Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:13 - ಕನ್ನಡ ಸತ್ಯವೇದವು C.L. Bible (BSI)

13 ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಇದಲ್ಲದೆ ಪ್ರತಿಯೊಬ್ಬನೂ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ನಾನಾ ಪ್ರಯಾಸಗಳಲ್ಲಿಯೂ ಸುಖವನ್ನನುಭವಿಸುವದು ದೇವರ ಅನುಗ್ರಹವೇ ಎಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಪ್ರತಿಯೊಬ್ಬನು ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಕೆಲಸವನ್ನು ಸಂತೋಷದಿಂದ ಮಾಡುವುದು ದೇವರಿಗೆ ಇಷ್ಟವಾಗಿದೆ. ಅವು ದೇವರ ವರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:13
14 ತಿಳಿವುಗಳ ಹೋಲಿಕೆ  

ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ನಿನ್ನ ಕೈ ಕೆಸರಾದರೆ ಬಾಯಿ ಮೊಸರಾಗುವುದು I ಧನ್ಯನಾಗುವೆ ನೀನು; ನಿನಗೆ ಶುಭವಾಗುವುದು II


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಎಲೆ ಮಾನವ, ಬಲುದಿನ ಬಾಳಲು ಬಯಸುವೆಯಾ? I ಆಯುರಾರೋಗ್ಯ ಭಾಗ್ಯವನು ಆಶಿಸುವೆಯಾ? II


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು