದರು.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.


ಅವನ ಜೀವಮಾನವೆಲ್ಲ ಅಂಧಕಾರಮಯ, ಅದರಲ್ಲಿ ದುಃಖದುಗುಡ, ರೋಗರುಜಿನ, ಕೋಪತಾಪ ಇದ್ದೇ ಇರುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು