Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 2:7 - ಕನ್ನಡ ಸತ್ಯವೇದವು C.L. Bible (BSI)

7 ತನ್ನನ್ನೇ ಬರಿದುಮಾಡಿಕೊಂಡು ದಾಸನ ರೂಪವನು ಧರಿಸಿಕೊಂಡು ಮನುಜನಾಕಾರದಲಿ ಕಾಣಿಸಿಕೊಂಡು ನರಮಾನವರಿಗೆ ಸರಿಸಮನಾದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದನು. ಮನುಷ್ಯನಾಕಾರದಲ್ಲಿ ಕಾಣಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆ ಪದವಿಯನ್ನು ಆತನು ಬಿಟ್ಟುಕೊಟ್ಟು ಸೇವಕನ ಸ್ವಭಾವವನ್ನು ಧರಿಸಿಕೊಂಡು ಮಾನವ ರೂಪದಲ್ಲಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ತಮ್ಮನ್ನು ತಾವೇ ಬರಿದುಮಾಡಿಕೊಂಡು ಗುಲಾಮನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸಮನಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಅಪ್ನಾಕ್ ಕಾಯ್ ನಸ್ಲಲೊ ಸಾರ್ಕೊ ಕರುನ್ ಘೆವ್ನ್ ಗುಲಾಮ್‍ಚೊ ರುಪ್ ಘೆವ್ನ್ ಮಾನ್ಸಾಂಚ್ಯಾ ಸಮಾ ಹೊಲೊ, ಅನಿ ಮಾನ್ಸಾಂಚ್ಯಾ ರುಪಾತ್ ದಿಸ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 2:7
31 ತಿಳಿವುಗಳ ಹೋಲಿಕೆ  

ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಹಾಗೆಯೇ ನರಪುತ್ರನು ಸೇವೆಮಾಡಿಸಿಕೊಳ್ಳುವುದಕ್ಕೆ ಅಲ್ಲ, ಇತರರ ಸೇವೆಮಾಡುವುದಕ್ಕೂ ಸರ್ವರ ಉದ್ಧಾರಕ್ಕಾಗಿ ತನ್ನ ಪ್ರಾಣವನ್ನು ಈಡಾಗಿ ಕೊಡುವುದಕ್ಕೂ ಬಂದಿದ್ದಾನೆ,” ಎಂದು ಹೇಳಿದರು.


ಆ ದಿವ್ಯವಾಣಿ ಮನುಷ್ಯ ಆದರು. ಮನುಷ್ಯನಾಗಿ ನಮ್ಮೊಡನೆ ವಾಸಮಾಡಿದರು. ಅವರ ಮಹಿಮೆಯನ್ನು ನಾವು ನೋಡಿದೆವು, ಪಿತನಿಂದ ಪಡೆದ ಆ ಮಹಿಮೆ ಏಕೈಕ ಪುತ್ರನಿಗೆ ಮೀಸಲಾದ ಮಹಿಮೆಯೇ. ಎಂದೇ ಅವರು ವರಪ್ರಸಾದದಿಂದಲೂ ಸತ್ಯದಿಂದಲೂ ಪರಿಪೂರ್ಣರಾಗಿದ್ದರು.


ಶರೀರ ಸ್ವಭಾವದ ಬಲಹೀನತೆಯ ನಿಮಿತ್ತ ಧರ್ಮಶಾಸ್ತ್ರಕ್ಕೆ ಯಾವುದು ಸಾಧ್ಯವಾಗದೆ ಹೋಯಿತೋ, ಅದು ದೇವರಿಗೆ ಸಾಧ್ಯವಾಯಿತು. ಪಾಪಪರಿಹಾರಕ್ಕಾಗಿ ತಮ್ಮ ಸ್ವಂತ ಪುತ್ರನನ್ನು ಪಾಪಾಧೀನವಾದ ನಮ್ಮ ಸ್ವಭಾವದಂಥ ಶರೀರ ಸ್ವಭಾವದಲ್ಲಿ ಕಳುಹಿಸಿಕೊಟ್ಟರು. ಆ ಸ್ವಭಾವದಲ್ಲೇ ಪಾಪಕ್ಕೆ ಮರಣದಂಡನೆಯನ್ನು ವಿಧಿಸಿದರು.


ಕಾಲವು ಪರಿಪಕ್ವವಾದಾಗ ದೇವರು ತಮ್ಮ ಪುತ್ರನನ್ನೇ ಕಳುಹಿಸಿಕೊಟ್ಟರು. ಇವರು ಧರ್ಮಶಾಸ್ತ್ರಕ್ಕೆ ಅಧೀನರಾದವರನ್ನು ಬಿಡುಗಡೆ ಮಾಡುವುದಕ್ಕಾಗಿಯೂ ದೇವಪುತ್ರರ ಪದವಿಯನ್ನು ನಮಗೆ ಒದಗಿಸಿಕೊಡುವುದಕ್ಕಾಗಿಯೂ ಒಬ್ಬ ಸ್ತ್ರೀಯಲ್ಲಿ ಜನಿಸಿದರು. ಧರ್ಮಶಾಸ್ತ್ರಕ್ಕೆ ಅಧೀನರಾಗಿಯೇ ಹುಟ್ಟಿದರು.


ಈ ಪ್ರಧಾನಯಾಜಕ, ನಮ್ಮ ದೌರ್ಬಲ್ಯಗಳನ್ನು ಕಂಡು ಅನುಕಂಪ ತೋರದೆ ಇರುವವರಲ್ಲ. ಅವರು, ನಮ್ಮಂತೆಯೇ ಇದ್ದುಕೊಂಡು ಎಲ್ಲಾ ವಿಷಯಗಳಲ್ಲೂ ಶೋಧನೆ ಸಂಕಟಗಳನ್ನು ಅನುಭವಿಸಿದರು. ಆದರೆ ಪಾಪವನ್ನು ಮಾತ್ರ ಮಾಡಲಿಲ್ಲ.


ಕ್ರಿಸ್ತಯೇಸು ತಮ್ಮ ಸ್ವಂತ ಹಿತವನ್ನು ಎಂದಿಗೂ ಬಯಸಲಿಲ್ಲ. “ದೇವರೇ, ನಿಮ್ಮನ್ನು ದೂಷಿಸಿದವರ ದೂಷಣೆಗಳು ನನ್ನ ಮೇಲೆ ಎರಗಿವೆ,” ಎಂದು ಲಿಖಿತವಾಗಿರುವ ವಾಕ್ಯ ಅವರಿಗೆ ಅನ್ವಯಿಸುತ್ತದೆ.


ತೃಪ್ತನಾಗುವನಾತ ಕಂಡು ತನ್ನ ಪ್ರಾಣಯಾತನೆಯ ಫಲವನು. ಸಜ್ಜನನಾದ ಆ ನನ್ನ ದಾಸ ತರುವನು ಸನ್ಮಾರ್ಗಕೆ ಬಹುಜನರನು. ತಾನೇ ಹೊತ್ತುಕೊಳ್ಳುವನು ಅವರ ಅಪರಾಧಗಳ ಹೊರೆಯನು.


ವಿಶ್ವಾಸವನ್ನು ಹುಟ್ಟಿಸುವ ಮತ್ತು ಅದನ್ನು ಪರಿಪೂರ್ಣಗೊಳಿಸುವ ಯೇಸುಸ್ವಾಮಿಯನ್ನು ಗುರಿಯಾಗಿಟ್ಟು ಓಡೋಣ. ಅವರು ತಮ್ಮ ಮುಂದಿಡಲಾದ ಸೌಭಾಗ್ಯವನ್ನು ಗಳಿಸಲು ನಿಂದೆ ಅವಮಾನಗಳನ್ನು ಲೆಕ್ಕಿಸದೆ ಶಿಲುಬೆಯ ಮರಣವನ್ನು ಸಹಿಸಿಕೊಂಡರು. ಈಗಲಾದರೋ ದೇವರ ಸಿಂಹಾಸನದ ಬಲಗಡೆ ಆಸೀನರಾಗಿದ್ದಾರೆ.


ಈ ಇಬ್ಬರಲ್ಲಿ ದೊಡ್ಡವನು ಯಾರು - ಊಟ ಮಾಡುವವನೋ? ಊಟ ಬಡಿಸುವವನೋ? ಖಂಡಿತವಾಗಿ ಊಟ ಮಾಡುವವನು. ಆದರೂ ಊಟ ಬಡಿಸುವ ಊಳಿಗದವನಂತೆ ನಾನು ನಿಮ್ಮ ನಡುವೆ ಇದ್ದೇನೆ.


ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನಗಳನ್ನು ನೆರವೇರಿಸಿ ತಮ್ಮ ಪ್ರಾಮಾಣಿಕತೆಯನ್ನು ವ್ಯಕ್ತಪಡಿಸುವಂತೆ


ದೇವಸ್ವರೂಪಿ ತಾನಾಗಿದ್ದರೂ ನಿರುತ ದೇವರಿಗೆ ಸಮನಾದ ಆ ಸಿರಿ ಪದವಿಯನಾತ ಹಿಡಿದಿಟ್ಟುಕೊಳ್ಳಲಿಲ್ಲ ಬಿಡಲೊಲ್ಲೆನೆನುತ.


ಇಗೋ, ನನ್ನ ದಾಸನು ! ನನ್ನ ಆಧಾರ ಪಡೆದವನು ನನ್ನಿಂದ ಆಯ್ಕೆಯಾದವನು ನನಗೆ ಪರಮ ಪ್ರಿಯನು. ನೆಲೆಗೊಳಿಸಿರುವೆ ಇವನಲ್ಲಿ ನನ್ನ ಆತ್ಮವನು ಅನ್ಯರಾಷ್ಟ್ರಗಳಿಗೆ ಸಾರುವನಿವನು ಸದ್ಧರ್ಮವನು.


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ಸೆರೆಯಲ್ಲಿರುವವರನ್ನು ಸ್ಮರಿಸಿಕೊಳ್ಳಿ. ಅವರ ಸಂಗಡ ನೀವೂ ಸೆರೆಯಲ್ಲಿರುವಂತೆ ಭಾವಿಸಿಕೊಳ್ಳಿ. ಅನ್ಯಾಯಕ್ಕೆ ಒಳಗಾಗಿರುವವರನ್ನು ಜ್ಞಾಪಕದಲ್ಲಿಟ್ಟುಕೊಳ್ಳಿ. ಅನ್ಯಾಯಕ್ಕೆ ಒಳಗಾಗಬಲ್ಲ ದೇಹವೊಂದು ನಿಮಗೂ ಸಹ ಇದೆಯಲ್ಲವೇ?


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


ಅದಕ್ಕೆ ಅವರು, “ ‘ಎಲೀಯನು ಮೊದಲು ಬಂದು ಎಲ್ಲವನ್ನೂ ಸಜ್ಜುಗೊಳಿಸುವನೆಂಬುದೇನೋ ನಿಜ. ಆದರೂ ನರಪುತ್ರನು ಜನರಿಂದ ತೀವ್ರಯಾತನೆಯನ್ನು ಅನುಭವಿಸಿ ಅವರಿಂದ ತಿರಸ್ಕೃತನಾಗಬೇಕು,’ ಎಂದು ಪವಿತ್ರಗ್ರಂಥದಲ್ಲಿ ಬರೆದಿದೆಯಲ್ಲವೆ; ಇದು ಹೇಗೆ?


ಪ್ರಧಾನ ಯಾಜಕನಾದ ಯೆಹೋಶುವನೇ, ನೀನೂ ಮತ್ತು ನಿನ್ನ ಜೊತೆಯಲ್ಲಿ ಉಪಸ್ಥಿತರಾದ ಸಹಯಾಜಕರೂ, ಕೇಳಲಿ: ನೀವು ಶುಭದಿನಗಳ ಮುಂಗುರುತು. ‘ಮೊಳಕೆ’ ಎಂಬಸೇವಕನೊಬ್ಬನು ಕಾಣಿಸಿಕೊಳ್ಳುವಂತೆ ಮಾಡುವೆನು.


ಆ ಏಳುಸಾರಿ ಅರವತ್ತೆರಡು ವರ್ಷಗಳು ಮುಗಿದ ಮೇಲೆ ಅಭಿಷಿಕ್ತನನ್ನು ಅನ್ಯಾಯವಾಗಿ ಕೊಲ್ಲುವರು. ದಂಡೆತ್ತಿಬರುವ ರಾಜನ ಜನರು ನಗರವನ್ನೂ ಪವಿತ್ರಾಲಯವನ್ನೂ ಹಾಳುಮಾಡುವರು. ಪ್ರಳಯದಿಂದಲೋ ಎಂಬಂತೆ ನಗರವು ನಾಶವಾಗುವುದು. ಅಂತ್ಯದವರೆಗೆ ಯುದ್ಧವೂ ನಿಶ್ಚಿತ ವಿನಾಶವೂ ಸಂಭವಿಸುವುವು.


ಆತನೆನಗೆ ಇಂತೆಂದ : “ನೀನೆನ್ನ ದಾಸ; ನನ್ನ ಮಹಿಮೆ ಬೆಳಗಿಸುವ ಇಸ್ರಯೇಲ.”


ಬಲಹೀನಾವಸ್ಥೆಯಲ್ಲಿ ಅವರನ್ನು ಶಿಲುಬೆಗೇರಿಸಲಾಯಿತು ಎಂಬುದೇನೋ ನಿಜ. ಆದರೆ, ದೇವರ ಶಕ್ತಿಯಿಂದ ಅವರು ಜೀವಂತರಾಗಿದ್ದಾರೆ. ಕ್ರಿಸ್ತಯೇಸುವಿನಲ್ಲಿ ನಾವೂ ಬಲಹೀನರೇ. ಆದರೆ ನಿಮ್ಮ ವಿಷಯದಲ್ಲಿ ವರ್ತಿಸುವಾಗ ದೇವರ ಶಕ್ತಿಯಿಂದ ಯೇಸುಸ್ವಾಮಿಯೊಂದಿಗೆ ಜೀವಂತರಾಗಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು