Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 1:19 - ಕನ್ನಡ ಸತ್ಯವೇದವು C.L. Bible (BSI)

19 ಆಕೆಯ ಪತಿ ಜೋಸೆಫನು ನೀತಿವಂತನು. ಮರಿಯಳನ್ನು ಅವಮಾನಕ್ಕೆ ಗುರಿಮಾಡುವ ಉದ್ದೇಶ ಅವನದಲ್ಲವಾದ್ದರಿಂದ ಯಾರಿಗೂ ತಿಳಿಯದ ಹಾಗೆ ನಿಶ್ಚಿತಾರ್ಥವನ್ನು ಮುರಿದುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆದರೆ ಆಕೆಯ ಗಂಡನಾದ ಯೋಸೇಫನು ಸಜ್ಜನನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ, ಯಾರಿಗೂ ತಿಳಿಯದಂತೆ ಆಕೆಯನ್ನು ಬಿಟ್ಟುಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯೋಸೇಫನು ನೀತಿವಂತನಾಗಿದ್ದರಿಂದ, ಆಕೆಯನ್ನು ಬಹಿರಂಗವಾಗಿ ಅವಮಾನ ಮಾಡುವುದಕ್ಕೆ ಮನಸ್ಸಿಲ್ಲದೆ, ಆಕೆಯನ್ನು ರಹಸ್ಯವಾಗಿ ಬಿಟ್ಟು ಬಿಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಜುಜೆ ಕನ್ನಾಬಿ ಖಲೆ ಸಮಾ ಹಾಯ್ ತೆಚ್ ಕರ್ನಾರೊ ಮಾನುಸ್, ಖರೆ ಮರಿಕ್ ಲೊಕಾಂಚ್ಯಾ ಫಿಡ್ಯಾತ್ ಅವ್ಮಾನ್ ಕರುಕ್ ತೆಕಾ ಮನ್ ನತ್ತೊ, ತಸೆ ಮನುನ್ ಕೊನಾಕ್ಬಿ ಕಳಿನಸ್ತಾನಾ ತಿಕಾ ಸೊಡುನ್ ದಿವ್ಚೆ ಮನುನ್ ತೊ ಯವ್ಜುಕ್ ಲಾಗಲ್ಲೊ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 1:19
15 ತಿಳಿವುಗಳ ಹೋಲಿಕೆ  

ಆಗ ಜೆರುಸಲೇಮಿನಲ್ಲಿ ಸಿಮೆಯೋನನೆಂಬ ಒಬ್ಬನು ವಾಸವಾಗಿದ್ದನು. ಸತ್ಪುರುಷನೂ ದೈವಭಕ್ತನೂ ಆದ ಇವನು, ಇಸ್ರಯೇಲ್ ಜನತೆಯ ಉದ್ಧಾರಕ ಯಾವಾಗ ಬರುವನೋ ಎಂದು ನಿರೀಕ್ಷಿಸುತ್ತಾ ಇದ್ದನು. ಪವಿತ್ರಾತ್ಮ ಇವನಲ್ಲಿ ನೆಲೆಸಿದ್ದರು.


ಏಕೆಂದರೆ, ಯೊವಾನ್ನನು ಸಂತನು ಹಾಗೂ ಸತ್ಪುರುಷನು ಎಂದು ಹೆರೋದನು ಅರಿತು, ಆತನಿಗೆ ಭಯಪಟ್ಟು ಯಾವ ಅಪಾಯವೂ ಆತನಿಗೆ ಬಾರದಂತೆ ನೋಡಿಕೊಳ್ಳುತ್ತಿದ್ದನು. ಯೊವಾನ್ನನು ಹೇಳುತ್ತಿದ್ದ ಮಾತುಗಳನ್ನು ಕೇಳಿದಾಗಲೆಲ್ಲಾ ಹೆರೋದನ ಮನಸ್ಸು ಅಲ್ಲೋಲಕಲ್ಲೋಲವಾಗುತ್ತಿತ್ತು. ಆದರೂ ಆತನ ಮಾತುಗಳನು ಕಿವಿಗೊಟ್ಟು ಕೇಳುತ್ತಿದ್ದನು.


“ಯಾವನಾದರು ಪರಪತ್ನಿಯೊಡನೆ ವ್ಯಭಿಚಾರ ಮಾಡಿದರೆ ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು.


ಸುಮಾರು ಮೂರು ತಿಂಗಳಾದ ಬಳಿಕ, ಯೆಹೂದನಿಗೆ ತನ್ನ ಸೊಸೆ ತಾಮಾರಳು ವ್ಯಭಿಚಾರದಿಂದ ಗರ್ಭವತಿಯಾಗಿದ್ದಾಳೆಂಬ ಸಮಾಚಾರ ಬಂದಿತು. ಅವನು, “ಅವಳನ್ನು ಎಳೆದು ತನ್ನಿ; ಸುಟ್ಟುಹಾಕಬೇಕು,” ಎಂದನು.


ಅದಕ್ಕೆ ಅವರು, “ವಿವಾಹ ವಿಚ್ಛೇದನ ಪತ್ರವನ್ನು ಕೊಟ್ಟು ಹೆಂಡತಿಯನ್ನು ಬಿಟ್ಟುಬಿಡಲು ಮೋಶೆ ಅನುಮತಿ ಇತ್ತಿದ್ದಾನೆ,” ಎಂದರು.


“ಒಬ್ಬನ ಅಧೀನದಲ್ಲಿರುವ ದಾಸಿ ಹಣ ಕೊಡುವುದರಿಂದಾಗಲಿ, ಉಚಿತವಾಗಿಯಾಗಲಿ ಬಿಡುಗಡೆ ಹೊಂದದೆ ಇರುವಾಗ ಇನ್ನೊಬ್ಬ ವ್ಯಕ್ತಿ ಅವಳನ್ನು ಕೂಡಿದರೆ ಅವರಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ನ್ಯಾಯವಿಚಾರಣೆ ಆಗಬೇಕು. ಆದರೆ ಮರಣಶಿಕ್ಷೆ ವಿಧಿಸಬಾರದು. ಏಕೆಂದರೆ ಅವಳು ಇನ್ನೂ ದಾಸಿ.


ನೋಹನ ಚರಿತ್ರೆಯಿದು: ಆತ ಸತ್ಪುರುಷ, ಅವನಂಥ ನಿರ್ದೋಷಿ ಆ ಕಾಲದಲ್ಲಿ ಯಾರೂ ಇರಲಿಲ್ಲ. ದೇವರೊಡನೆ ಆತ ಅನ್ಯೋನ್ಯವಾಗಿ ನಡೆದುಕೊಳ್ಳುತ್ತಿದ್ದ.


“ಶತಾಧಿಪತಿ ಕೊರ್ನೇಲಿಯ ನಮ್ಮನ್ನು ಕಳುಹಿಸಿದರು. ಅವರೊಬ್ಬ ಸತ್ಪುರುಷರು, ದೈವಭಕ್ತರು, ಯೆಹೂದ್ಯ ಜನತೆಯಿಂದ ಗೌರವಾನ್ವಿತರು. ನಿಮ್ಮನ್ನು ತಮ್ಮ ಮನೆಗೆ ಆಹ್ವಾನಿಸಿ, ನೀವು ಹೇಳುವುದನ್ನು ಕೇಳಬೇಕೆಂದು ದೇವದೂತನಿಂದ ಆದೇಶಪಡೆದಿದ್ದಾರೆ,” ಎಂದರು.


“ಆದರೆ ಆ ಮಹಿಳೆ ವಿವಾಹಕ್ಕೆ ಮುಂಚೆ ಪುರುಷಸಂಪರ್ಕ ಮಾಡಿದವಳೇ ಎಂದು ತಿಳಿದುಬಂದರೆ


ಬೆಳಗಾದ ಮೇಲೆ, ದಡವಿರುವ ಕೊಲ್ಲಿಯೊಂದು ನಾವಿಕರಿಗೆ ಕಾಣಿಸಿತು. ಅದು ಯಾವ ತೀರವೆಂದು ಗುರುತು ಹಚ್ಚಲು ಅವರಿಂದಾಗಲಿಲ್ಲ. ಆದರೂ ಹಡಗನ್ನು ಸಾಧ್ಯವಾದರೆ ಆ ದಡಕ್ಕೆ ಮುಟ್ಟಿಸಬೇಕೆಂದು ಯೋಚಿಸಿದರು.


ಈ ನಂಬಿಕೆಯಿಂದಲೇ ನಿಮಗೆ ಇಮ್ಮಡಿ ಸಂತೋಷ ಲಭಿಸಬೇಕೆಂದು ನಾನು ನಿಮ್ಮ ಬಳಿಗೆ ಈ ಮುಂಚಿತವಾಗಿಯೇ ಬರಬೇಕೆಂದಿದ್ದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು