Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಮತ್ತಾಯ 13:3 - ಕನ್ನಡ ಸತ್ಯವೇದವು C.L. Bible (BSI)

3 ಆಗ ಯೇಸು ಅವರಿಗೆ ಅನೇಕ ವಿಷಯಗಳನ್ನು ಸಾಮತಿಯ ರೂಪದಲ್ಲಿ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಹೇಳಿದನು. ಹೇಗಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆಗ ಯೇಸು ಸಾಮ್ಯಗಳ ಮೂಲಕ ಅನೇಕ ವಿಷಯಗಳನ್ನು ಅವರಿಗೆ ಬೋಧಿಸಿದನು. ಯೇಸು ಅವರಿಗೆ ಈ ಸಾಮ್ಯವನ್ನು ಹೇಳಿದನು: “ಒಬ್ಬ ರೈತನು ಬೀಜ ಬಿತ್ತುವುದಕ್ಕೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಗ ಯೇಸು ಅನೇಕ ವಿಷಯಗಳನ್ನು ಅವರಿಗೆ ಸಾಮ್ಯಗಳಲ್ಲಿ ಹೇಳಿದ್ದು: “ಒಬ್ಬ ರೈತನು ಬಿತ್ತುವುದಕ್ಕೆ ಹೊರಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸುಮಾರ್ ವಿಶಯಾ ಸಾಂಗುಕ್ ಮನುನ್ ತೊ ಕಾನಿಯಾ ವಾಪ್ರಿ. ತನ್ನಾ ತೆನಿ, “ಎಗ್ದಾ ಎಕ್ ಶೆತ್ಕಾರಿ ಹೊತ್ತೊ ತೊ ಭ್ಹಿಂಯ್ ಸಿಪ್ಡುಕ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಮತ್ತಾಯ 13:3
27 ತಿಳಿವುಗಳ ಹೋಲಿಕೆ  

ಅನಂತರ ಯೇಸುಸ್ವಾಮಿ ಅವರಿಗೆ, “ಈ ಸಾಮತಿಯನ್ನು ನೀವು ಅರ್ಥಮಾಡಿಕೊಳ್ಳಲಿಲ್ಲವೇ? ಹಾಗಾದರೆ ಬೇರೆಲ್ಲಾ ಸಾಮತಿಗಳನ್ನು ಹೇಗೆ ಅರ್ಥಮಾಡಿಕೊಳ್ಳುವಿರಿ?


ಯೇಸುಸ್ವಾಮಿ ಈ ಬಗೆಯ ಸಾಮತಿಗಳನ್ನು ಉಪಯೋಗಿಸಿ ಜನರಿಗೆ ದೇವರ ಸಂದೇಶವನ್ನು ಅವರವರ ತಿಳುವಳಿಕೆಗೆ ತಕ್ಕಂತೆ ಉಪದೇಶಿಸುತ್ತಿದ್ದರು. ಸಾಮತಿಗಳನ್ನು ಉಪಯೋಗಿಸದೆ ಅವರು ಬೋಧಿಸುತ್ತಿರಲಿಲ್ಲ.


ಈ ಸಾಮತಿಗಳನ್ನು ಹೇಳಿಯಾದಮೇಲೆ ಯೇಸುಸ್ವಾಮಿ ಅಲ್ಲಿಂದ ಹೊರಟುಹೋದರು.


ಸಾಮತಿಯೊಂದಿಗೆ ಬೋಧನೆಯನಾರಂಭಿಸುವೆನು I ಹೊರಪಡಿಸುವೆನು ಪೂರ್ವಕಾಲದ ಗೂಡಾರ್ಥಗಳನು II


ತಮ್ಮನ್ನು ಕುರಿತೇ ಈ ಸಾಮತಿಯನ್ನು ಹೇಳುತ್ತಿದ್ದಾರೆಂದು ಅರ್ಥಮಾಡಿಕೊಂಡ ಆ ಯೆಹೂದ್ಯ ಮುಖಂಡರು ಯೇಸುವನ್ನು ಹಿಡಿದು ಬಂಧಿಸಲು ಯತ್ನಿಸಿದರು. ಆದರೆ ಜನಸಮೂಹಕ್ಕೆ ಭಯಪಟ್ಟು ಅವರನ್ನು ಬಿಟ್ಟುಹೋದರು.


ನಾ ಕಿವಿಗೊಟ್ಟು ಆಲಿಸುವೆನು ಧರ್ಮದ ಗಾದೆಯನು I ವೀಣೆ ನುಡಿಸುತ ವಿವರಿಸುವೆನು ಅದರ ಗೂಡಾರ್ಥವನು II


“ಈ ಸಂಗತಿಗಳನ್ನೆಲ್ಲಾ ನಿಮಗೆ ಸಾಮತಿಗಳ ರೂಪದಲ್ಲಿ ತಿಳಿಸಿರುವೆನು. ಕಾಲವು ಬರಲಿದೆ. ಆಗ ಸಾಮತಿಗಳನ್ನು ಬಳಸದೆ ಸ್ಪಷ್ಟವಾದ ಮಾತಿನಲ್ಲಿ ಪಿತನನ್ನು ಕುರಿತು ನಿಮಗೆ ತಿಳಿಸುವೆನು.


ಆಗ ಪೇತ್ರನು, “ಪ್ರಭೂ, ನೀವು ಹೇಳಿದ ಈ ಸಾಮತಿ ನಮಗೆ ಮಾತ್ರ ಅನ್ವಯಿಸುತ್ತದೋ ಅಥವಾ ಎಲ್ಲರಿಗೋ” ಎಂದು ಕೇಳಿದನು.


ದೇವರ ಸಾಮ್ರಾಜ್ಯದ ರಹಸ್ಯಗಳನ್ನು ಅರಿತುಕೊಳ್ಳುವ ಸದವಕಾಶವನ್ನು ನಿಮಗೆ ಕೊಡಲಾಗಿದೆ. ಬೇರೆಯವರಿಗಾದರೋ ಅವು ಸಾಮತಿಗಳ ರೂಪದಲ್ಲಿ ಮರೆಯಾಗಿವೆ. ಅವರು ಕಣ್ಣಾರೆ ನೋಡಿದರೂ ಕಾಣರು, ಕಿವಿಯಾರೆ ಕೇಳಿದರೂ ಗ್ರಹಿಸರು.”


ಅನಂತರ ಯೇಸುಸ್ವಾಮಿ ಅವರೊಡನೆ ಸಾಮತಿಗಳ ರೂಪದಲ್ಲಿ ಮಾತನಾಡತೊಡಗಿದರು: “ಒಬ್ಬನು ದ್ರಾಕ್ಷಿಯತೋಟ ಒಂದನ್ನು ಮಾಡಿ, ಅದರ ಸುತ್ತ ಬೇಲಿ ಹಾಕಿಸಿದ; ದ್ರಾಕ್ಷಾರಸವನ್ನು ತೆಗೆಯಲು ಆಲೆಯನ್ನು ಹೂಡಿಸಿ, ಕಾವಲಿಗಾಗಿ ಅಟ್ಟಣೆಯನ್ನು ಕಟ್ಟಿಸಿದ. ಬಳಿಕ ತೋಟವನ್ನು ಗೇಣಿದಾರರಿಗೆ ವಹಿಸಿ, ಹೊರನಾಡಿಗೆ ಹೊರಟುಹೋದ.


ಆಗ ಯೇಸು ಅವರನ್ನು ತಮ್ಮ ಹತ್ತಿರಕ್ಕೆ ಕರೆದು ಸಾಮತಿಗಳ ಮೂಲಕ ಮಾತನಾಡತೊಡಗಿದರು: “ಸೈತಾನನು ಸೈತಾನನನ್ನು ಹೊರದೂಡುವುದು ಹೇಗೆ ತಾನೇ ಸಾಧ್ಯ?


“ಅಂಜೂರದ ಮರದಿಂದ ಒಂದು ಪಾಠ ಕಲಿತುಕೊಳ್ಳಿ. ಅದರ ಎಳೆ ರೆಂಬೆಗಳಲ್ಲಿ ಎಲೆಗಳು ಚಿಗುರುವಾಗ ವಸಂತಕಾಲ ಸಮೀಪಿಸಿತು ಎಂದು ತಿಳಿದುಕೊಳ್ಳುತ್ತೀರಿ.


ಆದರೆ ಹೀಗೆ ಅವನಿಂದ ಆಕರ್ಷಿತರಾದವರೆಲ್ಲ ಅವನ ಸಮಾಚಾರವೆತ್ತಿ ಗೇಲಿಯ ಲಾವಣಿಕಟ್ಟುವರು. “ತನ್ನದಲ್ಲದನ್ನು ಹೆಚ್ಚು ಹೆಚ್ಚಾಗಿ ತುಂಬಿಸಿಕೊಂಡವನಿಗೆ ಧಿಕ್ಕಾರ! ಬಡ್ಡಿಗಾಗಿ ಅಡವಿಟ್ಟ ವಸ್ತುಗಳನ್ನು ರಾಶಿಮಾಡಿಕೊಂಡವನಿಗೆ ಧಿಕ್ಕಾರ! ಎಷ್ಟುಕಾಲ ಹೀಗೆ ಮಾಡಿಯಾನು?’


ಆ ದಿನದಲ್ಲಿ ಜನರು ನಿಮ್ಮ ಬಗ್ಗೆ ಪರಿಹಾಸ್ಯಮಾಡಿ, ಲಾವಣಿ ಕಟ್ಟುವರು. “ಅಯ್ಯೋ, ಸಂಪೂರ್ಣವಾಗಿ ಸೂರೆಹೋದೆವಲ್ಲಾ. ಸ್ವಾಮಿ ನಮ್ಮ ಜನರ ಸ್ವತ್ತನ್ನು ಪರಾಧೀನ ಮಾಡಿಬಿಟ್ಟಿರಲ್ಲಾ. ಅಕಟಾ, ನಮ್ಮ ಹೊಲಗದ್ದೆಗಳನ್ನು ಕಸಿದುಕೊಂಡು ದೇವದ್ರೋಹಿಗಳಿಗೆ ಹಂಚಿಕೊಟ್ಟರಲ್ಲಾ!” ಎಂದು ರೋದಿಸುವರು.


ಆಗ ನಾನು - “ಅಯ್ಯೋ, ಸರ್ವೇಶ್ವರನಾದ ದೇವರೇ, ‘ಅವನು ಒಗಟುಗಾರನಲ್ಲವೆ?’ ಎಂದು ಈ ಜನರು ನನ್ನ ಬಗ್ಗೆ ಆಡಿಕೊಳ್ಳುತ್ತಾರೆ” ಎಂದು ಅರಿಕೆಮಾಡಿದೆನು.


“ನರಪುತ್ರನೇ, ನೀನು ಇಸ್ರಯೇಲ್ ವಂಶದವರಿಗೆ ಈ ಸಾಮತಿಯನ್ನು ಒಗಟಾಗಿ ಹೇಳು -


ಯೇಸುಸ್ವಾಮಿ ಮತ್ತೆ ಅವರೊಡನೆ ಸಾಮತಿಗಳಲ್ಲೇ ಮಾತನಾಡಿದರು: “ಸ್ವರ್ಗಸಾಮ್ರಾಜ್ಯ ಇಂತಿದೆ;


“ಒಬ್ಬ ರೈತ ಬಿತ್ತುವುದಕ್ಕೆ ಹೋದ. ಬಿತ್ತನೆ ಮಾಡುತ್ತಿದ್ದಾಗ ಕೆಲವು ಬೀಜಗಳು ಕಾಲ್ದಾರಿಯಲ್ಲಿ ಬಿದ್ದವು. ಬಿದ್ದದ್ದೇ ಹಕ್ಕಿಗಳು ಬಂದು ಆ ಬೀಜವನ್ನು ತಿಂದುಬಿಟ್ಟವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು