Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 3:19 - ಕನ್ನಡ ಸತ್ಯವೇದವು C.L. Bible (BSI)

19 ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕಾರ್ಯಗಳಲ್ಲಿಯೇ ಅವರಿಗೆ ಹೆಮ್ಮೆ, ನಶ್ವರವಾದ ವಿಷಯಗಳಲ್ಲಿಯೇ ಅವರಿಗೆ ವ್ಯಾಮೋಹ. ಹೀಗಾಗಿ, ವಿನಾಶವೇ ಅವರ ಅಂತ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆ ಕೆಲಸಗಳಲ್ಲಿಯೇ ಅವರ ಗೌರವವು, ಅವರು ಪ್ರಪಂಚದ ಕಾರ್ಯಗಳ ಮೇಲೆ ಮನಸ್ಸಿಡುವವರು. ನಾವಾದರೋ ಪರಲೋಕಸಂಸ್ಥಾನದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅವರ ನಡತೆಯು ಅವರನ್ನು ನಾಶದೆಡೆಗೆ ನಡೆಸುತ್ತಿದೆ. ಅವರು ದೇವರ ಸೇವೆ ಮಾಡುತ್ತಿಲ್ಲ. ಆ ಜನರು ಕೇವಲ ತಮ್ಮ ಸಂತೋಷಕ್ಕಾಗಿ ಜೀವಿಸುತ್ತಿದ್ದಾರೆ. ಅವರು ನಾಚಿಕೆಕರವಾದ ಕೆಲಸಗಳನ್ನು ಮಾಡಿ, ಅವುಗಳ ಬಗ್ಗೆ ಹೆಮ್ಮೆಪಡುತ್ತಾರೆ. ಅವರು ಕೇವಲ ಈ ಲೋಕದ ವಿಷಯಗಳ ಬಗ್ಗೆ ಆಲೋಚಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ವಿನಾಶನವೇ ಅವರ ಅಂತ್ಯವು. ಹೊಟ್ಟೆಯೇ ಅವರ ದೇವರು. ನಾಚಿಕೆ ಕಾರ್ಯಗಳಲ್ಲಿಯೇ ಅವರ ಪ್ರಭಾವ. ಅವರು ಲೌಕಿಕವಾದವುಗಳ ಮೇಲೆ ಮನಸ್ಸಿಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ತೆಂಕಾ ಆಕ್ರಿಕ್ ಗಾವ್ತಲೆ ನಾಶುಚ್, ತೆಂಚೆ ಪೊಟುಚ್ ತೆಂಚೊ ದೆವ್, ಮರ್ಯ್ಯಾದ್ ಗೆಡಿ ಕಾಮಚ್ ತೆಂಕಾ ಗೌರವ್ ದಿತ್ಯಾತ್, ತೆನಿ ಹ್ಯಾ ಜಗಾಕ್ ಸಮಂದ್ ಪಡಲ್ಯಾ ವಿಶಯಾತ್ನಿ ಮನ್ ಥವ್ತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 3:19
52 ತಿಳಿವುಗಳ ಹೋಲಿಕೆ  

ಅಂಥವರು ಮಾಡುವುದು ತಮ್ಮ ಉದರಸೇವೆಯನ್ನೇ ಹೊರತು ಪ್ರಭುವಿನ ಸೇವೆಯನ್ನಲ್ಲ, ತಮ್ಮ ನಯನಾಜೂಕಿನ ನುಡಿಗಳಿಂದಲೂ ಮುಖಸ್ತುತಿಯ ಮಾತುಗಳಿಂದಲೂ ನಿಷ್ಕಪಟ ಮನಸ್ಕರನ್ನು ಮರುಳುಗೊಳಿಸುತ್ತಾರೆ.


ಅವರು ದ್ರವ್ಯಾಶೆಪೀಡಿತರಾಗಿ ಕಟ್ಟುಕತೆಗಳನ್ನು ಹೇಳುತ್ತಾ ನಿಮ್ಮಿಂದ ಲಾಭಗಳಿಸುವರು. ದೀರ್ಘಕಾಲದಿಂದ ಅವರಿಗಾಗಿ ಸಿದ್ಧವಾಗಿರುವ ದಂಡನೆಯ ತೀರ್ಪು ಸಮೀಪಿಸುತ್ತಿದೆ. ಅವರನ್ನು ನಾಶಗೊಳಿಸುವವರೇನೂ ನಿದ್ರಿಸುತ್ತಿಲ್ಲ.


ನೀವು ಕ್ರಿಸ್ತಯೇಸುವಿನೊಂದಿಗೆ ಮರಣ ಹೊಂದಿರುವುದರಿಂದ ಅವರೊಂದಿಗೆ ನಿಮ್ಮ ಜೀವ ದೇವರಲ್ಲಿ ಮರೆಯಾಗಿದೆ. ನಿಮ್ಮ ಮನಸ್ಸು ಪ್ರಾಪಂಚಿಕ ವಿಷಯಗಳ ಮೇಲೆ ಅಲ್ಲ, ಸ್ವರ್ಗೀಯ ವಿಷಯಗಳ ಮೇಲೆ ಕೇಂದ್ರೀಕೃತವಾಗಿರಲಿ.


ಇಸ್ರಯೇಲ್ ಜನರಲ್ಲೇ ಕಪಟ ಪ್ರವಾದಿಗಳು ಕಾಣಿಸಿಕೊಂಡರು. ಅಂತೆಯೇ, ನಿಮ್ಮಲ್ಲೂ ಸುಳ್ಳುಬೋಧಕರು ಕಾಣಿಸಿಕೊಳ್ಳುವರು. ಹಾನಿಕರವಾದ ದುರ್ಬೋಧನೆಗಳನ್ನು ಗೋಪ್ಯವಾಗಿ ಪ್ರಸರಿಸುವರು. ಒತ್ತೆಯಿಟ್ಟು ತಮ್ಮನ್ನು ರಕ್ಷಿಸಿದ ಒಡೆಯನನ್ನೇ ಅರಿಯೆವೆಂದು ನಿರಾಕರಿಸುವರು. ಹೀಗೆ ತಮ್ಮ ವಿನಾಶವನ್ನು ತಾವೇ ಬೇಗನೆ ಬರಮಾಡಿಕೊಳ್ಳುವರು.


ಹೀಗಿರುವಲ್ಲಿ, ಅವನ ಸೇವಕರೂ ಸಹ ಸತ್ಯಸೇವಕರಂತೆ ವೇಷಧಾರಿಗಳಾದರೆ ಅದರಲ್ಲೇನು ಸೋಜಿಗ? ಅವರ ಕೃತ್ಯಗಳಂತೆಯೇ ಅವರ ಅಂತ್ಯವೂ ಇರುತ್ತದೆ.


ಕೆಲವರು ತಾವು ಮಾಡುತ್ತಿರುವ ಕಾರ್ಯ, ನಾವು ಮಾಡುತ್ತಿರುವ ಪ್ರೇಷಿತರ ಕಾರ್ಯಕ್ಕೆ ಸರಿಸಮವೆಂದು ವಾದಿಸಲು ಅವಕಾಶವನ್ನು ಹುಡುಕುತ್ತಿದ್ದಾರೆ. ಅವರಿಗೆ ಅಂಥ ಆಸ್ಪದವನ್ನು ಕೊಡದಂತೆ ನಾನೀಗ ಮಾಡುತ್ತಿರುವುದನ್ನೇ ಮುಂದುವರಿಸಿಕೊಂಡು ಹೋಗುತ್ತೇನೆ.


“ಅವರ ಸಂತಾನ ಹೆಚ್ಚಿದ ಹಾಗೆಲ್ಲ ಅವರು ನನ್ನ ವಿರುದ್ಧ ಪಾಪಮಾಡುತ್ತಾ ಬಂದಿದ್ದಾರೆ. ಅವರ ಮಾನವನ್ನು ಅವಮಾನವನ್ನಾಗಿ ಮಾರ್ಪಡಿಸುತ್ತೇನೆ.


ತಾವು ಮಾಡಿದ ಕೇಡಿಗೆ ಪ್ರತಿಯಾಗಿ ಕೇಡನ್ನೇ ಪಡೆಯುತ್ತಾರೆ. ಇವರು ಹಾಡುಹಗಲಿನಲ್ಲೇ ಏನುಬೇಕಾದರೂ ಮಾಡಿ, ದೈಹಿಕ ವ್ಯಾಮೋಹಗಳನ್ನು ತಣಿಸುವುದೇ ಸುಖವೆಂದು ಎಣಿಸುತ್ತಾರೆ. ವಂಚಕರಾದ ಇವರು ಪ್ರೇಮಭೋಜನಗಳಲ್ಲಿ ನಿಮ್ಮ ಸಂಗಡ ಸೇರಿ ತಿಂದುಕುಡಿಯುವಾಗ ನಿಮಗೆ ಕಳಂಕವನ್ನೂ ಮಾನನಷ್ಟವನ್ನೂ ತರುತ್ತಾರೆ.


ಸುನ್ನತಿಮಾಡಿಸಿಕೊಳ್ಳುವ ತಾವಾದರೂ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವುದಿಲ್ಲ. ಆದರೆ ನಿಮ್ಮ ದೈಹಿಕ ಸುನ್ನತಿಯಿಂದ, ಅವರು ಹೆಚ್ಚಳಿಕೆ ಗಳಿಸುವುದಕ್ಕಾಗಿ ನಿಮಗೆ ಸುನ್ನತಿಯಾಗಬೇಕೆಂದು ಬಯಸುತ್ತಾರೆ.


ಆದರೆ ಹೇಡಿಗಳಿಗೆ, ಹೇಯಕೃತ್ಯಗಾರರಿಗೆ ಅವಿಶ್ವಾಸಿಗಳಿಗೆ, ಹಲವು ಅಸತ್ಯಗಾರರಿಗೆ ಕಾಮುಕರಿಗೆ, ಕೊಲೆಗಾರರಿಗೆ ವಿಗ್ರಹಾರಾಧಕರಿಗೆ, ಮಾಟಮಂತ್ರಗಾರರಿಗೆ ಗಂಧಕದಿಂದುರಿಯುವ ಅಗ್ನಿಸರೋವರವೇ ಗತಿ ಇದುವೇ ಅವರೆಲ್ಲರ ಎರಡನೆಯ ಮೃತಿ.” ಎಂದು ಹೇಳಿದನು.


ನೀವು ಇನ್ನೂ ಲೌಕಿಕರಂತೆ ಬಾಳುತ್ತಿದ್ದೀರಿ. ನಿಮ್ಮ ನಡುವೆ ದ್ವೇಷ-ಅಸೂಯೆ, ವಾದ-ವಿವಾದಗಳು ಪ್ರಬಲವಾಗಿದ್ದು ನೀವಿನ್ನೂ ಪ್ರಾಣಿಗಳಂತೆ, ಸಾಧಾರಣ ಮನುಷ್ಯರಂತೆ ವರ್ತಿಸುತ್ತಿದ್ದೀರಲ್ಲವೆ?


ಇಳೆಯ ಮಾನವರಿಂದ ಪ್ರಭು, ಎನ್ನನು ಕೈಯಾರೆ ಕಾಪಾಡು I ಜಗವೇ ತಮ್ಮ ಪಾಲಿನ ಪರಿಮಿತಿ ಎನ್ನುವವರಿಂದ ಕಾದಿಡು II ಅವರಾದರೊ ನಿನ್ನ ನಿಧಿಯಿಂದ ಉದರ ತುಂಬಿಸಿಕೊಳ್ಳಲಿ I ಮಕ್ಕಳು, ಮರಿಮಕ್ಕಳಿಗೆ ಯಥೇಚ್ಛವಾಗಿ ಉಳಿಸಿಕೊಳ್ಳಲಿ II


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಈ ದುರ್ಬೋಧಕರು ಗುಣಗುಟ್ಟುವವರು, ಅತೃಪ್ತರು, ದುರಾಶೆಗಳಿಗೆ ಬಲಿಯಾದವರು, ಬಡಾಯಿಕೊಚ್ಚಿಕೊಳ್ಳುವವರು, ಸ್ವಪ್ರಯೋಜನಕ್ಕಾಗಿ ಮುಖಸ್ತುತಿ ಮಾಡುವವರು.


ನಂಬಿಕೆದ್ರೋಹಿಗಳೂ ದುಡುಕುವವರೂ ಮಹಾಗರ್ವಿಗಳೂ ಆಗುವರು. ದೇವರನ್ನು ಅರಸದೆ ಭೋಗಗಳನ್ನೇ ಬಯಸುವರು.


ಮತಿಗೆಟ್ಟ ಅಂಥವರಲ್ಲಿ ಸತ್ಯವೆಂಬುದು ಇರದು. ಧಾರ್ಮಿಕ ಸೇವೆಯು ಧನಗಳಿಕೆಯ ಸಾಧನವೆಂದೇ ಇವರ ನಂಬಿಕೆ.


ಹೀಗೆ ಸತ್ಯವನ್ನು ವಿಶ್ವಾಸಿಸದೆ, ಅಧರ್ಮದಲ್ಲಿ ಆನಂದಿಸುವವರೆಲ್ಲರೂ ಖಂಡನೆಗೆ ಗುರಿಯಾಗುವರು.


ಇತರರೆಲ್ಲರೂ ಸ್ವಕಾರ್ಯದಲ್ಲಿ ಮಗ್ನರಾಗಿರುವವರೇ ಹೊರತು ಯೇಸುಸ್ವಾಮಿಯ ಕಾರ್ಯದಲ್ಲಿ ನಿರತರಾಗಿಲ್ಲ.


ನೀವು ಜಂಬ ಕೊಚ್ಚಿಕೊಳ್ಳುವುದು ತರವಲ್ಲ. ಒಂದಿಷ್ಟು ಹುಳಿ, ಹಿಟ್ಟನ್ನೆಲ್ಲಾ ಹುದುಗೆಬ್ಬಿಸುತ್ತದೆಂಬುದನ್ನು ನೀವು ಚೆನ್ನಾಗಿ ಬಲ್ಲಿರಿ.


ಹೀಗಿರಲು, ನೀವು ಸೊಕ್ಕಿನಿಂದ ಮೆರೆಯಲು ಕಾರಣವಾದರೂ ಎಲ್ಲಿದೆ? ಬದಲಿಗೆ, ನೀವು ವ್ಯಸನಪಟ್ಟು ಅವನನ್ನು ನಿಮ್ಮ ಸಭಾಕೂಟದಿಂದ ಬಹಿಷ್ಕರಿಸಬೇಕಾಗಿತ್ತಲ್ಲವೆ?


ನೀವಾದರೋ, ‘ಸರ್ವೇಶ್ವರಸ್ವಾಮಿಯ ಪೀಠ ಅಶುದ್ಧ; ಅದರ ಮೇಲಿನ ಆಹಾರಪದಾರ್ಥಗಳು ಅಸಹ್ಯ’ ಎಂದು ಹೇಳಿ ನನ್ನ ನಾಮಕ್ಕೆ ಅಪಕೀರ್ತಿ ತರುತ್ತೀರಿ.


ಮೃಗವನ್ನು ಸೆರೆಹಿಡಿಯಲಾಯಿತು. ಅದರ ಜೊತೆಯಲ್ಲಿ ಕಪಟ ಪ್ರವಾದಿಯೂ ಸೆರೆಸಿಕ್ಕಿಬಿದ್ದನು. ಮೃಗದ ಮುಂದೆ ಪವಾಡ ಕಾರ್ಯಗಳನ್ನೆಸಗಿ ಅದರ ಮುದ್ರೆ ಒತ್ತಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಪೂಜೆ ಮಾಡಿದವರನ್ನು ಮರುಳುಗೊಳಿಸಿದವನು ಇವನೇ. ಇವರಿಬ್ಬರನ್ನೂ ಜೀವಸಹಿತ ಹಿಡಿದು ಗಂಧಕದಿಂದ ಉರಿಯುವ ಅಗ್ನಿಸರೋವರಕ್ಕೆ ಎಸೆಯಲಾಯಿತು.


ಆದರೆ ನೀವು ಅಹಂಭಾವದಿಂದ ಕೊಚ್ಚಿಕೊಳ್ಳುತ್ತೀರಿ. ಹಾಗೆ ಕೊಚ್ಚಿಕೊಳ್ಳುವುದು ಸರಿಯಲ್ಲ.


ಆಮೇಲೆ ಆ ಅಧರ್ಮಿ ಕಾಣಿಸಿಕೊಳ್ಳುವನು. ಅವನನ್ನು ಪ್ರಭು ಯೇಸು ತಮ್ಮ ಬಾಯುಸಿರಿನಿಂದಲೇ ಕೊಂದುಹಾಕುವರು; ತಮ್ಮ ಪ್ರತ್ಯಕ್ಷತೆಯ ತೇಜಸ್ಸಿನಿಂದಲೇ ತರಿದುಬಿಡುವರು.


ಬಹುಕಾಲ ನ್ಯಾಯಾಧೀಶನು ಅವಳಿಗೆ ಕಿವಿಗೊಡಲೇ ಇಲ್ಲ. ಕೊನೆಗೆ ಅವನು, ‘ನಾನು ದೇವರಿಗೆ ಹೆದರುವವನಲ್ಲ; ಮಾನವರಿಗೆ ಲಕ್ಷ್ಯಕೊಡುವವನೂ ಅಲ್ಲ;


“ಒಬ್ಬ ಧನಿಕನಿದ್ದ. ಬೆಲೆಬಾಳುವ ಉಡುಗೆ-ತೊಡುಗೆಗಳನ್ನೂ ನಯವಾದ ನಾರುಮಡಿಗಳನ್ನೂ ಧರಿಸಿಕೊಂಡು ದಿನನಿತ್ಯವೂ ಸುಖಭೋಗಗಳಲ್ಲಿ ಮೈಮರೆಯುತ್ತಿದ್ದ.


ಅಲ್ಲದೆ, “ಎಲೈ ಮನವೇ, ಅನೇಕ ವರ್ಷಗಳಿಗೆ ಬೇಕಾದಷ್ಟು ಸರಕು ಬಿದ್ದಿದೆ, ಆರಾಮವಾಗಿರು. ತಿನ್ನು, ಕುಡಿ, ಸುಖಪಡು ಎಂದು ಹೇಳಿಕೊಳ್ಳುತ್ತೇನೆ",’ ಎಂದುಕೊಂಡ.


“ಅನಂತರ ಆತನು ತನ್ನ ಎಡಗಡೆ ಇರುವವರನ್ನು ನೋಡಿ, ‘ಶಾಪಗ್ರಸ್ತರೇ, ನನ್ನಿಂದ ತೊಲಗಿರಿ. ಪಿಶಾಚಿಗೂ ಅವನ ದೂತರಿಗೂ ಸಿದ್ಧಮಾಡಿರುವ ಆರದ ಬೆಂಕಿಗೆ ಬೀಳಿರಿ.


ಆದರೆ ಯೇಸು ಪೇತ್ರನತ್ತ ತಿರುಗಿ, “ಸೈತಾನನೇ, ತೊಲಗಿಲ್ಲಿಂದ; ನೀನು ನನಗೆ ಅಡೆತಡೆ; ನಿನ್ನ ಈ ಆಲೋಚನೆ ಮನುಷ್ಯರದ್ದೇ ಹೊರತು, ದೇವರದಲ್ಲ,” ಎಂದರು.


ನಿಮ್ಮ ಮುಖಂಡರು ಲಂಚಕ್ಕಾಗಿ ನ್ಯಾಯತೀರಿಸುತ್ತಾರೆ. ನಿಮ್ಮ ಯಾಜಕರು ಸಂಬಳಕ್ಕಾಗಿ ಉಪದೇಶಮಾಡುತ್ತಾರೆ. ಆದರೂ ಸರ್ವೆಶ್ವರಸ್ವಾಮಿಯ ಮೇಲೆ ಭಾರಹಾಕಿದವರಂತೆ, “ಸ್ವಾಮಿ ನಮ್ಮೊಡನೆ ಇಲ್ಲವೆ? ನಮಗೆ ಕೇಡು ಸಂಭವಿಸುವುದಾದರೂ ಹೇಗೆ?” ಎಂದುಕೊಳ್ಳುತ್ತಾರೆ.


ಜನರನ್ನು ಸನ್ಮಾರ್ಗದಿಂದ ದುರ್ಮಾರ್ಗಕ್ಕೆ ಎಳೆಯುವ ಪ್ರವಾದಿಗಳಿಗೆ ತಿನ್ನಲು ಏನಾದರೂ ಕೊಟ್ಟರೆ “ಶಾಂತಿ” ಎನ್ನುತ್ತಾರೆ. ಆದರೆ ತಿನ್ನಲು ಯಾರಾದರೂ ಕೊಡದಿದ್ದರೆ ಯುದ್ಧದ ಬೆದರಿಕೆ ಹಾಕುತ್ತಾರೆ.


ನೀವು ಅವುಗಳ ಹಾಲನ್ನು ಕುಡಿಯುತ್ತೀರಿ, ಉಣ್ಣೆಯ ಹೊದಿಕೆಯನ್ನು ಹೊದಿಯುತ್ತೀರಿ. ಕೊಬ್ಬಿದ ಕುರಿಗಳನ್ನು ಕಡಿಯುತ್ತೀರಿ; ಆದರೆ ಕುರಿಗಳನ್ನು ಮೇಯಿಸುವುದಿಲ್ಲ.


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಏಕೆಂದರೆ, ಕೆಲವರು ಕಳ್ಳತನದಿಂದ ನಿಮ್ಮ ಸಭೆಯೊಳಗೆ ಸೇರಿಕೊಂಡಿದ್ದಾರೆ. ಇವರು ಭಕ್ತಿಹೀನರು; ನಮ್ಮ ದೇವರ ಅನುಗ್ರಹದ ನೆವದಲ್ಲಿ ತಮ್ಮ ಕಾಮಾಭಿಲಾಷೆಗಳನ್ನು ಸಮರ್ಥಿಸಿಕೊಳ್ಳುತ್ತಿರುವವರು; ನಮ್ಮ ಏಕೈಕ ಒಡೆಯರೂ ಪ್ರಭುವೂ ಆದ ಯೇಸುಕ್ರಿಸ್ತರನ್ನು ನಿರಾಕರಿಸುವವರು. ಇಂಥವರಿಗೆ ದಂಡನೆಯಾಗಬೇಕೆಂದು ಬಹಳ ಹಿಂದೆಯೇ ಪವಿತ್ರಗ್ರಂಥದಲ್ಲಿ ಲಿಖಿತವಾಗಿದೆ.


ಯಾವ ಕೃತ್ಯಗಳ ವಿಷಯದಲ್ಲಿ ಈಗ ನೀವು ನಾಚಿಕೆಪಡುತ್ತೀರೋ ಅವುಗಳನ್ನು ನೀವು ಹಿಂದೆ ಮಾಡುತ್ತಾ ಬಂದಿರಿ. ಅವುಗಳಿಂದ ನಿಮಗೆ ದೊರೆತ ಪ್ರತಿಫಲವಾದರೂ ಏನು? ಮೃತ್ಯುವೇ ಅವುಗಳ ಅಂತ್ಯಫಲ.


ನೀವು ಹಿಡಿಯುವಷ್ಟೆ ಜವೆಗೋಧಿಗೆ, ಚೂರುಪಾರು ರೊಟ್ಟಿಗೆ ಆಸೆಪಟ್ಟು, ಸುಳ್ಳುಮಾತಿಗೆ ಕಿವಿಗೊಡುವ ನನ್ನ ಜನರಿಗೆ ಸುಳ್ಳು ಹೇಳಿ, ಜೀವಿಸತಕ್ಕವರನ್ನು ಸಾಯಿಸಿ, ಸಾಯತಕ್ಕವರನ್ನು ಉಳಿಸಿ, ನನ್ನ ಜನರ ನಡುವೆ ನನ್ನ ಘನತೆಗೆ ಕುಂದುತಂದಿದ್ದೀರಿ.”


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ನಾವು, ನಮ್ಮ ಪೂರ್ವಜರು, ನಮ್ಮ ಅರಸರು, ಅಧಿಕಾರಿಗಳು ಜುದೇಯದ ಊರುಗಳಲ್ಲಿ ಮತ್ತು ಜೆರುಸಲೇಮಿನ ಬೀದಿಗಳಲ್ಲಿ ಮಾಡಿದಂತೆ ಗಗನದೊಡತಿಯಾದ ದೇವತೆಗೆ ಧೂಪಾರತಿ ಎತ್ತುತ್ತೇವೆ. ಪಾನನೈವೇದ್ಯವನ್ನು ಸುರಿಯುತ್ತೇವೆ. ನಾವು ಬಾಯಿಬಿಟ್ಟು ಹೇಳಿದ ಈ ಮಾತುಗಳನ್ನೆಲ್ಲಾ ಖಂಡಿತವಾಗಿ ನೆರವೇರಿಸುತ್ತೇವೆ. ಏಕೆಂದರೆ ಹಾಗೆ ಮಾಡುತ್ತಿದ್ದಾಗ ನಾವು ಯಾವ ಕೇಡನ್ನೂ ಕಾಣದೆ ಹೊಟ್ಟೆತುಂಬ ಉಂಡು ಸುಖಪಡುತ್ತಿದ್ದೆವು.


ಇವರು ಪ್ರಭುವಿನ ಸನ್ನಿಧಿಯಿಂದಲೂ ಅವರ ಪ್ರಭಾವದ ಮಹಿಮೆಯಿಂದಲೂ ಬಹಿಷ್ಕೃತರಾಗಿ, ನಿತ್ಯದಂಡನೆಗೆ ಗುರಿಯಾಗುವರು.


ಆದರೆ, ಈ ಜನರು ತಮಗೆ ಅರ್ಥವಾಗದ ಎಲ್ಲವನ್ನೂ ದೂಷಿಸುತ್ತಾರೆ. ವಿಚಾರ ಶೂನ್ಯ ಪ್ರಾಣಿಗಳಂತೆ ಸಹಜ ಪ್ರವೃತ್ತಿಯಿಂದ ಏನನ್ನು ತಿಳಿದುಕೊಳ್ಳುತ್ತಾರೋ ಅದರಿಂದಲೇ ನಾಶವಾಗುತ್ತಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು