Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:5 - ಕನ್ನಡ ಸತ್ಯವೇದವು C.L. Bible (BSI)

5 ಕ್ರಿಸ್ತಯೇಸುವಿನಲ್ಲಿರುವ ಮನೋಭಾವ ನಿಮ್ಮಲ್ಲೂ ನೆಲಸಿರಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಕ್ರಿಸ್ತ ಯೇಸುವಿನಲ್ಲಿದ್ದ ಮನಸ್ಸೇ ನಿಮ್ಮಲ್ಲಿಯೂ ಇರಲಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ಜೆಜು ಕ್ರಿಸ್ತಾಕ್ ಹೊತ್ತ್ಯಾ ಸಾರ್ಕೊ ಬರೊ ಮನ್ ತುಮ್ಕಾಬಿ ರಾಂವ್ದಿತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:5
16 ತಿಳಿವುಗಳ ಹೋಲಿಕೆ  

ತಾನು ದೇವರಲ್ಲಿ ನೆಲೆಸಿದ್ದೇನೆಂದು ಹೇಳುವವನು ಕ್ರಿಸ್ತಯೇಸು ಜೀವಿಸಿದಂತೆಯೇ ಜೀವಿಸಬೇಕು. ಇದರಿಂದಲೇ ನಾವು ದೇವರಲ್ಲಿ ನೆಲೆಗೊಂಡಿದ್ದೇವೆಂದು ತಿಳಿದುಕೊಳ್ಳುತ್ತೇವೆ.


ನಾನು ವಿನಯಶೀಲನು, ದೀನಹೃದಯನು; ನನ್ನ ನೊಗಕ್ಕೆ ಹೆಗಲುಕೊಟ್ಟು ನನ್ನಿಂದ ಕಲಿತುಕೊಳ್ಳಿ. ಆಗ ನಿಮಗೆ ವಿಶ್ರಾಂತಿ ಸಿಗುವುದು.


ನೀವು ಹೀಗೆ ಜೀವಿಸಬೇಕೆಂದೇ ದೇವರು ನಿಮ್ಮನ್ನು ಕರೆದಿದ್ದಾರೆ. ಕ್ರಿಸ್ತಯೇಸು ಸಹ ನಿಮಗಾಗಿ ಹಿಂಸೆಬಾಧೆಯನ್ನು ಅನುಭವಿಸಿದರು; ತಮ್ಮ ಹೆಜ್ಜೆಯ ಜಾಡನ್ನೇ ನೀವು ಅನುಸರಿಸುವಂತೆ ನಿಮಗೊಂದು ಆದರ್ಶವನ್ನು ಬಿಟ್ಟುಹೋದರು.


ಕ್ರಿಸ್ತಯೇಸು ದೈಹಿಕವಾಗಿ ಹಿಂಸೆಬಾಧೆಯನ್ನು ಅನುಭವಿಸಿದ್ದರಿಂದ ನೀವೂ ಅವರಲ್ಲಿದ್ದ ಅದೇ ಭಾವನೆಯಿಂದ ನಿಮ್ಮನ್ನು ಬಲಪಡಿಸಿಕೊಳ್ಳಿರಿ. ದೈಹಿಕವಾಗಿ ಹಿಂಸೆಪಡುವವನು ಪಾಪ ಜೀವನದೊಡನೆ ಸಂಬಂಧವನ್ನು ಕಡಿದುಕೊಂಡವನು.


ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ಆ ಸ್ಥೈರಣೆ ಮತ್ತು ಉತ್ತೇಜನದ ಮೂಲವಾಗಿರುವ ದೇವರು, ನೀವೆಲ್ಲರು ಕ್ರಿಸ್ತಯೇಸುವನ್ನು ಅನುಸರಿಸುತ್ತಾ ಒಮ್ಮನಸ್ಸಿನಿಂದ ಬಾಳುವಂತೆ ಮಾಡಲಿ.


ಹೀಗೆ ಕಷ್ಟಪಟ್ಟು ದುಡಿದು, ದುರ್ಬಲರಿಗೆ ನೆರವಾಗಬೇಕೆಂದು ನಾನು ನಿಮಗೆ ಹಲವಾರು ವಿಧದಲ್ಲಿ ತೋರಿಸಿಕೊಟ್ಟಿದ್ದೇನೆ. ‘ಕೊಳ್ಳುವ ಕೈಗಿಂತ ಕೊಡುವ ಕೈ ಧನ್ಯವಾದುದು’ ಎಂಬ ಯೇಸುಸ್ವಾಮಿಯ ಮಾತುಗಳನ್ನು ನೆನಪಿನಲ್ಲಿಡಿ.”


ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.


ನೀನು ಏನನ್ನಾದರೂ ತಿನ್ನುವುದರಿಂದ ನಿನ್ನ ಸಹೋದರನ ಮನಸ್ಸಿಗೆ ನೋವುಂಟಾಗುವುದಾದರೆ ನಿನ್ನ ಆ ವರ್ತನೆ ಪ್ರೀತಿಪ್ರೇರಿತವಾದುದಲ್ಲ. ಯಾರಿಗೋಸ್ಕರ ಕ್ರಿಸ್ತಯೇಸು ಪ್ರಾಣಾರ್ಪಣೆ ಮಾಡಿದರೋ ಅಂಥವನಿಗೆ ನೀನು ತಿನ್ನುವ ಆಹಾರದಿಂದಾಗಿ ನಾಶವನ್ನು ತರಬಾರದು.


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು