Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:1 - ಕನ್ನಡ ಸತ್ಯವೇದವು C.L. Bible (BSI)

1 ಯೇಸುಸ್ವಾಮಿ ತಮ್ಮ ಹನ್ನೆರಡುಮಂದಿ ಶಿಷ್ಯರಿಗೆ ಆದೇಶವನ್ನು ಕೊಟ್ಟಾದ ಮೇಲೆ ಅಲ್ಲಿಂದ ಹೊರಟು ಉಪದೇಶ ಮಾಡುವುದಕ್ಕೂ ಬೋಧಿಸುವುದಕ್ಕೂ ಹತ್ತಿರದ ಊರುಗಳಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಅಪ್ಪಣೆಕೊಡುವುದನ್ನು ಮುಗಿಸಿದ ಬಳಿಕ ಅವರ ಪಟ್ಟಣಗಳಲ್ಲಿ ಉಪದೇಶಮಾಡುವುದಕ್ಕೂ ಬೋಧಿಸುವುದಕ್ಕೂ ಅಲ್ಲಿಂದ ಹೊರಟು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಹೇಳಬೇಕಾದದ್ದನ್ನು ಹೇಳಿ ಮುಗಿಸಿದ ಬಳಿಕ ಅಲ್ಲಿಯವರ ಊರುಗಳಲ್ಲಿ ಉಪದೇಶಮಾಡುವದಕ್ಕೂ ಸುವಾರ್ತೆಯನ್ನು ಸಾರುವದಕ್ಕೂ ಅಲ್ಲಿಂದ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೇಸು ತನ್ನ ಹನ್ನೆರಡು ಮಂದಿ ಶಿಷ್ಯರಿಗೆ ಈ ಸಂಗತಿಗಳನ್ನು ಹೇಳಿದ ನಂತರ ಅಲ್ಲಿಂದ ಹೊರಟು ಬೋಧಿಸುವುದಕ್ಕೆ ಮತ್ತು ಉಪದೇಶಿಸುವುದಕ್ಕೆ ಗಲಿಲಾಯ ಪಟ್ಟಣಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೇಸು ತಮ್ಮ ಹನ್ನೆರಡು ಮಂದಿ ಶಿಷ್ಯರಿಗೆ ಆದೇಶ ಕೊಟ್ಟಾದ ಮೇಲೆ, ಗಲಿಲಾಯ ಪ್ರದೇಶದ ಪಟ್ಟಣಗಳಲ್ಲಿ ಬೋಧಿಸುವುದಕ್ಕೂ ಶುಭವರ್ತಮಾನವನ್ನು ಸಾರುವುದಕ್ಕೂ ಅಲ್ಲಿಂದ ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಹೆ ಸಗ್ಳೆ ಅಪ್ನಾಚ್ಯಾ ಬಾರಾ ಜಾನಾ ಶಿಸಾಕ್ನಿ ಸಾಂಗುನ್ ಸರಲ್ಲ್ಯಾ ಮಾನಾ, ಜೆಜು ತೊ ಜಾಗೊ ಸೊಡುನ್ ಥೈ ಹೊತ್ತ್ಯಾ ಜಗೊಳ್‍ಲ್ಯಾ ಶಾರಾತ್ನಿ ಶಿಕ್ವುಕ್ ಅನಿ ದೆವಾಚಿ ಬರಿ ಖಬರ್ ಸಾಂಗುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:1
19 ತಿಳಿವುಗಳ ಹೋಲಿಕೆ  

ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ತರುವಾಯ ಯೇಸುಸ್ವಾಮಿ ದೇವರ ಸಾಮ್ರಾಜ್ಯದ ಶುಭಸಂದೇಶವನ್ನು ಸಾರುತ್ತಾ ಪಟ್ಟಣಗಳಲ್ಲೂ ಹಳ್ಳಿಗಳಲ್ಲೂ ಸಂಚಾರಮಾಡಿದರು. ಹನ್ನೆರಡು ಮಂದಿ ಶಿಷ್ಯರೂ ಅವರೊಡನೆ ಇದ್ದರು.


ಯೇಸುಸ್ವಾಮಿ, ಊರೂರುಗಳಲ್ಲೂ ಹಳ್ಳಿಹಳ್ಳಿಗಳಲ್ಲೂ ಸಂಚಾರ ಮಾಡುತ್ತಾ ಅಲ್ಲಿಯ ಪ್ರಾರ್ಥನಾಮಂದಿರಗಳಲ್ಲಿ ಬೋಧಿಸಿದರು. ಶ್ರೀಸಾಮ್ರಾಜ್ಯದ ಶುಭಸಂದೇಶವನ್ನು ಸಾರಿದರು. ಎಲ್ಲಾತರದ ರೋಗರುಜಿನಗಳನ್ನು ಗುಣಪಡಿಸಿದರು.


ನಾವು ನಿಮ್ಮೊಡನಿದ್ದಾಗ, “ದುಡಿಯಲೊಲ್ಲದವನು ಉಣಲೂಬಾರದು,” ಎಂದು ನಿಮಗೆ ಆಜ್ಞಾಪಿಸಿದ್ದೆವು.


ಪ್ರಿಯ ಸಹೋದರರೇ, ಪ್ರಭು ಯೇಸುಕ್ರಿಸ್ತರ ಹೆಸರಿನಲ್ಲಿ ನಾವು ನಿಮಗೆ ಆಜ್ಞಾಪಿಸುವುದೇನೆಂದರೆ: ನಾವು ನಿಮಗೆ ಬೋಧಿಸಿದ ಸದಾಚಾರವನ್ನು ಪಾಲಿಸದೆ, ಮೈಗಳ್ಳತನದಿಂದ ದಿನಗಳೆಯುವ ಯಾವ ಸೋದರನೊಂದಿಗೂ ಸಂಪರ್ಕವಿಟ್ಟುಕೊಳ್ಳಬೇಡಿ.


ಪ್ರಭು ಯೇಸುವಿನ ಅಧಿಕಾರದಿಂದ ನಾವು ನಿಮಗೆ ವಿಧಿಸಿದ ನಿಯಮಗಳನ್ನು ನೀವು ಬಲ್ಲಿರಿ.


ಮಾನವರಿಗೆ ಶುಭಸಂದೇಶವನ್ನು ಬೋಧಿಸುವಂತೆಯೂ ಜೀವಂತರಿಗೂ ಹಾಗೂ ಮೃತರಿಗೂ ದೇವರೇ ಅವರನ್ನು ನ್ಯಾಯಾಧಿಪತಿಯನ್ನಾಗಿ ನೇಮಿಸಿದ್ದಾರೆಂದು ರುಜುವಾತುಪಡಿಸುವಂತೆಯೂ ನಮಗೆ ಆಜ್ಞಾಪಿಸಿದ್ದಾರೆ.


ನಾನು ಆಜ್ಞಾಪಿಸಿದಂತೆ ನಡೆದರೆ ನೀವು ನನ್ನ ಗೆಳೆಯರು.


ನನ್ನ ಪಿತನು ಕೊಟ್ಟ ಆಜ್ಞೆಗಳನ್ನು ಪಾಲಿಸಿ ಅವರ ಪ್ರೀತಿಯಲ್ಲಿ ನಾನು ನೆಲೆಗೊಂಡಿರುವ ಹಾಗೆ ನೀವು ಕೂಡ ನಾನು ಕೊಟ್ಟ ಆಜ್ಞೆಗಳನ್ನು ಪಾಲಿಸಿದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ.


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


ಯೇಸುಸ್ವಾಮಿ ಇದೆಲ್ಲವನ್ನು ಹೇಳಿ ಮುಗಿಸಿದರು. ಅವರ ಬೋಧನೆ ಜನರಲ್ಲಿ ಅಮೋಘ ಪ್ರಭಾವವನ್ನು ಬೀರಿತು.


ಯೇಸುಸ್ವಾಮಿ ಗಲಿಲೇಯ ಪ್ರಾಂತ್ಯದಲ್ಲೆಲ್ಲಾ ಸಂಚರಿಸಿ ಅಲ್ಲಿನ ಪ್ರಾರ್ಥನಾ ಮಂದಿರಗಳಲ್ಲಿ ಉಪದೇಶಮಾಡುತ್ತಿದ್ದರು. ದೈವರಾಜ್ಯದ ಸಂದೇಶವನ್ನು ಪ್ರಬೋಧಿಸುತ್ತಿದ್ದರು. ಜನರ ಎಲ್ಲಾ ತರಹದ ರೋಗರುಜಿನಗಳನ್ನೂ ಬೇನೆ ಬವಣೆಗಳನ್ನೂ ಗುಣಪಡಿಸುತ್ತಿದ್ದರು.


ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷರಾಗುವ ತನಕ ಯಾವ ದೋಷಾರೋಪಣೆಗೂ ಎಡೆಗೊಡದೆ ಈ ಕಟ್ಟಳೆಗಳೆಲ್ಲವನ್ನೂ ಪ್ರಾಮಾಣಿಕತೆಯಿಂದ ಅನುಸರಿಸು:


ಶಿಷ್ಯರು ಹೊರಟುಹೋಗಿ, “ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖರಾಗಿ ದೇವರಿಗೆ ಅಭಿಮುಖರಾಗಿರಿ,” ಎಂದು ಜನರಿಗೆ ಸಾರಿ ಹೇಳಿದರು.


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು