Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:16 - ಕನ್ನಡ ಸತ್ಯವೇದವು C.L. Bible (BSI)

16 ಧರ್ಮಿಷ್ಠನಾಗಿ ಬಾಳುವುದರಲ್ಲಿ ಆಗಲಿ, ಜ್ಞಾನಾರ್ಜನೆಯಲ್ಲಾಗಲಿ ಮಿತಿಮೀರಿ ವರ್ತಿಸಬೇಡ; ನಿನ್ನನ್ನು ನೀನೇ ವಿನಾಶಕ್ಕೆ ಗುರಿಮಾಡಿಕೊಳ್ಳಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನೀನು ಅತಿಯಾಗಿ ನೀತಿವಂತನಾಗಿರಬೇಡ, ನಿನ್ನ ದೃಷ್ಟಿಯಲ್ಲಿ ನೀನು ಜ್ಞಾನಿಯಾಗಿರಬೇಡ. ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಧರ್ಮವನ್ನು ಅತಿಯಾಗಿ ಆಚರಿಸದಿರು; ಜ್ಞಾನವನ್ನು ಅಧಿಕವಾಗಿ ಆರ್ಜಿಸಬೇಡ; ನಿನ್ನನ್ನು ನೀನೇ ನಾಶನಕ್ಕೆ ಏಕೆ ಗುರಿಮಾಡಿಕೊಳ್ಳುವಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16-17 ಆದ್ದರಿಂದ ನೀನು ನಿನ್ನನ್ನೇ ಯಾಕೆ ನಾಶಮಾಡಿಕೊಳ್ಳುವೆ? ಬಹಳ ನೀತಿವಂತನಾಗಿಯೂ ಇರಬೇಡ; ಬಹಳ ಕೆಟ್ಟವನಾಗಿಯೂ ಇರಬೇಡ. ಬಹು ಜ್ಞಾನಿಯಾಗಿಯೂ ಇರಬೇಡ; ಬಹು ಮೂಢನಾಗಿಯೂ ಇರಬೇಡ. ನಿನ್ನ ಕಾಲಕ್ಕಿಂತ ಮೊದಲೇ ನೀನು ಯಾಕೆ ಸಾಯಬೇಕು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನೀನು ಅತಿಯಾಗಿ ನೀತಿವಂತನಾಗಿರಬೇಡ. ಅತಿಯಾಗಿ ನಿನ್ನನ್ನು ಜ್ಞಾನಿಯನ್ನಾಗಿಯೂ ಮಾಡಿಕೊಳ್ಳಬೇಡ. ನಿನ್ನನ್ನು ನೀನೇ ಏಕೆ ನಾಶಪಡಿಸಿಕೊಳ್ಳುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:16
25 ತಿಳಿವುಗಳ ಹೋಲಿಕೆ  

ದೇವರು ನನಗೆ ದಯಪಾಲಿಸಿರುವ ಸೇವೆಯ ನಿಮಿತ್ತ ನಾನು ನಿಮಗೆ ಹೇಳುವ ಬುದ್ಧಿಮಾತಿದು: ನಿಮ್ಮಲ್ಲಿ ಯಾರೂ ತನ್ನನ್ನೇ ಅತಿಯಾಗಿ ಭಾವಿಸಿಕೊಳ್ಳದಿರಲಿ. ದೇವರು ತನಗೆ ಇತ್ತಿರುವ ವಿಶ್ವಾಸದ ಪರಿಮಾಣದ ಮೇರೆಗೆ ಪ್ರತಿಯೊಬ್ಬನೂ ತನ್ನ ಬಗ್ಗೆ ಸರಿಯಾದ ಅಭಿಪ್ರಾಯ ಹೊಂದಿರಲಿ.


ಜೇನು ಸಿಕ್ಕಿದರೆ ಅಳತೆಯಿಂದ ತಿನ್ನು, ಮಿತಿಮೀರಿದರೆ ವಾಂತಿಯಾದೀತು.


ನಿಮ್ಮಲ್ಲಿ ಕೆಲವರು ದೇವದೂತರ ಆರಾಧನೆಯಲ್ಲಿ ಆಸಕ್ತರಾಗಿದ್ದಾರೆ. ಲೌಕಿಕ ಜ್ಞಾನದಿಂದ ನಿರರ್ಥಕವಾಗಿ ಉಬ್ಬಿಕೊಂಡಿದ್ದಾರೆ. ತಾವು ಬಹಳ ವಿನಯಶಾಲಿಗಳೆಂದು ಹೆಚ್ಚಳಪಡುತ್ತಾರೆ. ಇಂಥವರು ನಿಮ್ಮನ್ನು ಕಡೆಗಾಣಿಸದಂತೆ ಎಚ್ಚರದಿಂದಿರಿ. ಇವರು ಯೇಸುಕ್ರಿಸ್ತರೆಂಬ ಶಿರಸ್ಸಿನಿಂದ ಬೇರ್ಪಟ್ಟಿದ್ದಾರೆ.


ಸ್ವಕಲ್ಪಿತ ಆಚಾರವಿಧಿಗಳಿಂದಲೂ ಕಪಟ ವಿನಯದಿಂದಲೂ ಕಠಿಣ ದೇಹದಂಡನೆಯಿಂದಲೂ ಕೂಡಿರುವ ಈ ವಿಧಿನಿಯಮಗಳು ಹೊರನೋಟಕ್ಕೆ ಜಾಣ್ಮೆಯುಳ್ಳದಾಗಿ ಕಾಣಬಹುದು. ಆದರೂ ಶಾರೀರಿಕ ಇಚ್ಛೆಗಳನ್ನು ನಿಯಂತ್ರಿಸಲು ಇವುಗಳು ಪ್ರಯೋಜನಕ್ಕೆ ಬರುವಂಥವುಗಳಲ್ಲ.


ಯಾರೂ ತನ್ನನ್ನು ತಾನೇ ವಂಚಿಸಿಕೊಳ್ಳದಿರಲಿ. ನಿಮ್ಮಲ್ಲಿ ಯಾರಾದರೂ ಈ ಲೋಕದ ದೃಷ್ಟಿಯಲ್ಲಿ ತಾನು ಜಾಣನೆಂದು ಭಾವಿಸುವುದಾದರೆ ಅಂಥವನು ಮೊದಲು ಹುಚ್ಚನಂತಿರಲು ಕಲಿಯಲಿ. ಆಗ ಅವನು ನಿಜವಾಗಿಯೂ ಜಾಣನಾಗುತ್ತಾನೆ.


ಕುಮಾರಾ, ಇವುಗಳಲ್ಲದೆ ನೀನು ಎಚ್ಚರಿಕೆಯಿಂದಿರಬೇಕಾದುವು ಇನ್ನೂ ಇವೆ. ಗ್ರಂಥಗಳ ರಚನೆಗೆ ಮಿತಿಯಿಲ್ಲ. ಅತಿಯಾದ ವ್ಯಾಸಂಗದಿಂದ ದೇಹಕ್ಕೆ ಆಯಾಸ.


ಆಗ ಆ ಮಹಿಳೆ, “ಈ ಮರದ ಹಣ್ಣು ಊಟಕ್ಕೆ ಎಷ್ಟು ಚೆನ್ನಾಗಿದೆ, ನೋಟಕ್ಕೆ ಎಷ್ಟು ರಮಣೀಯವಾಗಿದೆ. ಜ್ಞಾನಾರ್ಜನೆಗೆ ಎಷ್ಟು ಆಕರ್ಷಣೀಯವಾಗಿದೆ” ಎಂದು ತಿಳಿದು, ಅದನ್ನು ತೆಗೆದುಕೊಂಡು ತಿಂದಳು; ಸಂಗಡವಿದ್ದ ಗಂಡನಿಗೂ ಕೊಟ್ಟಳು; ಅವನೂ ತಿಂದನು.


ನಾನಾದರೋ ವಾರಕ್ಕೆ ಎರಡು ದಿನ ಉಪವಾಸವ್ರತವನ್ನು ಕೈಗೊಳ್ಳುತ್ತೇನೆ; ನನ್ನ ಆದಾಯದಲ್ಲಿ ಹತ್ತನೆಯ ಒಂದು ಪಾಲನ್ನು ನಿಮಗೆ ಸಲ್ಲಿಸುತ್ತೇನೆ.’


ದುಡ್ಡಿನಾಸೆಗಾಗಿಯೆ ದುಡಿಯಬೇಡ; ಬುದ್ಧಿಯನ್ನೆಲ್ಲಾ ಅದಕ್ಕಾಗಿಯೇ ವ್ಯಯಮಾಡಬೇಡ.


ಮದುವೆಯಾಗಬಾರದು, ಇಂತಿಂಥ ಆಹಾರವನ್ನು ಸೇವಿಸಬಾರದು ಎಂದು ಬೋಧಿಸುತ್ತಾರೆ. ಆದರೆ ಸತ್ಯವನ್ನು ಅರಿತು ಯಾರು ವಿಶ್ವಾಸಿಗಳಾಗಿದ್ದಾರೋ ಅಂಥವರು ಎಲ್ಲ ಆಹಾರಪದಾರ್ಥಗಳನ್ನು ಕೃತಜ್ಞತಾಸ್ತುತಿಯೊಡನೆ ಸೇವಿಸಲೆಂದೇ ದೇವರು ಅವುಗಳನ್ನು ಸೃಷ್ಟಿಸಿದ್ದಾರೆ.


ಧರ್ಮಶಾಸ್ತ್ರದ ದೃಷ್ಟಿಯಲ್ಲಿ ನಿಷ್ಠಾವಂತ ಫರಿಸಾಯನು; ಮತಾಶಕ್ತಿಯ ಹಿತದೃಷ್ಟಿಯಿಂದ ಧರ್ಮಸಭೆಯ ಹಿಂಸಕನು; ಧರ್ಮಶಾಸ್ತ್ರ ವಿಧಿನಿಯಮಗಳ ಪಾಲನೆಯಲ್ಲಿ ನಿಂದಾರಹಿತನು.


“ಜ್ಞಾನಿಗಳ ಯೋಜನೆಗಳು ನಿಷ್ಫಲವೆಂಬುದು ಪ್ರಭುವಿಗೆ ತಿಳಿದಿದೆ” ಎಂದೂ ಲಿಖಿತವಾಗಿದೆಯಲ್ಲವೆ?


ಪ್ರಿಯ ಸಹೋದರರೇ, ನೀವೇ ಬುದ್ಧಿವಂತರೆಂದು ಉಬ್ಬಿಹೋಗಬೇಡಿ. ನಿಮಗೊಂದು ನಿಗೂಢ ರಹಸ್ಯವನ್ನು ತಿಳಿಸಬಯಸುತ್ತೇನೆ. ಅದೇನೆಂದರೆ, ಇಸ್ರಯೇಲರ ಮೊಂಡುತನವು ತಾತ್ಕಾಲಿಕವಾದುದು. ಇಸ್ರಯೇಲರಲ್ಲದವರು ಪೂರ್ಣಸಂಖ್ಯೆಯಲ್ಲಿ ದೇವರ ಬಳಿಗೆ ಬರುವ ತನಕ ಮಾತ್ರ ಅದು ಇರುತ್ತದೆ.


ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.


ಬಳಿಕ ಮಾನವನಿಗೆ ಇಂತೆಂದನು: ‘ಸರ್ವೇಶ್ವರನಲ್ಲಿ ಭಯಭಕ್ತಿ ಇಡುವುದೇ ಸುಜ್ಞಾನ ದುಷ್ಟತನವನ್ನು ಬಿಟ್ಟುಬಿಡುವುದೇ ವಿವೇಕ’.”


ಕಾಡುಕತ್ತೆಮರಿ ನರಜನ್ಮ ತಾಳಿದಾಗ ಪೆದ್ದ ಮಾನವ ಬುದ್ಧಿವಂತನಾದ!


ಅವರು ತಮ್ಮ ತಲೆಗಳ ಮೇಲೆ ಮಣ್ಣನ್ನು ಸುರಿದುಕೊಂಡು ಆರ್ತಧ್ವನಿಯಿಂದ : “ನಿನಗೆಂಥಾ ದುರ್ಗತಿ, ಓ ಮಹಾನಗರಿ ! ಕಡಲಲಿ ಸಾಗುವ ಹಡಗಿನವರನ್ನೆಲ್ಲಾ ಧನಿಕರನ್ನಾಗಿಸಿದೆ ನಿನ್ನ ಐಸಿರಿಯಿಂದ ತಾಸೊಂದರಲೇ, ಅಯ್ಯೋ ನೀ ನಾಶ ಆದೆಯಲ್ಲಾ !” ಎಂದು ಪರಿತಪಿಸಿದರು.


ದೇವರ ವಿಷಯದಲ್ಲಿ ಅವರು ಬಹಳ ನಿಷ್ಠಾವಂತರು ಎಂದು ಒತ್ತಿಹೇಳಬಲ್ಲೆ. ಆದರೆ ಆ ನಿಷ್ಠೆ ನೈಜಜ್ಞಾನವನ್ನು ಆಧರಿಸಿಲ್ಲ.


ಇಗೋ, ನಿಮ್ಮ ದೇವಾಲಯ ಬರಿದಾಗುವುದು, ಪಾಳು ಬೀಳುವುದು.


“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಪ್ರವಾದಿಗಳಿಗೆ ಗೋರಿಗಳನ್ನು ಕಟ್ಟಿಸುತ್ತೀರಿ.


ತಾವು ಕೈಗೊಳ್ಳುವ ಕಾರ್ಯಗಳನ್ನೆಲ್ಲಾ ಜನರು ನೋಡಲೆಂದೇ ಮಾಡುತ್ತಾರೆ. ತಮ್ಮ ಧಾರ್ಮಿಕ ಹಣೆಪಟ್ಟಿಗಳನ್ನು ಅಗಲ ಮಾಡಿಕೊಳ್ಳುತ್ತಾರೆ. ಮೇಲಂಗಿಯ ಗೊಂಡೆಗಳನ್ನು ಉದ್ದುದ್ದ ಮಾಡಿಕೊಳ್ಳುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು