Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:18 - ಕನ್ನಡ ಸತ್ಯವೇದವು C.L. Bible (BSI)

18 ಇಗೋ, ನನಗೆ ಕಂಡುಬಂದ ಇನ್ನೊಂದು ವಿಷಯ: ದೇವರು ಮನುಷ್ಯನಿಗೆ ದಯಪಾಲಿಸಿರುವ ಅಲ್ಪಕಾಲಾವಧಿಯಲ್ಲಿ ಅವನು ತಿಂದು ಕುಡಿಯಬೇಕು. ಲೋಕದಲ್ಲಿ ಪಡಬೇಕಾದ ದುಡಿಮೆಯಲ್ಲೂ ಸುಖವನ್ನು ಅನುಭವಿಸಬೇಕು. ಇದು ಅವನಿಗೆ ಉಚಿತವಾದುದು. ಉತ್ತಮವಾದುದು. ಇದೇ ಅವನಿಗೆ ಬಂದಿರುವ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಇಗೋ, ನಾನು ಕಂಡದ್ದು ಇದೇ. ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನು ಅನುಭವಿಸುವನು. ಇದು ಅವನಿಗೆ ಉಚಿತವಾದದ್ದೂ, ಉತ್ತಮವಾದದ್ದೂ ಆಗಿದೆ. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಇಗೋ ನಾನು ಕಂಡದ್ದು ಇದೇ; ದೇವರು ಒಬ್ಬನಿಗೆ ದಯಪಾಲಿಸಿರುವ ಜೀವಮಾನದ ದಿನಗಳಲ್ಲೆಲ್ಲಾ ಅವನು ಅನ್ನಪಾನಗಳನ್ನು ತೆಗೆದುಕೊಂಡು ತಾನು ಲೋಕದೊಳಗೆ ಪಡುವ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವದು ಮೇಲಾಗಿಯೂ ಉಚಿತವಾಗಿಯೂ ಇದೆ; ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನಾನು ಕಂಡುಕೊಂಡದ್ದೇನೆಂದರೆ, ಒಬ್ಬನು ತನ್ನ ಅಲ್ಪಕಾಲದ ಜೀವಮಾನದಲ್ಲಿ ಅನ್ನಪಾನಗಳನ್ನು ತೆಗೆದುಕೊಂಡು ತನ್ನ ಪ್ರಯಾಸದಲ್ಲಿಯೂ ಸುಖವನ್ನನುಭವಿಸುವುದೇ ಅವನಿಗೆ ಮೇಲು. ಇದೇ ಅವನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ಮನುಷ್ಯನಿಗೆ ಕೊಟ್ಟದ್ದನ್ನು ಸೂರ್ಯನ ಕೆಳಗೆ ಅವನು ಕೈಗೊಂಡ ಪ್ರಯಾಸದ ಸುಖವನ್ನು ಅನುಭವಿಸಿ, ತಿಂದು, ಕುಡಿಯುವುದು ತೃಪ್ತಿಕರವಾದದ್ದೂ ಆಗಿದೆ, ಎಂದು ಒಂದು ಒಳ್ಳೆಯದನ್ನು ಕಂಡುಕೊಂಡೆನು. ಏಕೆಂದರೆ ಇದು ಮನುಷ್ಯನ ಪಾಲು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:18
16 ತಿಳಿವುಗಳ ಹೋಲಿಕೆ  

ತಿಂದು, ಕುಡಿದು, ತನ್ನ ದುಡಿಮೆಯಲ್ಲೇ ಸುಖವನ್ನು ಅನುಭವಿಸುವುದಕ್ಕಿಂತ ಮೇಲಾದುದು ಮನುಷ್ಯನಿಗೆ ಯಾವುದು ಇಲ್ಲ. ಇದು ದೇವರಿಂದ ಆದುದು ಎಂದು ಮನಗಂಡೆ.


ಈ ಪ್ರಕಾರ ನಾನು ಆಲೋಚಿಸಿ ಮನುಷ್ಯನು ತನ್ನ ಕೆಲಸಕಾರ್ಯಗಳಲ್ಲಿ ಉಲ್ಲಾಸಗೊಳ್ಳುವುದಕ್ಕಿಂತ ಅವನಿಗೆ ಮೇಲಾದುದು ಯಾವುದೂ ಇಲ್ಲ. ಇದೇ ಅವನ ಪಾಲಿಗೆ ಬಂದುದು ಎಂದು ಗ್ರಹಿಸಿಕೊಂಡೆ. ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?


ಈ ಲೋಕದ ಐಶ್ವರ್ಯವಂತರು ಅಹಂಕಾರಿಗಳಾಗಬಾರದೆಂದು ಎಚ್ಚರಿಸು. ಅವರು ಅಳಿದುಹೋಗುವ ಆಸ್ತಿಯ ಮೇಲೆ ಭರವಸೆ ಇಡದೆ, ನಮ್ಮ ಸಂತೋಷಕ್ಕಾಗಿ ಸಮಸ್ತವನ್ನೂ ಧಾರಾಳವಾಗಿ ದಯಪಾಲಿಸುವ ದೇವರಲ್ಲೇ ಭರವಸೆಯಿಡುವಂತೆ ಅವರಿಗೆ ಆಜ್ಞಾಪಿಸು.


ಹೋಗು, ನಿನ್ನ ಅನ್ನವನ್ನು ಸಂತೋಷದಿಂದ ತಿನ್ನು; ದ್ರಾಕ್ಷಾರಸವನ್ನು ಉಲ್ಲಾಸದಿಂದ ಕುಡಿ; ದೇವರು ನಿನ್ನ ನಡತೆಯನ್ನು ಈಗಾಗಲೇ ಮೆಚ್ಚಿಕೊಂಡಿದ್ದಾರೆ.


ಆದುದರಿಂದಲೇ ಸಂತೋಷವನ್ನು ಶ್ಲಾಘಿಸುತ್ತೇನೆ. ಮನುಷ್ಯನು ಅನ್ನಪಾನಗಳನ್ನು ಸೇವಿಸಿ ಸಂತೋಷಪಡುವುದಕ್ಕಿಂತ ಮೇಲಾದುದು ಅವನಿಗೆ ಈ ಲೋಕದಲ್ಲಿ ಇನ್ನಾವುದೂ ಇಲ್ಲ. ದೇವರು ಅವನಿಗೆ ಇಹದಲ್ಲಿ ಅನುಗ್ರಹಿಸುವ ಜೀವಾವಧಿಯಲ್ಲಿ ಅವನು ಪಡುವ ಪ್ರಯಾಸಕ್ಕೆ ಸುಖಾನುಭವ ಸೇರಿರುತ್ತದೆ.


ನನ್ನ ಕಣ್ಣು ಬಯಸಿದ್ದೆಲ್ಲವನ್ನೂ ಅದಕ್ಕೆ ಒಪ್ಪಿಸಿದೆ. ಹೃದಯ ಕೋರಿದ ಸಂತೋಷವನ್ನು ಅದಕ್ಕೆ ನಿರಾಕರಿಸಲಿಲ್ಲ. ನನ್ನ ಮನ ಎಲ್ಲಾ ಕಾರ್ಯಕಲಾಪಗಳಲ್ಲೂ ಉಲ್ಲಾಸಗೊಳ್ಳುತ್ತಿತ್ತು. ಇವೆಲ್ಲ ನನ್ನ ಪ್ರಯಾಸಕ್ಕೆ ದೊರೆತ ಫಲ.


ಅವನ ಜೀವಿತಕಾಲವೆಲ್ಲ, ಸಾಯುವ ತನಕ ಅವನಿಗೆ ಬೇಕಾಗಿದ್ದ ಎಲ್ಲ ಪದಾರ್ಥಗಳು ಬಾಬಿಲೋನಿನ ಅರಸನಿಂದಲೇ ಪ್ರತಿನಿತ್ಯವೂ ದೊರಕುತ್ತಿದ್ದವು.


ಇಂಥವರನ್ನು ಮತ್ತು ಅವರೊಡನೆ ದುಡಿದು ಸೇವೆಮಾಡುವವರನ್ನು ಮುಂದಾಳುಗಳೆಂದು ಸನ್ಮಾನಿಸಿರಿ.


ಅಲ್ಲಿಯೇ ಅವರ ಸನ್ನಿಧಿಯಲ್ಲಿ ಊಟಮಾಡಿ, ನಿಮ್ಮ ದೇವರಾದ ಸರ್ವೇಶ್ವರ ನಿಮ್ಮ ಪ್ರಯತ್ನಗಳನ್ನು ಕೈಗೂಡುವಂತೆ ಮಾಡಿದ್ದಕ್ಕಾಗಿ ನೀವೂ ನಿಮ್ಮ ಮನೆಗಳವರೂ ಸಂತೋಷದಿಂದಿರಬೇಕು.


ನಿಮ್ಮ ದೇವರಾದ ಸರ್ವೇಶ್ವರ ಆರಿಸಿಕೊಳ್ಳುವ ಸ್ಥಳದಲ್ಲಿ, ಅವರ ಸನ್ನಿಧಿಯಲ್ಲೇ ಅವುಗಳನ್ನು ಊಟಮಾಡಬೇಕು. ನಿಮ್ಮ ಎಲ್ಲ ಪ್ರಯತ್ನಗಳು ಕೈಗೂಡಿದ್ದಕ್ಕಾಗಿ ನೀವು ನಿಮ್ಮ ದೇವರಾದ ಸರ್ವೇಶ್ವರನ ಸನ್ನಿಧಿಯಲ್ಲಿ ಸಂತೋಷದಿಂದಿರಬೇಕು; ನೀವು, ನಿಮ್ಮ ಗಂಡುಹೆಣ್ಣು ಮಕ್ಕಳು, ಆಳುಗಳು ಹಾಗು ನಿಮ್ಮ ಊರಲ್ಲಿರುವ ಲೇವಿಯರು ಇಂಥವುಗಳನ್ನು ಊಟಮಾಡಬೇಕು.


ಸರ್ವೇಶ್ವರ ನಿಮಗೂ ನಿಮ್ಮ ಮನೆಯವರಿಗೂ ಉಂಟುಮಾಡಿದ ಎಲ್ಲ ಸುಖ ಸಂತೋಷಗಳಿಗಾಗಿ ನೀವೂ ಲೇವಿಯರೂ ನಿಮ್ಮ ಮಧ್ಯೆಯಿರುವ ಪರದೇಶಿಗಳೂ ಸಂಭ್ರಮದಿಂದಿರಬೇಕು.


ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ದೇಹಕ್ಕೆ ಮಧುಪಾನ ಮಾಡಿಸೋಣ; ಮೂರ್ಖತನದಲ್ಲಿ ತಲ್ಲೀನನಾಗೋಣ; ಜೀವಮಾನದ ಅಲ್ಪಕಾಲದಲ್ಲಿ ನರಮಾನವನಿಗೆ ಧರೆಯಲ್ಲಿ ಯಾವುದು ಹಿತ ಎಂದು ತಿಳಿದುಕೊಳ್ಳೋಣ” ಎಂದು ಜ್ಞಾನಾಶಕ್ತನಾದ ನಾನು ಮನಸ್ಸಿನಲ್ಲೇ ಅಂದುಕೊಂಡೆ.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು