Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 3:18 - ಕನ್ನಡ ಸತ್ಯವೇದವು C.L. Bible (BSI)

18 ಮತ್ತೆ ಮನಸ್ಸಿನಲ್ಲೇ ಮಾನವರ ಪರಿಸ್ಥಿತಿಯ ಬಗ್ಗೆ ಆಲೋಚನೆ ಮಾಡಿದೆ; ಮನುಷ್ಯರು ಪಶುಗಳಿಗೆ ಸಮಾನರೆಂದು ತಾವೇ ಗ್ರಹಿಸಿಕೊಳ್ಳುವುದಕ್ಕೆ ಆಸ್ಪದವಾಗುವಂತೆ ದೇವರು ಮನುಷ್ಯರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನಾನು ನನ್ನ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು, “ದೇವರು ಮನುಷ್ಯರನ್ನು ಪರೀಕ್ಷಿಸಿ, ಅವರು ಪಶುಗಳಿಗೆ ಸಮಾನರು ಎಂಬುದನ್ನು ತೋರಿಸುತ್ತಾನೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಮತ್ತೆ ಮನಸ್ಸಿನಲ್ಲಿ ಹೀಗೆ ಯೋಚಿಸಿದೆನು - ದೇವರು ಮನುಷ್ಯರನ್ನು ಪರೀಕ್ಷಿಸುವದಕ್ಕೂ ಮನುಷ್ಯರು ಪಶುಪ್ರಾಯರಾಗಿದ್ದೇವೆಂದು ತಾವೇ ಗ್ರಹಿಸಿಕೊಳ್ಳುವದಕ್ಕೂ ಆಸ್ಪದವಾಗುವಂತೆ ಇದು ನರಜನ್ಮದವರ ನಿವಿುತ್ತವಾಗಿ ಆಯಿತಲ್ಲವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಅಲ್ಲದೆ ಮನಸ್ಸಿನಲ್ಲಿ ಹೀಗೆಂದುಕೊಂಡೆನು: “ಮನುಷ್ಯರು ಪ್ರಾಣಿಗಳಿಗಿಂತ ಮೇಲಾದವರಲ್ಲ ಎಂಬುದನ್ನು ನಾವು ತಿಳಿದುಕೊಳ್ಳಬೇಕೆಂಬುದು ದೇವರ ಇಷ್ಟವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 3:18
16 ತಿಳಿವುಗಳ ಹೋಲಿಕೆ  

ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


ನೆಲೆಯಾಗಿರನು ನರನು ಪಟ್ಟಪದವಿಯಲಿ I ನಾಶವಾಗುವನು ಪಶುಪ್ರಾಣಿಗಳ ಪರಿ II


ಸಹಜ ಪ್ರವೃತ್ತಿಯಿಂದ ಬೇಟೆಗಾಗಿಯೂ ಕೊಲೆಗಾಗಿಯೂ ಹುಟ್ಟಿರುವ ವಿವೇಕಶೂನ್ಯ ಪ್ರಾಣಿಗಳಂತೆ ಬಾಳುವ ಈ ದುರ್ಬೋಧಕರಾದರೋ ತಮಗೆ ತಿಳಿಯದವುಗಳನ್ನು ದೂಷಣೆಮಾಡುತ್ತಾರೆ. ಆ ಪ್ರಾಣಿಗಳು ನಾಶವಾಗುವಂತೆಯೇ ಇವರೂ ನಾಶವಾಗುತ್ತಾರೆ.


ಪ್ರತಿಯೊಬ್ಬ ಮಾನವನು ಸಾಯುವುದು ಒಂದೇ ಸಾರಿ. ಅನಂತರ ಅವನು ನ್ಯಾಯತೀರ್ಪಿಗೆ ಗುರಿಯಾಗಬೇಕು.


ಈ ಮೂಲಕ ತಮ್ಮ ಕರುಣೆಯನ್ನು ಹೊಂದಲು ಅವರು ಮೊದಲೇ ತಯಾರಿಸಿದ್ದ ಕುಡಿಕೆಯನ್ನು ಹೋಲುವವರಿಗೆ ದೇವರು ತಮ್ಮ ಮಹಿಮಾತಿಶಯವನ್ನು ತೋರ್ಪಡಿಸಲು ಇಚ್ಛಿಸಿದರು.


ಪವಿತ್ರಗ್ರಂಥದಲ್ಲಿ ಬರೆದಿರುವಂತೆ : ನರಮಾನವರೆಲ್ಲರೂ ಗರಿಹುಲ್ಲಿನಂತೆ ಅವರ ವೈಭವವೆಲ್ಲವೂ ಹುಲ್ಲಿನ ಹೂವಿನಂತೆ. ಹುಲ್ಲೊಣಗಿ ಹೂ ಬಾಡಿಬೀಳುವುದು ಪ್ರಭುವಿನ ವಾಕ್ಯವಾದರೋ ಶಾಶ್ವತವಾಗಿ ನಿಲ್ಲುವುದು.


ಎಂದಿಗೂ ಇಲ್ಲ. ಮಾನವರೆಲ್ಲರು ಸುಳ್ಳುಗಾರರಾದರೂ ದೇವರು ಮಾತ್ರ ಸತ್ಯವಂತರೇ ಸರಿ. ಪವಿತ್ರಗ್ರಂಥದಲ್ಲಿ ಹೀಗೆಂದು ಬರೆದಿದೆ: “ನಿನ್ನ ಮಾತಿನಲ್ಲೇ ನೀನು ನೀತಿವಂತನೆಂದು ವ್ಯಕ್ತವಾಗಬೇಕು, ವ್ಯಾಜ್ಯವೆದ್ದಾಗ ನೀನು ವಿಜಯಶಾಲಿ ಆಗಬೇಕು.”


ಹೌದು ದೇವಾ, ನಿನಗೆ ದ್ರೋಹವೆಸಗಿದೆ I ನಿನ್ನ ಕಣ್ಗೆ ಕೆಟ್ಟದುದನೆ ಮಾಡಿದೆ II ನಿನ್ನ ನಿರ್ಣಯವು ನ್ಯಾಯಯುತ I ನೀ ನೀಡುವ ತೀರ್ಪು ನಿರ್ಲಿಪ್ತ II


ದೂಡುವನು ಅವರನು ಕುರಿಹಿಂಡಿನಂತೆ ಪಾತಾಳಕೆ I ಮರಣವೇ ಕುರಿಗಾಹಿ ಆ ನಿಧನ ನಿವಾಸಿಗಳಿಗೆ I ವಿನಾಶಗೊಳ್ವುದು ಆ ತಳದಲ್ಲಿ ಅವರ ರೂಪರೇಖೆ I ಆಳುವರು ಸಜ್ಜನರು ಅವರೆಲ್ಲರನು ಉದಯಕಾಲಕೆ II


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


ಇಂತಿರಲು, ಮತ್ತಷ್ಟೂ ಮಲಿನನಲ್ಲವೆ ನರಮಾನವನು? ಅಸಹ್ಯನು, ಅಕ್ರಮಿಯು, ಕೇಡನ್ನು ನೀರಿನಂತೆ ಕುಡಿಯುವವನು?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು