Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:30 - ಕನ್ನಡ ಸತ್ಯವೇದವು C.L. Bible (BSI)

30 ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಅವನು ಕ್ರಿಸ್ತನ ಕೆಲಸಕ್ಕಾಗಿ ಬಹುಮಟ್ಟಿಗೆ ತನ್ನ ಪ್ರಾಣವನ್ನೇ ಕೊಟ್ಟದ್ದರಿಂದ ಅವನಿಗೆ ಮಾನ್ಯತೆ ದೊರೆಯಬೇಕು. ನನಗೆ ಸಹಾಯಮಾಡಲು ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಈಡುಮಾಡಿಕೊಂಡನು. ಈ ರೀತಿಯ ಸಹಾಯ ಮಾಡಲು ನಿಮಗೆ ಸಾಧ್ಯವಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಅವನು ಕ್ರಿಸ್ತನ ಸೇವೆಯ ನಿಮಿತ್ತ ಸಾಯುವ ಹಾಗಿದ್ದನು. ನೀವು ನನಗೆ ಮಾಡಲು ಸಾಧ್ಯವಾಗದೆ ಹೋದ ಸಹಾಯವನ್ನು ತಾನೇ ಪೂರ್ತಿ ಮಾಡುವುದಕ್ಕಾಗಿ, ಅವನು ತನ್ನ ಪ್ರಾಣವನ್ನೇ ಅಪಾಯಕ್ಕೆ ಗುರಿಪಡಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

30 ಅಶೆ ರಾತಾನಾ ತುಮಿಚ್ ಮಾಕಾ ಕರುಚೆ ಮನುನ್ ಹೊತ್ತ್ಯಾ ಉಪ್ಚಾರಾತ್ ಕಮ್ಮಿ ಫುರಾ ಕರುಕ್ ಸಾಟ್ನಿ ತೆನಿ ಆಪ್ಲ್ಯಾ ಜಿವಾಚ್ಯಾ ಆಶ್ಯಾಕ್ ಧ್ಯಾನ್ ದಿಯ್ ನಸ್ತಾನಾ ಕ್ರಿಸ್ತಾಚ್ಯಾ ಕಾಮಾಸಾಟಿ ಮರ್ತಲ್ಯಾ ಸಾರ್ಕೊ ಹೊಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:30
15 ತಿಳಿವುಗಳ ಹೋಲಿಕೆ  

ಸ್ತೇಫನನು, ಪೋರ್ತುನಾತನು ಮತ್ತು ಅಖಾಯಿಕನು ಬಂದುದರಿಂದ ನನಗೆ ಸಂತೋಷವುಂಟಾಯಿತು. ನೀವು ಇಲ್ಲದ್ದರಿಂದ ನನಗುಂಟಾದ ಕೊರತೆಯನ್ನು ಅವರು ನೀಗಿಸಿದ್ದಾರೆ.


ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.


ಪ್ರಭು ಯೇಸು ನನಗೆ ವಿಧಿಸಿದ ಆಯೋಗವನ್ನು, ಅಂದರೆ ದೈವಾನುಗ್ರಹ ಕುರಿತಾದ ಶುಭಸಂದೇಶವನ್ನು ಸಾಕ್ಷ್ಯಪೂರ್ವಕವಾಗಿ ಸಾರುವ ಆಯೋಗವನ್ನು, ಪೂರೈಸುತ್ತಾ ನನ್ನ ಬಾಳಿನ ಗುರಿಯನ್ನು ಮುಟ್ಟುವೆನಾದರೆ, ನನಗೆ ಅಷ್ಟೇ ಸಾಕಾಗಿದೆ.


ನೀವು ಕಳುಹಿಸಿಕೊಟ್ಟಿದ್ದೆಲ್ಲವೂ ನನಗೆ ಸಂದಾಯವಾಗಿದೆ. ಈಗ ಅಗತ್ಯಕ್ಕಿಂತಲೂ ಅಧಿಕವಾಗಿದೆ, ಯಥೇಚ್ಛವಾಗಿದೆ. ಎಪಫ್ರೋದಿತನ ಮೂಲಕ ನೀವು ಕಳುಹಿಸಿದ್ದೆಲ್ಲವೂ ನನಗೆ ತಲುಪಿದೆ. ನಿಮ್ಮ ಕೊಡುಗೆ ಸುಗಂಧ ಕಾಣಿಕೆಯಾಗಿದೆ, ದೇವರಿಗೆ ಮೆಚ್ಚಿಗೆಯಾದ ಇಷ್ಟಾರ್ಥ ಬಲಿಯಾಗಿದೆ.


ಅಂತೆಯೇ ನಿಮ್ಮ ಆತ್ಮಕ್ಷೇಮಕ್ಕಾಗಿ ನನಗಿರುವುದೆಲ್ಲವನ್ನೂ ಸಂತೋಷದಿಂದ ವ್ಯಯಮಾಡುತ್ತೇನೆ. ನನ್ನನ್ನೇ ಸವೆಸಲು ಸಿದ್ಧನಾಗಿದ್ದೇನೆ. ಇಷ್ಟರಮಟ್ಟಿಗೆ ನಿಮ್ಮನ್ನು ನಾನು ಪ್ರೀತಿಸುವಾಗ ನಿಮ್ಮ ಪ್ರೀತಿ ಕಡಿಮೆಯಾಗುವುದು ಸರಿಯೇ?


ಜಯಿಸಿದರು ಸೋದರರು ಆ ನಿಂದಕನನ್ನು ಯಜ್ಞದ ಕುರಿಮರಿಯ ರಕ್ತದಿಂದ ಸತ್ಯಕ್ಕೆ ಸಾಕ್ಷಿಯನ್ನಿತ್ತುದರಿಂದ ಜೀವದಾಶೆಯನು ತೊರೆದುದರಿಂದ ಮರಣದ ಭಯವನು ಬಿಸುಟುದರಿಂದ.


ಶುಭಸಂದೇಶಕ್ಕೋಸ್ಕರ ನಾನು ಸೆರೆಮನೆಯಲ್ಲಿರುವಾಗ ನಿನ್ನ ಬದಲಾಗಿ ನನಗೆ ಸಹಾಯಮಾಡಲು ಇವನನ್ನು ಇಲ್ಲಿಯೇ ಉಳಿಸಿಕೊಳ್ಳಲು ಇಷ್ಟವಿತ್ತು.


ಅವನು ಅಸ್ವಸ್ಥನಾದದ್ದು ನಿಜ; ಸಾವಿನ ದವಡೆಯಿಂದ ಪಾರಾದದ್ದೂ ನಿಜ. ದೇವರ ಕರುಣೆ ಅವನ ಮೇಲೆ ಮಾತ್ರವಲ್ಲದೆ ನನ್ನ ಮೇಲೂ ಇದ್ದುದರಿಂದ ನನಗೆ ದುಃಖದ ಮೇಲೆ ದುಃಖ ಬರದಂತಾಯಿತು.


ನಿಮ್ಮ ವಿಶ್ವಾಸವೆಂಬ ಬಲಿಕಾಣಿಕೆಯ ಮೇಲೆ ನನ್ನ ರಕ್ತವನ್ನು ಧಾರೆಯಾಗಿ ಹರಿಸಬೇಕಾಗಿಬಂದರೂ ನನಗೆ ಸಂತೋಷವೇ; ನಿಮ್ಮೆಲ್ಲರೊಡನೆ ಸೇರಿ ಸಂತೋಷಿಸುತ್ತೇನೆ.


ತಿಮೊಥೇಯನು ಬಂದರೆ ಆತನಿಗೆ ಯಾವ ಚಿಂತೆಯೂ ಇರದಂತೆ ನೋಡಿಕೊಳ್ಳಿ. ಆತನು ನನ್ನ ಹಾಗೆ ಪ್ರಭುವಿನ ಸೇವೆಯಲ್ಲಿಯೇ ನಿರತನಾಗಿರುತ್ತಾನೆ.


ಏಕೆಂದರೆ, ಅಳಿದುಹೋಗುವ ಶರೀರ ಅಮರತ್ವವನ್ನು ಧರಿಸಲೇಬೇಕು. ಮರ್ತ್ಯವಾದ ಶರೀರ ಅಮರತ್ವವನ್ನು ಧರಿಸಲೇಬೇಕು.


ಅವರು ನನ್ನ ಪ್ರಾಣರಕ್ಷಣೆಗಾಗಿ ತಮ್ಮ ಪ್ರಾಣಗಳನ್ನೇ ಅಪಾಯಕ್ಕೆ ಈಡಾಗಿಸಿದವರು. ಅದಕ್ಕಾಗಿ ನಾನು ಅವರಿಗೆ ಚಿರಋಣಿ. ನಾನು ಮಾತ್ರವಲ್ಲ, ಯೆಹೂದ್ಯೇತರ ಸಭೆಗಳ ಎಲ್ಲರೂ ಅವರು ಮಾಡಿದ ಉಪಕಾರಕ್ಕೆ ಚಿರಋಣಿಗಳಾಗಿದ್ದಾರೆ.


ಹೀಗೆ ನಮ್ಮಲ್ಲಿ ಸಾವು ಕಾರ್ಯಗತವಾಗುತ್ತಿದ್ದರೆ ನಿಮ್ಮಲ್ಲಿ ಜೀವ ಕಾರ್ಯಗತವಾಗುತ್ತಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು