Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 12:17 - ಕನ್ನಡ ಸತ್ಯವೇದವು C.L. Bible (BSI)

17 ಹೀಗೆ ದೇವರು ಪ್ರವಾದಿ ಯೆಶಾಯನ ಮುಖಾಂತರ ಹೇಳಿದ ಈ ವಚನ ನೆರವೇರಿತು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಹೀಗೆ ಯೆಶಾಯನೆಂಬ ಪ್ರವಾದಿಯ ಮೂಲಕ ಹೇಳಿಸಿರುವ ಮಾತು ನೆರವೇರಿತು; ಅದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಹೀಗೆ ಯೆಶಾಯನೆಂಬ ಪ್ರವಾದಿಯ ಮುಖಾಂತರ ಹೇಳಿಸಿರುವ ಮಾತು ನೆರವೇರಿತು; ಅದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಪ್ರವಾದಿಯಾದ ಯೆಶಾಯನು ಹೇಳಿದ್ದನ್ನು ನೆರವೇರಿಸುವುದಕ್ಕಾಗಿ ಯೇಸು ಇವುಗಳನ್ನು ಮಾಡಿದನು. ಯೆಶಾಯನು ಹೇಳಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಹೀಗೆ ದೇವರು ಪ್ರವಾದಿಯಾದ ಯೆಶಾಯನ ಮುಖಾಂತರ ಹೇಳಿದ ಮಾತು ನೆರವೇರಿತು. ಅದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಇಸಾಯಿಯಾ ಪ್ರವಾದ್ಯಾಕ್ನಾ ದೆವಾನ್ ಸಾಂಗಲ್ಲೆ ಖರೆ ಹೊವ್‍ಸಾಟ್ನಿ ಮನುನ್ ತೆನಿ ಅಶೆ ಕರ್‍ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 12:17
15 ತಿಳಿವುಗಳ ಹೋಲಿಕೆ  

ಮುಂತಿಳಿಸಿದ ಸಂಗತಿಗಳಿದೋ ಈಡೇರಿವೆ ಹೊಸ ಸಂಗತಿಗಳನಿದೋ ಪ್ರಕಟಿಸುವೆ ಅವು ತಲೆದೋರುವುದಕ್ಕೆ ಮುಂಚೆಯೇ ನಿಮಗೆ ತಿಳಿಸುವೆ.”


ಹೀಗೆ ಯೆಶಾಯ ಪ್ರವಾದಿಯ ಈ ಮಾತು ನೆರವೇರಿತು: “ಸರ್ವೇಶ್ವರಾ, ನಮ್ಮ ಸಂದೇಶವನ್ನು ನಂಬಿದವರಾರು? ದೇವರ ಶಕ್ತಿಸಾಮರ್ಥ್ಯ ಗೋಚರವಾದುದು ಯಾರಿಗೆ?”


‘ಸಿಯೋನ್ ನಗರಿಗೆ ಹೇಳು: ನಿನ್ನರಸ ಬರುತಿಹನು ದೀನನವ ಹೇಸರಗತ್ತೆಯೇರಿ ಕುಳಿತಿಹನು ಮರಿಹೇಸರಗತ್ತೆಯನೇರಿ ಸಾಗಿಬರುತಿಹನು,’ ಎಂದು ಪ್ರವಾದಿಯೊಬ್ಬನ ವಚನ ನೆರವೇರುವಂತೆ ಇದೆಲ್ಲ ನಡೆಯಿತು.


“ಸಾಮತಿಗಳಲ್ಲೇ ಬೋಧಿಸುವೆನು; ಲೋಕಾದಿಯಿಂದ ರಹಸ್ಯವಾದವುಗಳನ್ನು ಬಯಲುಗೊಳಿಸುವೆನು” ಎಂದು ದೇವರು ಪ್ರವಾದಿಯ ಮುಖಾಂತರ ತಿಳಿಸಿದ್ದ ಪ್ರವಚನವನ್ನು ಯೇಸು ಹೀಗೆ ನೆರವೇರಿಸಿದರು.


ನನ್ನ ದಾಸನ ಮಾತನ್ನಾದರೋ ದೃಢೀಕರಿಸುವವನು ನಾನೆ ನನ್ನ ದೂತರ ಯೋಜನೆಯನ್ನು ಸಫಲಗೊಳಿಸುವವನು ನಾನೆ ಜನನಿವಾಸವಾಗುವುದು ಜೆರುಸಲೇಮ್ ನಗರವು ಪುನಃ ಕಟ್ಟಲ್ಪಡುವುವು ಜುದೇಯ ಪಟ್ಟಣಗಳು. ಅಲ್ಲಿ ಹಾಳುಬಿದ್ದವುಗಳು ಮರಳಿ ಎದ್ದು ನಿಲ್ಲುವುವು.


ಜೆರುಸಲೇಮಿನ ನಿವಾಸಿಗಳು ಮತ್ತು ಅವರ ಅಧಿಕಾರಿಗಳು ಯೇಸು ಲೋಕೋದ್ಧಾರಕನೆಂದು ಅರಿತುಕೊಳ್ಳಲಿಲ್ಲ. ಪ್ರತಿ ಸಬ್ಬತ್‍ದಿನ ಓದಲಾದ ಪ್ರವಾದಿಗಳ ವಾಕ್ಯಗಳನ್ನು ಅವರು ಗ್ರಹಿಸಿಕೊಳ್ಳಲಿಲ್ಲ. ಯೇಸುವಿಗೆ ಮರಣದಂಡನೆಯನ್ನು ವಿಧಿಸಿ ಆ ಪ್ರವಾದನೆಗಳು ನಿಜವಾಗಲು ಕಾರಣರಾದರು.


ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ದೇವರ ವಾಕ್ಯವನ್ನು ಪಡೆದವರು ದೇವರುಗಳೇ ಎಂದು ಕರೆಯಲಾಗಿದೆ. ಹೀಗೆ ಪವಿತ್ರಗ್ರಂಥದಲ್ಲೇ ಲಿಖಿತವಾಗಿರುವುದು ನಿರರ್ಥಕವೇನೂ ಅಲ್ಲ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ಏಕೆಂದರೆ, ದಂಡನೆಯ ಕಾಲ ಅದು. ಅದನ್ನು ಕುರಿತು ಪವಿತ್ರಗ್ರಂಥದಲ್ಲಿ ಬರೆದಿರುವುದೆಲ್ಲಾ ಆಗ ನೆರವೇರಬೇಕು.


ಹೀಗೆ, “ನಮ್ಮ ದುರ್ಬಲತೆಗಳನ್ನು ವಹಿಸಿಕೊಂಡನು; ನಮ್ಮ ರೋಗರುಜಿನಗಳನ್ನು ಆತನೇ ಪರಿಹರಿಸಿದನು,” ಎಂಬ ಯೆಶಾಯನ ಪ್ರವಾದನೆ ಈಡೇರಿತು.


ಅನೇಕ ಜನರು ಅವರ ಹಿಂದೆಯೇ ಹೋದರು. ಯೇಸು ಅಸ್ವಸ್ಥರಾಗಿದ್ದ ಎಲ್ಲರನ್ನು ಗುಣಪಡಿಸಿದರು ಮತ್ತು ತಮ್ಮ ವಿಷಯವನ್ನು ಯಾರಿಗೂ ತಿಳಿಸಬಾರದೆಂದು ಆಜ್ಞೆಮಾಡಿದರು.


“ಇದಿಗೋ, ನನ್ನ ದಾಸನು, ನನ್ನಿಂದಾಯ್ಕೆಯಾದವನು, ನನಗೆ ಪರಮಪ್ರಿಯನು, ನನ್ನ ಅಪಾರ ಮೆಚ್ಚುಗೆಗೆ ಪಾತ್ರನು. ನೆಲೆಗೊಳಿಸುವೆ ಇವನಲಿ ಎನ್ನಾತ್ಮವನು; ಸಾರುವನಿವನು ಜಗದಲಿ ನನ್ನ ಧರ್ಮವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು