Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:14 - ಕನ್ನಡ ಸತ್ಯವೇದವು C.L. Bible (BSI)

14 ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ದೇವರ ಕಾರ್ಯವೆಲ್ಲವು ನಿತ್ಯವೆಂದು ಬಲ್ಲೆನು. ಅದಕ್ಕೆ ಯಾವುದನ್ನೂ ಸೇರಿಸಲಾರೆವು. ಅದರಿಂದ ಯಾವುದನ್ನೂ ತೆಗೆಯಲಾರೆವು. ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿ ಉಳ್ಳವರಾಗಿರಬೇಕೆಂಬುದೇ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ದೇವರ ಕಾರ್ಯವೆಲ್ಲವೂ ನಿತ್ಯವೆಂದು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಲಾರೆವು, ಅದರಿಂದ ಯಾವದನ್ನೂ ತೆಗೆಯಲಾರೆವು; ದೇವರ ಈ ನಿಯಮಕ್ಕೆ ಮನುಷ್ಯರು ತನ್ನ ಎದುರಿನಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬದೇ ಕಾರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ದೇವರ ಕಾರ್ಯಗಳೆಲ್ಲಾ ಶಾಶ್ವತವಾದದ್ದು. ಆತನ ಕಾರ್ಯಗಳಿಗೆ ಮನುಷ್ಯರು ಏನನ್ನೂ ಸೇರಿಸಲಾರರು; ಅವುಗಳಿಂದ ಏನನ್ನೂ ತೆಗೆಯಲಾರರು. ಮನುಷ್ಯರು ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕೆಂಬುದೇ ಇದಕ್ಕೆ ಕಾರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:14
30 ತಿಳಿವುಗಳ ಹೋಲಿಕೆ  

ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಪ್ರಭುವಿನ ಯೋಜನೆ ಶಾಶ್ವತ I ಅವನ ಸಂಕಲ್ಪ ಅನವರತ II


ಸಮಸ್ತವೂ ಉಂಟಾಗುವುದು ಅವರಿಂದಲೇ; ಮುಂದುವರಿಯುವುದೂ ಅವರ ಮುಖಾಂತರವೇ; ಇರುವುದೂ ಅವರಿಗೋಸ್ಕರವೇ. ಆ ಪ್ರಭುವಿಗೆ ಯುಗಯುಗಾಂತರಕ್ಕೂ ಸ್ತುತಿಸ್ತೋತ್ರ ಸಲ್ಲಲಿ. ಆಮೆನ್.


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಆತನ ಮಾತುಗಳಿಗೆ ಯಾವುದನ್ನೂ ಸೇರಿಸಬೇಡ, ಇಲ್ಲವಾದರೆ ಆತ ನಿನ್ನನ್ನು ಖಂಡಿಸಿಯಾನು, ನೀನು ಸುಳ್ಳುಗಾರನಾಗಿ ತೋರಿಬಂದೀಯೆ!


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ತಮ್ಮ ಪೂರ್ವಸಂಕಲ್ಪದಂತೆಯೇ ಇದನ್ನು ದೇವರು ನಮ್ಮ ಪ್ರಭುವಾದ ಯೇಸುಕ್ರಿಸ್ತರಲ್ಲಿ ಕಾರ್ಯಗತಗೊಳಿಸಿದರು.


ನೀವು ಸಂಯೋಜಿಸಿದ್ದು ಹಾಗೂ ಸಂಕಲ್ಪಿಸಿದ್ದು ಈಡೇರುವಂತೆ ಅವರು ಹೀಗೆ ವರ್ತಿಸಿದರು.


ದೇವರು ತಮ್ಮ ಸ್ಥಿರಸಂಕಲ್ಪದಲ್ಲಿ ಹಾಗೂ ಭವಿಷ್ಯತ್‍ಜ್ಞಾನದಲ್ಲಿ ಯೇಸು ನಿಮ್ಮ ವಶವಾಗಬೇಕೆಂದು ಈ ಮೊದಲೇ ನಿರ್ಧರಿಸಿದ್ದರು. ನೀವು ಅವರನ್ನು ಪರಕೀಯರ ಕೈಗೊಪ್ಪಿಸಿ, ಶಿಲುಬೆಗೆ ಹಾಕಿಸಿ, ಕೊಲ್ಲಿಸಿದಿರಿ.


ಆರಂಭದಲ್ಲಿಯೇ ಅಂತ್ಯವನು ತಿಳಿಸಿದವನು ನಾನು ಭೂತಕಾಲದಲ್ಲಿಯೆ ಭವಿಷ್ಯವನು ಅರುಹಿದವನು ನಾನು. ಸ್ಥಿರವಿರುವುದು ನನ್ನ ಸಂಕಲ್ಪ, ನೆರವೇರುವುದು ನನ್ನ ಇಷ್ಟಾರ್ಥ


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ಮನುಜನ ಮನದಲ್ಲಿ ಏಳುವ ಯೋಜನೆಗಳು ಹಲವು; ಈಡೇರುವುದಾದರೊ ಸರ್ವೇಶ್ವರನ ಸಂಕಲ್ಪವು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಜನರೆಲ್ಲರಾಗ ತಲ್ಲಣಗೊಳ್ಳುವರು I ದೇವಕಾರ್ಯವಿದು ಎಂದು ಧ್ಯಾನಿಪರು I ಆತನ ಸತ್ಕಾರ್ಯಗಳನು ಸಾರುವರು II


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.


ವಿಷಯ ಮುಗಿಯಿತು; ಎಲ್ಲವನ್ನು ಕೇಳಿ ಆಯಿತು. ದೇವರಿಗೆ ಭಯಪಟ್ಟು ಅವರ ಆಜ್ಞೆಗಳನ್ನು ಕೈಗೊಳ್ಳು. ಇದೇ ಪ್ರತಿಯೊಬ್ಬ ಮಾನವನ ಕರ್ತವ್ಯ.


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇವರ ಮಾರ್ಗ ದೋಷರಹಿತ ಸರ್ವೇಶ್ವರನ ವಚನ ಪರಮಪುನೀತ ಆಶ್ರಿತರೆಲ್ಲರಿಗಾತ ರಕ್ಷಣಾಕವಚ.


ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು