Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:10 - ಕನ್ನಡ ಸತ್ಯವೇದವು C.L. Bible (BSI)

10 ನನ್ನ ಬಗ್ಗೆ ನಿಮಗಿರುವ ಮಮತೆಯು ಇಷ್ಟು ದಿನಗಳಾದ ಮೇಲೆ ಪುನಃ ಅರಳಿದ್ದಕ್ಕೆ ಪ್ರಭುವಿನಲ್ಲಿ ನಾನು ಬಹಳ ಸಂತೋಷಪಡುತ್ತೇನೆ. ಇಂಥ ಮಮತೆ ನಿಮಗೆ ಮೊದಲಿನಿಂದ ಇತ್ತಾದರೂ ಅದನ್ನು ವ್ಯಕ್ತಪಡಿಲು ನಿಮಗೆ ಸೂಕ್ತ ಸಂದರ್ಭ ಒದಗಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ನನ್ನ ವಿಷಯದಲ್ಲಿ ನಿಮಗಿರುವ ಕಾಳಜಿಯು ಇಷ್ಟು ದಿನಗಳಾದ ಮೇಲೆ ಪುನಃ ಚಿಗುರಿದಕ್ಕೆ ನಾನು ಕರ್ತನಲ್ಲಿ ಹೆಚ್ಚಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ಈ ಮೊದಲೇ ಇದ್ದಿದ್ದರೂ, ಸಹಾಯ ಮಾಡುವುದಕ್ಕೆ ಸರಿಯಾದ ಸಂದರ್ಭ ಒದಗಿ ಬಂದಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ವಿಷಯವಾದ ನಿಮ್ಮ ಯೋಚನೆಯೆಂಬ ಬಳ್ಳಿಯು ಇಷ್ಟು ದಿವಸಗಳಾದ ಮೇಲೆ ಪುನಃ ಚಿಗುರಿದ್ದಕ್ಕೆ ನಾನು ಕರ್ತನ ನಿವಿುತ್ತ ಬಹಳವಾಗಿ ಸಂತೋಷಪಡುತ್ತೇನೆ. ಇಂಥ ಯೋಚನೆ ನಿಮ್ಮಲ್ಲಿ ನಿಜವಾಗಿ ಇರುತ್ತಿದ್ದರೂ ಇದುವರೆಗೆ ಅದರ ಪ್ರಕಾರ ಮಾಡುವದಕ್ಕೆ ಸಂದರ್ಭ ಸಿಕ್ಕಲಿಲ್ಲವೇನೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ನನ್ನ ಮೇಲೆ ನಿಮಗಿರುವ ಚಿಂತೆಯನ್ನು ನೀವು ಮತ್ತೆ ತೋರಿಸಿದ್ದಕ್ಕಾಗಿ ನಾನು ಪ್ರಭುವಿನಲ್ಲಿ ಬಹು ಸಂತೋಷಪಡುತ್ತೇನೆ. ನೀವು ನನ್ನ ಬಗ್ಗೆ ಚಿಂತಿಸುತ್ತಲೇ ಇದ್ದೀರಿ. ಆದರೆ ಅದನ್ನು ತೋರಿಸಲು ನಿಮಗೆ ಅವಕಾಶವೇ ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅಂತೂ ಕೊನೆಯದಾಗಿ ನನ್ನ ಬಗ್ಗೆ ನಿಮಗಿರುವ ಆಸಕ್ತಿಯು ಪುನಃ ಚಿಗುರಿದ್ದಕ್ಕಾಗಿ ಕರ್ತ ದೇವರಲ್ಲಿ ಬಹಳವಾಗಿ ಆನಂದಿಸುತ್ತೇನೆ. ನೀವು ನನ್ನ ಬಗ್ಗೆ ಆಸಕ್ತಿ ಮೊದಲಿನಿಂದ ಹೊಂದಿದ್ದರೂ ಅದನ್ನು ತೋರಿಸಲು ನಿಮಗೆ ಸೂಕ್ತ ಅವಕಾಶ ಸಿಕ್ಕಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಅತ್ತಾ ತರಿಬಿ ಮಾಜ್ಯಾ ವಿಶಯಾತ್ ತುಮಿ ಚಿಂತುಲ್ಲ್ಯಾಸಿ ಮನುನ್ ದಾಕ್ವುನ್ ದಿಲ್ಲ್ಯಾಸಾಟ್ನಿ ಮಿಯಾ ಧನಿಯಾಕ್ಡೆ ಲೈ ಖುಶಿ ಹೊತಾ, ತುಮಿ ಹ್ಯಾ ವಿಶಯಾತ್ ಚಿಂತುನ್ ರ್‍ಹಾಲ್ಯಾರ್‍ಬಿ ತುಮ್ಕಾ ಅವಕಾಸ್ ಗಾವ್ಕ್ ನಸಲ್ಲೊ ಕಾಯ್ಕಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:10
11 ತಿಳಿವುಗಳ ಹೋಲಿಕೆ  

ನಾನು ನಿಮ್ಮೊಂದಿಗಿದ್ದಾಗ ನನಗೆ ಹಣದ ಕೊರತೆ ಇದ್ದರೂ ನಿಮ್ಮಲ್ಲಿ ಯಾರಿಗೂ ಹೊರೆಯಾಗಲಿಲ್ಲ. ಮಕೆದೋನಿಯದಿಂದ ಬಂದ ಸಹೋದರರು ನನ್ನ ಕೊರತೆಯನ್ನೆಲ್ಲಾ ನೀಗಿಸಿದರು. ನಿಮಗೆ ಯಾವುದರಲ್ಲೂ ಹೊರೆಯಾಗಬಾರದೆಂದು ಎಚ್ಚರಿಕೆ ವಹಿಸಿದ್ದೆ; ಇನ್ನು ಮುಂದಕ್ಕೂ ಎಚ್ಚರಿಕೆಯಿಂದ ಇರುತ್ತೇನೆ.


ದೇವರ ವಾಕ್ಯದ ಉಪದೇಶ ಪಡೆಯುವವನು ಉಪದೇಶ ಮಾಡುವವನೊಂದಿಗೆ ತನಗೆ ಇರುವ ಒಳ್ಳೆಯದನ್ನೆಲ್ಲಾ ಹಂಚಿಕೊಳ್ಳಲಿ.


ನಿಮ್ಮನ್ನು ಜ್ಞಾಪಿಸಿಕೊಳ್ಳುವಾಗಲೆಲ್ಲ ನಾನು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.


ಎಂದೇ ಸಮಯಸಂದರ್ಭಗಳು ಇರುವಾಗಲೇ ಸರ್ವರಿಗೂ ಉಪಕಾರಮಾಡೋಣ. ಅದರಲ್ಲೂ ಮುಖ್ಯವಾಗಿ, ಒಂದೇ ಕುಟುಂಬದವರಂತೆ ಇರುವ ಕ್ರೈಸ್ತವಿಶ್ವಾಸಿಗಳಿಗೆ ಉಪಕಾರ ಮಾಡೋಣ.


ಸತ್ಯೋಕ್ತಿ, ದೈವಶಕ್ತಿ, ಇವುಗಳಿಂದಲೂ ನಾವು ದೇವರ ದಾಸರೆಂದು ತೋರ್ಪಡಿಸುತ್ತೇವೆ. ರಕ್ಷಿಸಲೂ ಎದುರಿಸಲೂ ಧರ್ಮವೆಂಬ ಆಯುಧವನ್ನು ಕೈಯಲ್ಲಿ ಹಿಡಿದಿದ್ದೇವೆ.


ನವಜೀವವನು ತುಂಬಿಸಲಾರೆಯಾ ನಮ್ಮಲಿ? I ಆಗ ನಿನ್ನ ಜನರು ಆನಂದಿಸುವರು ನಿನ್ನಲಿ II


ಕ್ರಿಸ್ತಯೇಸುವಿನ ಸೇವೆಯಲ್ಲಿ ಅವನು ಸತ್ತು ಬದುಕಿದ್ದಾನೆ. ನೀವು ಕೊಡಲು ಸಾಧ್ಯವಾಗದೆ ಹೋದ ನೆರವನ್ನು ಅವನು ನನಗೆ ಕೊಟ್ಟು ಸೇವೆಯನ್ನು ಪೂರ್ಣಗೊಳಿಸಿದ್ದಾನೆ.


ಕ್ರಿಸ್ತಯೇಸುವಿನಲ್ಲಿ ಜೀವಿಸುವ ಫಿಲಿಪ್ಪಿಯ ದೇವಜನರಿಗೆ, ಧರ್ಮಾಧಿಕಾರಿಗಳಿಗೆ ಹಾಗೂ ಧರ್ಮಸೇವಕರಿಗೆ - ಕ್ರಿಸ್ತಯೇಸುವಿನ ದಾಸರಾದ ಪೌಲ ಮತ್ತು ತಿಮೊಥೇಯರು ಜೊತೆಗೂಡಿ ಬರೆಯುವ ಪತ್ರ.


ಮರಳಿ ಆಶ್ರಯಿಸುವರು ನನ್ನ ನೆರಳನ್ನು ಆ ಜನತೆ ಅಭಿವೃದ್ಧಿಯಾಗುವರು ಉದ್ಯಾನವನದಂತೆ ಫಲಪ್ರದವಾಗುವರು ಆ ಜನರು ದ್ರಾಕ್ಷಾಲತೆಯಂತೆ ಸುಪ್ರಸಿದ್ಧ ಅವರ ಕೀರ್ತಿ ಲೆಬನೋನಿನ ದ್ರಾಕ್ಷಾರಸದಂತೆ.


ಹಿಜ್ಕೀಯನೂ ಪದಾಧಿಕಾರಿಗಳೂ ಬಂದು ಆ ರಾಶಿಗಳನ್ನು ನೋಡಿದಾಗ ಸರ್ವೇಶ್ವರನನ್ನು ಕೊಂಡಾಡಿ ಅವರ ಪ್ರಜೆಗಳಾದ ಇಸ್ರಯೇಲರನ್ನು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು