Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:19 - ಕನ್ನಡ ಸತ್ಯವೇದವು C.L. Bible (BSI)

19 ದೇವರು ಯಾರಿಗಾದರು ಆಸ್ತಿಪಾಸ್ತಿಯನ್ನು ದಯಪಾಲಿಸಿ, ಅದನ್ನು ಅನುಭವಿಸುವ, ಪಾಲಿಗೆ ಬಂದದ್ದನ್ನು ಸವಿಯುವ, ಶ್ರಮದಲ್ಲೂ ಸಂತೋಷಪಡುವ ಶಕ್ತಿಯನ್ನು ಕೊಟ್ಟಿದ್ದರೆ ಅದು ಅವನ ಭಾಗ್ಯ; ಅದು ದೇವರ ಅನುಗ್ರಹವೇ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಪ್ರತಿಯೊಬ್ಬ ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅದನ್ನು ಅನುಭವಿಸಿ, ಪಾಲಿಗೆ ಬಂದದ್ದನ್ನು ಪಡೆದು ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಟ್ಟಿದ್ದರೆ ಅದು ಅವನಿಗೆ ದೊರೆತ ದೇವರ ಅನುಗ್ರಹವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮತ್ತೂ ಆತನು ಯಾವನಿಗೆ ಆಸ್ತಿಪಾಸ್ತಿಗಳನ್ನು ದಯಪಾಲಿಸುವದಲ್ಲದೆ ಅದನ್ನು ಅನುಭವಿಸಿ ಪಾಲಿಗೆ ಬಂದದ್ದನ್ನು ಹೊಂದಿ ತನ್ನ ಪ್ರಯಾಸದಲ್ಲಿ ಸಂತೋಷಪಡಲು ಶಕ್ತಿಕೊಡುವನೋ, ಅವನ ಸುಖವು ದೇವರ ಅನುಗ್ರಹ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರು ಒಬ್ಬನಿಗೆ ಐಶ್ವರ್ಯವನ್ನೂ ಆಸ್ತಿಯನ್ನೂ ಮತ್ತು ಅವುಗಳನ್ನು ಅನುಭವಿಸುವ ಭಾಗ್ಯವನ್ನೂ ಕೊಟ್ಟಿದ್ದರೆ ಅವನು ಅವುಗಳನ್ನು ಅನುಭವಿಸಲಿ. ಅವನು ತನಗಿರುವಂಥವುಗಳನ್ನು ಹೊಂದಿಕೊಂಡು ತನ್ನ ದುಡಿಮೆಯಲ್ಲಿ ಸಂತೋಷಿಸಲಿ. ಅದು ದೇವರ ಅನುಗ್ರಹವಷ್ಟೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯನಿಗೆ ದೇವರು ಆಸ್ತಿಪಾಸ್ತಿಗಳನ್ನು ದಯಪಾಲಿಸಿ, ಅವುಗಳನ್ನು ಅನುಭವಿಸುವುದಕ್ಕೆ ಸಾಮರ್ಥ್ಯ ಕೊಟ್ಟಿದ್ದರೆ, ಅವನು ತನ್ನ ಪಾಲನ್ನು ತೆಗೆದುಕೊಂಡು, ತನ್ನ ಪ್ರಯಾಸದಲ್ಲಿ ಆನಂದಿಸುವುದೂ ದೇವರ ದಾನದಿಂದಲೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:19
6 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಸರ್ವೇಶ್ವರಸ್ವಾಮಿಯೇ ನಿಮ್ಮ ಪಿತೃಗಳಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ಈಗ ನಿಮಗೆ ಮನಮುಟ್ಟುವ ರೀತಿಯಲ್ಲಿ ನೆರವೇರಿಸಿದ್ದಾರೆ. ನಿಮಗೆ ಇಷ್ಟು ಭಾಗ್ಯವನ್ನು ಸಂಪಾದಿಸುವ ಸಾಮರ್ಥ್ಯವನ್ನು ಕೊಟ್ಟಿದ್ದಾರೆ ಎಂಬುದನ್ನು ಜ್ಞಾಪಕಮಾಡಿಕೊಳ್ಳಿ.


ಅಲ್ಲದೆ, ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ನಾನಾತರದ ದುಡಿಮೆಗಳಲ್ಲೂ ಸುಖವನ್ನು ಅನುಭವಿಸುವುದು ದೇವರ ಅನುಗ್ರಹವೇ ಎಂದು ನನಗೆ ತಿಳಿದಿದೆ.


ಅದೇನು ಎಂದರೆ, ದೇವರು ಒಬ್ಬನಿಗೆ ಧನಸಂಪತ್ತನ್ನೂ ಘನತೆಗೌರವವನ್ನೂ ಅನುಗ್ರಹಿಸುತ್ತಾರೆ. ಅವನ ಇಷ್ಟಾರ್ಥಕ್ಕೆ ಯಾವ ಕೊರತೆಯೂ ಇಲ್ಲದಂತೆ ಮಾಡುತ್ತಾರೆ. ಆದರೆ ಅವನ್ನು ಅನುಭವಿಸುವುದಕ್ಕೆ‍ ಶಕ್ತಿಯನ್ನು ದೇವರು ಅವನಿಗೆ ಕೊಡುವುದಿಲ್ಲ. ಅವುಗಳನ್ನು ಮತ್ತೊಬ್ಬನು ಅನುಭವಿಸುತ್ತಾನೆ. ಇದೂ ಸಹ ನಿರರ್ಥಕ; ದೊಡ್ಡ ಪಿಡುಗು.


ಇದಲ್ಲದೆ, ನಾನು ನಿನಗೆ ಘನಧನೈಶ್ವರ್ಯಗಳನ್ನೂ ಅನುಗ್ರಹಿಸುತ್ತೇನೆ. ಇಂಥ ಘನಧನೈಶ್ವರ್ಯಗಳು ನಿನಗಿಂತ ಮೊದಲಿದ್ದ ಅರಸರಲ್ಲಿ ಯಾರಿಗೂ ಇರಲಿಲ್ಲ, ನಿನ್ನ ಅನಂತರದವರಿಗೂ ಇರುವುದಿಲ್ಲ,” ಎಂದರು.


ಇದಲ್ಲದೆ, ನೀನು ಕೇಳಿದಂಥದ್ದನ್ನೂ ನಿನಗೆ ಅನುಗ್ರಹಿಸಿದ್ದೇನೆ. ನಿನ್ನ ಜೀವಮಾನದಲ್ಲೆಲ್ಲಾ ಸಿರಿಸಂಪತ್ತಿನಲ್ಲಿಯೂ ಘನತೆ ಗೌರವದಲ್ಲಿಯೂ ನಿನಗೆ ಸಮಾನವಾದ ಅರಸನು ಇನ್ನೊಬ್ಬನಿರುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು