Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:14 - ಕನ್ನಡ ಸತ್ಯವೇದವು C.L. Bible (BSI)

14 ಒಂದು ಮನೆಯೇ ಆಗಲಿ, ಊರೇ ಆಗಲಿ, ನಿಮ್ಮನ್ನು ಸ್ವಾಗತಿಸದೆ ಅಥವಾ ನಿಮಗೆ ಕಿವಿಗೊಡದೆಹೋದರೆ, ಆ ಮನೆಯನ್ನು ಅಥವಾ ಊರನ್ನು ಬಿಟ್ಟು ಮುಂದಕ್ಕೆ ಹೋಗಿರಿ. ಹೋಗುವಾಗ ನಿಮ್ಮ ಪಾದಗಳಿಗೆ ಅಂಟಿರುವ ದೂಳನ್ನೂ ಝಾಡಿಸಿಬಿಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನೂ ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯಾರಾದರೂ ನಿಮ್ಮನ್ನು ಸೇರಿಸಿಕೊಳ್ಳದೆಯೂ ನಿಮ್ಮ ವಾಕ್ಯಗಳನ್ನು ಕೇಳದೆಯೂ ಹೋದರೆ ನೀವು ಆ ಮನೆಯನ್ನಾಗಲಿ ಆ ಊರನ್ನಾಗಲಿ ಬಿಟ್ಟು ಹೊರಡುವಾಗ ನಿಮ್ಮ ಕಾಲಿಗೆ ಹತ್ತಿದ ದೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಒಂದು ಮನೆಯವರು ಅಥವಾ ಒಂದು ಊರಿನವರು ನಿಮ್ಮನ್ನು ಸ್ವಾಗತಿಸದಿದ್ದರೆ ಇಲ್ಲವೇ ನಿಮ್ಮ ಮಾತನ್ನು ಕೇಳದಿದ್ದರೆ ನೀವು ಆ ಸ್ಥಳವನ್ನು ಬಿಟ್ಟುಹೋಗುವಾಗ, ನಿಮ್ಮ ಕಾಲಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯಾರಾದರೂ ನಿಮ್ಮನ್ನು ಸ್ವಾಗತಿಸದೆ ಹೋದರೆ ಇಲ್ಲವೆ ನಿಮ್ಮ ಮಾತುಗಳನ್ನು ಕೇಳದೆ ಹೋದರೆ, ನೀವು ಆ ಮನೆಯನ್ನು ಇಲ್ಲವೆ ಆ ಪಟ್ಟಣವನ್ನು ಬಿಟ್ಟು ಹೊರಡುವಾಗ ನಿಮ್ಮ ಪಾದಗಳಿಗೆ ಹತ್ತಿದ ಧೂಳನ್ನು ಝಾಡಿಸಿಬಿಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅನಿ ಜರ್ ಎಕ್ ಗಾವಾತ್ಲ್ಯಾ ಲೊಕಾನಿ ನಾಹೊಲ್ಯಾರ್ ಘರಾತ್ಲ್ಯಾ ಲೊಕಾನಿ ತುಮ್ಕಾ ಮರ್‍ಯಾದ್ ದಿನಸ್ಲ್ಯಾರ್, ಅನಿ ತುಮಿ ಸಾಂಗಲ್ಲೆ ಆಯ್ಕಿನಸ್ಲ್ಯಾರ್ ತೊ ಜಾಗೊ ಸೊಡುನ್ ಫಿಡೆ ಚಲಾ, ಅನಿ ಜಾತಾನಾ ತುಮ್ಚ್ಯಾ ಪಾಯಾಂಚಿ ಧುಳ್ ಫಾಪ್ಡಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:14
14 ತಿಳಿವುಗಳ ಹೋಲಿಕೆ  

ಆದರೆ ಆ ಯೆಹೂದ್ಯರು ಅವನನ್ನು ಪ್ರತಿಭಟಿಸಿ ದೂಷಿಸಿದರು. ಆಗ ಪೌಲನು ತನ್ನ ಹೊದಿಕೆಯನ್ನು ಒದರಿ, “ನಿಮ್ಮ ವಿನಾಶಕ್ಕೆ ನೀವೇ ಹೊಣೆ; ಅದಕ್ಕೆ ನಾನು ಬಾಧ್ಯನಲ್ಲ. ಇಂದಿನಿಂದ ನಾನು ಅನ್ಯಧರ್ಮೀಯರ ಕಡೆಗೆ ಹೋಗುತ್ತೇನೆ,” ಎಂದನು.


ಇದಲ್ಲದೆ, ನನ್ನ ನಡುಪಟ್ಟಿಯನ್ನು ಝಾಡಿಸಿಬಿಟ್ಟು, “ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆ ಇಂದಲೂ ಆಸ್ತಿಪಾಸ್ತಿಯಿಂದಲೂ ಈ ಪ್ರಕಾರವೇ ಝಾಡಿಸಿಬಿಡಲಿ; ಅವನು ನಡುಪಟ್ಟಿಯಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ,” ಎಂದೆ. ಕೂಡಲೆ ಸಭೆಯವರೆಲ್ಲರು ‘ಹಾಗೆಯೇ ಆಗಲಿ’ ಎಂದು ಹೇಳಿ ಸರ್ವೇಶ್ವರನನ್ನು ಕೊಂಡಾಡಿ ಕೊಟ್ಟಮಾತನ್ನು ಕೈಗೊಂಡರು.


ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.


ಯಾವ ಊರಿನವರಾದರೂ ನಿಮ್ಮನ್ನು ಸ್ವಾಗತಿಸದೆಹೋದಲ್ಲಿ, ನೀವು ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅದು ಅವರ ವಿರುದ್ಧ ಸಾಕ್ಷಿಯಾಗಿರಲಿ,” ಎಂದರು.


ಯಾವುದೇ ಊರಿನ ಜನರು ನಿಮ್ಮನ್ನು ಸ್ವಾಗತಿಸದೆಯೂ ನಿಮ್ಮ ಬೋಧನೆಗೆ ಕಿವಿಗೊಡದೆಯೂ ಹೋದರೆ, ಆ ಊರನ್ನು ಬಿಟ್ಟುಹೋಗುವಾಗ ನಿಮ್ಮ ಪಾದಕ್ಕೆ ಹತ್ತಿದ ಧೂಳನ್ನು ಕೂಡ ಝಾಡಿಸಿಬಿಡಿ. ಅವರ ವಿರುದ್ಧ ಅದು ಸಾಕ್ಷಿಯಾಗಿರಲಿ,” ಎಂದರು.


ಅಂದಮೇಲೆ, ಈ ಬೋಧನೆಯನ್ನು ತಿರಸ್ಕರಿಸುವವನು ಮನುಷ್ಯನನ್ನು ಮಾತ್ರವಲ್ಲ, ನಿಮಗೆ ಪವಿತ್ರಾತ್ಮರನ್ನು ಪ್ರದಾನ ಮಾಡಿರುವ ದೇವರನ್ನೇ ತಿರಸ್ಕರಿಸುತ್ತಾನೆ.


ನಾನು ಕಳುಹಿಸಿದಾತನನ್ನು ಬರಮಾಡಿಕೊಳ್ಳುವವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ. ನನ್ನನ್ನು ಬರಮಾಡಿಕೊಳ್ಳುವವನು ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.


“ನನ್ನ ಹೆಸರಿನಲ್ಲಿ ಇಂಥ ಮಗುವೊಂದನ್ನು ಯಾರು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನೇ ಬರಮಾಡಿಕೊಳ್ಳುತ್ತಾನೆ; ಯಾರು ನನ್ನನ್ನು ಬರಮಾಡಿಕೊಳ್ಳುತ್ತಾನೋ ಅವನು ನನ್ನನ್ನು ಅಲ್ಲ, ನನ್ನನ್ನು ಕಳುಹಿಸಿದಾತನನ್ನೇ ಬರಮಾಡಿಕೊಳ್ಳುತ್ತಾನೆ,” ಎಂದರು.


ನನ್ನ ಹೆಸರಿನಲ್ಲಿ ಇಂತಹ ಮಗುವೊಂದನ್ನು ಸ್ವೀಕರಿಸುವವನು ನನ್ನನ್ನೇ ಸ್ವೀಕರಿಸುತ್ತಾನೆ.”


“ಯಾವನು ನನ್ನ ಹೆಸರಿನಲ್ಲಿ ಈ ಮಗುವನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನೇ ಸ್ವೀಕರಿಸುತ್ತಾನೆ; ಯಾವನು ನನ್ನನ್ನು ಸ್ವೀಕರಿಸುತ್ತಾನೋ ಅವನು ನನ್ನನ್ನು ಕಳುಹಿಸಿದಾತನನ್ನೇ ಸ್ವೀಕರಿಸುತ್ತಾನೆ. ನಿಮ್ಮೆಲ್ಲರಲ್ಲಿ ಅತ್ಯಲ್ಪನಾದವನೇ ಅತ್ಯುತ್ತಮನು,” ಎಂದರು.


ಆ ಮನೆಯವರು ನಿಮ್ಮನ್ನು ಸ್ವಾಗತಿಸಿದರೆ, ನಿಮ್ಮ ಆಶೀರ್ವಾದ ಅವರ ಮೇಲೆ ನೆಲಸಲಿ. ನಿಮ್ಮನ್ನು ಸ್ವಾಗತಿಸದೆಹೋದರೆ, ನಿಮ್ಮ ಆಶೀರ್ವಾದ ನಿಮಗೇ ಹಿಂದಿರುಗಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು