Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:10 - ಕನ್ನಡ ಸತ್ಯವೇದವು C.L. Bible (BSI)

10 ಎರಡು ಅಂಗಿಗಳನ್ನಾಗಲಿ, ಕಾಲಿಗೆ ಕೆರವನ್ನಾಗಲಿ, ಕೈಗೆ ದಂಡವನ್ನಾಗಲಿ ತೆಗೆದುಕೊಳ್ಳಬೇಡಿ. ಏಕೆಂದರೆ, ದುಡಿಮೆಗಾರನು ಜೀವನಾಧಾರಕ್ಕೆ ಬಾಧ್ಯನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಎರಡು ಅಂಗಿ, ಚಪ್ಪಲಿ, ಕೋಲು ಮೊದಲಾದವುಗಳನ್ನೂ ತೆಗೆದುಕೊಳ್ಳಬೇಡಿರಿ. ಆಳು ತನ್ನ ಆಹಾರಕ್ಕೆ ಯೋಗ್ಯನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಚೀಲವನ್ನಾಗಲಿ ಹೆಚ್ಚಿನ ಬಟ್ಟೆಗಳನ್ನಾಗಲಿ ಪಾದರಕ್ಷೆಗಳನ್ನಾಗಲಿ ಊರುಗೋಲುಗಳನ್ನಾಗಲಿ ತೆಗೆದುಕೊಂಡು ಹೋಗಬೇಡಿ. ಕೆಲಸಗಾರನಿಗೆ ಅಗತ್ಯವಾದವುಗಳನ್ನು ಒದಗಿಸಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪ್ರಯಾಣಕ್ಕೆ ಚೀಲವನ್ನಾಗಲಿ, ಎರಡು ಅಂಗಿಗಳನ್ನಾಗಲಿ, ಪಾದರಕ್ಷೆಗಳನ್ನಾಗಲಿ, ಕೋಲುಗಳನ್ನಾಗಲಿ ತೆಗೆದುಕೊಳ್ಳಬೇಡಿರಿ. ಏಕೆಂದರೆ ಕೆಲಸದವನು ತನ್ನ ಜೀವನಾಧಾರಕ್ಕೆ ಅರ್ಹನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ವಾಟೆಕ್ ಮನುನ್ ಪಿಸ್ವಿ ಹೊಂವ್ದಿತ್, ನಾಹೊಲ್ಯಾರ್ ಜಾಸ್ತಿಚಿ ಅಂಗಿ ನಾಹೊಲ್ಯಾರ್ ಹೊನಾಯಾ ನಾಹೊಲ್ಯಾರ್ ದಾಂಡೊ ಘೆವ್‍ನಕಾಶಿ. ಕಾಮ್‍ಕಾರಾಕ್ ತೆಕಾ ಪಾಜೆ ಹೊಲ್ಲಿ ಮಜುರಿ ದಿವ್ನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:10
12 ತಿಳಿವುಗಳ ಹೋಲಿಕೆ  

“ನಿಮಗೆ ಎರಡು ಅಂಗಿಗಳಿದ್ದರೆ, ಒಂದನ್ನು ಏನೂ ಇಲ್ಲದವನಿಗೆ ಕೊಡಿ; ಅಂತೆಯೇ ಆಹಾರ ಉಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಉತ್ತರಕೊಟ್ಟನು.


ಅದಕ್ಕೆ ಸೌಲನು, “ನಾವು ಅವನ ಬಳಿಗೆ ಹೋಗಬೇಕಾದರೆ ಏನಾದರೂ ತೆಗೆದುಕೊಂಡು ಹೋಗಬೇಕು; ನಾವು ತಂದಿದ್ದ ಆಹಾರಸಾಮಗ್ರಿ ಮುಗಿದುಹೋಯಿತು. ಆ ದೈವಪುರುಷನಿಗೆ ಕೊಡತಕ್ಕ ಕಾಣಿಕೆ ನಮ್ಮಲ್ಲಿ ಇಲ್ಲವಲ್ಲಾ;


ನೀನು ಬರುವಾಗ ತ್ರೋವದಲ್ಲಿ ನಾನು ಕರ್ಪನ ಬಳಿ ಬಿಟ್ಟುಬಂದ ನನ್ನ ಮೇಲಂಗಿಯನ್ನು ತೆಗೆದುಕೊಂಡು ಬಾ. ನನ್ನ ಕೆಲವು ಪುಸ್ತಕಗಳನ್ನೂ ಮುಖ್ಯವಾಗಿ ಚರ್ಮದ ಸುರುಳಿಗಳನ್ನೂ ತಪ್ಪದೆ ತೆಗೆದುಕೊಂಡು ಬಾ.


ಕುರಿಕಾಯುವ ತನ್ನ ಕೋಲನ್ನೇ ತೆಗೆದುಕೊಂಡು ಹೊರಟನು. ಒಂದು ಹಳ್ಳಕ್ಕೆ ಹೋಗಿ ಐದು ನುಣುಪು ಕಲ್ಲುಗಳನ್ನು ಆರಿಸಿಕೊಂಡನು. ಕುರುಬರ ಪದ್ಧತಿಯಂತೆ ಅವುಗಳನ್ನು ತನ್ನ ಸೊಂಟಚೀಲದಲ್ಲಿ ಹಾಕಿಕೊಂಡನು. ಕೈಯಲ್ಲಿ ಕವಣೆಯನ್ನು ಹಿಡಿದು, ಆ ಫಿಲಿಷ್ಟಿಯನನ್ನು ಎದುರಿಸಲು ಹೋದನು.


“ನೀವು ಒಂದು ಪಟ್ಟಣಕ್ಕಾಗಲಿ, ಹಳ್ಳಿಗಾಗಲಿ ಹೋದಾಗ, ಅಲ್ಲಿ ನಿಮ್ಮನ್ನು ಬರಮಾಡಿಕೊಳ್ಳಲು ಯೋಗ್ಯನು ಯಾರೆಂದು ಕಂಡುಹಿಡಿಯಿರಿ. ಅಲ್ಲಿಂದ ಮುಂದಕ್ಕೆ ಸಾಗುವವರೆಗೂ ಅವನಲ್ಲೇ ತಂಗಿರಿ.


ಕಳುಹಿಸುವಾಗ, “ಪ್ರಯಾಣ ದಂಡವೊಂದನ್ನು ಹೊರತು ಇನ್ನೇನನ್ನೂ ತೆಗೆದುಕೊಂಡು ಹೋಗಬೇಡಿ.


ಕಳುಹಿಸುವಾಗ ಅವರಿಗೆ ಇಂತೆಂದರು, “ಪ್ರಯಾಣಕ್ಕೆಂದು ಏನನ್ನೂ ತೆಗೆದುಕೊಳ್ಳಬೇಡಿ; ದಂಡ, ಜೋಳಿಗೆ, ಬುತ್ತಿ ಅಥವಾ ಹಣ ಯಾವುದೂ ಬೇಡ. ಎರಡು ಅಂಗಿಗಳೂ ಬೇಕಾಗಿಲ್ಲ.


ನೀವು ಮತ್ತು ನಿಮ್ಮ ಮನೆಯವರು ಅದನ್ನು ಯಾವ ಸ್ಥಳದಲ್ಲಿಯಾದರೂ ಊಟಮಾಡಬಹುದು. ದೇವದರ್ಶನದ ಗುಡಾರದ ಪರಿಚರ್ಯವನ್ನು ಮಾಡಿದ್ದಕ್ಕೆ ಅದು ನಿಮಗೆ ಪ್ರತಿಫಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು