Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:19 - ಕನ್ನಡ ಸತ್ಯವೇದವು C.L. Bible (BSI)

19 ನರಪುತ್ರನು ಬಂದನು; ಅನ್ನಪಾನೀಯಗಳನ್ನು ಸೇವಿಸಿದನು. ಇವನೊಬ್ಬ ಹೊಟ್ಟೆಬಾಕ, ಕುಡುಕ, ಸುಂಕದವರ ಹಾಗೂ ಪಾಪಿಷ್ಠರ ಗೆಳೆಯ ಎನ್ನುತ್ತಾರೆ. ಆದರೆ ದೈವಜ್ಞಾನವೇ ನಿಜವಾದ ಜ್ಞಾನವೆಂದು ಅದರ ಕಾರ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಮನುಷ್ಯಕುಮಾರನು ಬಂದನು, ಅವನು ಅನ್ನ ಪಾನಗಳನ್ನು ಸೇವಿಸುವವನಾಗಿದ್ದನು. ಅವರು ‘ಇಗೋ ಇವನು ಹೊಟ್ಟೆಬಾಕನು ಕುಡುಕನು ತೆರಿಗೆಯವರ ಮತ್ತು ಪಾಪಿಗಳ ಗೆಳೆಯನು’ ಅನ್ನುತ್ತಾರೆ. ಆದರೆ ಜ್ಞಾನವು ಅದರ ಕಾರ್ಯಗಳಿಂದಲೇ ಜ್ಞಾನವೆಂದು ಸಮರ್ಥಿಸಲ್ಪಡುತ್ತದೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಮನುಷ್ಯಕುಮಾರನು ಬಂದನು, ಅವನು ಅನ್ನಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ; ಅವರು - ಇಗೋ, ಇವನು ಹೊಟ್ಟೆಬಾಕನು, ಕುಡುಕನು, ಭ್ರಷ್ಟರ ಮತ್ತು ಪಾಪಿಷ್ಠರ ಗೆಳೆಯನು ಅನ್ನುತ್ತಾರೆ. ಆದರೆ ಜ್ಞಾನವು ತನ್ನ ಕೆಲಸಗಳಿಂದ ಜ್ಞಾನವೇ ಎಂದು ಗೊತ್ತಾಗುವದು ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಮನುಷ್ಯಕುಮಾರನು ಬಂದನು. ಆತನು ಬೇರೆ ಜನರಂತೆ ಊಟಮಾಡುತ್ತಾನೆ; ದ್ರಾಕ್ಷಾರಸವನ್ನು ಕುಡಿಯುತ್ತಾನೆ. ಆದರೆ ಜನರು, ‘ನೋಡಿರಿ! ಅವನು ಹೊಟ್ಟೆಬಾಕ, ಅವನು ಕುಡುಕ, ಸುಂಕವಸೂಲಿಗಾರರು ಮತ್ತು ಕೆಟ್ಟ ಜನರು ಅವನ ಸ್ನೇಹಿತರಾಗಿದ್ದಾರೆ’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕ್ರಿಯೆಗಳಿಂದಲೇ ತನ್ನ ಯೋಗ್ಯತೆಯನ್ನು ತೋರ್ಪಡಿಸುತ್ತದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು. ಅದಕ್ಕೆ ಅವರು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎಂದು ಹೇಳುತ್ತಾರೆ. ಆದರೆ ಜ್ಞಾನವು ತನ್ನ ಕೃತ್ಯಗಳಿಂದಲೇ ಸಮರ್ಥಿಸಲಾಗುತ್ತದೆ,” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಮಾನ್ಸಾಚೊ ಲೆಕ್ ಯೆಲ್ಲ್ಯಾ ತನ್ನಾ ತೆನಿ ಖಾಲ್ಯಾನ್ ಅನಿ ಫಿಲ್ಯಾನ್, ತನ್ನಾ ತೆಕಾ ಲೊಕಾನಿ, ಹ್ಯಾ ಮಾನ್ಸಾಕ್ ಉಲ್ಲೆ ಬಗಾ, ಹ್ಯೊ ಫಿದೊಡೊ ಅನಿ ಬಕಾಸುರ್, ಅನಿ ತೆರ್‍ಗಿ ವಸುಲ್ ಕರ್‍ತಲ್ಯಾಂಚೊ ಅನಿ ಪಾಪಿ ಲೊಕಾಂಚೊ ದೊಸ್ತ್! ಮಟ್ಲ್ಯಾನಿ. ಖರೆ ದೆವಾಚಿ ಬುದ್ವಂತ್ಕಿ ಅಪ್ನಾಚ್ಯಾ ಕಾಮಾನಿಚ್ ಅಪ್ನಾಚೆ ಖರೆಪಾನ್ ದಾಕ್ವುನ್ ದಿತಾ. ಮನುನ್ ಸಾಂಗಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:19
19 ತಿಳಿವುಗಳ ಹೋಲಿಕೆ  

ಇದನ್ನು ನೋಡಿದವರೆಲ್ಲರು, “ಯೇಸು ಪಾಪಿಷ್ಠನ ಮನೆಗೆ ಅತಿಥಿಯಾಗಿ ಹೋಗುತ್ತಾನಲ್ಲಾ?” ಎಂದು ಗೊಣಗುಟ್ಟಿದರು.


ಅಂದು ಸಬ್ಬತ್‍ದಿನ. ಯೇಸುಸ್ವಾಮಿ ಒಬ್ಬ ಪ್ರಮುಖ ಫರಿಸಾಯನ ಮನೆಗೆ ಊಟಕ್ಕೆ ಹೋದರು. ಎಲ್ಲರ ಕಣ್ಣು ಅವರ ಮೇಲಿತ್ತು.


ಯೊವಾನ್ನನ ಉಪದೇಶವನ್ನು ಜನಸಾಮಾನ್ಯರೆಲ್ಲರೂ ಕೇಳಿದರು. ಅವರು, ವಿಶೇಷವಾಗಿ ಸುಂಕದವರು, ದೈವಯೋಜನೆಗೆ ತಲೆಬಾಗಿ ಆತನಿಂದ ಸ್ನಾನದೀಕ್ಷೆಯನ್ನು ಪಡೆದರು.


ವಿವೇಕಿಗೆ ಜ್ಞಾನವೇ ಗುರಿ ಧ್ಯೇಯ; ಮೂಢನ ದೃಷ್ಟಿ ದಿಗಂತದಷ್ಟು ವಿಶಾಲ.


ನಮ್ಮಲ್ಲಿ ಪ್ರತಿಯೊಬ್ಬನು ತನ್ನ ನೆರೆಯವನ ಹಿತವನ್ನೇ ಬಯಸಿ, ವಿಶ್ವಾಸದಲ್ಲಿ ಅವನು ಮತ್ತಷ್ಟು ಪ್ರವರ್ಧಿಸುವಂತೆ ನೆರವಾಗಬೇಕು.


ಯೇಸು ಸ್ವಾಮಿಯ ತಾಯಿ ಅಲ್ಲಿಗೆ ಬಂದಿದ್ದರು. ಯೇಸುವಿಗೂ ಅವರ ಶಿಷ್ಯರಿಗೂ ಆ ಮದುವೆಗೆ ಆಮಂತ್ರಣವಿತ್ತು.


“ಆಮೆನ್‍, ಸ್ತುತಿಸ್ತೋತ್ರವೂ ಘನಮಾನವೂ ಜ್ಞಾನವೂ ಧನ್ಯವಾದವೂ ಶಕ್ತಿಯೂ ಪರಾಕ್ರಮವೂ ಸಲ್ಲಲಿ ಯುಗಯುಗಾಂತರಕ್ಕೂ, ಆಮೆನ್,” ಎಂದು ಹಾಡುತ್ತಾ ದೇವರನ್ನು ಆರಾಧಿಸಿದರು.


ಕುಡುಕನಿಗೂ ಹೊಟ್ಟೆಬಾಕನಿಗೂ ಕಾದಿದೆ ದುರ್ಗತಿ; ಹರಕು ಬಟ್ಟೆಗಳನ್ನು ಹೊದಿಸುವುದು ಅವರ ನಿದ್ರಾಸಕ್ತಿ.


ನಿಮ್ಮನ್ನು ಪ್ರೀತಿಸುವವರನ್ನು ಮಾತ್ರ ನೀವು ಪ್ರೀತಿಸಿದರೆ ಅದರಿಂದೇನು ಫಲ? ಸುಂಕ ವಸೂಲಿಮಾಡುವವರೂ ಹಾಗೆ ಮಾಡುವುದಿಲ್ಲವೇ?


ನನಗೆದುರಾಡಿ ತಪ್ಪು ಹೊರಿಸುವವರಿಗೆ I ಅದುವೇ ಪ್ರಭುವಿನಿಂದ ಗಿಟ್ಟುವ ಕೊಡುಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು