Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 7:7 - ಕನ್ನಡ ಸತ್ಯವೇದವು C.L. Bible (BSI)

7 ದಬ್ಬಾಳಿಕೆ ಬುದ್ಧಿವಂತನನ್ನೂ ಹುಚ್ಚನನ್ನಾಗಿಸುತ್ತದೆ; ಲಂಚಕೋರತನ ಅಂತರಂಗವನ್ನೂ ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ದಬ್ಬಾಳಿಕೆಯು ಜ್ಞಾನಿಯನ್ನು ಮೂರ್ಖನನ್ನಾಗಿಸುತ್ತದೆ, ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಕಸುಕೊಳ್ಳುವದು ಜ್ಞಾನಿಗೆ ಬುದ್ಧಿಗೇಡು; ಲಂಚವು ವಿವೇಕನಾಶಕ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಹಣವು ಜ್ಞಾನಿಯನ್ನೂ ಮೂರ್ಖನನ್ನಾಗಿ ಮಾಡುವುದು. ಲಂಚವು ಅವನ ವಿವೇಕವನ್ನು ಕೆಡಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದಬ್ಬಾಳಿಕೆ ಜ್ಞಾನಿಯನ್ನು ಮೂರ್ಖನನ್ನಾಗಿ ಮಾಡುತ್ತದೆ. ಲಂಚವು ಹೃದಯವನ್ನು ಕೆಡಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 7:7
14 ತಿಳಿವುಗಳ ಹೋಲಿಕೆ  

“ನೀವು ನ್ಯಾಯವನ್ನು ಬಿಟ್ಟು ತೀರ್ಮಾನ ಮಾಡಬಾರದು; ಪಕ್ಷಪಾತ ಕೂಡದು; ಲಂಚ ತೆಗೆದುಕೊಳ್ಳಬಾರದು. ಲಂಚವು ಬುದ್ಧಿವಂತರನ್ನೂ ಕುರುಡರನ್ನಾಗಿಸುತ್ತದೆ; ನಿರಪರಾಧಿಗಳ ನ್ಯಾಯವನ್ನು ಕೆಡಿಸುತ್ತದೆ.


ಲಂಚವನ್ನು ತೆಗೆದುಕೊಳ್ಳಬಾರದು. ಲಂಚವು ಕಣ್ಣುಳ್ಳವರನ್ನು ಕುರುಡರನ್ನಾಗಿಸುತ್ತದೆ; ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ಕೆಡಿಸುತ್ತದೆ.


ಲಂಚವನ್ನು ಗುಟ್ಟಾಗಿ ಪಡೆದ ದುಷ್ಟನು ಡೊಂಕಾಗಿಸುತ್ತಾನೆ ನ್ಯಾಯ ನಿರ್ಣಯವನ್ನು.


ನಿನ್ನ ಅಧಿಪತಿಗಳೇ ದ್ರೋಹಿಗಳಾಗಿದ್ದಾರೆ, ಕಳ್ಳರ ಗೆಳೆಯರಾಗಿದ್ದಾರೆ. ಎಲ್ಲರೂ ಲಂಚಕೋರರಾಗಿದ್ದಾರೆ. ಕಪ್ಪಕಾಣಿಕೆಗಳಿಗೆ ಕೈಯೊಡ್ಡುತ್ತಾರೆ. ಆದರೆ ಅನಾಥರ ಪರವಾಗಿ ವಾದಿಸುವುದಿಲ್ಲ. ವಿಧವೆಯರ ವ್ಯಾಜ್ಯವನ್ನು ತೀರಿಸುವುದಿಲ್ಲ.


ಇದಾದ ಮೇಲೆ ಈ ಜಗದಲ್ಲಿ ಎಲ್ಲಾ ತರದ ಚಿತ್ರಹಿಂಸೆಗಳನ್ನು ಕುರಿತು ಯೋಚಿಸಿದೆ. ಅಯ್ಯೋ, ಹಿಂಸೆಗೆ ಈಡಾದವರ ಕಣ್ಣೀರನ್ನು ಕುರಿತು ಏನೆಂದು ಹೇಳಲಿ? ಅವರನ್ನು ಸಂತೈಸುವವರು ಯಾರೂ ಇಲ್ಲ. ಹಿಂಸಾಚಾರಿಗಳು ಶಕ್ತಿಸಾಮರ್ಥ್ಯ ಉಳ್ಳವರು. ಸಂತೈಸುವವರಾದರೋ ಒಬ್ಬರೂ ಇರಲಿಲ್ಲ.


ಕೊಡುವವನ ಕಣ್ಣಿಗೆ ಲಂಚವು ಚಿಂತಾಮಣಿಯಂತೆ; ಎತ್ತ ತಿರುಗಿದರತ್ತ ಅದರಿಂದ ಜಯವಂತೆ!


ಇವರು ತಂದೆಯ ಮಾರ್ಗದಲ್ಲಿ ನಡೆಯದೆ ದ್ರವ್ಯಾಶೆಯಿಂದ ಲಂಚ ತೆಗೆದುಕೊಂಡು ನ್ಯಾಯವಿರುದ್ಧವಾದ ತೀರ್ಪು ಮಾಡುತ್ತಿದ್ದರು.


ಆ ದೇಶಗಳಲ್ಲಿ ನಿಮಗೆ ಯಾವ ವಿಶ್ರಾಂತಿಯೂ ದೊರೆಯುವುದಿಲ್ಲ. ಸ್ವಂತದ್ದು ಎಂದು ಹೇಳಿಕೊಳ್ಳಲು ಅಂಬೆಗಾಲಿಡುವಷ್ಟು ಸ್ಥಳಸಿಕ್ಕುವುದಿಲ್ಲ. ನೀವು ಗಡಗಡನೆ ನಡುಗುವ ಹೃದಯವುಳ್ಳವರಾಗಿ, ದಿಕ್ಕುತೋರದೆ ಕಂಗೆಟ್ಟವರಾಗಿ ಹಾಗು ಮನಗುಂದಿದವರಾಗಿ ಇರುವಂತೆ ಸರ್ವೇಶ್ವರ ಮಾಡುವರು.


ಸನ್ಮಾರ್ಗದಲ್ಲಿ ನಡೆವವನು, ಸತ್ಯವನ್ನೇ ನುಡಿವವನು, ಬಲಾತ್ಕಾರ್ಯದಿಂದ ಲಭಿಸಿದ್ದನ್ನು ತಿರಸ್ಕರಿಸುವವನು, ಲಂಚಕ್ಕೆ ಕೈಚಾಚದೆ ಹಿಂದಕ್ಕೆ ಸರಿವವನು, ಕೊಲೆ ಮಾತುಗಳಿಗೆ ಕಿವಿ ಮುಚ್ಚಿಕೊಳ್ಳುವವನು, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನು - ಇಂಥವನೇ ಉನ್ನತ ಸ್ಥಾನದಲ್ಲಿ ವಾಸಿಸುವನು.


ಇಲ್ಲಿ ನಿಂತುಕೊಂಡಿರುವ ನಾನು, ಯಾರ ಎತ್ತನ್ನಾಗಲಿ, ಕತ್ತೆಯನ್ನಾಗಲಿ ತೆಗೆದುಕೊಂಡು ಯಾರನ್ನಾದರು ವಂಚಿಸಿ ಪೀಡಿಸಿದ್ದುಂಟೋ? ಲಂಚ ತೆಗೆದುಕೊಂಡು ಕುರುಡನಂತೆ ತೀರ್ಪು ಕೊಟ್ಟಿದ್ದುಂಟೋ? ಹಾಗೇನಾದರು ಮಾಡಿದ್ದರೆ ಸರ್ವೇಶ್ವರನ ಹಾಗು ಅವರ ಅಭಿಷಿಕ್ತನ ಮುಂದೆ ಹೇಳಿರಿ; ನಾನು ಅದನ್ನು ಹಿಂದಕ್ಕೆ ಕೊಡುತ್ತೇನೆ,” ಎಂದನು.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಈ ಲೋಕದಲ್ಲಿ ನಡೆಯುವ ಆಗುಹೋಗುಗಳನ್ನೆಲ್ಲ ಚಿಂತಿಸಿ ನೋಡಿದಾಗ ಈ ವಿಷಯಗಳು ಕಂಡುಬಂದವು: ಈಗ ಒಬ್ಬನು ಮತ್ತೊಬ್ಬನ ಮೇಲೆ ದಬ್ಬಾಳಿಕೆ ನಡೆಸುತ್ತಾನೆ; ಹಾನಿಯನ್ನು ಉಂಟುಮಾಡುತ್ತಾನೆ.


ಆಗ ಆಕೀಷನು ತನ್ನ ಸೇವಕರಿಗೆ, “ಈ ಮನುಷ್ಯ ಹುಚ್ಚನೆಂದು ನಿಮಗೆ ಕಾಣುವುದಿಲ್ಲವೇ? ಇವನನ್ನು ನನ್ನ ಹತ್ತಿರ ಏಕೆ ತಂದಿರಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು