Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 4:1 - ಕನ್ನಡ ಸತ್ಯವೇದವು C.L. Bible (BSI)

1 ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆ ಮೇಲೆ ಪುನಃ ದೃಷ್ಟಿಸಿ ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನೋಡಿದೆನು. ಆಹಾ! ಹಿಂಸೆಗೊಂಡವರ ಕಣ್ಣೀರನ್ನು ನೋಡು. ಅವರನ್ನು ಸಂತೈಸುವವರು ಯಾರೂ ಇಲ್ಲ. ಅವರನ್ನು ಹಿಂಸಿಸುವವರಿಗೆ ಬಹಳ ಬಲ ಇದೆ. ಹಿಂಸೆಗೊಂಡವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಮೇಲೆ ತಿರಿಗಿ ದೃಷ್ಟಿಸಿ ಲೋಕದಲ್ಲಿನ ಹಿಂಸೆಗಳನ್ನೆಲ್ಲಾ ನೋಡಿದೆನು; ಆಹಾ, ಹಿಂಸೆಗೊಂಡವರ ಕಣ್ಣೀರು ಏನೆಂದು ಹೇಳಲಿ! ಸಂತಯಿಸುವವರು ಯಾರೂ ಇರಲಿಲ್ಲ; ಹಿಂಸಕರಿಗೆ ಬಹು ಬಲ; ಸಂತಯಿಸುವವರೋ ಒಬ್ಬರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಾನು ದೃಷ್ಟಿಸಿ ನೋಡಿದಾಗ, ಅನೇಕ ಜನರು ಹಿಂಸೆಗೆ ಒಳಗಾಗಿರುವುದನ್ನು ಕಂಡೆನು. ಅವರ ಕಣ್ಣೀರನ್ನೂ ನೋಡಿದೆನು. ದುಃಖದಲ್ಲಿದ್ದ ಅವರನ್ನು ಸಂತೈಸಲು ಒಬ್ಬರೂ ಇರಲಿಲ್ಲ. ಹಿಂಸಕರು ಎಲ್ಲಾ ಅಧಿಕಾರವನ್ನು ಹೊಂದಿದ್ದರು; ಅವರಿಂದ ಹಿಂಸೆಗೆ ಒಳಗಾದವರನ್ನು ಸಂತೈಸಲು ಯಾರೂ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಪುನಃ ನಾನು ಸೂರ್ಯನ ಕೆಳಗೆ ನಡೆಯುತ್ತಿರುವ ದಬ್ಬಾಳಿಕೆಯನ್ನೆಲ್ಲಾ ನೋಡಿದೆನು: ಹಿಂಸೆಗೊಂಡವರ ಕಣ್ಣೀರನ್ನೂ, ಅವರನ್ನು ಸಂತೈಸುವವರು ಯಾರೂ ಇಲ್ಲದಿರುವುದನ್ನೂ ನೋಡಿದೆನು. ಅಧಿಕಾರವು ಅವರ ದಬ್ಬಾಳಿಕೆಗಾರರ ಬಳಿಯಲ್ಲಿತ್ತು. ಆದರೆ ಅವರನ್ನು ಸಂತೈಸುವವರು ಒಬ್ಬರೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 4:1
51 ತಿಳಿವುಗಳ ಹೋಲಿಕೆ  

ಇದಲ್ಲದೆ, ನಾನು ಲೋಕವನ್ನು ದೃಷ್ಟಿಸಿನೋಡಿ ನ್ಯಾಯಸ್ಥಾನದಲ್ಲೂ ಧರ್ಮಸ್ಥಾನದಲ್ಲೂ ಅಧರ್ಮ ಇರುವುದನ್ನು ಗಮನಿಸಿದೆ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಇಸ್ರಯೇಲ್ ಮನೆತನವೇ ಸೇನಾಧೀಶ್ವರ ಸರ್ವೇಶ್ವರ ನೆಟ್ಟ ಆ ದ್ರಾಕ್ಷಿಯ ತೋಟ. ಜುದೇಯದ ಜನರೇ ಆತ ನಾಟಿಮಾಡಿದಾ ಸುಂದರ ಸಸಿತೋಟ. ನ್ಯಾಯನೀತಿಯನು ನಿರೀಕ್ಷಿಸಿದನಾತ ಆದರೆ ಸಿಕ್ಕಿತವನಿಗೆ ರಕ್ತಪಾತ ! ಸತ್ಸಂಬಂಧವನು ಎದುರುನೋಡಿದನಾತ ಇಗೋ, ದಕ್ಕಿತವನಿಗೆ ದುಃಖಿತರ ಆರ್ತನಾದ !


ನಿಮ್ಮ ಹೊಲಗಳಲ್ಲಿ ದುಡಿದ ಆಳುಗಳ ಕೂಲಿಯನ್ನು ಮೋಸದಿಂದ ಹಿಡಿದಿಟ್ಟುಕೊಂಡಿದ್ದೀರಿ. ನೀವು ಕೊಡದ ಕೂಲಿಯೇ ನಿಮಗೆ ವಿರುದ್ಧವಾಗಿ ಕೂಗಿಕೊಳ್ಳುತ್ತಿದೆ. ಕೂಲಿಯಾಳುಗಳ ಗೋಳಾಟ ಸ್ವರ್ಗಸೇನಾಧೀಶ್ವರನಾದ ಪ್ರಭುವಿನ ಕಿವಿಗೂ ಬಿದ್ದಿದೆ.


ಆದರೆ ಪವಿತ್ರಗ್ರಂಥದ ಪ್ರವಾದನೆಗಳು ಈಡೇರಲೆಂದೇ ಇದೆಲ್ಲಾ ಜರುಗಿದೆ,” ಎಂದರು. ಆಗ ಶಿಷ್ಯರೆಲ್ಲರೂ ಯೇಸುವನ್ನು ತೊರೆದು ಪಲಾಯನಮಾಡಿದರು.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ಆಕೆಯ ನೆರಿಗೆಯೂ ಹೊಲಸಾಗಿ ಮುಂದಿನ ಗತಿ ತೋಚದಂತಾಗಿ ಸಂತೈಸುವವರೇ ಇಲ್ಲದವಳಾಗಿ ಬಿದ್ದಿರುವಳಲ್ಲಾ ಈ ಭೀಕರ ಸ್ಥಿತಿಯಲ್ಲಿ ! “ಹೇ ಸರ್ವೇಶ್ವರಾ, ನೋಡು ನನ್ನ ಸಂಕಟವನು ಹೆಚ್ಚಳಪಡುತ್ತಿರುವನಲ್ಲಾ ಶತ್ರುವಾದವನು” ಎಂದು ಮೊರೆಯಿಡುತ್ತಾಳೆ ಕೂಗಿ.


ಇರುಳೆಲ್ಲ ಅತ್ತಳು ಬಿಕ್ಕಿಬಿಕ್ಕಿ ಕೆನ್ನೆ ಮೇಲೆ ನೋಡಿ, ಕಣ್ಣೀರ ಕೋಡಿ ! ಆಕೆಯ ಹಲವಾರು ಪ್ರಿಯರಲ್ಲಿ ಸಂತೈಸುವವರೇ ಇಲ್ಲ ಮಿತ್ರರಾಗಿದ್ದವರೇ ದ್ರೋಹವೆಸಗಿ ಶತ್ರುಗಳಾಗಿರುವರಲ್ಲಾ !


ಕೊಡುವೆ ಆ ಕೋಪದ ಕೊಡವನು ನಿನ್ನನು ಶೋಷಿಸಿದವರಿಗೆ ‘ನಾವು ತುಳಿದು ಹಾದುಹೋಗುವಂತೆ ನೆಲಕಚ್ಚಿ ಬೀಳು ಕೆಳಗೆ’ ಎಂದು ನಿಮ್ಮ ಬೆನ್ನನೆ ನೆಲವಾಗಿಸಿ, ಬೀದಿಕಸವನ್ನಾಗಿಸಿದವರಿಗೆ.”


ಶರಣ ದೇವನಿಗೆ “ದೇವಾ, ನನ್ನನೇಕೆ ಮರೆತೆ? I ನಾನಲೆಯಬೇಕೆ ಶತ್ರುಬಾಧೆಪೀಡಿತನಾಗಿ ಭಿಕಾರಿಯಂತೆ?” II


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಬಡವರ ಬವಣೆ ತಿಳಿಯಿತೆನಗೆ; ದಲಿತರ ನರಳಾಟ ಕೇಳಿಸಿತೆನಗೆ I ಎದ್ದು ಬರುವೆ, ಹಗೆಗಳಿಂದವರನು ಉದ್ಧರಿಸುವೆ” ಇದು ಪ್ರಭುವಿನ ಹೇಳಿಕೆ II


ಅಪಾರ ಹಿಂಸೆಗಳಿಗೆ ಒಳಪಟ್ಟವರು ಮೊರೆಯಿಡುತ್ತಾರೆ. ಬಲಿಷ್ಠರ ಭುಜಬಲದಿಂದ ಪೀಡಿತರು ಕಿರಿಚಿಕೊಳ್ಳುತ್ತಾರೆ.


ನಿಮ್ಮ ಕಾಲುಗಳು ಓಡುವುದು ಕೇಡಿಗಾಗಿ, ನೀವು ತವಕಪಡುವುದು ನಿರಪರಾಧಿಯ ರಕ್ತಪಾತಕ್ಕಾಗಿ. ನಿಮ್ಮ ಈ ಆಲೋಚನೆಗಳು ದುಷ್ಟವಾದುವು, ನೀವು ಹಿಡಿದ ಹಾದಿಗಳು ತರುವುದು ನಾಶವಿನಾಶವನ್ನೇ.


ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


ನೀವು ಇನ್ನೊಂದು ಕೆಲಸವನ್ನು ಮಾಡುತ್ತೀರಿ: ‘ಸರ್ವೇಶ್ವರ ನಮ್ಮ ಕಾಣಿಕೆಗಳನ್ನು ಲಕ್ಷಿಸುವುದಿಲ್ಲ. ನಮ್ಮ ಕೈಯಿಂದ ಅವುಗಳನ್ನು ಪ್ರಸನ್ನತೆಯಿಂದ ಸ್ವೀಕರಿಸುವುದಿಲ್ಲ’ ಎಂದುಕೊಂಡು ನರಳುತ್ತಾ ಗೋಳಾಡುತ್ತಾ ಕಣ್ಣೀರಿನಿಂದ ಬಲಿಪೀಠವನ್ನೇ ಮುಳುಗಿಸಿಬಿಡುತ್ತೀರಿ.


ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ಅಕ್ಕಪಕ್ಕದಲಿ ಸಹಾಯಕರಾರೂ ಇಲ್ಲ I ಆಶ್ರಯರಹಿತ, ಹಿತಚಿಂತಕರಾರೂ ನನಗಿಲ್ಲ II


ರೋದನವನೆ ಅವರಿಗೆ ಅನ್ನವಾಗಿಸಿದೆ I ಹರಿಯುವ ಕಂಬನಿಯನೆ ಪಾನವಾಗಿಸಿದೆ II


ನಿಂದೆಯಿಂದ ಮನನೊಂದು ಹತಾಶನಾಗಿರುವೆನಯ್ಯಾ I ಹಾತೊರೆದರೂ ದಯೆತೋರುವನಾರೂ ಸಿಗಲಿಲ್ಲ I ಅರಸಿದರೂ ಸಾಂತ್ವನನೀಡುವವನು ದೊರಕಲಿಲ್ಲ II


ನನ್ನ ಸ್ಥಿತಿಯಲ್ಲಿ ನೀವಿದ್ದಿದ್ದರೆ ನಾನೂ ಮಾತಾಡಬಹುದಿತ್ತು ನಿಮ್ಮಂತೆ. ನಿಮಗೆ ವಿರುದ್ಧ ನಾನೂ ಮಾತೂ ಬೆಳೆಸಬಹುದಿತ್ತು ನಿಮ್ಮ ವಿಷಯದಲ್ಲಿ ನಾನೂ ತಲೆಯಾಡಿಸಬಹುದಿತ್ತು.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ಒಂಬೈನೂರು ಕಬ್ಬಿಣದ ರಥಗಳನ್ನು ಪಡೆದಿದ್ದ ಇವನು ಇಸ್ರಯೇಲರನ್ನು ಇಪ್ಪತ್ತು ವರ್ಷಕಾಲ ದಬ್ಬಾಳಿಕೆಗೆ ಈಡುಪಡಿಸಿದನು. ಆಗ ಅವರು ಸರ್ವೇಶ್ವರನಿಗೆ ಮೊರೆಯಿಟ್ಟರು.


ಆದುದರಿಂದ ಸರ್ವೇಶ್ವರ ನಿಮ್ಮ ಮೇಲೆ ಶತ್ರುಗಳನ್ನು ಬರಮಾಡುವರು; ಆಗ ನೀವು ಹಸಿವು ಬಾಯಾರಿಕೆಗಳಿಗೆ ಗುರಿಯಾಗಿ ಬಟ್ಟೆಬರೆ ಏನೂ ಇಲ್ಲದೆ, ಆ ಶತ್ರುಗಳಿಗೇ ಸೇವಕರಾಗಬೇಕಾಗುವುದು. ಕಬ್ಬಿಣದ ನೊಗವನ್ನು ಹೇರಿಸಿ ಸರ್ವೇಶ್ವರ ನಿಮ್ಮನ್ನು ನಾಶಮಾಡುವರು;


ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ನಾಡಿನ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು. ನೀವಾದರೋ ನಿರಂತರ ಹಿಂಸೆಗೂ ಬಲಾತ್ಕಾರಕ್ಕೂ ಗುರಿಯಾಗುವಿರಿ.


ಕಟ್ಟಕಡೆಗೆ ಫರೋಹನು ತನ್ನ ಜನರಿಗೆಲ್ಲಾ, "ಹಿಬ್ರಿಯರ ಗಂಡು ಕೂಸುಗಳನ್ನೆಲ್ಲಾ ನೈಲ್ ನದಿಯಲ್ಲಿ ಹಾಕಬೇಕು; ಹೆಣ್ಣು ಕೂಸುಗಳನ್ನೆಲ್ಲಾ ಉಳಿಸಬೇಕು,” ಎಂದು ಆಜ್ಞೆಮಾಡಿದನು.


“ನೀವು ಹಿಬ್ರಿಯ ಮಹಿಳೆಯರಿಗೆ ಹೆರಿಗೆ ಮಾಡಿಸುವಾಗ ಅವರು ಹೆರುವ ಮಗು ಗಂಡಾಗಿದ್ದರೆ ಕೊಲ್ಲಬೇಕು, ಹೆಣ್ಣಾಗಿದ್ದರೆ ಉಳಿಸಬೇಕು,” ಎಂದು ಹೇಳಿದ್ದನು.


ಬಡವನನ್ನು ಬಂಧುಗಳೆಲ್ಲರು ಹಗೆಮಾಡುವರು; ಮಿತ್ರರೋ ಖರೆಯಾಗಿ ಅವನಿಗೆ ದೂರವಾಗುವರು; ಹಿಂಬಾಲಿಸಿ ಬರುವವರು ಅವನ ಬಾಯಿಮಾತನ್ನು ನಂಬರು.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ಸತ್ತವನಿಗಾಗಿ ದುಃಖಪಡುವವರನ್ನು ಸಂತೈಸುವುದಕ್ಕೋಸ್ಕರ ಯಾರೂ ಕಜ್ಜಾಯವನ್ನು ಹಂಚುವುದಿಲ್ಲ. ತಂದೆಯನ್ನಾಗಲಿ, ತಾಯಿಯನ್ನಾಗಲಿ ಕಳೆದುಕೊಂಡವರಿಗು ಕೂಡ ಯಾರೂ ಸಾಂತ್ವನದ ಪಾನಪಾತ್ರೆಯನ್ನು ನೀಡುವುದಿಲ್ಲ.


“ಗೋಳಾಡುತ್ತಿರುವೆನು ಈ ವಿಪತ್ತುಗಳಿಂದ; ಸಂತೈಸಿ ಸುಧಾರಿಸುವವನು ಬಲುದೂರವಿರುವುದರಿಂದ ಹರಿಯುತ್ತಿದೆ ಕಂಬನಿ ಧಾರೆಧಾರೆಯಾಗಿ ಕಣ್ಗಳಿಂದ; ವೈರಿಗಳು ಗೆದ್ದು, ನನ್ನ ಕುವರರು ಬಿದ್ದುಹೋಗಿರುವುದರಿಂದ.


ದೇಶವು ದುರುಳರ ಕೈವಶವಾಗಿದ್ದರೂ ನ್ಯಾಯಾಧೀಶರ ಮುಖಕ್ಕೆ ಮುಸುಕುಹಾಕುತ್ತಾನೆ. ಇದನ್ನು ಮಾಡುವವರು ದೇವರಲ್ಲದೆ ಮತ್ತೆ ಯಾರು?


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಸಜ್ಜನರ ಅಧಿಕಾರದಿಂದ ಜನರಿಗೆ ನಲಿದಾಟ; ದುರ್ಜನರ ಆಳ್ವಿಕೆಯಿಂದ ಜನರಿಗೆ ನರಳಾಟ.


ಸಿಯೋನ್ ನಗರಿ ಕೈಚಾಚಿ ಕೂಗಿಕೊಂಡರೂ ಸಂತೈಸುವವರಾರೂ ಇಲ್ಲ. ನೆರೆಹೊರೆಯವರೇ ಆಕೆಯ ವಿರೋಧಿಗಳಾಗಲೆಂದು ಸರ್ವೇಶ್ವರ ತೀರ್ಮಾನಿಸಿದ್ದಾನಲ್ಲಾ ! ಅವರ ನಡುವೆ ಹೊಲೆಯಾದ ಹೆಣ್ಣಿನಂತೆ ಜೆರುಸಲೇಮ್ ಬಿದ್ದಿದ್ದಾಳಲ್ಲಾ !


ಅಷ್ಡೋದಿನ ಅರಮನೆಗಳಲ್ಲೂ ಈಜಿಪ್ಟಿನ ಸೌಧಗಳಲ್ಲೂ ಹೀಗೆಂದು ಪ್ರಕಟಿಸಿರಿ; “ಸಮಾರ್ಯದ ಬೆಟ್ಟಗುಡ್ಡಗಳಿಗೆ ಕೂಡಿಬನ್ನಿ. ಪಟ್ಟಣದಲ್ಲಿ ಎಷ್ಟೊಂದು ಗಲಭೆಗೊಂದಲ, ಎಷ್ಟೊಂದು ಹಿಂಸಾಚಾರ ನಡೆಯುತ್ತಿದೆ, ನೋಡಿ.


“ಹಿಂಸಾಚಾರದಿಂದ ಹಾಗು ಸುಲಿಗೆಯಿಂದ ಗಳಿಸಿದ್ದನ್ನು ಜನರು ತಮ್ಮ ಮಳಿಗೆಗಳಲ್ಲಿ ತುಂಬಿಸಿಕೊಂಡಿದ್ದಾರೆ. ಅಂಥ ಜನರಿಗೆ ನ್ಯಾಯನೀತಿ ತಿಳಿಯದು,” ಎಂದು ಸರ್ವೇಶ್ವರ ಹೇಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು