Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:19 - ಕನ್ನಡ ಸತ್ಯವೇದವು C.L. Bible (BSI)

19 ಹೌದು, ನನಗದು ತುಂಬಾ ಸಂತೋಷದ ವಿಷಯ. ನಿಮ್ಮ ಪ್ರಾರ್ಥನಾ ಫಲದಿಂದಲೂ ಯೇಸುಕ್ರಿಸ್ತರು ಕೊಡುವ ಆತ್ಮದ ನೆರವಿನಿಂದಲೂ ನನಗೆ ಬಿಡುಗಡೆ ಖಚಿತವೆಂದು ಬಲ್ಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾಕೆಂದರೆ ನಿಮ್ಮ ವಿಜ್ಞಾಪನೆಯಿಂದಲೂ ಮತ್ತು ಯೇಸು ಕ್ರಿಸ್ತನ ಆತ್ಮನ ಸಹಾಯದಿಂದಲೂ ಇದು ನನ್ನ ಬಿಡುಗಡೆಗೆ ಅನುಕೂಲವಾಗುವುದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಯಾಕಂದರೆ ನನಗೆ ಸಂಭವಿಸಿರುವದು ನೀವು ದೇವರಿಗೆ ಮಾಡುವ ವಿಜ್ಞಾಪನೆಯಿಂದಲೂ ಕ್ರಿಸ್ತನು ಹೇರಳವಾಗಿ ದಯಪಾಲಿಸುವ ಆತ್ಮನ ಸಹಾಯದಿಂದಲೂ ನನ್ನ ಪರಮಹಿತಕ್ಕೆ ಅನುಕೂಲಿಸುವದೆಂದು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನೀವು ನನಗೋಸ್ಕರ ಪ್ರಾರ್ಥಿಸುತ್ತಿದ್ದೀರಿ ಮತ್ತು ಯೇಸು ಕ್ರಿಸ್ತನ ಆತ್ಮನು ನನಗೆ ಸಹಾಯ ಮಾಡುತ್ತಿದ್ದಾನೆ. ಆದ್ದರಿಂದ ನನ್ನ ಈ ಕಷ್ಟವು ನನಗೆ ರಕ್ಷಣೆಯನ್ನು ಉಂಟು ಮಾಡುವುದೆಂದು ನನಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿಮ್ಮ ಪ್ರಾರ್ಥನೆಯಿಂದಲೂ ಕ್ರಿಸ್ತ ಯೇಸು ಕೊಡುವ ಪವಿತ್ರಾತ್ಮರ ಸಹಾಯದಿಂದ ನನಗೆ ಸಂಭವಿಸಿದವುಗಳು ನನ್ನ ಬಿಡುಗಡೆಗಾಗಿಯೇ ಎಂದು ನಾನು ಬಲ್ಲೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಕಶ್ಯಾಕ್ ಮಟ್ಲ್ಯಾರ್, ತುಮ್ಚ್ಯಾ ಮಾಗ್ನಿನಿ, ಅನಿ ಜೆಜು ಕ್ರಿಸ್ತಾಚ್ಯಾ ಆತ್ಮ್ಯಾಚ್ಯಾ ಮಜತಿ ವೈನಾ ಮಾಕಾ ಸುಟ್ಕಾ ಹೊವ್ಕ್ ಅನುಕುಲ್ ಹೊತಾ ಮನುನ್ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:19
11 ತಿಳಿವುಗಳ ಹೋಲಿಕೆ  

ದೇವರನ್ನು ಪ್ರೀತಿಸುವವರಿಗೂ ದೇವರ ಸಂಕಲ್ಪದ ಮೇರೆಗೆ ಕರೆಹೊಂದಿದವರಿಗೂ ಸಕಲವೂ ಹಿತಕರವಾಗಿ ಪರಿಣಮಿಸುವುದು.ಇದನ್ನು ನಾವು ಚೆನ್ನಾಗಿ ಅರಿತಿದ್ದೇವೆ.


ಮೂಸಿಯದ ಗಡಿಯನ್ನು ತಲುಪಿದಾಗ ಅವರು ಬಿಥೂನಿಯ ಪ್ರಾಂತ್ಯಕ್ಕೆ ಹೋಗಲು ಯತ್ನಿಸಿದರು. ಯೇಸುವಿನ ಆತ್ಮ ಅಲ್ಲಿಗೆ ಹೋಗಲು ಸಹ ಅವರನ್ನು ಬಿಡಲಿಲ್ಲ.


ನೀವು ದೇವರ ಮಕ್ಕಳಾಗಿರುವುದರಿಂದಲೇ, “ಅಪ್ಪಾ, ತಂದೆಯೇ,” ಎಂದು ಕರೆಯುವ ತಮ್ಮ ಪುತ್ರನ ಆತ್ಮವನ್ನು ದೇವರು ನಮ್ಮ ಹೃದಯಗಳಿಗೆ ಕಳುಹಿಸಿದ್ದಾರೆ.


ನಿಮ್ಮಲ್ಲಿ ನಿಜವಾಗಿಯೂ ದೇವರ ಆತ್ಮವು ನೆಲಸಿದ್ದರೆ ನೀವು ಶರೀರ ಸ್ವಭಾವಕ್ಕೆ ಅನುಸಾರವಾಗಿ ಜೀವಿಸದೆ ಪವಿತ್ರಾತ್ಮ ಅವರ ಚಿತ್ತಕ್ಕೆ ಅನುಸಾರವಾಗಿ ಜೀವಿಸುತ್ತೀರಿ. ಯಾರಲ್ಲಿ ಕ್ರಿಸ್ತಯೇಸುವಿನ ಆತ್ಮ ಇಲ್ಲವೋ ಅಂಥವನು ಕ್ರಿಸ್ತಯೇಸುವಿಗೆ ಸೇರಿದವನಲ್ಲ.


ಇದಕ್ಕಾಗಿಯೇ ಪ್ರಭುವಿನಲ್ಲಿ ನನ್ನ ನೆಚ್ಚಿನ ಹಾಗೂ ಪ್ರಾಮಾಣಿಕ ಮಗನಾದ ತಿಮೊಥೇಯನನ್ನು ನಿಮ್ಮ ಬಳಿಗೆ ಕಳಿಸಿದ್ದೇನೆ. ಆತನು ಕ್ರಿಸ್ತಯೇಸುವಿನಲ್ಲಿ ನನ್ನ ಬಾಳುವೆಯನ್ನು ಕುರಿತು ತಿಳಿಸುವನು; ನಾನು ಎಲ್ಲೆಡೆಯಲ್ಲೂ ಎಲ್ಲಾ ಧರ್ಮಸಭೆಗಳಲ್ಲೂ ಬೋಧಿಸುತ್ತಿರುವುದನ್ನು ನಿಮ್ಮ ನೆನಪಿಗೆ ತರುವನು.


ಕ್ರಿಸ್ತಯೇಸು ಅನುಭವಿಸಬೇಕಾಗಿದ್ದ ಮರಣವನ್ನು, ಯಾತನೆಯನ್ನು ಮತ್ತು ಅನಂತರದ ಪುನರುತ್ಥಾನದ ಮಹಿಮೆಯನ್ನು ಈ ಪ್ರವಾದಿಗಳು ಪ್ರವಾದಿಸುವಾಗ, ತಮ್ಮಲ್ಲಿದ್ದ ಕ್ರಿಸ್ತಾತ್ಮವು ಇದಕ್ಕೆ ಯಾವ ಸಮಯ ಸಂದರ್ಭವನ್ನು ಸೂಚಿಸುತ್ತದೆ ಎಂಬುದನ್ನು ಕಂಡುಹಿಡಿಯಲು ಪ್ರಯತ್ನಿಸಿದರು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಅವರ ಉದ್ದೇಶ ಏನೇ ಆಗಿರಲಿ, ನನಗದು ಮುಖ್ಯವಲ್ಲ. ಕ್ರಿಸ್ತಯೇಸುವನ್ನು ಅವರು ಸಾರುತ್ತಿರುವುದೇ ನನಗೆ ಸಂತೋಷ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು