Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:23 - ಕನ್ನಡ ಸತ್ಯವೇದವು C.L. Bible (BSI)

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ, ಮತ್ತೊಂದು ಊರಿನಲ್ಲಿ ಆಶ್ರಯ ಪಡೆಯಿರಿ. ನರಪುತ್ರನು ಬರುವಷ್ಟರಲ್ಲಿ ನೀವು ಇಸ್ರಯೇಲ್ ಜನರ ಊರುಗಳನ್ನೆಲ್ಲಾ ಸುತ್ತಿ ಮುಗಿಸಿರಲಾರಿರಿ; ಇದು ನಿಶ್ಚಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳನ್ನು ಸಂಚರಿಸಿ ಮುಗಿಸಿರುವುದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಒಂದು ಊರಲ್ಲಿ ನಿಮ್ಮನ್ನು ಹಿಂಸೆಪಡಿಸಿದರೆ ಮತ್ತೊಂದು ಊರಿಗೆ ಓಡಿಹೋಗಿರಿ; ಮನುಷ್ಯಕುಮಾರನು ಬರುವಷ್ಟರಲ್ಲಿ ನೀವು ಇಸ್ರಾಯೇಲ್ ಜನರ ಊರುಗಳ ಸಂಚಾರವನ್ನು ತೀರಿಸಿರುವದಿಲ್ಲವೆಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಒಂದು ಊರಿನಲ್ಲಿ ನಿಮ್ಮನ್ನು ಹಿಂಸಿಸಿದರೆ ಮತ್ತೊಂದು ಊರಿಗೆ ಹೋಗಿ. ಮನುಷ್ಯಕುಮಾರನು ಪುನಃ ಬರುವುದಕ್ಕಿಂತ ಮುಂಚೆ ನೀವು ಇಸ್ರೇಲರ ಊರುಗಳಿಗೆಲ್ಲಾ ಹೋಗುವುದನ್ನು ಮುಗಿಸಿರುವುದಿಲ್ಲ ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಒಂದು ಸ್ಥಳದಲ್ಲಿ ನಿಮಗೆ ಹಿಂಸೆಯಾದರೆ ಇನ್ನೊಂದು ಸ್ಥಳಕ್ಕೆ ಓಡಿಹೋಗಿರಿ. ಮನುಷ್ಯಪುತ್ರನು ಬರುವಷ್ಟರಲ್ಲಿ ಇಸ್ರಾಯೇಲಿನ ಪಟ್ಟಣಗಳ ಸಂಚಾರವನ್ನು ನೀವು ಮುಗಿಸುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 “ಎಕ್ ಶಾರಾತ್ ಲೊಕಾನಿ ತುಮ್ಕಾ ತರಾಸ್ ದಿಲ್ಯಾರ್, ದುಸ್ರ್ಯಾ ಶಾರಾಕ್ ಪಳುನ್ ಜಾವಾ, ಮಿಯಾ ತುಮ್ಕಾ ಖರೆಚ್ ಸಾಂಗ್ತಾ, ಮಾನ್ಸಾಚೊ ಲೆಕ್ ಯೆಯ್ ಸಗೊಳ್ ಇಸ್ರಾಯೆಲಾತ್ಲ್ಯಾ ಸಗ್ಳ್ಯಾ ಶಾರಾತ್ನಿ ತುಮಿ ಕರ್‍ತಲೆ ತುಮ್ಚೆ ಕಾಮ್ ಕರುನ್ ಸರಿನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:23
29 ತಿಳಿವುಗಳ ಹೋಲಿಕೆ  

ಇಲ್ಲಿರುವವರಲ್ಲಿ ಕೆಲವರು ನರಪುತ್ರನು ತನ್ನ ಸಾಮ್ರಾಜ್ಯದಲ್ಲಿ ಪ್ರತ್ಯಕ್ಷನಾಗುವುದನ್ನು ಕಾಣುವುದಕ್ಕೆ ಮುನ್ನ ಸಾವನ್ನು ಸವಿಯುವುದಿಲ್ಲ ಎಂದು ನಿಮಗೆ ನಿಶ್ಚಯವಾಗಿ ಹೇಳುತ್ತೇನೆ,” ಎಂದರು.


ಭಕ್ತವಿಶ್ವಾಸಿಗಳು ಪೌಲ ಮತ್ತು ಸೀಲರನ್ನು ರಾತ್ರೋರಾತ್ರಿಯಲ್ಲೇ ಬೆರೋಯ ಎಂಬ ಊರಿಗೆ ಕಳುಹಿಸಿಬಿಟ್ಟರು. ಇವರು ಆ ಊರನ್ನು ತಲುಪಿದ್ದೇ, ಯೆಹೂದ್ಯರ ಪ್ರಾರ್ಥನಾಮಂದಿರಕ್ಕೆ ಹೋದರು.


ಆ ದಿನವೇ ಜೆರುಸಲೇಮಿನ ಧರ್ಮಸಭೆಯ ವಿರುದ್ಧ ಕ್ರೂರ ಹಿಂಸೆ ಪ್ರಾರಂಭ ಆಯಿತು. ಪ್ರೇಷಿತರ ಹೊರತು ಇತರ ಭಕ್ತವಿಶ್ವಾಸಿಗಳು ಜುದೇಯ ಮತ್ತು ಸಮಾರಿಯ ಪ್ರಾಂತ್ಯಗಳಲ್ಲೆಲ್ಲಾ ಚದರಿಹೋದರು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮೆಯಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಆಗ ನರಪುತ್ರನು ಮಹಾಶಕ್ತಿಯಿಂದಲೂ ಮಹಿಮಾ ಪ್ರಭಾವದಿಂದಲೂ ಮೇಘಾರೂಢನಾಗಿ ಬರುವುದನ್ನು ಜನರು ಕಾಣುವರು.


ಶೀಘ್ರವಾಗಿ ಅವರಿಗೆ ನ್ಯಾಯ ದೊರಕಿಸಿಕೊಡುವರೆಂದು ನಿಮಗೆ ಹೇಳುತ್ತೇನೆ. ಇಷ್ಟಾದರೂ ನರಪುತ್ರನು ಬರುವಾಗ ಜಗತ್ತಿನಲ್ಲಿ ವಿಶ್ವಾಸ ಇರುವುದನ್ನು ಕಾಣುವನೋ?’ ಎಂದರು.


ಇದಾದ ಬಳಿಕ ಯೇಸುಸ್ವಾಮಿ ಗಲಿಲೇಯದಲ್ಲಿ ಸಂಚರಿಸತೊಡಗಿದರು. ಯೆಹೂದ್ಯರು ತಮ್ಮನ್ನು ಕೊಲ್ಲಲು ಹವಣಿಸುತ್ತಿದ್ದುದರಿಂದ ಜುದೇಯದಲ್ಲಿ ಸಂಚರಿಸಲು ಅವರು ಇಷ್ಟಪಡಲಿಲ್ಲ.


ಅದಕ್ಕೆ ಯೇಸು, “ಅದು ನಿಮ್ಮ ಬಾಯಿಂದಲೇ ಬಂದಿದೆ; ಮಾತ್ರವಲ್ಲ, ನಾನು ಹೇಳುವುದನ್ನು ಕೇಳಿ; ನರಪುತ್ರನು ಸರ್ವಶಕ್ತ ದೇವರ ಬಲಗಡೆ ಆಸೀನನಾಗಿರುವುದನ್ನೂ ಆಕಾಶದ ಮೇಘಗಳ ಮೇಲೆ ಬರುವುದನ್ನೂ ಇನ್ನು ಮುಂದಕ್ಕೆ ಕಾಣುವಿರಿ,” ಎಂದರು.


ಆಗ ನರಪುತ್ರನ ಚಿಹ್ನೆ ಆಕಾಶದಲ್ಲಿ ಕಾಣಿಸಿಕೊಳ್ಳುವುದು. ಪೃಥ್ವಿಯ ಪ್ರಜೆಗಳೆಲ್ಲಾ ಅತ್ತು ಪ್ರಲಾಪಿಸುವರು. ನರಪುತ್ರನು ಶಕ್ತಿಸಾಮರ್ಥ್ಯದಿಂದಲೂ ಮಹಾಮಹಿಮೆಯಿಂದಲೂ ಮೇಘಾರೂಢನಾಗಿ ಆಗಮಿಸುವುದನ್ನು ಅವರು ಕಾಣುವರು.


ಕೂಡಲೇ ಭಕ್ತವಿಶ್ವಾಸಿಗಳು ಪೌಲನನ್ನು ಸಮುದ್ರ ತೀರಕ್ಕೆ ಕಳುಹಿಸಿಬಿಟ್ಟರು. ಆದರೆ ಸೀಲ ಮತ್ತು ತಿಮೊಥೇಯ ಬೆರೋಯದಲ್ಲೇ ಉಳಿದುಕೊಂಡರು.


ಆದ್ದರಿಂದ ಜಾಗೃತರಾಗಿರಿ! ಏಕೆಂದರೆ ಆ ದಿನವಾಗಲಿ, ಆ ಗಳಿಗೆ ಆಗಲಿ ಯಾವಾಗ ಬರುತ್ತದೆಂದು ನಿಮಗೆ ತಿಳಿಯದು.


ಆದರೆ ಆ ಮೇಸ್ತ್ರಿ ದುಷ್ಟನಾಗಿದ್ದು ‘ನನ್ನ ಯಜಮಾನ ತಡಮಾಡುವನು’ ಎಂದು ನೆನಸಿಕೊಂಡು,


ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


ಅವರಲ್ಲಿ ಕೆಲವರನ್ನು ಕೊಲೆಮಾಡುವಿರಿ, ಶಿಲುಬೆಗೆ ಏರಿಸುವಿರಿ, ಮತ್ತೆ ಕೆಲವರನ್ನು ನಿಮ್ಮ ಪ್ರಾರ್ಥನಾಮಂದಿರಗಳಲ್ಲಿ ಕೊರಡೆಗಳಿಂದ ಹೊಡೆಯುವಿರಿ. ಊರಿಂದೂರಿಗೆ ಅಟ್ಟಿ ಅವರನ್ನು ಪೀಡಿಸುವಿರಿ.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಜ್ಯೋತಿಷಿಗಳು ಹೊರಟುಹೋದ ಮೇಲೆ ದೇವದೂತನು ಜೋಸೆಫನಿಗೆ ಕನಸಿನಲ್ಲಿ ಕಾಣಿಸಿಕೊಂಡು, “ಏಳು, ಹೆರೋದನು ಮಗುವನ್ನು ಕೊಂದುಹಾಕಲು ಹವಣಿಸುತ್ತಿದ್ದಾನೆ. ಮಗುವನ್ನೂ ತಾಯಿಯನ್ನೂ ಕರೆದುಕೊಂಡು ಈಜಿಪ್ಟ್ ದೇಶಕ್ಕೆ ಓಡಿಹೋಗು. ನಾನು ಪುನಃ ಹೇಳುವ ತನಕ ಅಲ್ಲೇ ಇರು,” ಎಂದನು.


ಕೋಲಾಹಲವು ಅಡಗಿದ ಮೇಲೆ ಪೌಲನು ಭಕ್ತವಿಶ್ವಾಸಿಗಳನ್ನು ಬರಮಾಡಿಕೊಂಡು ಪ್ರೋತ್ಸಾಹದ ಮಾತುಗಳನ್ನಾಡಿ ಅವರನ್ನು ಬೀಳ್ಕೊಟ್ಟು ಮಕೆದೋನಿಯಕ್ಕೆ ಹೋದನು.


ಅರಸ ಯೆಹೋಯಾಕೀಮನು ಮತ್ತು ಅವನ ಎಲ್ಲ ವೀರಶೂರರು ಹಾಗು ನಾಯಕರು ಆ ಊರೀಯನ ಮಾತುಗಳನ್ನು ಕೇಳಿಸಿಕೊಂಡರು. ಕೂಡಲೆ ಅರಸ ಅವನನ್ನು ಕೊಂದುಹಾಕಲು ಮನಸ್ಸುಮಾಡಿದ. ಈ ಸುದ್ದಿಯನ್ನು ಕೇಳಿದ ಊರೀಯ ಭಯಪಟ್ಟು ಓಡಿಹೋಗಿ ಈಜಿಪ್ಟನ್ನು ಸೇರಿಕೊಂಡ.


ನರಪುತ್ರನು ತನ್ನ ಪಿತನ ಪ್ರಭಾವದೊಡನೆ ತನ್ನ ದೂತರ ಸಮೇತ ಬರಲಿದ್ದಾನೆ. ಆಗ ಪ್ರತಿಯೊಬ್ಬ ಮಾನವನಿಗೆ ಅವನವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುವನು.


ಹೌದು, ಇದೆಲ್ಲವೂ ಈ ಪೀಳಿಗೆಯ ಮೇಲೆ ಬರುವುದೆಂದು ನಿಮಗೆ ಒತ್ತಿ ಹೇಳುತ್ತೇನೆ.


ಇದೆಲ್ಲವೂ ಸಂಭವಿಸುವವರೆಗೆ ಈ ಪೀಳಿಗೆ ಗತಿಸಿಹೋಗದೆಂದು ನಿಮಗೆ ಒತ್ತಿ ಹೇಳುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು