Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 10:37 - ಕನ್ನಡ ಸತ್ಯವೇದವು C.L. Bible (BSI)

37 “ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆಯನ್ನು ಅಥವಾ ತಾಯಿಯನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಅಥವಾ ಮಗಳನ್ನು ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವುದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ತಂದೆಯ ಮೇಲಾಗಲಿ ತಾಯಿಯ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ; ಮಗನ ಮೇಲಾಗಲಿ ಮಗಳ ಮೇಲಾಗಲಿ ನನ್ನ ಮೇಲೆ ಇಡುವದಕ್ಕಿಂತ ಹೆಚ್ಚಾದ ಮಮತೆಯನ್ನಿಡುವವನು ನನಗೆ ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 “ಯಾರಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ತಂದೆ ಅಥವಾ ತಾಯಿಯನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ. ಯಾವನಾದರೂ ನನ್ನನ್ನು ಪ್ರೀತಿಸುವುದಕ್ಕಿಂತ ಹೆಚ್ಚಾಗಿ ತನ್ನ ಮಗನನ್ನು ಇಲ್ಲವೆ ಮಗಳನ್ನು ಪ್ರೀತಿಸಿದರೆ, ಅವನು ನನ್ನ ಹಿಂಬಾಲಕನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 “ನನಗಿಂತ ಮೇಲಾಗಿ ತಂದೆಯನ್ನಾಗಲಿ, ತಾಯಿಯನ್ನಾಗಲಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ. ಮಗನನ್ನಾಗಲಿ, ಮಗಳನ್ನಾಗಲಿ ನನಗಿಂತ ಮೇಲಾಗಿ ಪ್ರೀತಿಸುವವನು ನನ್ನವನಾಗಲು ಯೋಗ್ಯನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಜೊ ಕೊನ್ ಮಾಜೆನ್ಕಿ ಜಾಸ್ತಿ ಅಪ್ನಾಚ್ಯಾ ಬಾಯ್ಚೊ ನಾಹೊಲ್ಯಾರ್ ಬಾಬಾಚೊ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನ್ಹಯ್. ಜೊ ಕೊನ್ ಅಪ್ನಾಚ್ಯಾ ಲೆಕಾಚೊ ನಾಹೊಲ್ಯಾರ್ ಲೆಕಿಚೊ ಮಾಜೆನ್ಕಿ ಜಾಸ್ತಿ ಪ್ರೆಮ್ ಕರ್‍ತಾ ತೊ ಮಾಜೊ ಶಿಸ್ ಹೊವ್ಕ್ ಯೊಗ್ಯ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 10:37
15 ತಿಳಿವುಗಳ ಹೋಲಿಕೆ  

“ನನ್ನಲ್ಲಿಗೆ ಬರುವ ಯಾರೊಬ್ಬನು ತನ್ನ ತಂದೆ-ತಾಯಿ, ಹೆಂಡತಿ-ಮಕ್ಕಳು, ಸೋದರ-ಸೋದರಿಯರನ್ನು ಮಾತ್ರವಲ್ಲ, ತನ್ನ ಪ್ರಾಣವನ್ನು ಕೂಡ ತ್ಯಜಿಸದ ಹೊರತು, ನನ್ನ ಶಿಷ್ಯನಾಗಲಾರನು.


ಅದಕ್ಕೆ ಪ್ರತ್ಯುತ್ತರವಾಗಿ ಯೇಸು, “ ‘ನಿನ್ನ ಸರ್ವೇಶ್ವರನಾದ ದೇವರನ್ನು ನಿನ್ನ ಪೂರ್ಣ ಹೃದಯದಿಂದಲೂ ನಿನ್ನ ಪೂರ್ಣ ಆತ್ಮದಿಂದಲೂ ನಿನ್ನ ಪೂರ್ಣ ಮನಸ್ಸಿನಿಂದಲೂ ಪ್ರೀತಿಸು.’


ನಿನ್ನ ಆಜ್ಞೆಗಳನ್ನು ಕೈಗೊಳ್ಳಲೆಂದು ನಿನ್ನ ಒಡಂಬಡಿಕೆಯನು ಕಾದಿರಿಸಲೆಂದು ‘ತಂದೆತಾಯಿಗಳ ಪರಿಚಯವಿಲ್ಲ ಅಣ್ಣತಮ್ಮಂದಿರ ಅರಿವಿಲ್ಲ ಸ್ವಂತ ಮಕ್ಕಳ ಗುರುತಿಲ್ಲ’ ಎಂದನಿವನು.


ಬಂದೊದಗಲಿರುವ ಇವೆಲ್ಲವುಗಳಿಂದ ಪಾರಾಗಿ ನರಪುತ್ರನ ಮುಂದೆ ನಿಲ್ಲಲು ನೀವು ಶಕ್ತರಾಗುವಂತೆ ನಿರಂತರವಾಗಿ ಪ್ರಾರ್ಥನೆಮಾಡುತ್ತಾ ಎಚ್ಚರಿಕೆಯಿಂದಿರಿ,” ಎಂದರು.


ಅನಂತರ ತನ್ನ ಸೇವಕರಿಗೆ, ‘ವಿವಾಹ ಮಹೋತ್ಸವವೇನೋ ಸಿದ್ಧವಾಗಿದೆ; ಆಹ್ವಾನಿತರೋ ಅಯೋಗ್ಯರು.


ಏಕೆಂದರೆ, ತಮ್ಮನ್ನು ಗೌರವಿಸುವಂತೆಯೇ ಜನರೆಲ್ಲರು ಪುತ್ರನನ್ನು ಗೌರವಿಸಬೇಕೆಂಬುದು ಅವರ ಬಯಕೆ. ಪುತ್ರನನ್ನು ಗೌರವಿಸದವನು ಆತನನ್ನು ಕಳುಹಿಸಿದ ಪಿತನನ್ನೂ ಗೌರವಿಸುವುದಿಲ್ಲ.


ಆದರೆ ಸತ್ತವರು ಪುನರುತ್ಥಾನ ಹೊಂದಿ ಮರುಲೋಕ ಜೀವನಕ್ಕೆ ಯೋಗ್ಯರಾದಾಗ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ.


ಆದರೂ ತಮ್ಮ ಉಡುಪನ್ನು ಮಲಿನಮಾಡಿಕೊಳ್ಳದ ಕೆಲವರು ಸಾರ್ದಿಸಿನಲ್ಲಿ ಇದ್ದಾರೆ. ಅಂಥವರು ಯೋಗ್ಯರಾಗಿರುವುದರಿಂದ ಶ್ವೇತಾಂಬರರಾಗಿ ನನ್ನೊಡನೆ ನಡೆದಾಡುವರು.


ಆದರೆ ನನ್ನ ಪ್ರಜೆ ಇಸ್ರಯೇಲರು ನನ್ನ ಆಜ್ಞಾನುಸಾರ ನನ್ನ ಮಂದಿರಕ್ಕೆ ತರುವ ಬಲಿದಾನಗಳ ಹಾಗು ನೈವೇದ್ಯಗಳ ಘನತೆಯನ್ನು ನೀವು ಭಂಗಪಡಿಸಿದ್ದೀರಿ. ಅವುಗಳ ಶ್ರೇಷ್ಠಭಾಗಗಳಿಂದ ನಿಮ್ಮನ್ನೇ ಕೊಬ್ಬಿಸಿಕೊಳ್ಳುತ್ತಿದ್ದೀರಿ; ಏಕೆ? ನೀನು ನನ್ನನ್ನು ಗೌರವಿಸುವುದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವುದು ಸರಿಯೇ?


ಯಾವನಾದರೂ ಪ್ರವಾದನೆ ಮಾಡಲು ಯತ್ನಿಸಿದರೆ, ಅವನ ತಾಯಿತಂದೆಗಳೇ, “ಇವನು ಸರ್ವೇಶ್ವರಸ್ವಾಮಿಯ ಹೆಸರೆತ್ತಿ ಸುಳ್ಳಾಡುವುದರಿಂದ ಅವನು ಬದುಕಬಾರದು,” ಎಂದು ಹೇಳುವರು. ಅಷ್ಟೇ ಅಲ್ಲ, ಅವನು ಮಾಡಿದ ಪ್ರವಾದನೆಯ ನಿಮಿತ್ತ ಅವರೇ ಅವನನ್ನು ತಿವಿದು ಕೊಂದುಹಾಕುವರು.


ಈ ಮಾತನ್ನು ಕೇಳಿ ಅಬ್ರಹಾಮನಿಗೆ ಬಹು ದುಃಖವಾಯಿತು. ಕಾರಣ - ಆ ದಾಸಿಯ ಮಗನೂ ಅವನ ಸ್ವಂತ ಮಗನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು