Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಫಿಲಿಪ್ಪಿಯವರಿಗೆ 4:6 - ಕನ್ನಡ ಸತ್ಯವೇದವು C.L. Bible (BSI)

6 ಯಾವ ವಿಷಯದಲ್ಲೂ ಚಿಂತಿಸದೆ, ನಿಮ್ಮ ಅಗತ್ಯಗಳಿಗಾಗಿ ದೇವರಲ್ಲಿ ಪ್ರಾರ್ಥಿಸಿರಿ. ಪ್ರಾರ್ಥಿಸುವಾಗಲೆಲ್ಲಾ ನಿಮ್ಮಲ್ಲಿ ಕೃತಜ್ಞತಾಭಾವ ಇರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯಗಳಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ಕರ್ತನಿಗೆ ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾವುದರ ಬಗ್ಗೆಯೂ ಚಿಂತಿಸಬೇಡಿ. ಆದರೆ ಪ್ರಾರ್ಥನೆ ಮಾಡುತ್ತಾ ನಿಮ್ಮ ಅಗತ್ಯತೆಗಳಿಗೆಲ್ಲಾ ದೇವರಲ್ಲಿ ವಿಜ್ಞಾಪಿಸಿರಿ. ನೀವು ಪ್ರಾರ್ಥನೆ ಮಾಡುವಾಗಲೆಲ್ಲಾ ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾವ ವಿಷಯವಾಗಿಯೂ ಚಿಂತೆ ಮಾಡದೆ, ಸರ್ವ ವಿಷಯದಲ್ಲಿ ಕೃತಜ್ಞತಾಸ್ತುತಿಯೊಡನೆ ಪ್ರಾರ್ಥನೆ ವಿಜ್ಞಾಪನೆಗಳನ್ನು ಮಾಡುತ್ತಾ ನಿಮ್ಮ ಬೇಡಿಕೆಯನ್ನು ದೇವರಿಗೆ ಸಮರ್ಪಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಕಸ್ಲ್ಯಾ ವಿಶಯಾತ್ಬಿ ಚಿಂತಿನಸ್ತಾನಾ ಸಗ್ಳ್ಯಾ ವಿಶಯಾತ್ನಿ ದೆವಾಚ್ಯಾ ಇದ್ರಾಕ್ ಧನ್ಯವಾದ್, ಅನಿ ಮಾಗ್ನಿಯಾ ಕರುನ್ಗೆತ್ ತುಮ್ಕಾ ಪಾಜೆ ಹೊಲ್ಲೆ ಸಗ್ಳ್ಯೆ ಸಾಂಗುನ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಫಿಲಿಪ್ಪಿಯವರಿಗೆ 4:6
45 ತಿಳಿವುಗಳ ಹೋಲಿಕೆ  

ನಿಮ್ಮ ಚಿಂತೆಯನ್ನೆಲ್ಲಾ ಅವರಿಗೇ ಬಿಟ್ಟುಬಿಡಿ. ನಿಮ್ಮ ಮೇಲೆ ಅವರಿಗೆ ಲಕ್ಷ್ಯವಿದೆ.


ಪ್ರಭುವಿನ ಮೇಲೆ ಹಾಕು ನಿನ್ನ ಚಿಂತಾಭಾರವನು I ಉದ್ಧರಿಸುವನು, ಸಜ್ಜನರನೆಂದಿಗೂ ಕದಲಗೊಡಿಸನು II


ನೀವು ಅವರಂತೆ ಆಗಬೇಡಿ. ನಿಮ್ಮ ಅಗತ್ಯಗಳೇನೆಂದು ನೀವು ಕೇಳುವುದಕ್ಕೆ ಮೊದಲೇ ನಿಮ್ಮ ತಂದೆಗೆ ಗೊತ್ತಿದೆ.


“ನನ್ನನ್ನು ಬೇಡಿಕೊ, ನಾನು ನಿನಗೆ ಸದುತ್ತರವನ್ನು ದಯಪಾಲಿಸುವೆನು. ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು.


ನಿನ್ನ ಕಾರ್ಯಭಾರವನ್ನು ಸರ್ವೇಶ್ವರನಿಗೆ ವಹಿಸು; ಆಗ ಸಫಲವಾಗುವುದು ನಿನ್ನ ಯೋಜನೆಯು.


ಜನರೇ, ಸದಾ ಭರವಸೆ ಇಡಿ ದೇವನಲಿ I ತೋಡಿಕೊಳ್ಳಿ ನಿಮ್ಮ ಅಳಲನು ಆತನಲಿ II


ಪ್ರಾರ್ಥನಾ ಜೀವನ ನಡೆಸಿರಿ. ಪ್ರಾರ್ಥಿಸುವಾಗಲೆಲ್ಲಾ ಎಚ್ಚರವಾಗಿದ್ದು ಕೃತಜ್ಞತಾಸ್ತುತಿಯನ್ನು ಸಲ್ಲಿಸಿರಿ.


ಪವಿತ್ರಾತ್ಮರಿಂದ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲೂ ಪ್ರಾರ್ಥಿಸಿರಿ. ನಿಮ್ಮ ಕೋರಿಕೆ, ಬೇಡಿಕೆಗಳನ್ನು ದೇವರಿಗೆ ಅರ್ಪಿಸಿರಿ. ಎಚ್ಚರವಾಗಿದ್ದು ಎಲ್ಲಾ ದೇವಜನರಿಗಾಗಿ ಎಡೆಬಿಡದೆ ಪ್ರಾರ್ಥಿಸಿರಿ.


ನುಡಿಯಲ್ಲಾಗಲೀ ನಡೆಯಲ್ಲಾಗಲೀ ನೀವು ಏನು ಮಾಡಿದರೂ ಯೇಸುಸ್ವಾಮಿಯ ಹೆಸರಿನಲ್ಲಿಯೇ ಮಾಡಿರಿ. ಅವರ ಮುಖಾಂತರವೇ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


ಅನಂತರ ಯೇಸುಸ್ವಾಮಿ ತಮ್ಮ ಶಿಷ್ಯರಿಗೆ, “ಈ ಕಾರಣದಿಂದ ನೀವು ನಿಮ್ಮ ‘ಪ್ರಾಣಧಾರಣೆಗೆ ಏನು ಉಣ್ಣುವುದು, ದೇಹರಕ್ಷಣೆಗೆ ಏನು ಹೊದೆಯುವುದು’ ಎಂದು ಚಿಂತೆಮಾಡಬೇಡಿ.


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ನಿಮ್ಮ ಹೃನ್ಮನಗಳು ಕ್ರಿಸ್ತಯೇಸುವಿನ ಶಾಂತಿಸಮಾಧಾನದಿಂದ ತುಂಬಿರಲಿ. ನೀವು ಒಂದೇ‍ ಶರೀರವಾಗಿ ಬಾಳಲು ಕರೆಯಲ್ಪಟ್ಟಿದ್ದೀರಿ; ಕೃತಜ್ಞತೆ ಉಳ್ಳವರಾಗಿ ಜೀವಿಸಿರಿ.


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ನಮ್ಮ ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ಯಾವಾಗಲೂ ಎಲ್ಲ ವರಗಳಿಗಾಗಿಯೂ ಪಿತನಾದ ದೇವರಿಗೆ ಕೃತಜ್ಞತೆಯನ್ನು ಸಲ್ಲಿಸಿರಿ.


ತ್ರಿಕಾಲದೊಳು ಗೋಗರೆದು ಯಾಚಿಸುವೆನು I ಎನ್ನಯ ಮೊರೆಗಾತನು ಕಿವಿಗೊಡದಿರನು II


ಯೇಸು ಆಕೆಗೆ ಪ್ರತ್ಯುತ್ತರವಾಗಿ, “ಮಾರ್ತಾ, ಮಾರ್ತಾ, ನೀನು ಅನಾವಶ್ಯ ಚಿಂತೆ ಪೇಚಾಟಗಳಿಗೆ ಒಳಗಾಗಿರುವೆ.


ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


ನಿಮ್ಮನ್ನು ಹಿಡಿದೊಪ್ಪಿಸುವಾಗ ಹೇಗೆ ವಾದಿಸುವುದು, ಏನು ಹೇಳುವುದು ಎಂದು ಚಿಂತಾಕ್ರಾಂತರಾಗಬೇಡಿ. ಏಕೆಂದರೆ ನೀವು ಹೇಳಬೇಕಾದುದ್ದನ್ನು ಅದೇ ಗಳಿಗೆಯಲ್ಲಿ ನಿಮಗೆ ಕಲಿಸಿಕೊಡಲಾಗುವುದು.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ಅಲ್ಲದೆ, ಅನ್ನಪಾನಗಳಿಗೆ ಏನು ಮಾಡೋಣ ಎಂದು ತೊಳಲಾಡಬೇಡಿ, ಪೇಚಾಡಬೇಡಿ.


ಆಕೆ, “ಇಲ್ಲ ಸ್ವಾಮಿ, ನಾನು ಕುಡಿದಿಲ್ಲ, ನಾನು ಬಹಳ ದುಃಖಪೀಡಿತಳು; ದ್ರಾಕ್ಷಾರಸವನ್ನಾಗಲಿ ಬೇರೆ ಯಾವ ಮದ್ಯವನ್ನಾಗಲಿ ಕುಡಿದವಳಲ್ಲ. ನನ್ನ ಮನೋವೇದನೆಯನ್ನು ಸರ್ವೇಶ್ವರನ ಮುಂದೆ ತೋಡಿಕೊಳ್ಳುತ್ತಾ ಇದ್ದೇನೆ.


ನೀವು ಚಿಂತೆಯಿಲ್ಲದೆ ಇರಬೇಕೆಂಬುದೇ ನನ್ನ ಇಷ್ಟ. ಮದುವೆಯಾಗದವನು ಪ್ರಭುವಿನ ಸೇವೆಯಲ್ಲಿ ತತ್ಪರನಾಗಿರುತ್ತಾನೆ; ಪ್ರಭುವನ್ನು ಮೆಚ್ಚಿಸಲು ಶ್ರಮಿಸುತ್ತಾನೆ.


ಎಲ್ಲದರ ಅಂತ್ಯಕಾಲವು ಹತ್ತಿರವಾಯಿತು. ಈ ಕಾರಣ ನೀವು ಜಿತೇಂದ್ರಿಯರಾಗಿಯೂ ಜಾಗ್ರತರಾಗಿಯೂ ಪ್ರಾರ್ಥನೆಮಾಡುತ್ತಿರಿ.


ಇನ್ನೊಬ್ಬನು ಸಂದೇಶವನ್ನೇನೋ ಕೇಳುತ್ತಾನೆ, ಆದರೆ ಪ್ರಾಪಂಚಿಕ ಚಿಂತನೆಗಳು, ಐಶ್ವರ್ಯದ ವ್ಯಾಮೋಹಗಳು ಆ ಸಂದೇಶವನ್ನು ಫಲಬಿಡದಂತೆ ಅದುಮಿಬಿಡುತ್ತವೆ; ಇವನು ಮುಳ್ಳುಪೊದೆಗಳಲ್ಲಿ ಬಿದ್ದ ಬೀಜವನ್ನು ಹೋಲುತ್ತಾನೆ.


ಇದನ್ನು ಕೇಳಿದ ಶದ್ರಕ್, ಮೇಶಕ್ ಮತ್ತು ಅಬೇದ್‍ನೆಗೋ ಎಂಬುವರು ರಾಜನಿಗೆ: “ನೆಬೂಕದ್ನೆಚ್ಚರ ಅರಸರೇ, ಈ ವಿಷಯದಲ್ಲಿ ನಾವು ನಿಮಗೆ ಏನನ್ನೂ ಹೇಳಬೇಕಾಗಿಲ್ಲ.


ಈ ಕಾರಣ ಅರಸ ಹಿಜ್ಕೀಯನು ಹಾಗು ಆಮೋಚನ ಮಗ ಯೆಶಾಯನೆಂಬ ಪ್ರವಾದಿಯು ಪರಲೋಕಕ್ಕೆ ಮೊರೆಯಿಟ್ಟು ಪ್ರಾರ್ಥಿಸಿದರು. ಸರ್ವೇಶ್ವರಸ್ವಾಮಿ ದೂತನನ್ನು ಕಳುಹಿಸಿ


ಅನಂತರ ಸಮುವೇಲನು ಮಿಚ್ಪೆಗೂ ಶೇನಿಗೂ ಮಧ್ಯದಲ್ಲಿ ಒಂದು ಕಲ್ಲನ್ನು ನಿಲ್ಲಿಸಿ, “ಸರ್ವೇಶ್ವರ ಇಲ್ಲಿಯವರೆಗೆ ನಮಗೆ ಸಹಾಯ ಮಾಡಿದರು,” ಎಂದು ಹೇಳಿ ಅದಕ್ಕೆ, ‘ಎಬನೆಜೆರ್’ ಎಂದು ಹೆಸರಿಟ್ಟನು.


ಬಂಡೆಯ ಬಿರುಕುಗಳಲ್ಲಿ ಸಂದುಗಳ ಮರೆಯಲ್ಲಿ ತಂಗಿರುವ ಪಾರಿವಾಳವೇ ಬಾ. ನಿನ್ನ ರೂಪವನು ನನಗೆ ಕಾಣಿಸು ನಿನ್ನ ದನಿಯನು ನನಗೆ ಕೇಳಿಸು. ನಿನ್ನ ದನಿ ಎನಿತೋ ಇಂಪು! ನಿನ್ನ ರೂಪ ಎನಿತೋ ತಂಪು!


ದೇವರು ಕರೆದಾಗ ನೀನು ದಾಸ್ಯದಲ್ಲಿದ್ದೆಯೋ? ಚಿಂತೆಯಿಲ್ಲ. ಆದರೆ ಸ್ವತಂತ್ರನಾಗುವ ಅವಕಾಶ ದೊರೆತರೆ ಅದನ್ನು ಬಿಡಬೇಡ.


ಆದರೂ ನನ್ನ ದೇವರೇ, ಸರ್ವೇಶ್ವರಾ, ನಿಮ್ಮ ದಾಸನ ಪ್ರಾರ್ಥನೆಗೂ ವಿಜ್ಞಾಪನೆಗೂ ಕಿವಿಗೊಡಿ; ಈ ದಿನ ನಿಮ್ಮನ್ನು ಪ್ರಾರ್ಥಿಸುತ್ತಿರುವ ನಿಮ್ಮ ದಾಸನ ಮೊರೆಯನ್ನು ಆಲಿಸಿರಿ.


ಕ್ರಯಪತ್ರವನ್ನು ನೇರೀಯನ ಮಗ ಬಾರೂಕನ ಕೈಗೆ ಕೊಟ್ಟಮೇಲೆ ನಾನು ಸ್ವಾಮಿಗೆ ಹೀಗೆ ಪ್ರಾರ್ಥನೆಮಾಡಿದೆ:


ಶಾಸನಕ್ಕೆ ರುಜುವಾದ ವಿಷಯ ದಾನಿಯೇಲನಿಗೆ ತಿಳಿಯಿತು. ಆತ ತನ್ನ ಮನೆಗೆ ಹೊರಟುಹೋದನು. ಅಲ್ಲಿ ತನ್ನ ಮಹಡಿಯ ಕೊಠಡಿಯಲ್ಲಿನ ಕಿಟಕಿಗಳು ಜೆರುಸಲೇಮಿನ ಕಡೆಗೆ ತೆರೆದಿದ್ದವು. ವಾಡಿಕೆಯ ಪ್ರಕಾರ ದಿನಕ್ಕೆ ಮೂರಾವರ್ತಿ ಅಲ್ಲಿ ತನ್ನ ದೇವರಿಗೆ ಮೊಣಕಾಲೂರಿ ಪ್ರಾರ್ಥಿಸಿ ಸ್ತೋತ್ರ ಸಲ್ಲಿಸುತ್ತಿದ್ದನು.


ಆದುದರಿಂದ ನಾಳೆಯ ಚಿಂತೆ ನಿಮಗೆ ಬೇಡ. ನಾಳೆಯ ಚಿಂತೆ ನಾಳೆಗೇ ಇರಲಿ. ಇಂದಿನ ಪಾಡೇ ಇಂದಿಗೆ ಸಾಕು.”


ಮೊತ್ತಮೊದಲು ಮಾನವರೆಲ್ಲರಿಗೋಸ್ಕರ ದೇವರಿಗೆ ವಿಜ್ಞಾಪನೆ, ಪ್ರಾರ್ಥನೆ, ಬಿನ್ನಹ ಹಾಗೂ ಕೃತಜ್ಞತಾಸ್ತುತಿಗಳನ್ನು ಸಲ್ಲಿಸಬೇಕೆಂದು ಕೇಳಿಕೊಳ್ಳುತ್ತೇನೆ.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು