Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಸಂಗಿ 9:2 - ಕನ್ನಡ ಸತ್ಯವೇದವು C.L. Bible (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು; ಸಜ್ಜನನಿಗೂ ದುರ್ಜನನಿಗೂ, ಒಳ್ಳೆಯವನಿಗೂ (ಕೆಟ್ಟವನಿಗೂ), ಶುದ್ಧನಿಗೂ, ಅಶುದ್ಧನಿಗೂ ಬಲಿಯನ್ನರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿ ಕಾದಿದೆ; ನಿರ್ದೋಷಿಯಂತೆ ದೋಷಿಯೂ ಇರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಎಲ್ಲವುಗಳು ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ಮತ್ತು ದುಷ್ಟನಿಗೂ, ಒಳ್ಳೆಯವನಿಗೂ ಮತ್ತು ಕೆಟ್ಟವನಿಗೂ, ಶುದ್ಧನಿಗೂ ಮತ್ತು ಅಶುದ್ಧನಿಗೂ, ಯಜ್ಞವನ್ನು ಅರ್ಪಿಸುವವನಿಗೂ ಮತ್ತು ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನು ಹೇಗೋ ಹಾಗೆಯೇ ಪಾಪಿಯೂ ಇರುವನು. ಆಣೆಯಿಡುವವನು ಹೇಗೋ ಹಾಗೆಯೇ ಆಣೆಗೆ ಭಯಪಡುವವನೂ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವದು; ಶಿಷ್ಟನಿಗೂ ದುಷ್ಟನಿಗೂ ಒಳ್ಳೆಯವನಿಗೂ ಶುದ್ಧನಿಗೂ ಅಶುದ್ಧನಿಗೂ ಯಜ್ಞಮಾಡುವವನಿಗೂ ಮಾಡದವನಿಗೂ ಒಂದೇ ಗತಿ; ನಿರ್ದೋಷಿಯಂತೆ ದೋಷಿಯಿರುವನು; ಆಣೆಯಿಡುವವನ ಹಾಗೆ ಆಣೆಗೆ ಅಂಜುವವನು ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದರೆ ಎಲ್ಲರಿಗೂ ಸಂಭವಿಸುವುದು ಒಂದೇ. ಅದೇ ಮರಣ. ಒಳ್ಳೆಯವರಿಗೂ ಕೆಟ್ಟವರಿಗೂ ಶುದ್ಧರಿಗೂ ಅಶುದ್ಧರಿಗೂ ಯಜ್ಞಗಳನ್ನು ಅರ್ಪಿಸುವವರಿಗೂ ಅರ್ಪಿಸದವರಿಗೂ ಮರಣವಾಗುತ್ತದೆ. ಒಳ್ಳೆಯವನು ಸಹ ಕೇವಲ ಪಾಪಿಯಂತೆ ಸಾಯುವನು. ದೇವರಿಗೆ ವಿಶೇಷವಾದ ಹರಕೆಗಳನ್ನು ಮಾಡುವವನು ಸಹ ಆ ಹರಕೆಗಳನ್ನು ಮಾಡಲು ಭಯಪಡುವ ವ್ಯಕ್ತಿಯಂತೆ ಸಾಯುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಎಲ್ಲವೂ ಎಲ್ಲರಿಗೂ ಒಂದೇ ಬಗೆಯಾಗಿ ಸಂಭವಿಸುವುದು. ನೀತಿವಂತನಿಗೂ ದುಷ್ಟನಿಗೂ ಒಳ್ಳೆಯವನಿಗೂ ಕೆಟ್ಟವನಿಗೂ ಶುದ್ಧನಿಗೂ ಅಶುದ್ಧನಿಗೂ ಮತ್ತು ಯಜ್ಞ ಅರ್ಪಿಸುವವನಿಗೂ ಅರ್ಪಿಸದವನಿಗೂ ಒಂದೇ ಗತಿಯಾಗುವುದು. ಒಳ್ಳೆಯವನಿಗೆ ಹೇಗೋ ಹಾಗೆಯೇ ಪಾಪಿಗೂ ಇರುವುದು. ಆಣೆಯಿಡುವವನಿಗೆ ಹೇಗೋ ಹಾಗೆಯೇ, ಆಣೆಯಿಡಲು ಭಯಪಡುವವನಿಗೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಸಂಗಿ 9:2
22 ತಿಳಿವುಗಳ ಹೋಲಿಕೆ  

ಆಗ ಸಜ್ಜನರಿಗೂ ದುರ್ಜನರಿಗೂ, ದೇವರಸೇವೆ ಮಾಡುವವರಿಗೂ ಮಾಡದವರಿಗೂ ಇರುವ ವ್ಯತ್ಯಾಸವನ್ನು ಮತ್ತೆ ನೀವು ಮನಗಾಣುವಿರಿ.


“ಮಾಟಗಾರರಿಗೆ, ಸೂಳೆಗಾರರಿಗೆ, ಸುಳ್ಳು ಹೇಳುವವರಿಗೆ, ಕೂಲಿಹಿಡಿದು ಕಾರ್ಮಿಕರನ್ನು ಮೋಸಗೊಳಿಸುವವರಿಗೆ, ವಿಧವೆಯರನ್ನು ಮತ್ತು ಅನಾಥರನ್ನು ಬಾಧಿಸುವವರಿಗೆ, ಪ್ರವಾಸಿಗಳಿಗೆ ಅನ್ಯಾಯ ಮಾಡುವವರಿಗೆ - ಅಂತೂ ನನಗಂಜದ ಎಲ್ಲರಿಗೆ, ಬೇಗನೆ ನ್ಯಾಯತೀರಿಸಿ, ದಂಡನೆ ವಿಧಿಸಲು ನಾನು ಬರುವೆನು,” ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.


ತಡವರಿಸಿದವು ನನ್ನ ಕಾಲುಗಳು I ಜಾರಿ ಬೀಳಲಿದ್ದವು ಹೆಜ್ಜೆಗಳು II


ಎಲ್ಲವೂ ಒಂದೇ ಆಗಿಬಿಟ್ಟಿದೆ. ಆದ್ದರಿಂದಲೇ ಇಂತೆನ್ನುತ್ತೇನೆ: ‘ದೋಷಿಯೋ ನಿರ್ದೋಷಿಯೋ’ ದೇವರು ಎಲ್ಲರನೂ ನಾಶಗೊಳಿಸುತ್ತಾನೆ.


ಅಹಂಕಾರಿಗಳೇ ಭಾಗ್ಯವಂತರು; ದುಷ್ಕರ್ಮಿಗಳು ಚೆನ್ನಾಗಿ ಅಭಿವೃದ್ಧಿಯಾಗುತ್ತಿದ್ದಾರೆ, ಅಷ್ಟೇ ಅಲ್ಲ, ದೇವರನ್ನೇ ಪರೀಕ್ಷೆಗೆ ಗುರಿಪಡಿಸಿ ಸುರಕ್ಷಿತವಾಗಿದ್ದಾರೆ,” ಎಂದು ನೀವು ಹೇಳಿದ್ದೀರಿ.


ನೀನು ಒಂದನ್ನು ಹಿಡಿದುಕೊಂಡು ಇನ್ನೊಂದನ್ನೂ ಕೈಬಿಡದಿರುವುದು ಒಳಿತು. ದೇವರಲ್ಲಿ ಭಯಭಕ್ತಿಯುಳ್ಳವರು ಇವೆರೆಡರಿಂದಲೂ ಪಾರು.


ಔತಣ ನಡೆವ ಮನೆಗೆ ಹೋಗುವುದಕ್ಕಿಂತ ಗೋಳಾಟವಿರುವ ಮನೆಗೆ ಹೋಗುವುದು ಲೇಸು, ಎಲ್ಲಾ ಮಾನವರ ಅಂತಿಮ ಗತಿ ಸಾವೇ. ಜೀವಂತರು ಇದನ್ನು ಮನಸ್ಸಿನಲ್ಲಿಡುವರು.


ಸಾವಿರ ವರ್ಷದ ಮೇಲೆ ಸಾವಿರ ವರ್ಷ ಬದುಕಿಯೂ ಸುಖವನ್ನು ಅನುಭವಿಸದಿದ್ದರೆ ಏನು ಪ್ರಯೋಜನ? ಇವೆರಡೂ ಒಂದೇ ಸ್ಥಳಕ್ಕೆ ಹೋಗುತ್ತವೆ, ಅಲ್ಲವೇ?


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


“ನನ್ನ ಮಗ ಇಸಾಕನಿಗೆ ಹೆಣ್ಣನ್ನು ನಾನು ವಾಸಮಾಡುತ್ತಿರುವ ಕಾನಾನ್ಯರಿಂದ ತರಬಾರದು;


ಅವರು ಅಲ್ಲಿ ಜೇನುತುಪ್ಪ ಹರಿಯುವುದನ್ನು ಕಂಡರೂ ಶಾಪಕ್ಕೆ ಭಯಪಟ್ಟು ಯಾವನೂ ಅದನ್ನು ಬಾಯಿಗೆ ಹಾಕಲಿಲ್ಲ.


ಮನುಷ್ಯನ ಗತಿಯೂ ಪಶುವಿನ ಗತಿಯೂ ಒಂದೇ; ಪಶುವಿಗೆ ಸಾವು ಬರುವ ಹಾಗೆ ಮನುಷ್ಯನಿಗೂ ಬರುತ್ತದೆ. ಎಲ್ಲಕ್ಕೂ ಇರುವ ಪ್ರಾಣ ಒಂದೇ. ಮನುಷ್ಯನು ಪಶುವಿಗಿಂತ ಶ್ರೇಷ್ಠನಲ್ಲ. ಎಲ್ಲವೂ ವ್ಯರ್ಥವೇ.


ಎಲ್ಲರಿಗೂ ಒಂದೇ ಗತಿಯೆಂಬ ಸಂಕಟವು ಲೋಕ ವ್ಯವಹಾರಗಳಲ್ಲೆಲ್ಲಾ ಸೇರಿಕೊಂಡಿದೆ. ಇದಲ್ಲದೆ, ನರಮಾನವರ ಎದೆಯಲ್ಲಿ ಕೆಟ್ಟತನ ತುಂಬಿದೆ; ಅವರು ಬದುಕಿರುವ ತನಕ ಮರುಳುತನ ಅವರ ಮನಸ್ಸನ್ನು ಸೆರೆಹಿಡಿದಿರುತ್ತದೆ. ಅನಂತರ ಸತ್ತವರನ್ನು ಸೇರಿಕೊಳ್ಳುತ್ತಾರೆ.


ಲೋಕದಲ್ಲಿ ನಾನು ಇನ್ನೊಂದು ವಿಷಯವನ್ನು ಗಮನಿಸಿದೆ; ಓಟ ಪಂದ್ಯದಲ್ಲಿ ವೇಗವಾಗಿ ಓಡುವವನೇ ಯಾವಾಗಲೂ ಗೆಲ್ಲುವನು ಎನ್ನುವಂತಿಲ್ಲ; ಬಲಿಷ್ಠರಿಗೇ ಯುದ್ಧದಲ್ಲಿ ಜಯಗಿಟ್ಟುತ್ತದೆ ಎನ್ನುವಹಾಗಿಲ್ಲ. ಜ್ಞಾನಿಗೆ ಜೀವನಾಂಶ ದೊರಕುವುದು, ಜಾಣನಿಗೆ ಹಣ ಲಭಿಸುವುದು, ಪ್ರವೀಣನಿಗೆ ಪಟ್ಟಪದವಿ ಸಿಕ್ಕುವುದು ಎನ್ನುವಂತಿಲ್ಲ. ಇವರೆಲ್ಲರೂ ಸಮಯ ಸಂದರ್ಭಗಳಿಗೆ ಒಳಪಟ್ಟಿರುತ್ತಾರೆ.


ನೇರೀಯನ ಮಗ ಬಾರೂಕನನ್ನು, ರಾಜಕುವರಿಯರನ್ನು, ಅಂತು ಗಂಡಸರು, ಹೆಂಗಸರು, ಮಕ್ಕಳು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು