Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 11:2 - ಕನ್ನಡ ಸತ್ಯವೇದವು C.L. Bible (BSI)

2 ಸ್ವಾಮಿಯ ಕಾರ್ಯಕಲಾಪಗಳ ಸುದ್ದಿ ಸೆರೆಯಲ್ಲಿದ್ದ ಸ್ನಾನಿಕ ಯೊವಾನ್ನನ ಕಿವಿಗೆ ಬಿದ್ದಿತು. ಆತನು ತನ್ನ ಶಿಷ್ಯರಲ್ಲಿ ಕೆಲವರನ್ನು ಅವರ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿದ್ದ ಯೋಹಾನನು ಕೇಳಿದಾಗ, ಆತನ ಬಳಿಗೆ ತನ್ನ ಶಿಷ್ಯರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೋಹಾನನು ಕ್ರಿಸ್ತನ ಕಾರ್ಯಗಳ ಸುದ್ದಿಯನ್ನು ಸೆರೆಮನೆಯಲ್ಲಿ ಕೇಳಿ ಆತನ ಬಳಿಗೆ ಶಿಷ್ಯರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಸ್ನಾನಿಕನಾದ ಯೋಹಾನನು ಸೆರೆಯಲ್ಲಿದ್ದನು. ಕ್ರಿಸ್ತನು ಮಾಡುತ್ತಿದ್ದ ಸಂಗತಿಗಳು ಅವನಿಗೆ ತಿಳಿಯಿತು. ಆದ್ದರಿಂದ ಯೋಹಾನನು ತನ್ನ ಕೆಲವು ಶಿಷ್ಯರನ್ನು ಯೇಸುವಿನ ಬಳಿಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆಗ ಸೆರೆಮನೆಯಲ್ಲಿ ಯೋಹಾನನು ಕ್ರಿಸ್ತನ ಕಾರ್ಯಗಳನ್ನು ಕೇಳಿ, ತನ್ನ ಶಿಷ್ಯರನ್ನು ಕಳುಹಿಸಿ ಯೇಸುವಿಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಬಂಧಿಖಾನ್ಯಾತ್ ಹೊತ್ತ್ಯಾ ಜುವಾಂವ್ ಬಾವ್ತಿಸಾನ್, ಕ್ರಿಸ್ತ್ ಕಸ್ಲಿ-ಕಸ್ಲಿ ಕಾಮಾ ಕರುಕ್ ಲಾಗ್ಲಾ ಮನುನ್ ಮನ್ತಲೆ ಆಯಿಕ್ಲ್ಯಾನ್, ತಸೆಮನುನ್ ತೆನಿ ಅಪ್ನಾಚ್ಯಾ ಶಿಸಾಕ್ನಿ ತೆಚೆಕ್ಡೆ ಧಾಡುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 11:2
11 ತಿಳಿವುಗಳ ಹೋಲಿಕೆ  

ಹೆರೋದನು ತಾನು ಇಟ್ಟುಕೊಂಡಿದ್ದ ಹೆರೋದಿಯಳ ನಿಮಿತ್ತ ಯೊವಾನ್ನನನ್ನು ಸೆರೆಹಿಡಿಸಿ ಬಂಧನದಲ್ಲಿರಿಸಿದ್ದನು. ಹೆರೋದಿಯಳು ಹೆರೋದನ ಸಹೋದರ ಫಿಲಿಪ್ಪನ ಧರ್ಮಪತ್ನಿ. ಆದರೂ ಹೆರೋದನು ಆಕೆಯನ್ನು ಹೆಂಡತಿಯಾಗಿ ಇಟ್ಟುಕೊಂಡಿದ್ದನು.


ಹೆರೋದನು ತನ್ನ ಸಹೋದರ ಫಿಲಿಪ್ಪನ ಧರ್ಮಪತ್ನಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಅವಳ ಪ್ರಯುಕ್ತ ಯೊವಾನ್ನನನ್ನು ಹಿಡಿದು ಬಂಧಿಸಿ ಸೆರೆಯಲ್ಲಿ ಹಾಕಿದ್ದನು.


ಯೊವಾನ್ನನು ಬಂಧಿತನಾದನೆಂದು ಯೇಸುಸ್ವಾಮಿ ಕೇಳಿ, ಆ ಪ್ರಾಂತ್ಯವನ್ನು ಬಿಟ್ಟು ಗಲಿಲೇಯಕ್ಕೆ ಹೊರಟುಹೋದರು.


ಬಳಿಕ ಯೊವಾನ್ನನ ಶಿಷ್ಯರು ಯೇಸುಸ್ವಾಮಿಯ ಬಳಿಗೆ ಬಂದರು. “ನಾವೂ ಫರಿಸಾಯರೂ ಉಪವಾಸ ವ್ರತವನ್ನು ಕೈಗೊಳ್ಳುತ್ತೇವೆ. ಆದರೆ ನಿಮ್ಮ ಶಿಷ್ಯರು ಏಕೆ ಹಾಗೆ ಮಾಡುವುದಿಲ್ಲ?” ಎಂದು ಪ್ರಶ್ನೆಹಾಕಿದರು.


ಯೊವಾನ್ನನಿಗಿಂತಲೂ ಯೇಸು ಸ್ವಾಮಿಯೇ ಹೆಚ್ಚುಮಂದಿ ಜನರನ್ನು ಶಿಷ್ಯರನ್ನಾಗಿಸಿಕೊಳ್ಳುತ್ತಾ, ಅವರಿಗೆ ದೀಕ್ಷಾಸ್ನಾನವನ್ನು ಮಾಡಿಸುತ್ತಾ ಇದ್ದಾರೆಂಬ ವಾರ್ತೆ ಫರಿಸಾಯರ ಕಿವಿಗೆ ಬಿದ್ದಿತು.


ಸಾಮಂತ ಹೆರೋದನು ಅನೇಕ ದುಷ್ಕೃತ್ಯಗಳನ್ನು ಮಾಡಿದ್ದನು. ಅಲ್ಲದೆ ತನ್ನ ಸೋದರನ ಹೆಂಡತಿಯಾದ ಹೆರೋದಿಯಳನ್ನು ಇಟ್ಟುಕೊಂಡಿದ್ದನು. ಆದ್ದರಿಂದ ಯೊವಾನ್ನನು ಅವನನ್ನು ಖಂಡಿಸಿದ್ದನು.


ಹೀಗೆ ಒಟ್ಟು, ಅಬ್ರಹಾಮನಿಂದ ದಾವೀದನವರೆಗೆ ಹದಿನಾಲ್ಕು, ದಾವೀದನಿಂದ ಬಾಬಿಲೋನಿನ ದಾಸ್ಯದಿನಗಳವರೆಗೆ ಹದಿನಾಲ್ಕು, ಬಾಬಿಲೋನಿನ ದಾಸ್ಯದಿನಗಳಿಂದ ಕ್ರಿಸ್ತರವರೆಗೆ ಹದಿನಾಲ್ಕು ತಲೆಮಾರುಗಳು.


ನಡೆಯುತ್ತಿದ್ದ ಎಲ್ಲ ಸಂಗತಿಗಳು ಸಾಮಂತರಾಜ ಹೆರೋದನ ಕಿವಿಗೆ ಬಿದ್ದುವು. ಅವನ ಮನಸ್ಸು ಕಳವಳಗೊಂಡಿತ್ತು. ಏಕೆಂದರೆ, ‘ಯೊವಾನ್ನನು ಮರಳಿ ಜೀವಂತನಾಗಿ ಎದ್ದಿದ್ದಾನೆ’ ಎಂದು ಕೆಲವರೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು