Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 2:4 - ಕನ್ನಡ ಸತ್ಯವೇದವು C.L. Bible (BSI)

4 ಮಹತ್ಕಾರ್ಯಗಳನ್ನು ಎಸಗಿದೆ; ಮನೆಮಾರುಗಳನ್ನು ಕಟ್ಟಿಸಿಕೊಂಡೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮಹತ್ಕಾರ್ಯಗಳನ್ನು ನಡೆಸಿದೆನು. ಮನೆಗಳನ್ನು ಕಟ್ಟಿಕೊಂಡೆನು ಮತ್ತು ದ್ರಾಕ್ಷಿತೋಟಗಳನ್ನು ನೆಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಮತ್ತು ವಿಶೇಷ ಕಾರ್ಯಗಳನ್ನು ನಡಿಸಿದೆನು; ಮನೆಗಳನ್ನು ಕಟ್ಟಿಸಿಕೊಂಡೆನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ದೊಡ್ಡಕಾರ್ಯಗಳನ್ನು ಮಾಡಲಾರಂಭಿಸಿದೆ; ನನಗೋಸ್ಕರ ಮನೆಗಳನ್ನು ಕಟ್ಟಿಸಿದೆ; ದ್ರಾಕ್ಷಿತೋಟಗಳನ್ನು ಮಾಡಿಸಿದೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಮಹಾ ಯೋಜನೆಗಳನ್ನು ನಡೆಸಿದೆನು: ನಾನು ನನಗಾಗಿ ಮನೆಗಳನ್ನು ಕಟ್ಟಿಸಿಕೊಂಡೆನು. ನಾನು ದ್ರಾಕ್ಷಿತೋಟಗಳನ್ನು ನೆಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 2:4
17 ತಿಳಿವುಗಳ ಹೋಲಿಕೆ  

ಆಗ ಅವನು, “ಹಾ, ಬಾಬಿಲೋನ್ ಎಂಥಾ ಮಹಾನಗರ! ಇಗೋ, ನನ್ನ ಶಕ್ತಿ ಸಾಮರ್ಥ್ಯದಿಂದ ನಾನು ಕಟ್ಟಿಸಿರುವ ರಾಜಭವನ! ನನ್ನ ಕೀರ್ತಿ ಪರಾಕ್ರಮವನ್ನು ಇದು ಪ್ರಕಟಿಸುತ್ತಿದೆ!” ಎಂದು ಕೊಚ್ಚಿಕೊಂಡನು.


ಹಾಡುವೆ ನಾನೆನ್ನ ಪ್ರಿಯನಿಗೆ ಗೀತೆಯೊಂದನು ಅವನ ದ್ರಾಕ್ಷಾವನದ ಕುರಿತು ಪ್ರೇಮಗೀತೆಯನು : ಪ್ರಿಯತಮನಿಗೆ ಇತ್ತೊಂದು ದ್ರಾಕ್ಷಿಯ ತೋಟ ಫಲವತ್ತಾಗಿಹ ಗುಡ್ಡದ ಮೇಲಿನ ತೋಟ. ಆರಿಸಿ ಎಸೆದನು ಕಲ್ಲುಮುಳ್ಳುಗಳನು ಅಗೆದು ಹದಮಾಡಿದನಾತ ಗುಡ್ಡವನು.


ಬೆಳಗ್ಗೆ ಹೊರಟು ತೋಟಗಳಿಗೆ ಹೋಗೋಣ ಬಾ ದ್ರಾಕ್ಷಿ ಚಿಗುರಿದೆಯೋ, ಅದರ ಹೂ ಅರಳಿದೆಯೋ ದಾಳಿಂಬೆ ಹೂ ಬಿಟ್ಟಿದೆಯೋ ನೋಡೋಣ ಬಾ ಅಲ್ಲೆ ನಿನಗೆ ನನ್ನ ಪ್ರೀತಿಯನರ್ಪಿಸುವೆ ಬಾ.


ನನ್ನ ಪಾಲಿಗೆ ನನ್ನ ಪ್ರಿಯನು ಏನ್ಗೆದಿಯ ತೋಟದ ಹೂಗೊಂಚಲು. ನಲ್ಲ :


ತಮ್ಮ ಹೆಸರಲೆಸ್ಟೋ ಸೊತ್ತಿದ್ದರೂ I ಸಮಾಧಿಯೇ ಅವರಿಗೆ ಶಾಶ್ವತ ಮಂದಿರವು I ಅದುವದುವೇ ಅವರಿಗೆ ನಿತ್ಯ ನಿವಾಸವು II


ಅವನಿಗೆ ಇಳಕಲಿನ ಪ್ರದೇಶದಲ್ಲೂ ತಪ್ಪಲ ಸೀಮೆಯಲ್ಲೂ ಅಲ್ಲದೆ ಅಡವಿಯಲ್ಲೂ ಪಶುಪ್ರಾಣಿಗಳ ದೊಡ್ಡಮಂದೆಗಳು ಇದ್ದವು. ಆದುದರಿಂದ ಆ ಅಡವಿಯಲ್ಲಿ ಬುರುಜುಗಳನ್ನು ಕಟ್ಟಿಸಿ ಹಲವು ಬಾವಿಗಳನ್ನು ತೋಡಿಸಿದನು. ವ್ಯವಸಾಯದಲ್ಲಿ ಅವನಿಗೆ ಅಭಿರುಚಿ ಇದ್ದುದರಿಂದ ಗುಡ್ಡ, ಫಲವತ್ತಾದ ಬಯಲು, ಇವುಗಳಲ್ಲಿ ಹೊಲ ಹಾಗು ದ್ರಾಕ್ಷಿತೋಟಗಳ ಕೆಲಸಗಾರರನ್ನು ನೇಮಿಸಿದನು.


“ಯಾವ ಯಾವ ಸ್ಥಳಗಳಲ್ಲಿ ಸರ್ವೇಶ್ವರನ ಮಂಜೂಷವಿತ್ತೋ ಅವು ಪವಿತ್ರಸ್ಥಾನಗಳು; ಆದುದರಿಂದ ಇಸ್ರಯೇಲರ ಅರಸನಾಗಿದ್ದ ದಾವೀದನ ಮನೆ ಪವಿತ್ರವಾದುದು; ಅಲ್ಲಿ ಫರೋಹನ ಮಗಳಾದ ನನ್ನ ಹೆಂಡತಿ ವಾಸಿಸಬಾರದು,” ಎಂದುಕೊಂಡು ಸೊಲೊಮೋನನು ಆಕೆಯನ್ನು ದಾವೀದನಗರದಿಂದಾಚೆ ಆಕೆಗಾಗಿಯೇ ತಾನು ಕಟ್ಟಿಸಿದ್ದ ಮಂದಿರದಲ್ಲಿ ಇರಿಸಿದನು.


ದ್ರಾಕ್ಷೀತೋಟಗಳ ಮೇಲೆ ರಾಮಾ ಊರಿನ ಶಿಮ್ಮೀ; ದ್ರಾಕ್ಷೀತೋಟಗಳಲ್ಲಿರುವ ದ್ರಾಕ್ಷಾರಸದ ಉಗ್ರಾಣಗಳ ಮೇಲೆ ಶಿಷ್ಮೀಯನಾದ ಜಬ್ದೀ;


ಅಲ್ಲದೆ ಅವನಿಗೆ, “ನನಗೂ ನಿನಗೂ, ನನ್ನ ತಂದೆಗೂ ನಿನ್ನ ತಂದೆಗೂ ಒಂದು ಒಪ್ಪಂದವಿದೆಯಲ್ಲವೆ? ಇಗೋ, ನಿನಗೆ ಬೆಳ್ಳಿಬಂಗಾರವನ್ನು ಕಾಣಿಕೆಯಾಗಿ ಕಳುಹಿಸಿದ್ದೇನೆ. ಇಸ್ರಯೇಲರ ಅರಸ ಬಾಷನು ನನ್ನ ನಾಡಿನಿಂದ ಸೈನ್ಯವನ್ನು ಹಿಂದಕ್ಕೆ ತೆಗೆದುಕೊಂಡು ನನ್ನನ್ನು ಬಿಟ್ಟುಹೋಗುವಂತೆ, ಅವನ ಸಂಗಡ ನೀನು ಮಾಡಿಕೊಂಡಿರುವ ಒಪ್ಪಂದವನ್ನು ಮುರಿದುಬಿಡು,” ಎಂದು ಹೇಳಿಸಿದನು.


ಸೊಲೊಮೋನನು ಸರ್ವೇಶ್ವರನ ಆಲಯವನ್ನು, ತನ್ನ ಅರಮನೆಯನ್ನು ಹಾಗು ತನಗೆ ಇಷ್ಟವಾದ ಬೇರೆ ಎಲ್ಲಾ ಮಂದಿರಗಳನ್ನೂ ಕಟ್ಟಿಮುಗಿಸಿದನು.


ಅಬ್ಷಾಲೋಮನು ಇನ್ನೂ ಜೀವದಿಂದಿದ್ದಾಗ, ತನ್ನ ಹೆಸರನ್ನುಳಿಸುವ ಮಗ ಇಲ್ಲದ್ದರಿಂದ ಒಂದು ಕಲ್ಲಿನ ಕಂಬವನ್ನು ತರಿಸಿ, ಅದನ್ನು ಅರಸನ ಕಣಿವೆಯಲ್ಲಿ ತನ್ನ ಜ್ಞಾಪಕಾರ್ಥವಾಗಿ ನಿಲ್ಲಿಸಿ, ಅದಕ್ಕೆ ತನ್ನ ಹೆಸರನ್ನಿಟ್ಟಿದ್ದನು. ಅದನ್ನು ಇಂದಿನವರೆಗೂ ‘ಅಬ್ಷಾಲೋಮನ ಸ್ಮಾರಕಸ್ತಂಭ’ ಎಂದು ಕರೆಯಲಾಗುತ್ತದೆ.


ಒಂದು ಪಟ್ಟಣವನ್ನು ಕಟ್ಟೋಣ; ಆಕಾಶವನ್ನು ಮುಟ್ಟುವಂಥ ಗೋಪುರವನ್ನು ನಿರ್ಮಿಸಿ ಪ್ರಖ್ಯಾತಿ ಪಡೆಯೋಣ. ಹೀಗೆ ಮಾಡಿದರೆ ನಾವು ಜಗದಲ್ಲೆಲ್ಲಾ ಚದರಿಹೋಗುವುದಕ್ಕೆ ಆಸ್ಪದವಿರುವುದಿಲ್ಲ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಗಾರೆಗೆ (ಸುಣ್ಣಕ್ಕೆ) ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು