Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:27 - ಕನ್ನಡ ಸತ್ಯವೇದವು C.L. Bible (BSI)

27 ನಾನು ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಪ್ರಚುರಪಡಿಸಿರಿ, ಕಿವಿಮಾತಾಗಿ ಕೇಳಿದ್ದನ್ನು ಮನೆಮಾಳಿಗೆಯ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ನಾನು ಕತ್ತಲಲ್ಲಿ ನಿಮಗೆ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ನಾನು ಕತ್ತಲಲ್ಲಿ ನಿಮಗೆ ಹೇಳುವದನ್ನು ನೀವು ಬೆಳಕಿನಲ್ಲಿ ಹೇಳಿರಿ, ಮತ್ತು ಕಿವಿಯಲ್ಲಿ ಕೇಳಿದ್ದನ್ನು ಮಾಳಿಗೆಗಳ ಮೇಲೆ ನಿಂತು ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಕತ್ತಲೆಯಲ್ಲಿ (ರಹಸ್ಯವಾಗಿ) ಈ ಸಂಗತಿಗಳನ್ನು ನಿಮಗೆ ಹೇಳುತ್ತಿದ್ದೇನೆ. ಆದರೆ ನೀವು ಈ ಸಂಗತಿಗಳನ್ನು ಬೆಳಕಿನಲ್ಲಿ ಹೇಳಬೇಕೆಂಬುದು ನನ್ನ ಇಷ್ಟ. ನಾನು ಈ ವಿಷಯಗಳನ್ನು ನಿಮಗೆ ಮೆಲ್ಲಗೆ ಹೇಳುತ್ತಿದ್ದೇನೆ. ಆದರೆ ನೀವು ಈ ವಿಷಯಗಳನ್ನು ಜನರಿಗೆಲ್ಲ ಗಟ್ಟಿಯಾಗಿ ಹೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ನಾನು ನಿಮಗೆ ಕತ್ತಲಲ್ಲಿ ಹೇಳುವುದನ್ನು ನೀವು ಬೆಳಕಿನಲ್ಲಿ ಹೇಳಿರಿ. ನೀವು ಕಿವಿಯಲ್ಲಿ ಕೇಳುವುದನ್ನು ಮಾಳಿಗೆಯ ಮೇಲೆ ಸಾರಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಕಾಯ್ ಕಾಳ್ಕಾತ್ ಸಾಂಗುಕ್ ಲಾಗ್ಲಾ, ತೆ ತುಮಿ ದಿಸಾಚ್ಯಾ ಮೊಟ್ಯಾ ಉಜ್ವೊಡಾತ್ ಸಾಂಗುಕ್ ಪಾಜೆ, ಅನಿ ಜೆ ಕಾಯ್ ತುಮಿ ಕಡೆಕ್ ಎಗ್ಳೆಚ್ ಹೊತ್ತ್ಯಾ ತನ್ನಾ ಆಯ್ಕುಲ್ಯಾಶಿ ತೆ ತುಮಿ ಹುಜರಾತಿ ಸಗ್ಳ್ಯಾ ಲೊಕಾಕ್ನಿ ಇದ್ರಾಕ್ ಸಾಂಗುಕ್ ಪಾಜೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:27
16 ತಿಳಿವುಗಳ ಹೋಲಿಕೆ  

“ಹೋಗಿರಿ, ಮಹಾದೇವಾಲಯದಲ್ಲಿ ನಿಂತು ಈ ನವಜೀವದ ಬಗ್ಗೆ ಜನರಿಗೆ ಬೋಧಿಸಿರಿ,” ಎಂದನು.


ಹೇಗೂ ಸತ್ಯಸ್ವರೂಪಿ ಆದ ಪವಿತ್ರಾತ್ಮ ಬಂದಮೇಲೆ ನಿಮ್ಮನ್ನು ಸಮಗ್ರ ಸತ್ಯದೆಡೆಗೆ ಕರೆದೊಯ್ಯುವರು. ಅವರು ತಮ್ಮಷ್ಟಕ್ಕೆ ತಾವೇ ಏನನ್ನೂ ಬೋಧಿಸದೆ ತಾವು ಕೇಳಿದುದನ್ನು ಕುರಿತೇ ಮಾತನಾಡುವರು; ಮುಂದೆ ನಡೆಯಲಿರುವುದನ್ನೂ ನಿಮಗೆ ತಿಳಿಸುವರು.


“ನಿಮ್ಮ ವಿಶ್ವಾಸ ಕುಸಿಯದಂತೆ ನೀವು ಎಚ್ಚರಿಕೆ ವಹಿಸಬೇಕೆಂದು ನಾನು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ.


“ಆ ವ್ಯಕ್ತಿಯ ಹೆಸರಿನಲ್ಲಿ ಉಪದೇಶ ಮಾಡಕೂಡದು ಎಂದು ನಿಮಗೆ ಕಟ್ಟಪ್ಪಣೆ ಮಾಡಿದೆವು. ಆದರೂ ನೀವು ಮಾಡಿರುವುದೇನು? ನಿಮ್ಮ ಬೋಧನೆ ಜೆರುಸಲೇಮ್ ಆದ್ಯಂತ ಹಬ್ಬಿಹರಡಿದೆ. ಅಷ್ಟುಮಾತ್ರವಲ್ಲ, ಆ ವ್ಯಕ್ತಿಯ ಕೊಲೆಗೆ ನಮ್ಮನ್ನೇ ಹೊಣೆಗಾರರನ್ನಾಗಿ ಮಾಡಬೇಕೆಂದಿರುವಿರಿ,” ಎಂದು ಆಪಾದಿಸಿದನು.


ಅದಕ್ಕೆ ಶಿಷ್ಯರು, “ಈಗ ನೀವು ಸಾಮತಿಗಳನ್ನು ಬಳಸದೆ ಸ್ಪಷ್ಟವಾಗಿಯೇ ಮಾತನಾಡುತ್ತಿದ್ದೀರಿ.


“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ನಮಗೆ ಇಂಥ ಭರವಸೆ ಇರುವುದರಿಂದಲೇ ನಾವು ಇಷ್ಟು ಧೈರ್ಯದಿಂದ ಇದ್ದೇವೆ.


ಆದುದರಿಂದ ಅವನು ಪ್ರಾರ್ಥನಾಮಂದಿರಕ್ಕೆ ಹೋಗಿ ಯೆಹೂದ್ಯರೊಡನೆ ಮತ್ತು ಯೆಹೂದ್ಯಮತಾವಲಂಬಿಗಳೊಡನೆ ಚರ್ಚಿಸತೊಡಗಿದನು. ಸಾರ್ವಜನಿಕ ಚೌಕದ ಬಳಿ, ಕಂಡಕಂಡವರೊಡನೆ ಪ್ರತಿದಿನವೂ ತರ್ಕಮಾಡಿದನು.


‘ದಿವ್ಯದರ್ಶನದ ಕಣಿವೆ’ಯ ಕುರಿತ ದೈವೋಕ್ತಿ : ಏನಾಯಿತು? ಜನರೆಲ್ಲರೂ ಮನೆಮಾಳಿಗೆಗಳನ್ನು ಏರಿ ಸಡಗರದಿಂದ ಇರುವುದೇಕೆ?


ಮಾಳಿಗೆಯ ಮೇಲಿರುವವನು ಇಳಿದು ಮನೆಯಿಂದ ಏನನ್ನೂ ತೆಗೆದುಕೊಳ್ಳದೆ ಓಡಿಹೋಗಲಿ.


ನೀವು ಕತ್ತಲಲ್ಲಿ ಹೇಳಿದ್ದೆಲ್ಲವನ್ನು ಬೆಳಕಿನಲ್ಲಿ ಕೇಳಲಾಗುವುದು; ಒಳಕೋಣೆಗಳಲ್ಲಿ ಕಿವಿಮಾತಾಗಿ ನೀವು ಹೇಳಿದ್ದೆಲ್ಲವನ್ನು ಮನೆಮಾಳಿಗೆಗಳ ಮೇಲಿಂದ ಸಾರಲಾಗುವುದು,” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು