Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:1 - ಕನ್ನಡ ಸತ್ಯವೇದವು C.L. Bible (BSI)

1 ಅಬ್ರಹಾಮನ ಮನೆತನಕ್ಕೆ ಸೇರಿದ ದಾವೀದ ಕುಲದ ಯೇಸುಕ್ರಿಸ್ತರ ವಂಶಾವಳಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅಬ್ರಹಾಮನ ಮಗನಾದ ದಾವೀದನ ಕುಮಾರನಾದ ಯೇಸು ಕ್ರಿಸ್ತನ ವಂಶಾವಳಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ಕ್ರಿಸ್ತನ ವಂಶಾವಳಿಯು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ಕ್ರಿಸ್ತನ ವಂಶಾವಳಿಯಿದು. ಆತನು ದಾವೀದನ ವಂಶದವನು. ದಾವೀದನು ಅಬ್ರಹಾಮನ ವಂಶದವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಜೆಜು ಕ್ರಿಸ್ತಾಚಿ ವಂಶಾವಳಿ ಹಿ. ಜೆಜು ಅಬ್ರಾಹಾಮಾಚ್ಯಾ ಪಿಳ್ಗಿತ್ಲ್ಯಾ ದಾವಿದಾಚ್ಯಾ ಪಿಳ್ಗಿಚೊ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:1
39 ತಿಳಿವುಗಳ ಹೋಲಿಕೆ  

ನೀನು ನನ್ನ ಮಾತನ್ನು ಕೇಳಿದ್ದರಿಂದ ವಿಶ್ವದ ಎಲ್ಲ ರಾಷ್ಟ್ರಗಳಿಗೂ ನಿನ್ನ ಸಂತತಿಯ ಮೂಲಕ ಆಶೀರ್ವಾದವುಂಟಾಗುವುದು ಎಂಬುದಾಗಿ ಸರ್ವೇಶ್ವರನೇ ಆಣೆಯಿಟ್ಟು ಹೇಳಿದ್ದಾರೆ,” ಎಂದನು.


ಹಾಗೆಯೇ, ದೇವರು ಅಬ್ರಹಾಮನಿಗೂ ಆತನ ಸಂತತಿಗೂ ವಾಗ್ದಾನಗಳನ್ನು ಮಾಡಿದರು. "ನಿನ್ನ ಸಂತತಿಗಳಿಗೆ" ಎಂದು ಹೇಳಿ ಅನೇಕರನ್ನು ಸೂಚಿಸದೆ “ನಿನ್ನ ಸಂತತಿಗೆ” ಎಂದು ಹೇಳಿ ಒಬ್ಬ ವ್ಯಕ್ತಿಯನ್ನೇ ಆ ವಾಗ್ದಾನದಲ್ಲಿ ಸೂಚಿಸಿದರು. ಆ ವ್ಯಕ್ತಿಯೇ ಕ್ರಿಸ್ತಯೇಸು.


ಈ ಸಂದೇಶ ದೇವರ ಪುತ್ರನೂ ನಮ್ಮ ಪ್ರಭುವೂ ಆದ ಯೇಸುಕ್ರಿಸ್ತರನ್ನು ಕುರಿತಾದುದು. ಮನುಷ್ಯತ್ವದ ಮಟ್ಟಿಗೆ ಯೇಸು ದಾವೀದನ ವಂಶಜರು; ದೈವಿಕ ಪರಿಶುದ್ಧತೆಯ ಮಟ್ಟಿಗೆ ಇವರು ದೇವರ ಶಕ್ತಿಯನ್ನು ವ್ಯಕ್ತಪಡಿಸುವ ದೇವರ ಪುತ್ರ. ಸತ್ತು ಪುನರುತ್ಥಾನ ಹೊಂದಿ ಇದನ್ನು ಖಚಿತಪಡಿಸಿದವರು.


“ಯೇಸುವೆಂಬ ನಾನೇ ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ಬಗ್ಗೆ ನಿಮಗೆ ಸಾಕ್ಷಿನೀಡಲೆಂದು ನನ್ನ ದೂತನನ್ನು ಕಳುಹಿಸಿದೆನು. ನಾನು ದಾವೀದಕುಲಪುತ್ರ. ಅದೇ ವಂಶದ ಕುಡಿ; ಉದಯಕಾಲದ ಉಜ್ವಲ ನಕ್ಷತ್ರ!


ದಾವೀದನಿಗೆ ಪ್ರಭು ಆಣೆಯಿಟ್ಟು ಇಂತೆಂದ: I ಆಣೆಯಿಟ್ಟು ಕೊಟ್ಟಾ ಮಾತಿಗೆ ತಪ್ಪಲಾರನಾತ: I “ನಿನ್ನ ಸಿಂಹಾಸನದಲಿ ಕೂರಿಸುವೆನು ನಿನ್ನ ತನುಜನೊಬ್ಬನನು” II


ಸರ್ವೇಶ್ವರ ಹೇಳುವುದನ್ನು ಗಮನಿಸಿರಿ: “ದಿನಗಳು ಬರಲಿವೆ; ಆಗ ನಾನು ದಾವೀದನೆಂಬ ಮೂಲದಿಂದ ಒಂದು ‘ಮೊಳಿಕೆ’ಯನ್ನು ಚಿಗುರಿಸುವೆನು. ಆತ ಸತ್ಪುರುಷ; ರಾಜನಾಗಿ ಆಳುವನು. ವಿವೇಕದಿಂದ ಕಾರ್ಯ ಸಾಧಿಸುವನು. ಧರೆಯಲ್ಲಿ ನ್ಯಾಯನೀತಿಯನ್ನು ನಿರ್ವಹಿಸುವನು.


ಜೆಸ್ಸೆಯನ ಬುಡದಿಂದ ಒಡೆಯುವುದೊಂದು ಚಿಗುರು; ಅದರ ಬೇರಿನಿಂದ ಫಲಿಸುವುದೊಂದು ತಳಿರು.


‘ಆತ ದಾವೀದ ವಂಶಜನು; ಆತನು ಹುಟ್ಟುವುದು ದಾವೀದನ ಊರಾದ ಬೆತ್ಲೆಹೇಮಿನಲ್ಲಿ’ ಎಂದು ಪವಿತ್ರಗ್ರಂಥವೇ ಹೇಳಿದೆಯಲ್ಲವೆ?” ಎಂದು ವಾದಿಸಿದರು.


"ನಿನ್ನನ್ನು ಹರಸುವವರನು ನಾ ಹರಸುವೆ, ನಿನ್ನನ್ನು ಶಪಿಸುವವರನು ನಾ ಶಪಿಸುವೆ. ಧರೆಯ ಕುಲದವರಿಗೆಲ್ಲ ನಿನ್ನ ಮುಖೇನ ದೊರಕುವುದು ನನ್ನಿಂದ ಆಶೀರ್ವಾದ.”


ಆತನೊಬ್ಬ ಪ್ರವಾದಿಯೂ ಆಗಿದ್ದ. ತನ್ನ ಸಂತತಿಯಲ್ಲೇ ಒಬ್ಬನನ್ನು ಅರಸನನ್ನಾಗಿ ಮಾಡುವುದಾಗಿ ದೇವರು ಮಾಡಿದ್ದ ವಾಗ್ದಾನವನ್ನು ಆತನು ಮರೆತಿರಲಿಲ್ಲ.


ಕ್ರಿಸ್ತಯೇಸುವಿನ ಜನನದ ಪ್ರಕರಣ: ಯೇಸುವಿನ ತಾಯಿ ಮರಿಯಳಿಗೂ ಜೋಸೆಫನಿಗೂ ನಿಶ್ಚಿತಾರ್ಥವಾಗಿತ್ತು. ಅವರಿಬ್ಬರೂ ಕೂಡಿ ಬಾಳುವುದಕ್ಕೆ ಮುಂಚೆಯೇ ಮರಿಯಳು ಗರ್ಭವತಿಯಾಗಿರುವುದು ತಿಳಿದುಬಂತು. ಆಕೆ ಗರ್ಭ ಧರಿಸಿದ್ದು ಪವಿತ್ರಾತ್ಮ ಪ್ರಭಾವದಿಂದ.


ಎಳೆದೊಯ್ದರು ಬಂಧನದಿಂದ, ನ್ಯಾಯಸ್ಥಾನದಿಂದ ಹೌದು, ದೂರಮಾಡಿದರು ಆತನನು ಜೀವಲೋಕದಿಂದ. ವಧೆಯಾದನಾತ ನಮ್ಮ ಜನರ ಪಾಪದ ದೆಸೆಯಿಂದ. ಆದರೂ ಸಮಕಾಲೀನವರಾರು ಮರುಗಲಿಲ್ಲ ಕನಿಕರದಿಂದ.


ಅಬ್ರಹಾಮ್, ಇಸಾಕ್ ಮತ್ತು ಯಕೋಬ ಎಂಬ ಪಿತಾಮಹರೂ ಸಹ ಇವರಿಗೆ ಸೇರಿದವರೇ. ಶಾರೀರಿಕವಾಗಿ ಕ್ರಿಸ್ತಯೇಸುವೂ ಇವರ ವಂಶದಲ್ಲಿ ಹುಟ್ಟಿದವರೇ. ಸಕಲಕ್ಕೂ ಒಡೆಯರಾದ ದೇವರಿಗೆ ನಿರಂತರ ಸ್ತುತಿಸ್ತೋತ್ರ ಸಲ್ಲಲಿ, ಆಮೆನ್.


ಅಬ್ರಹಾಮನಿಗೂ ಆತನ ಸಂತತಿಗೂ ಜಗತ್ತನ್ನೇ ಕೊಡುವುದಾಗಿ ದೇವರು ವಾಗ್ದಾನ ಮಾಡಿದರು. ಈ ವಾಗ್ದಾನವನ್ನು ಅಬ್ರಹಾಮನು ಪಡೆದದ್ದು ಧರ್ಮಶಾಸ್ತ್ರದ ಪಾಲನೆಯಿಂದ ಅಲ್ಲ, ಆದರೆ ವಿಶ್ವಾಸದ ಮೂಲಕ ದೇವರೊಡನೆ ಸತ್ಸಂಬಂಧವನ್ನು ಹೊಂದಿದ್ದರಿಂದ.


ಅಲ್ಲಿ ವಾಸವಾಗಿದ್ದ ಕಾನಾನ್ ನಾಡಿನ ಮಹಿಳೆ ಒಬ್ಬಳು ಅವರ ಬಳಿಗೆ ಬಂದಳು. “ಸ್ವಾಮೀ, ದಾವೀದ ಕುಲಪುತ್ರರೇ, ನನಗೆ ದಯೆತೋರಿ, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಸಂಕಟಪಡುತ್ತಿದ್ದಾಳೆ,” ಎಂದು ಕೂಗಿಕೊಂಡಳು.


ಯೇಸುಸ್ವಾಮಿ ಅಲ್ಲಿಂದ ಹೋಗುತ್ತಿರುವಾಗ ಇಬ್ಬರು ಕುರುಡರು, “ಸ್ವಾಮೀ, ದಾವೀದ ಕುಲಪುತ್ರರೇ, ನಮಗೆ ದಯೆತೋರಿ,” ಎಂದು ದನಿಯೆತ್ತಿ ಕೂಗಿಕೊಳ್ಳುತ್ತಾ ಅವರ ಹಿಂದೆಹೋದರು.


ಅಬ್ರಹಾಮ, ಇಸಾಕ, ಯಕೋಬ ಇವರ ಸಂತತಿಯನ್ನು ಆಳತಕ್ಕ ಒಡೆಯನನ್ನು ದಾಸ ದಾವೀದನ ವಂಶದಿಂದ ಆರಿಸದೆ ಆ ವಂಶವನ್ನು ನಿರಾಕರಿಸುತ್ತಿದ್ದೆ. ಆದರೆ ಈಗ ಗುಲಾಮಗಿರಿಯಿಂದ ಅವರನ್ನು ಬಿಡುಗಡೆಮಾಡುವೆನು. ಅವರಿಗೆ ಕರುಣೆಯನ್ನು ತೋರಿಸಿಯೇ ತೋರಿಸುವೆನು.”


ಇತಿ, ಪರಲೋಕ - ಭೂಲೋಕಗಳ ನಿರ್ಮಾಣ ಚರಿತ್ರೆ.


ಯೇಸು ದೀಕ್ಷಾಸ್ನಾನ ಪಡೆದು ನೀರಿನಿಂದ ಮೇಲಕ್ಕೆ ಬಂದದ್ದೇ ಆಕಾಶವು ಫಕ್ಕನೆ ತೆರೆಯಿತು. ದೇವರಾತ್ಮ ಪಾರಿವಾಳದ ರೂಪದಲ್ಲಿ ತಮ್ಮ ಮೇಲೆ ಇಳಿದುಬಂದು ನೆಲಸುವುದನ್ನು ಕಂಡರು.


ಅಂದು, ಸರ್ವೇಶ್ವರ ಜೆರುಸಲೇಮಿನ ನಿವಾಸಿಗಳನ್ನು ಕೋಟೆಯಂತೆ ಕಾಪಾಡುವರು. ಈ ಕಾರಣ, ಅವರಲ್ಲಿ ದುರ್ಬಲನು ದಾವೀದನಂತೆ ಬಲಾಢ್ಯನಾಗುವನು. ದಾವೀದನವಂಶ ದೇವದೂತರಂತೆ, ಹೌದು, ದೇವರಂತೆ, ಅವರಿಗೆ ಮುಂದಾಳಾಗುವುದು.


ಸರ್ವೇಶ್ವರ ಇಂತೆನ್ನುತ್ತಾರೆ: “ದಿನ ಬರಲಿದೆ. ಅಂದು ಬಿದ್ದುಹೋಗಿರುವ ದಾವೀದನ ಗುಡಾರವನ್ನು ಮರಳಿ ಎಬ್ಬಿಸುವೆನು. ಅದರ ಬಿರುಕುಗಳನ್ನು ಮುಚ್ಚುವೆನು. ಹಾಳಾದದ್ದನ್ನು ಎತ್ತಿ ನಿಲ್ಲಿಸುವೆನು. ಮೊದಲು ಇದ್ದಂತೆಯೇ ಪುನಃ ನಿರ್ಮಿಸುವೆನು.


ಆದಾಮನ ವಂಶದವರ ಚರಿತ್ರೆ: ಸೃಷ್ಟಿಕಾಲದಲ್ಲಿ ದೇವರು ಮಾನವನನ್ನು ತಮ್ಮ ಹೋಲಿಕೆಯಂತೆಯೇ ಸೃಷ್ಟಿಮಾಡಿದರು.


ರವಿಯಂತಿರುವುದು ಎನ್ನ ಮುಂದೆ ಅವನ ಗಾದಿ I ಚಿರ ಶಾಶ್ವತವಾಗಿರುವುದು ಅವನ ಸಂತತಿ II


ನೀನೆಂದೆ, “ನಾನಾರಿಸಿದವನೊಡನೆ ಮಾಡಿರುವೆ ಒಪ್ಪಂದ I ನನ್ನ ದಾಸ ದಾವೀದನಿಗಿತ್ತಿರುವೆ ಈ ತೆರವಾದ ಶಪಥ : II


ಅಬ್ರಹಾಮನಿಗೆ ಇಸಾಕನು, ಇಸಾಕನಿಗೆ ಯಕೋಬನು, ಯಕೋಬನಿಗೆ ಯೂದ ಹಾಗೂ ಆತನ ಸಹೋದರರು ಹುಟ್ಟಿದರು.


ಯಕೋಬನ ವಂಶವನ್ನು ಆತನು ಚಿರಕಾಲ ಆಳುವನು; ಆತನ ರಾಜ್ಯಭಾರಕ್ಕೆ ಅಂತ್ಯವೇ ಇರದು,” ಎಂದನು.


ದೇವರು ಒಬ್ಬರೇ; ದೇವರನ್ನೂ ಮಾನವರನ್ನೂ ಒಂದುಗೂಡಿಸುವ ಮಧ್ಯಸ್ಥರೂ ಒಬ್ಬರೇ; ಅವರೇ ಮಾನವರಾಗಿರುವ ಕ್ರಿಸ್ತಯೇಸು.


ಕ್ರಿಸ್ತಯೇಸುವನ್ನು ಸ್ಮರಿಸಿಕೋ. ದಾವೀದನ ವಂಶಸ್ಥರಾದ ಅವರು ಮೃತರಾಗಿ ಪುನರುತ್ಥಾನರಾದರು. ಇದೇ ನಾನು ಸಾರುವ ಶುಭಸಂದೇಶ. ಇದನ್ನು ಸಾರಿದ್ದರಿಂದಲೇ ನಾನು ಕಷ್ಟಗಳಿಗೆ ಈಡಾಗಿದ್ದೇನೆ; ಪಾತಕಿಯಂತೆ ಬೇಡಿಗಳಿಂದ ಬಂಧಿತನಾಗಿದ್ದೇನೆ. ಆದರೆ ದೇವರ ವಾಕ್ಯವನ್ನು ಯಾರೂ ಬಂಧಿಸುವಂತಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು