Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 5:6 - ಕನ್ನಡ ಸತ್ಯವೇದವು C.L. Bible (BSI)

6 ನಿನ್ನ ಬಾಯಿ ಪಾಪಕ್ಕೆ ಕಾರಣ ಆಗದಂತೆ ನೋಡಿಕೊ. ಅದು ಅಜಾಗ್ರತೆಯಿಂದ ಆಯಿತೆಂದು ದೇವದೂತನ ಮುಂದೆ ನೆಪ ಹೇಳಬೇಡ. ದೇವರು ನಿನ್ನ ಮಾತಿಗೆ ಕೋಪಗೊಂಡು ನಿನ್ನ ಕೆಲಸವನ್ನು ಹಾಳುಮಾಡಿಯಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ. “ಇದು ಅಜಾಗ್ರತೆಯಿಂದ ಆಯಿತು” ಎಂದು ದೂತನ ಮುಂದೆ ಹೇಳಬೇಡ. ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಕೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ಗುರಿಮಾಡದಂತೆ ನೋಡಿಕೋ; ಇದು ಅಜಾಗ್ರತೆಯಿಂದಾಯಿತೆಂದು ದೂತನ ಮುಂದೆ ಹೇಳಬೇಡ; ದೇವರು ನಿನ್ನ ಮಾತಿಗೆ ರೋಷಗೊಂಡು ನಿನ್ನ ಕೈಗೆಲಸವನ್ನು ಏಕೆ ಹಾಳುಮಾಡಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆದ್ದರಿಂದ ನಿಮ್ಮ ಮಾತುಗಳು ನಿಮ್ಮನ್ನು ಪಾಪಕ್ಕೆ ನಡೆಸದಂತೆ ನೋಡಿಕೊಳ್ಳಿ. “ನಾನು ಅಜಾಗ್ರತೆಯಿಂದ ಹೇಳಿದೆ” ಎಂದು ಯಾಜಕನಿಗೆ ತಿಳಿಸಬೇಡಿ. ಇಲ್ಲವಾದರೆ, ದೇವರು ನಿಮ್ಮ ಮಾತುಗಳಿಗೆ ಕೋಪಗೊಂಡು ನೀವು ದುಡಿದಿರುವುದನ್ನೆಲ್ಲಾ ನಾಶಮಾಡಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನಿನ್ನ ಬಾಯಿ ನಿನ್ನನ್ನು ಪಾಪಕ್ಕೆ ನಡೆಸದಂತೆ ನೋಡಿಕೋ. “ನಾನು ಹರಕೆ ಮಾಡಿದ್ದು ತಪ್ಪು,” ಎಂದು ದೂತನ ಮುಂದೆ ಹೇಳಬೇಡ. ಇದರಿಂದ ದೇವರು ನಿನ್ನ ಮಾತಿಗೆ ಮೆಚ್ಚದೆ, ನಿನ್ನನ್ನು ಏಕೆ ದಂಡಿಸಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 5:6
23 ತಿಳಿವುಗಳ ಹೋಲಿಕೆ  

ತಾನು ಸದ್ಭಕ್ತನೆಂದು ಭಾವಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣ ಹಾಕದಿದ್ದರೆ, ಅಂಥವನ ಭಕ್ತಿ ವ್ಯರ್ಥ. ಅವನು ತನ್ನನ್ನೇ ವಂಚಿಸಿಕೊಳ್ಳುತ್ತಾನಷ್ಟೆ.


ನಿಮ್ಮ ದುಡಿಮೆಯ ಫಲವನ್ನು ಕಳೆದುಕೊಳ್ಳದೆ ಅದನ್ನು ಪೂರ್ಣವಾಗಿ ಪಡೆಯುವಂತೆ ನೀವು ಎಚ್ಚರಿಕೆ ವಹಿಸಬೇಕು.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


ಯಾಜಕನ ತುಟಿಗಳು ದೈವಜ್ಞಾನದ ದ್ವಾರಗಳು. ಅವನ ಬಾಯಿಂದ ಜನರು ಧರ್ಮೋಪದೇಶವನ್ನು ಕೇಳಬೇಕು. ಅವನು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ದೂತನು.”


ಸಕಲ ಆಪತ್ತು ಕೇಡುಗಳಿಂದ ನನ್ನನ್ನು ಕಾಪಾಡಿಕೊಂಡು ಬಂದ ಆ ದೂತನು, ಈ ಹುಡುಗರನ್ನು ಆಶೀರ್ವದಿಸಲಿ! ಅವರ ಮುಖಾಂತರ ನನ್ನ ಹೆಸರೂ ನನ್ನ ಪಿತೃಗಳಾದ ಅಬ್ರಹಾಮ್ - ಇಸಾಕರ ಹೆಸರೂ ಊರ್ಜಿತಗೊಳ್ಳಲಿ; ಧರೆಯಲ್ಲಿ ಇವರು ದೊಡ್ಡ ಜನಸ್ತೋಮವಾಗಿ ಬೆಳೆಯಲಿ!”


ಹೀಗೆ ಯಾಜಕನು ಇಸ್ರಯೇಲರ ಸರ್ವಸಮೂಹದವರ ಪರವಾಗಿ ದೋಷಪರಿಹಾರವನ್ನು ಮಾಡಿದಾಗ ಅವರಿಗೆ ಕ್ಷಮಾಪಣೆ ದೊರಕುವುದು. ಅವರು ಆ ತಪ್ಪನ್ನು ತಿಳಿಯದೆ ಮಾಡಿದ್ದರಿಂದ ಮತ್ತು ಅವರು ಅದರ ಪರಿಹಾರಕ್ಕಾಗಿ ಸರ್ವೇಶ್ವರನ ಸನ್ನಿಧಿಯಲ್ಲಿ ದಹನಬಲಿಯನ್ನೂ ದೋಷಪರಿಹಾರಕಬಲಿಯನ್ನೂ ಅರ್ಪಿಸಿದ್ದರಿಂದ ಕ್ಷಮೆ ಲಭಿಸುವುದು.


ದೂತರೆಲ್ಲರೂ ಕೇವಲ ಸೇವೆಮಾಡುವ ಆತ್ಮಗಳಲ್ಲವೇ? ಜೀವೋದ್ಧಾರವನ್ನು ಬಾಧ್ಯವಾಗಿ ಹೊಂದಬೇಕಾದವರ ಊಳಿಗಕ್ಕಾಗಿ ಕಳುಹಿಸಲಾದವರಲ್ಲವೇ?


ದೇವರ ಸನ್ನಿಧಿಯಲ್ಲಿಯೂ ಕ್ರಿಸ್ತಯೇಸುವಿನ ಪ್ರಸನ್ನತೆಯಲ್ಲಿಯೂ ಹಾಗೂ ಆಯ್ಕೆಯಾದ ದೇವದೂತರ ಮುಂದೆಯೂ ನಾನು ನಿನಗೆ ಆಜ್ಞಾಪಿಸುವುದಿದು: ಪೂರ್ವಾಗ್ರಹದಿಂದಾಗಲಿ, ಪಕ್ಷಪಾತದಿಂದಾಗಲಿ ಏನೂ ಮಾಡಬೇಡ.


ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.


ಸೇನಾಧೀಶ್ವರ ಸರ್ವೇಶ್ವರ ಹೇಳುವುದನ್ನು ಕೇಳಿ: “ನಾನು ನನ್ನ ದೂತನನ್ನು ಮುಂದಾಗಿ ಕಳುಹಿಸುತ್ತೇನೆ. ನಾನು ಬರಲು ಮಾರ್ಗವನ್ನು ಆತನು ಸಿದ್ಧಗೊಳಿಸುವನು. ನೀವು ಎದುರು ನೋಡುತ್ತಿರುವ ಸರ್ವೇಶ್ವರ ಇದ್ದಕ್ಕಿದ್ದಂತೆ ತಮ್ಮ ಆಲಯಕ್ಕೆ ಬರುವರು. ಇಗೋ, ನಿಮಗೆ ಪ್ರಿಯನಾದ ದೂತನು ಬರುವನು. ನನ್ನ ಒಡಂಬಡಿಕೆಯನ್ನು ನಿಮಗೆ ಪ್ರಕಟಿಸುವನು.”


“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಪಾಪಿಗಳನ್ನು ನೋಡಿ ಅಸೂಯೆಪಡಬೇಡ; ಸರ್ವೇಶ್ವರನಲ್ಲಿರಲಿ ನಿರಂತರ ಭಯಭಕ್ತಿ.


ದೇವರ ಕಾರ್ಯವೆಲ್ಲವು ಶಾಶ್ವತವಾದುದು ಎಂದು ಬಲ್ಲೆ. ಅದಕ್ಕೆ ಯಾವುದನ್ನೂ ಸೇರಿಸಲಾಗದು. ಅದರಿಂದ ಯಾವುದನ್ನೂ ಕಳೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮಾನವರು ಭಯಭಕ್ತಿಯಿಂದ ಇರಬೇಕೆಂಬ ಕಾರಣದಿಂದಲೇ ದೇವರು ಹೀಗೆ ಮಾಡಿದ್ದಾರೆ.


ಜ್ಞಾನಿಯ ಮಾತು ಹಿತಕರ; ಅಜ್ಞಾನಿಯ ಮಾತು ಅವನಿಗೆ ವಿನಾಶಕರ. ಅದು ಬುದ್ಧಿಹೀನತೆಯಿಂದ ಆರಂಭವಾಗುತ್ತದೆ. ಮೋಸ, ಮರುಳುತನದಲ್ಲಿ ಮುಕ್ತಾಯಗೊಳ್ಳುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು