Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:20 - ಕನ್ನಡ ಸತ್ಯವೇದವು C.L. Bible (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುವ ಸತ್ಪುರುಷ ಜಗದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಪಾಪಮಾಡದೇ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷರು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಪಾಪಮಾಡದೆ ಧರ್ಮವನ್ನೇ ಆಚರಿಸುತ್ತಿರುವ ಸತ್ಪುರುಷನು ಲೋಕದಲ್ಲಿ ಇಲ್ಲವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಪಾಪಮಾಡದೆ ಒಳ್ಳೆಯದನ್ನೇ ನಡೆಸುವ ನೀತಿವಂತನು, ಭೂಮಿಯ ಮೇಲೆ ಒಬ್ಬನೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:20
16 ತಿಳಿವುಗಳ ಹೋಲಿಕೆ  

ಮಾನವರೆಲ್ಲರೂ ಪಾಪಿಗಳೇ, ಎಲ್ಲರೂ ದೇವದತ್ತ ಮಹಿಮೆಯನ್ನು ಕಳೆದುಕೊಂಡವರೇ.


ತೊಳಲುತ್ತಿದ್ದೆವು ನಾವೆಲ್ಲರು ದಾರಿತಪ್ಪಿದ ಕುರಿಗಳಂತೆ ಹಿಡಿಯುತ್ತಿದ್ದನು ಪ್ರತಿಯೊಬ್ಬನು ತನ್ನ ತನ್ನ ದಾರಿಯನ್ನೆ. ನಮ್ಮೆಲ್ಲರ ದೋಷವನು ಸರ್ವೇಶ್ವರ ಹಾಕಿದ್ದ ಆತನ ಮೇಲೆ.


ನಾವೆಲ್ಲರೂ ಎಷ್ಟೋ ವಿಷಯಗಳಲ್ಲಿ ತಪ್ಪುಮಾಡುವುದುಂಟು. ತನ್ನ ಮಾತಿನಲ್ಲಿ ತಪ್ಪುಮಾಡದೆ ಪೂರ್ತಿಯಾಗಿ ತನ್ನನ್ನೇ ಸ್ವಾಧೀನದಲ್ಲಿ ಇಟ್ಟುಕೊಳ್ಳುವ ವ್ಯಕ್ತಿ ಸಿದ್ಧಪುರುಷನೇ ಹೌದು.


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ, ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ ಸಮೀಪದಲ್ಲಾಗಲಿ ಇರುವ ತಮ್ಮ ದೇಶಕ್ಕೆ ಅವರನ್ನು ಒಯ್ದಾಗ,


“ಹೃದಯವನ್ನು ಪರಿಶುದ್ಧವಾಗಿ ಇಟ್ಟುಕೊಂಡಿದ್ದೇನೆ; ಪಾಪವಿಮುಕ್ತನಾಗಿ ಪವಿತ್ರನಾಗಿದ್ದೇನೆ” ಎಂದು ಹೇಳಬಲ್ಲವನಾರು?


“ಅವರು ನಿಮಗೆ ವಿರುದ್ಧ ಪಾಪಮಾಡಬಹುದು. ಪಾಪಮಾಡದ ವ್ಯಕ್ತಿ ಒಬ್ಬನೂ ಇಲ್ಲ. ನೀವು ಅವರ ಮೇಲೆ ಕೋಪಗೊಂಡು ಅವರನ್ನು ಶತ್ರುಗಳ ಕೈಗೆ ಒಪ್ಪಿಸಿದಾಗ ಮತ್ತು ಆ ಶತ್ರುಗಳು ಅವರನ್ನು ಸೆರೆಹಿಡಿದು ದೂರದಲ್ಲಾಗಲಿ, ಸಮೀಪದಲ್ಲಾಗಲಿ ಇರುವ ದೇಶಕ್ಕೆ ಒಯ್ದಾಗ,


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ಗುರಿಮಾಡಬೇಡ ನಿನ್ನ ದಾಸನನು ನ್ಯಾಯ ವಿಚಾರಣೆಗೆ I ಯಾವ ಜೀವಾತ್ಮನೂ ನಿರ್ದೋಷಿಯಲ್ಲ ನಿನ್ನ ಲೆಕ್ಕಕೆ II


ಪಾಪಗಳ ನೀ ಪಟ್ಟಿಮಾಡಿದೆಯಾದರೆ ಪ್ರಭು I ನಿನ್ನ ಮುಂದೆ ಯಾರುತಾನೆ ನಿಲ್ಲಬಲ್ಲರು ವಿಭು? II


ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.


ಯಾಜಕನು ಅವುಗಳನ್ನು ಪರೀಕ್ಷಿಸಬೇಕು . ಆ ಹೊಳೆಯುವ ಕಲೆಗಳು ಮೊಬ್ಬಾದ ಬಿಳೀ ಬಣ್ಣವಾಗಿದ್ದರೆ ಅದು ದೇಹದ ಚರ್ಮದಲ್ಲಿ ಹುಟ್ಟಿದ ಚಿಬ್ಬು, ಅವನು ಶುದ್ಧನು.


ಅವನು ಬಲುಸಿಟ್ಟುಗೊಂಡು ಪಂಕ್ತಿಯಿಂದೆದ್ದು ಹೋದನು. ತನ್ನ ತಂದೆ, ದಾವೀದನನ್ನು ಅಪಮಾನಪಡಿಸಿದ್ದರಿಂದ ಯೋನಾತಾನನಿಗೆ ಬಹಳ ದುಃಖವುಂಟಾಗಿ ಅವನು ಆ ದಿವಸ ಊಟಮಾಡಲೇ ಇಲ್ಲ.


“ದೇವನಿಲ್ಲ” ಎನ್ನುವವರು ಮನದಲಿ ದುರ್ಮತಿಗಳು I ಹೇಯ ಕೃತ್ಯವೆಸಗುವರು ಆ ಭ್ರಷ್ಟಚಾರಿಗಳು I ಒಳಿತನ್ನು ಮಾಡುವರಾರೂ ಇಲ್ಲ ಅವರೊಳು II


ದಾರಿತಪ್ಪಿಹೋದ ದ್ರೋಹಿಗಳು ಅವರೆಲ್ಲ I ಒಳಿತನ್ನು ಮಾಡುವವನಿಲ್ಲ; ಓರ್ವನೂ ಇಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು