Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:4 - ಕನ್ನಡ ಸತ್ಯವೇದವು C.L. Bible (BSI)

4 ದೇವರಿಗೆ ನೀನು ಹರಕೆಯನ್ನು ಹೊತ್ತರೆ ತೀರಿಸಲು ತಡಮಾಡಬೇಡ. ದೇವರು ಮೂಢರಿಗೆ ಒಲಿಯುವುದಿಲ್ಲ. ನಿನ್ನ ಹರಕೆಯನ್ನು ತಪ್ಪದೆ ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನೀನು ದೇವರಿಗೆ ಹರಕೆಯನ್ನು ಮಾಡಿದರೆ ಅದನ್ನು ತೀರಿಸಲು ತಡಮಾಡಬೇಡ. ಮೂಢರಲ್ಲಿ ದೇವರಿಗೆ ಸಂತೋಷವಿಲ್ಲ. ನೀನು ಪ್ರಮಾಣಮಾಡಿದ್ದನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನೀನು ದೇವರಿಗೆ ಹರಕೆಯನ್ನು ಕಟ್ಟಿದರೆ ಅದನ್ನು ತೀರಿಸಲು ತಡಮಾಡಬೇಡ; ಆತನು ಮೂಢರಿಗೆ ಒಲಿಯನು; ನಿನ್ನ ಹರಕೆಯನ್ನು ಒಪ್ಪಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನೀವು ಹರಕೆ ಮಾಡಿಕೊಂಡರೆ ತಡಮಾಡದೆ ಅದನ್ನು ನೆರವೇರಿಸಿ. ಮೂಢರ ವಿಷಯದಲ್ಲಿ ದೇವರಿಗೆ ಸಂತೋಷವಿಲ್ಲ. ನೀವು ದೇವರಿಗೆ ಹರಕೆ ಮಾಡಿಕೊಂಡದ್ದನ್ನು ಸಲ್ಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ದೇವರಿಗೆ ನೀನು ಹರಕೆಯನ್ನು ಮಾಡಿದರೆ, ಅದನ್ನು ತೀರಿಸಲು ತಡಮಾಡಬೇಡ. ದೇವರು ಮೂಢರನ್ನು ಮೆಚ್ಚುವುದಿಲ್ಲ. ನೀನು ಹರಕೆ ಮಾಡಿದ್ದನ್ನು ತೀರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:4
20 ತಿಳಿವುಗಳ ಹೋಲಿಕೆ  

“ನಿಮ್ಮಲ್ಲಿ ಯಾರಾದರು ಸರ್ವೇಶ್ವರನಿಗೆ ಹರಕೆ ಮಾಡಿದರೆ, ಇಲ್ಲವೆ ತಾನು ವಸ್ತುವೊಂದನ್ನು ಮುಟ್ಟುವುದಿಲ್ಲವೆಂದು ಆಣೆಯಿಟ್ಟು ಹೇಳಿದರೆ ಅಂಥವನು ತನ್ನ ಮಾತನ್ನು ಮೀರದೆ ನುಡಿದಂತೆ ನೆರವೇರಿಸಬೇಕು.


“ಸುಳ್ಳಾಣೆಯಿಡಬೇಡ; ದೇವರಿಗೆ ಆಣೆಯಿಟ್ಟು ವಾಗ್ದಾನಮಾಡಿದಂತೆ ನಡೆದುಕೊಳ್ಳಲೇಬೇಕು’ ಎಂದು ಪೂರ್ವಿಕರಿಗೆ ಹೇಳಿದ್ದು ನಿಮಗೆ ತಿಳಿದೇ ಇದೆ.


ನಿಮ್ಮ ದೇವನಾದ ಸ್ವಾಮಿಗೆ ಸಲ್ಲಿಸಿರಿ ಹೊತ್ತ ಹರಕೆ I ಸುತ್ತಣರೆಲ್ಲರು ಸಮರ್ಪಿಸಲಿ ಭಯಂಕರನಿಗೆ ಕಾಣಿಕೆ II


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II


ಸರ್ವಾಂಗ ಹೋಮಗಳೂ ಪಾಪಪರಿಹಾರಕ ಬಲಿಗಳೂ ನಿಮಗೆ ತರಲಿಲ್ಲ ತೃಪ್ತಿಯನು.


“ನನ್ನ ಬಲಿಪೀಠದ ಮೇಲೆ ಯಾರೂ ಜ್ಯೋತಿಯನ್ನು ವ್ಯರ್ಥವಾಗಿ ಬೆಳಗಿಸದಂತೆ ಮಹಾದೇವಾಲಯದ ಬಾಗಿಲನ್ನು ಮುಚ್ಚಿಬಿಟ್ಟರೆ ಎಷ್ಟೋ ಒಳ್ಳೆಯದು. ನಾನು ನಿಮ್ಮನ್ನು ಮೆಚ್ಚಿಕೊಂಡಿಲ್ಲ. ನಿಮ್ಮ ಕೈಯಿಂದ ಕಾಣಿಕೆಗಳನ್ನು ನಾನು ಸ್ವೀಕರಿಸುವುದಿಲ್ಲ.” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ನಾನಾದರೋ ಹಾಡಿ ಹೊಗಳುವೆ ನಿನ್ನನು ನಿನಗರ್ಪಿಸುವೆ ಸಮರ್ಪಕ ಬಲಿಯನು ಬಿಡದೆ ಸಲ್ಲಿಸುವೆ ಹೊತ್ತ ಹರಕೆಯನು ಹೊಂದುವೆ ಸ್ವಾಮಿಯಿಂದಲೆ ರಕ್ಷಣೆಯನು.”


ನಡೆದುಕೊಳ್ಳುವೆನು ಶಪಥ ಮಾಡಿರುವಂತೆ I ನಿನ್ನ ನೀತಿವಿಧಿಗಳನು ಪಾಲಿಪೆನು ಅದರಂತೆ II


ಕಷ್ಟಕಾಲದಲ್ಲಿ ನನ್ನ ವಿಜ್ಞಾಪನೆಯನ್ನು ಆಲಿಸಿ, ನಾನು ಹೋದ ಕಡೆಯೆಲ್ಲ ನನ್ನೊಂದಿಗಿದ್ದ ದೇವರಿಗೆ ಅಲ್ಲೊಂದು ಬಲಿಪೀಠವನ್ನು ಕಟ್ಟಿಸುತ್ತೇನೆ,” ಎಂದು ಹೇಳಿದನು.


ದೇವರು ಯಕೋಬನಿಗೆ, “ನೀನು ಈ ಸ್ಥಳವನ್ನು ಬಿಟ್ಟು ಬೇತೇಲಿಗೆ ಹೋಗಿ ಅಲ್ಲೇ ವಾಸಮಾಡು. ನೀನು ನಿನ್ನ ಅಣ್ಣ ಏಸಾವನ ಬಳಿಯಿಂದ ಓಡಿಹೋಗುವಾಗ ನಿನಗಲ್ಲಿ ದರ್ಶನ ಇತ್ತ ದೇವರು ನಾನೇ. ನನಗೊಂದು ಬಲಿಪೀಠವನ್ನು ಅಲ್ಲಿ ಕಟ್ಟಿಸು,” ಎಂದು ಹೇಳಿದರು.


ಸರ್ವೇಶ್ವರ ಸ್ವಾಮಿಯೇ ಈಜಿಪ್ಟಿನವರಿಗೆ ತಿಳಿಯಪಡಿಸುವರು. ಜನರು ಸ್ವಾಮಿಯನ್ನು ಅರಿತುಕೊಂಡು, ಯಜ್ಞನೈವೇದ್ಯಗಳನ್ನು ಕಾಣಿಕೆಯಾಗಿ ಸಮರ್ಪಿಸುವರು, ಹೊತ್ತ ಹರಕೆಗಳನ್ನು ನೆರವೇರಿಸುವರು.


ಅದೂ ಅಲ್ಲದೆ ಅವನು ಹೀಗೆಂದು ಹರಕೆ ಮಾಡಿಕೊಂಡನು; “ದೇವರು ನನ್ನ ಸಂಗಡವಿದ್ದು ನಾನು ಕೈಗೊಂಡ ಪ್ರಯಾಣದಲ್ಲಿ ನನ್ನನ್ನು ಕಾಪಾಡಿ, ಹೊಟ್ಟೆಗೆ ಊಟವನ್ನೂ ಮೈಗೆ ಬಟ್ಟೆಯನ್ನೂ ಕೊಟ್ಟು,


ಆಕೆಯನ್ನು ಕಾಣುತ್ತಲೆ ಅವನು ದುಃಖತಾಳಲು ಆಗದೆ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ ನನ್ನ ಮಗಳೇ, ನೀನು ನನ್ನನ್ನು ಎಂಥಾ ಯಾತನೆಗೆ ಈಡುಮಾಡಿದೆ; ನನಗೆ ಮಹಾಸಂಕಟವನ್ನುಂಟುಮಾಡಿದೆ! ನಾನು ಬಾಯಾರೆ ಸರ್ವೇಶ್ವರನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಹಿಂದೆಗೆಯಲಾಗದು,” ಎಂದು ಕೂಗಿಕೊಂಡನು.


ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II


ದುಡುಕಿ ದೇವರಿಗೆ ಮುಡಿಪುಕಟ್ಟುವುದು, ಹರಕೆ ಹೊತ್ತ ಮೇಲೆ ವಿಚಾರಮಾಡುವುದು, ಉರುಳಿಗೆ ಸಿಕ್ಕಿಕೊಂಡಂತೆ ಆಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು