Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:16 - ಕನ್ನಡ ಸತ್ಯವೇದವು C.L. Bible (BSI)

16 ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದಲ್ಲದೆ ನಾನು ಲೋಕದಲ್ಲಿ ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ, ಧರ್ಮಸ್ಥಾನದಲ್ಲಿಯೂ ಅಧರ್ಮವಿರುವುದೆಂದು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದಲ್ಲದೆ ನಾನು ಲೋಕವನ್ನು ದೃಷ್ಟಿಸಿ ನ್ಯಾಯಸ್ಥಾನದಲ್ಲಿಯೂ ಧರ್ಮಸ್ಥಾನದಲ್ಲಿಯೂ ಅಧರ್ಮವಿರುವದೆಂದು ನೋಡಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ನಾನು ಈ ಲೋಕವನ್ನು ದೃಷ್ಟಿಸಿ ನೋಡಿದಾಗ, ನ್ಯಾಯಾಲಯಗಳಲ್ಲಿ ನೀತಿನ್ಯಾಯಗಳ ಬದಲಾಗಿ ದುಷ್ಟತನ ತುಂಬಿರುವುದನ್ನು ಕಂಡುಕೊಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು: ನ್ಯಾಯತೀರ್ಪಿನ ಸ್ಥಳದಲ್ಲಿ ದುಷ್ಕೃತ್ಯ ಇತ್ತು. ನೀತಿಯ ಸ್ಥಾನದಲ್ಲಿಯೂ ದುಷ್ಟತ್ವ ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:16
15 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಹೀಗಿದ್ದರೂ ನೀವು ಬಡವನನ್ನು ಅವಮಾನಕ್ಕೆ ಈಡುಮಾಡಿದಿರಿ. ನಿಮ್ಮನ್ನು ತುಳಿದು ಹಿಂಸಿಸುವವರು ಮತ್ತು ನಿಮ್ಮನ್ನು ನ್ಯಾಯಾಲಯಕ್ಕೆ ಎಳೆಯುವವರು ಸಿರಿವಂತರೇ ಅಲ್ಲವೇ?


ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಅದರ ಪ್ರಮುಖರು ಗರ್ಜಿಸುವ ಸಿಂಹಗಳು. ಅದರ ನ್ಯಾಯಾಧಿಪತಿಗಳು ಹಸಿದ ತೋಳಗಳು. ಕಡಿಯುವುದಕ್ಕೆ ಎಲುಬನ್ನು ಕೂಡ ಮರುದಿನದವರೆಗೆ ಉಳಿಸವು.


ದುಷ್ಕೃತ್ಯಗಳನ್ನು ಮಾಡುವುದರಲ್ಲಿ ಅವರದು ನುರಿತ ಕೈ. ಅಧಿಕಾರಿಗಳು ಮತ್ತು ನ್ಯಾಯಾಧಿಪತಿಗಳು ಲಂಚಕ್ಕಾಗಿ ಕೈಯೊಡ್ಡುತ್ತಾರೆ. ದೊಡ್ಡ ದೊಡ್ಡ ವ್ಯಕ್ತಿಗಳು ತಮ್ಮ ಅಂತರಂಗದ ದುರಾಸೆಯನ್ನು ವ್ಯಕ್ತಪಡಿಸುತ್ತಾರೆ. ಎಲ್ಲರು ಒಟ್ಟಿಗೆ ಸೇರಿ ಒಳಸಂಚುಮಾಡುತ್ತಾರೆ.


ಇತರರ ಹೊಲಗದ್ದೆಗಳನ್ನು ದುರಾಸೆಯಿಂದ ಆಕ್ರಮಿಸಿಕೊಳ್ಳುತ್ತಾರೆ. ಅಂತೆಯೇ ಮನೆಗಳನ್ನು ಅಪಹರಿಸುತ್ತಾರೆ. ಈ ರೀತಿಯಲ್ಲಿ ಮನೆಯನ್ನೂ ಮಾಲೀಕನನ್ನೂ ಸ್ವತ್ತನ್ನೂ ಹಕ್ಕುದಾರನನ್ನೂ ತುಳಿದುಬಿಡುತ್ತಾರೆ.


ನ್ಯಾಯವನ್ನು ಓಡಿಸಿಬಿಟ್ಟಿದ್ದೇವೆ; ನೀತಿ ಸಮೀಪಿಸದಂತೆ ಮಾಡಿದ್ದೇವೆ. ಸತ್ಯವು ಸಾರ್ವಜನಿಕ ಚೌಕದಲ್ಲಿ ಬಿದ್ದುಹೋಗಿದೆ; ಸದಾಚಾರವು ಪ್ರವೇಶಿಸಲಾಗದಿದೆ.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ಕನಸುಗಳು ಎಷ್ಟೋ ಬೀಳಬಹುದು. ಮಾತುಕತೆಗಳು ಎಷ್ಟೋ ನಡೆಯಬಹುದು. ನೀನಾದರೋ ದೇವರಲ್ಲಿ ಭಯಭಕ್ತಿಯುಳ್ಳವನಾಗಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು