Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 1:25 - ಕನ್ನಡ ಸತ್ಯವೇದವು C.L. Bible (BSI)

25 ಇದರಲ್ಲಿ ನನಗೆ ಎಳ್ಳಷ್ಟೂ ಸಂದೇಹವಿಲ್ಲ. ಈ ಕಾರಣ, ನಾನು ಇಹದಲ್ಲಿ ಉಳಿಯುವೆನೆಂದು ಬಲ್ಲೆ. ನಿಮ್ಮೆಲ್ಲರೊಡನಿದ್ದು, ಕ್ರೈಸ್ತವಿಶ್ವಾಸದಲ್ಲಿ ನೀವು ವೃದ್ಧಿಯಾಗಿ ಆನಂದಿಸುವಂತೆ ನಿಮಗೆ ನೆರವಾಗುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದ್ದರಿಂದ ನಿಮಗೆ ಕ್ರಿಸ್ತನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ನಿಮಗೆ ಕ್ರಿಸ್ತ ನಂಬಿಕೆಯಲ್ಲಿ ಅಭಿವೃದ್ಧಿಯೂ ಆನಂದವೂ ಉಂಟಾಗುವದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರ ಬಳಿಯಲ್ಲಿರುವೆನೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ನಾನು ಜೀವದಿಂದುಳಿದು ನಿಮ್ಮೊಂದಿಗೆ ಇರುತ್ತೇನೆಂದು ನನಗೆ ಗೊತ್ತಿದೆ. ನೀವು ನಂಬಿಕೆಯಲ್ಲಿ ವೃದ್ಧಿಯಾಗಿರಲು ಆನಂದವಾಗಿರಲು ನಿಮಗೆ ನೆರವಾಗಬೇಕೆಂತಲೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನಿಮಗೆ ನಂಬಿಕೆಯಲ್ಲಿ ಅಭಿವೃದ್ಧಿಯೂ ಸಂತೋಷವೂ ಉಂಟಾಗುವುದಕ್ಕೋಸ್ಕರ ನಾನು ಜೀವದಿಂದುಳಿದು ನಿಮ್ಮೆಲ್ಲರೊಡನೆ ಇರುವೆನೆಂದು ನಿಶ್ಚಯವಾಗಿ ತಿಳಿದಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಹೊವ್ನ್ ತುಮ್ಕಾ ವಿಶ್ವಾಸಾತ್ ವಾಡಾವಳಿಕ್ ಅನಿ ಕುಶಿ ಹೊವ್‍ಸಾಟ್ನಿ ಮಿಯಾ ತುಮ್ಚ್ಯಾ ವಾಂಗ್ಡಾ ಝಿತ್ತೊ ರ್‍ಹಾತಾ ಮನುನ್ ಮಿಯಾ ಲೈ ವಿಶ್ವಾಸ್ ಥವ್ಲಾ ಅನಿ ಮಾಕಾ ಗೊತ್ತ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 1:25
17 ತಿಳಿವುಗಳ ಹೋಲಿಕೆ  

ಅಲ್ಲದೆ, ದೇವರ ಚಿತ್ತವಿದ್ದರೆ, ನಾನೇ ನಿಮ್ಮಲ್ಲಿಗೆ ಬೇಗನೆ ಬರುವೆನೆಂಬ ದೃಢನಂಬಿಕೆಯೂ ನನಗಿದೆ.


ನಿಮ್ಮ ವಿಶ್ವಾಸದ ಬಗ್ಗೆ ನಾವು ದಬ್ಬಾಳಿಕೆ ನಡೆಸುತ್ತಿದ್ದೇವೆಂದು ತಿಳಿಯಬೇಡಿ; ವಿಶ್ವಾಸದಲ್ಲಿ ನೀವು ದೃಢರಾಗಿಯೇ ಇದ್ದೀರಿ. ನಿಮ್ಮ ಸಂತೋಷಕ್ಕಾಗಿ ನಾವು ನಿಮ್ಮೊಡನೆ ಸಹಕರಿಸುತ್ತೇವೆ.


ಭರವಸೆಯ ಮೂಲವಾಗಿರುವ ದೇವರಲ್ಲಿರುವ ನಮ್ಮ ವಿಶ್ವಾಸದ ಮೂಲಕ ಲಭಿಸುವ ಆನಂದವನ್ನೂ ಶಾಂತಿಸಮಾಧಾನವನ್ನೂ ನಿಮಗೆ ಸಮೃದ್ಧಿಯಾಗಿ ದಯಪಾಲಿಸಲಿ. ನಿಮ್ಮ ಭರವಸೆ ಪವಿತ್ರಾತ್ಮ ಅವರ ಪ್ರಭಾವದಿಂದ ಪ್ರವರ್ಧಿಸುವಂತಾಗಲಿ.


ವಿಶ್ವಾಸದ ಮೂಲಕ ನಾವು ದೈವಾನುಗ್ರಹವನ್ನು ಸವಿಯುವಂತೆ ಯೇಸುಕ್ರಿಸ್ತರು ದಾರಿ ತೋರಿಸಿದರು. ನಾವೀಗ ನೆಲೆಗೊಂಡಿರುವುದು ಆ ಅನುಗ್ರಹದಲ್ಲಿಯೇ. ಆದ್ದರಿಂದಲೇ, ದೇವರ ಮಹಿಮೆಯಲ್ಲಿ ನಾವೂ ಪಾಲುಗೊಳ್ಳುತ್ತೇವೆಂಬ ಭರವಸೆಯಿಂದ ಹೆಮ್ಮೆಪಡುತ್ತೇವೆ.


ಇಗೋ, ಇಷ್ಟು ದಿನ ದೇವರ ಸಾಮ್ರಾಜ್ಯವನ್ನು ಪ್ರಕಟಿಸುತ್ತಾ ನಿಮ್ಮ ಮಧ್ಯೆ ಸಂಚರಿಸಿದ ನನ್ನ ಮುಖವನ್ನು ಇನ್ನು ಮುಂದೆ ನೀವು ಯಾರೂ ಕಾಣಲಾರಿರಿ ಎಂದು ನಾನು ಬಲ್ಲೆ.


ಕ್ರಿಸ್ತಯೇಸುವನ್ನು ನೀವು ನೋಡದಿದ್ದರೂ ಅವರನ್ನು ಪ್ರೀತಿಸುತ್ತೀರಿ. ನೀವೀಗ ಕಣ್ಣಾರೆ ಕಾಣದಿದ್ದರೂ ಅವರನ್ನು ವಿಶ್ವಾಸಿಸುತ್ತೀರಿ.


ಹಾಗೆ ಬರುವಾಗ ನಿಮಗೆ ಕ್ರಿಸ್ತಯೇಸುವಿನ ಅಮೂಲ್ಯ ಆಶೀರ್ವಾದವನ್ನು ಹೇರಳವಾಗಿ ತರುತ್ತೇನೆಂಬ ಭರವಸೆ ನನಗಿದೆ.


ಕ್ರಿಸ್ತಯೇಸು ನನ್ನ ಮುಖಾಂತರ ಅಂದರೆ, ನನ್ನ ಬೋಧನೆ ಹಾಗು ಸಾಧನೆಗಳ ಮೂಲಕ, ಸೂಚಕ ಹಾಗೂ ಅದ್ಭುತಕಾರ್ಯಗಳ ಮೂಲಕ ಮತ್ತು ಪವಿತ್ರಾತ್ಮರ ಶಕ್ತಿಯ ಮೂಲಕ ಯೆಹೂದ್ಯರಲ್ಲದವರನ್ನೂ ತಮ್ಮ ಶರಣರನ್ನಾಗಿಸಿಕೊಂಡಿದ್ದಾರೆ. ಇದೊಂದನ್ನು ಬಿಟ್ಟು ಬೇರೆ ಯಾವುದನ್ನು ಕುರಿತು ಹೊಗಳಿಕೊಳ್ಳಲು ನಾನು ಧೈರ್ಯಗೊಳ್ಳುವುದಿಲ್ಲ.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ಬಾರ್ನಬನು ಅಲ್ಲಿಗೆ ಬಂದು ದೇವರ ಕೃಪಾಕಾರ್ಯವನ್ನು ಕಂಡು ಸಂತೋಷಪಟ್ಟನು. ಪ್ರಭುವಿಗೆ ದೃಢಮನಸ್ಸಿನಿಂದ ಪ್ರಾಮಾಣಿಕರಾಗಿರುವಂತೆ ಪ್ರೋತ್ಸಾಹಿಸಿದನು.


ಆದರೆ, ನಾನು ನಿನ್ನ ವಿಶ್ವಾಸವು ಕುಂದದಂತೆ ನಿನಗಾಗಿ ಪ್ರಾರ್ಥನೆ ಮಾಡಿದ್ದೇನೆ. ನೀನು ಪರಿವರ್ತನೆ ಹೊಂದಿದ ನಂತರ ನಿನ್ನ ಸಹೋದರರನ್ನು ದೃಢಪಡಿಸು,” ಎಂದರು.


ಗರ್ಭಗುಡಿಯಿಂದಲೇ ದೇವನಿಂತೆಂದನು; “ಜಯಶೀಲ ನಾನು, ಹಂಚುವೆನು ಶೆಖೆಮನು I ಅಳೆದು ಕೊಡುವೆನು ಸುಖೋತೆಂಬ ಬಯಲನು II


ಮತ್ತೊಂದು ಕಡೆ, ನಿಮಗೋಸ್ಕರ ಇಹದಲ್ಲಿದ್ದು ಜೀವಿಸುವುದು ಅತ್ಯವಶ್ಯಕವಾಗಿದೆ.


ಇದಲ್ಲದೆ, ನಿಮ್ಮೆಲ್ಲರ ಪ್ರಾರ್ಥನೆಗಳ ಫಲವಾಗಿ ದೇವರು ನನ್ನನ್ನು ಇಲ್ಲಿಂದ ಬಿಡುಗಡೆ ಮಾಡಿ ನಿಮ್ಮ ಬಳಿಗೆ ಕಳುಹಿಸುವರು ಎಂಬ ನಂಬಿಕೆ ನನಗಿದೆ. ಆದ್ದರಿಂದ ನನಗಾಗಿ ಒಂದು ಅತಿಥಿ ಕೊಠಡಿಯನ್ನು ಸಿದ್ಧಪಡಿಸಿಟ್ಟುಕೊಂಡಿರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು